ಸುದ್ದಿ

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ರೋಗಿ ಸಾವು; ಇಬ್ಬರು ಗಂಭೀರ

ಲಖನೌ: ಇಲ್ಲಿನ ಲೋಕಬಂಧು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಒಬ್ಬ ರೋಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು 200 ರೋಗಿಗಳನ್ನು ಕ್ಷಿಪ್ರವಾಗಿ ರಕ್ಷಿಸಿದ ಪರಿಣಾಮವಾಗಿ ಭಾರಿ ದುರಂತ ಸಂಭವಿಸುವುದು ತಪ್ಪಿದೆ. ರಾತ್ರಿ 10.30ರ ವೇಳೆಗೆ ಬೆಂಕಿ ಕಾಣಿಸಿಕೊಂಡು ಕ್ಷಿಪ್ರವಾಗಿ ಹರಡಿದೆ. ಇಡೀ ಆಸ್ಪತ್ರೆ ಹೊಗೆಯಿಂದ ಆವೃತ್ತವಾಗಿದ್ದು, ತುರ್ತು ನಿಗಾ ಘಟಕಕ್ಕೂ ವ್ಯಾಪಿಸಿತ್ತು. ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಮಹಿಳಾ ವಾರ್ಡ್‌ ಮತ್ತು ತುರ್ತು ಚಿಕಿತ್ಸೆ ಘಟಕದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿರುವ […]

ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ರೋಗಿ ಸಾವು; ಇಬ್ಬರು ಗಂಭೀರ Read More »

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು

ಸಿದ್ದರಾಮಯ್ಯನವರಿಗೆ ಕ್ಲೀನ್‌ಚಿಟ್‌ ನೀಡಿರುವ ಲೋಕಾಯುಕ್ತ ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್‌ಚೀಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಜನಪ್ರತಿನಿಧಿ ನ್ಯಾಯಾಲಯ ಇಂದು ಪ್ರಕಟಿಸಲಿದೆ. ಜನಪ್ರತಿನಿಧಿ ನ್ಯಾಯಾಲಯಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಜೊತೆಗೆ ಹಗರಣದ ತನಿಖೆ ನಡೆಸುತ್ತಿರುವ ಇ.ಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ತೀರ್ಪು

ಮುಡಾ ಹಗರಣ : ಲೋಕಾಯುಕ್ತ ವರದಿ ಮೇಲಿನ ತೀರ್ಪು ಇಂದು Read More »

ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಜೇಂದ್ರ ಪ್ರಸಾದ್ ಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಪಾಳ್ಗೊಳ್ಳಲಿದ್ದಾರೆ ಎಂದು

ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ Read More »

ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ

ಆರು ತಿಂಗಳ ಹಿಂದೆ ಆದ ಜಗಳದ ಸೇಡು ತೀರಿಸಿಕೊಳ್ಳಲು ಕೊಲೆ ಮಂಗಳೂರು: ಮೂಲ್ಕಿಯ ಆಟೋರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆಗೆ ಪೂರ್ವ ದ್ವೇಷವೇ ಕಾರಣ ಎಂಬ ವಿಚಾರ ಆರೋಪಿಯ ವಿಚಾರಣೆಯಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿದ್ದ ಮೂಲ್ಕಿಯ ಮುಹಮ್ಮದ್‌ ಶರೀಫ್‌ ಅವರನ್ನು ಕೇರಳ ಗಡಿಯ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿಗೆ ಕೊಂಡೊಯ್ದು ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಆರೋಪಿ ಅಭಿಷೇಕ್‌ ಶೆಟ್ಟಿ ಎಂಬಾತನನ್ನು ಮಂಗಳೂರು ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿ ಅಭಿಷೇಕ್ ಶೆಟ್ಟಿ

ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ Read More »

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ

ಬೆಂಗಳೂರು: ಜಾತಿ ಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ವರದಿ ಅವೈಜ್ಞಾನಿಕವಾಗಿದೆ ಎಂದು ಹಲವು ನಾಯಕರು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ರಾಜ್ಯದ ಎರಡು ಪ್ರಮುಖ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯತ ಜಾತಿಯ ಮುಖಂಡರು ಕೂಡ ವರದಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಒಕ್ಕಲಿಗ ಶಾಸಕರು ಮತ್ತು ಎಂಎಲ್‌ಸಿಗಳ ಸಭೆ ಕರೆದಿದ್ದಾರೆ. ಡಿಕೆಶಿ ಮನೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗುತ್ತದೆ

ಜಾತಿ ಗಣತಿ ವರದಿ : ಇಂದು ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗ ಶಾಸಕರ ಸಭೆ Read More »

ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ

ತರಕಾರಿ, ಹಣ್ಣುಹಂಪಲು ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿ ಮಾಲೀಕರ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಶುರುವಾಗಿದೆ. ಮಂಗಳವಾರ ಬೆಳಗ್ಗೆ ಲಾರಿಗಳು ರೋಡಿಗೆ ಇಳಿದಿಲ್ಲ. ಇದರಿಂದಾಗಿ ಅಗತ್ಯ ವಸ್ತುಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.ಡಿಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. 6

ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ Read More »

54 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 54ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.15 ಮಂಗಳವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

54 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿ

ಮುಕ್ವೆ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆ ಇಲ್ಲಿ134ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷರು,  ಸದಸ್ಯರು,ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಮಕ್ಕಳು ಭಾಗವಹಿಸಿದ್ದರು.

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಡೀ ದೇಶಕ್ಕೆ ದಾರಿದೀಪವಾದ ಡಾ..ಬಿ.ಆರ್.ಅಂಬೇಡ್ಕರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅದರಲ್ಲೂ ಮಹಿಳೆಯರು ಶಿಕ್ಷಣದಲ್ಲಿ ಮುಂದೆ ಬರಬೇಕು ಎಂಬ ಚಿಂತನೆಯನ್ನಿಟ್ಟುಕೊಂಡು ಅದನ್ನು ಕಾರ್ಯರೂಪಕ್ಕೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಬಾಲಚಂದ್ರ ಸೊರಕೆಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ ಜಾರಿಯಾಗದ ಹೊರತು ಎಲ್ಲರಲ್ಲೂ ಸಮಾನ ಮನೋಭಾವ ಬೆಳೆಯಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ನಾವೆಲ್ಲರೂ ಸಮಾನರು ಎಂಬ ಭಾವನೆ ಎಲ್ಲರ ಮನಸ್ಸಿನಲ್ಲಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

error: Content is protected !!
Scroll to Top