ಸುದ್ದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

ಪುತ್ತೂರು: ಕಳಿಯ ಗೇರುಕಟ್ಟೆಯ ಕ್ಷೀರ ಸಂಗಮ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು ಮಂಗಳೂರು ವಲಯ ಪುತ್ತೂರು ತಾಲೂಕು ಇದರ ವತಿಯಿಂದ ನಡೆಯುತ್ತಿರುವ ಯೋಗ ತರಬೇತಿ ಶಾಖೆಯಲ್ಲಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಜರಗಿತು. ಮುಖ್ಯ ಶಿಕ್ಷಕಿ ಪ್ರೇಮಲತ ಗಣೇಶ್ ನಿತ್ಯ ಯೋಗ ಅಭ್ಯಾಸ ಮತ್ತು ಅಗ್ನಿಹೋತ್ರ ಕಾರ್ಯಕ್ರಮ ನಡೆಸಿಕೊಟ್ಟರು. ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ. ಎಲ್. ಅಗ್ನಿಹೋತ್ರದ ನೇತೃತ್ವ ವಹಿಸಿದ್ದರು. ಯೋಗ ಬಂಧುಗಳಾದ ಅಶೋಕ, ನಿತಿನ್, ವಸಂತ, ವಿಜಯ, […]

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ Read More »

ವಿಟ್ಲ : ಬೈಕ್‌ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು

ಪುತ್ತೂರಿನ ಬೈಕ್‌ ಸವಾರನಿಗೆ ಗಂಭೀರ ಗಾಯ ವಿಟ್ಲ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ

ವಿಟ್ಲ : ಬೈಕ್‌ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು Read More »

ಇಸ್ಲಾಮಾಬಾದ್‌ ಮಸೀದಿ ಬಾಂಬ್‌ ಸ್ಫೋಟಕ್ಕೆ 200ಕ್ಕೂ ಅಧಿಕ ಮಂದಿ ಬಲಿ

ಇದು ತನ್ನದೇ ಕೃತ್ಯ ಎಂದು ಹೇಳಿಕೊಂಡ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆ ಇಸ್ಲಾಮಾಬಾದ್‌: ಇಲ್ಲಿನ ಶಿಯಾ ಮಸೀದಿಯಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರು 36 ಮಂದಿ ಅಲ್ಲ ಬದಲಾಗಿ 200ಕ್ಕಿಂತಲೂ ಅಧಿಕ ಎಂದು ವರದಿಯಾಗಿದೆ. ಈ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ. ಈ ಸ್ಫೋಟದ ಬಗ್ಗೆ ಇಸ್ಲಾಮಿಕ್‌ ಸ್ಟೇಟ್‌ ಮುಖವಾಣಿ ಅಮಾಕ್ ಮೂಲಕ ಹೇಳಿಕೆ ನೀಡಿದ್ದು, ಈ ದಾಳಿಯು ಪಾಕಿಸ್ತಾನ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೈನಿಕ ನಡೆಸಿದ

ಇಸ್ಲಾಮಾಬಾದ್‌ ಮಸೀದಿ ಬಾಂಬ್‌ ಸ್ಫೋಟಕ್ಕೆ 200ಕ್ಕೂ ಅಧಿಕ ಮಂದಿ ಬಲಿ Read More »

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

ಮಂಗಳೂರಿನ ವಾಮಂಜೂರಿನಲ್ಲಿ 5 ವರ್ಷದ ಹಿಂದೆ ನಡೆದಿದ್ದ ಪೈಶಾಚಿಕ ಕೃತ್ಯ ಬೆಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿದೆ. ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದ್ದು, ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರ್ಕಾರ

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಪುತ್ತೂರಿನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್‌ ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಭಾಕರ್‌ ಭಟ್‌ ಭಾಷಣ

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ Read More »

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

ಪುತ್ತೂರಿನಲ್ಲಿ 1.6 ಕ್ವಿಂಟಾಲ್‌ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು

ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು ಹೊಸ ನಿಯಮ ಬೆಂಗಳೂರು : ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು Read More »

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು

ಯದ್ವಾತದ್ವಾ ಸ್ಕೂಟಿ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಬೆಂಗಳೂರು: ಇಬ್ಬರು ಯುವತಿಯರು ಕಂಠಪೂರ್ತಿ ಮದ್ಯ ಸೇವಿಸಿ ಹಾದಿಬೀದಿಯಲ್ಲಿ ರಂಪಾಟ ನಡೆಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಶನಿವಾರ ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಕ್ಯಾಬ್‌ಗೆ ಡಿಕ್ಕಿ ಹೊಡೆದು ಚಾಲಕ ಜೊತೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ. ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು Read More »

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ

ಮೊದಲ ಪಂದ್ಯದಲ್ಲೇ ಬ್ಯಾಟಿಂಗ್‌ ಬಂಡವಾಳ ಬಯಲು; ಪ್ರಯಾಸದ ಜಯ ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026ರ ಟಿ20 ವಿಶ್ವಕಪ್ ಮೊದಲ ದಿನದ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಕ್ರಿಕೆಟಿನಲ್ಲಿನ್ನೂ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವನ್ನು ಭಾರತ ಸೋಲಿಸಿದೆ. ಈ ಪಂದ್ಯದಲ್ಲಿ ದುರ್ಬಲ ತಂಡದ ಎದುರು ಭಾರತ ದಾಖಲೆಗಳ ಮೇಲೆ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ

ಟಿ20 ವಿಶ್ವಕಪ್‌ : ಅನನುಭವಿ ಅಮೆರಿಕ ಎದುರು ತಿಣುಕಾಡಿದ ಭಾರತ Read More »

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ಚಾರಣಿಗರ ನೆಚ್ಚಿನ ಸ್ಥಳ ಗಡಾಯಿಕಲ್ಲಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ತಾತ್ಕಾಲಿಕ ನೆಲೆಯಲ್ಲಿ ಚಾರಣ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೇಸಿಗೆ ಕಾಲವಾದ್ದರಿಂದ ಕಾಡ್ಗಿಚ್ಚು ಹರಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಫೆ. 7 ರಿಂದ ಮುಂದಿನ ಆದೇಶದ ವರೆಗೆ ಈ ನಿಷೇಧ ಇರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ Read More »

error: Content is protected !!
Scroll to Top