ಸುದ್ದಿ

ಎಂಟು ಕಡೆ ಇ.ಡಿ. ದಾಳಿ: ಸಂಸದ, ಮೂವರು ಶಾಸಕರ ಮನೆ ಪರಿಶೋಧನೆ

ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆ ಗೆಲ್ಲಲು ಬಳಸಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಸಂಭವಿಸಿರುವ ಬಹುಕೋಟಿ ಭ್ರಷ್ಟಾಚಾರ ಸಂಬಂಧ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ಬಳ್ಳಾರಿಯ ಕಾಂಗ್ರೆಸ್‌ ಸಂಸದ ಇ.ತುಕರಾಂ ಮತ್ತು ಬಳ್ಳಾರಿ ಭಾಗದ ಮೂವರು ಶಾಸಕರು ಸೇರಿದಂತೆ ಒಟ್ಟು ಕಡೆ ದಾಳಿ ನಡೆಸಿದೆ. ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 21 ಕೋಟಿ ರೂ. ಬಳಸಿದ ಆರೋಪದಲ್ಲಿ ಈ ದಾಳಿಯಾಗಿದ್ದು, ಸಂಸದ ತುಕಾರಾಂ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮುಡಾ […]

ಎಂಟು ಕಡೆ ಇ.ಡಿ. ದಾಳಿ: ಸಂಸದ, ಮೂವರು ಶಾಸಕರ ಮನೆ ಪರಿಶೋಧನೆ Read More »

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಬೃಹತ್‌ ಯೋಜನೆ ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿರುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆಯನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ ರಸ್ತೆ ನಿರ್ಮಾಣದ ಕುರಿತಂತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌ Read More »

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ?

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಳಿ ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್‌ಗೆ ಜಾರಿ ನಿರ್ದೇಶನಾಲಯ ಭಾರಿ ದೊಡ್ಡ ಶಾಕ್‌ ನೀಡಿದೆ. ಕಾಂಗ್ರೆಸ್‌ ಸಂಸದ ತುಕರಾಮ್‌ ಮತ್ತು ಮೂವರು ಶಾಸಕರ ಮನೆ ಮೇಲೆ ಇ.ಡಿ. ದಾಳಿಯಾಗಿದೆ. ತುಕರಾಂ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ಬಳಸಿದ ಆರೋಪ ಸಂಸದ ತುಕಾರಾಂ ಮೇಲಿದೆ. ಇದು ವಾಲ್ಮೀಕಿ ನಿಗಮದ ಹಣ ಎನ್ನಲಾಗಿದೆ.

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌

ಜೈಲಿನಲ್ಲಿರುವ ರನ್ಯಾಳನ್ನು ತೀವ್ರ ವಿಚಾರಣೆಗೊಳಪಡಿಸಲಿರುವ ಐಟಿ ಇಲಾಖೆ ಬೆಂಗಳೂರು : ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ದೇಶಾದ್ಯಂತ ಸಂಚಲನ ಉಂಟು ಮಾಡಿದ್ದಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಈಗ ಆದಾಯ ಕರ ಇಲಾಖೆಯೂ ಮುಂದಾಗಿದೆ. ಈಗಾಗಲೇ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿರುವ ರನ್ಯಾ ರಾವ್‌ ಈಗಲೂ ಜೈಲಿನಲ್ಲಿ ಇದ್ದಾಳೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌ Read More »

ಶುಭಾಂಶು ಶುಕ್ಲ ಗಗನಯಾತ್ರೆ ಮತ್ತೊಮ್ಮೆ ಮುಂದೂಡಿಕೆ

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಮುಂದೂಡಿಕೆ ಹೊಸದಿಲ್ಲಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರ ಗಗನಯಾತ್ರೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಈ ಸಲ ಅವರು ಪ್ರಯಾಣಿಸಬೇಕಿದ್ದ ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಮುಂದೂಡಿಕೆಗೆ ಕಾರಣವಾಗಿದೆ. ಮಂಗಳವಾರಕ್ಕೆ ನಿಗದಿಯಾಗಿದ್ದ ಗಗನಯಾತ್ರೆ ಪ್ರತಿಕೂಲ ವಾತಾವರಣದ ಕಾರಣ ಬುಧವಾರಕ್ಕೆ ಮುಂದೂಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿ ಎರಡನೇ ಸಲ ಮುದೂಡಿಕೆಯಾಗಿದೆ. ಶುಭಾಂಶು ಶುಕ್ಲ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತೊಯ್ಯಬೇಕಿದ್ದ ಆ್ಯಕ್ಸಿಯಮ್-4 ಮಿಷನ್ ಉಡಾವಣೆಯನ್ನು ರಾಕೆಟ್‍ನಲ್ಲಿ ಕಂಡುಬಂದ ತಾಂತ್ರಿಕ ದೋಷದ

ಶುಭಾಂಶು ಶುಕ್ಲ ಗಗನಯಾತ್ರೆ ಮತ್ತೊಮ್ಮೆ ಮುಂದೂಡಿಕೆ Read More »

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ

ಪ್ರಬಲ ಜಾತಿಗಳ ವಿರೋಧಕ್ಕೆ ಮಣಿದು ಮರು ಜಾತಿ ಗಣತಿಗೆ ಸೂಚಿಸಿದ ಹೈಕಮಾಂಡ್‌ ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಜಾತಿ ಗಣತಿಗಾಗಿ ಮರಳಿ ಸರ್ವೇ ಮಾಡಲು ಸೂಚಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಾಗಿರುವ ಹಿನ್ನಡೆಯೆಂದೇ ಭಾವಿಸಲಾಗುತ್ತಿದೆ. ಸಿದ್ದರಾಮಯ್ಯನವರು ಹಳೆಯ ಜಾತಿಗಣತಿ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಲು ಶತಾಯಗತಾಯ ಮುಂದಾಗಿದ್ದರು. ಡಿ.ಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು, ಒಕ್ಕಲಿಗ, ವೀರಶೈವ ಲಿಂಗಾಯತ ಸಮುದಾಯಗಳ ವಿರೋಧದ ನಡುವೆಯೂ ಸಿದ್ದರಾಮಯ್ಯನವರು 10 ವರ್ಷಗಳ ಹಿಂದಿನ ಜಾತಿಗಣತಿ ವರದಿಯನ್ನೇ ಜಾರಿಗೆ ತರಲು ಕಸರತ್ತು ನಡೆಸಿದ್ದರು. ಅದನ್ನು

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ Read More »

ನಾಳೆ ಶುಭಾಂಶು ಶುಕ್ಲ ಗಗನ ಯಾತ್ರೆ

ರಾಕೇಶ್‌ ಶರ್ಮ ಬಳಿಕ 41 ವರ್ಷಗಳ ನಂತರ ಇತಿಹಾಸ ರಚಿಸಲಿರುವ ಭಾರತದ ಗಗನ ಯಾತ್ರಿ ನವದೆಹಲಿ: ಭಾರತೀಯ ಗಗನ ಯಾತ್ರಿ ಶುಭಾಂಶು ಶುಕ್ಲ ಜೂ.11ರಂದು ಗಗನಯಾತ್ರೆ ಕೈಗೊಳ್ಳಲಿದ್ದಾರೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌-9 (SpaceX’s Falcon-9) ಗಗನ ನೌಕೆ ಬುಧವಾರ ಸಂಜೆ ಉಡಾವಣೆಗೊಳ್ಳಲಿದ್ದು, ಇದರಲ್ಲಿ ಬಾಹ್ಯಾಕಾಶ ಯಾತ್ರೆ ಆರಂಭಿಸಲಿದ್ದಾರೆ. ಶುಕ್ಲ ಜೊತೆಗೆ ಇತರ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಸಿದ್ಧರಾಗಿದ್ದಾರೆ. 1984ರಲ್ಲಿ ಸೋವಿಯತ್ ರಷ್ಯಾದ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ

ನಾಳೆ ಶುಭಾಂಶು ಶುಕ್ಲ ಗಗನ ಯಾತ್ರೆ Read More »

ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್‌ ವಿದ್ಯಾರ್ಥಿಗಳ ರಕ್ಷಣೆ

ಬಂಡಾಜೆ ಮಾರ್ಗವಾಗಿ ಚಾರಣ ಪ್ರಾರಂಭಿಸಿ ರಾತ್ರಿ ಕಾಡಿನಲ್ಲಿ ಕಳೆದು ಹೋದ 11 ಮಂದಿ ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೆ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದು, ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು. ಚಿಕ್ಕಮಗಳೂರಿನ ಬಲ್ಲಾಳರಾಯನ ದುರ್ಗಾದಲ್ಲಿ ಟಿಕೆಟ್ ಬುಕ್ ಮಾಡಿಸಿ ದಾರಿ ತಿಳಿಯದೆ ದಕ್ಷಿಣ

ದಟ್ಟಾರಣ್ಯದಲ್ಲಿ ದಾರಿ ತಪ್ಪಿ ಅಲೆದಾಡಿದ ಚಾರಣಕ್ಕೆ ಬಂದಿದ್ದ ಮೆಡಿಕಲ್‌ ವಿದ್ಯಾರ್ಥಿಗಳ ರಕ್ಷಣೆ Read More »

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ

ವಿಶೇಷ ಗೌರವಕ್ಕೆ ಪಾತ್ರರಾದ ಭಾರತದ 11ನೇ ಕ್ರಿಕೆಟಿಗ ಲಂಡನ್‌: ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟ ದಿಗ್ಗಜ ಕ್ರಿಕೆಟಿಗ ಎಂ.ಎಸ್‌.ಧೋನಿ 2025ನೇ ಸಾಲಿನ ಹಾಲ್‌ ಆಫ್ ಫೇಮ್‌ ಗೌರವಕ್ಕೆ ಭಾಜನರಾಗಿದ್ದಾರೆ. ಅವರ ಜತೆಗೆ ಇತರ 6 ಕ್ರಿಕೆಟಿಗರು ಕೂಡ ಈ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಧೋನಿ ಐಸಿಸಿ ಹಾಲ್‌ ಆಫ್‌ ಫೇಮ್‌ ಸೇರ್ಪಡೆಗೊಂಡ ಭಾರತದ 11ನೇ ಕ್ರಿಕೆಟಿಗ ಎನಿಸಿಕೊಂಡರು. ಧೋನಿಗೂ ಮುನ್ನ ಸುನಿಲ್‌ ಗವಾಸ್ಕರ್‌, ಬಿಶನ್‌ ಸಿಂಗ್‌ ಬೇಡಿ, ಕಪಿಲ್‌ ದೇವ್‌, ಅನಿಲ್‌ ಕುಂಬ್ಳೆ, ರಾಹುಲ್‌

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ Read More »

ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು

ಹೈಕಮಾಂಡ್‌ಗೆ ವಿವರಣೆ ನೀಡಲು ಹೋದ ಸಿಎಂ, ಡಿಸಿಎಂ ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಕುಂಭಮೇಳ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸಂಭವಿಸಿದ ದುರ್ಘಟನೆಗಳಿಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿಕೊಂಡು ಟೀಕಿಸುತ್ತಿದ್ದ ಕಾಂಗ್ರೆಸ್‌ಗೆ ಈಗ ತನ್ನದೇ ಆಡಳಿತವಿರುವ ರಾಜ್ಯದಲ್ಲಿ ಸಂಭವಿಸಿದ ಘೋರ ದುರಂತ ಮತ್ತು ಅದರಲ್ಲಿ ನೇರವಾಗಿ ಸರ್ಕಾರವೇ ಶಾಮೀಲಾಗಿರುವುದು ನುಂಗಲಾಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ

ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು Read More »

error: Content is protected !!
Scroll to Top