ಸುದ್ದಿ

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ

ನ್ಯಾಯಾಲಯಕ್ಕೆ ಮಾಹಿತಿ ನೀಡಿದ ರೇವಣ್ಣ ಕುಟುಂಬದ ಮಾಜಿ ಚಾಲಕ ಬೆಂಗಳೂರು: ಸರಣಿ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ವಿಚಾರಣೆ ವೇಳೆ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ಮೊಬೈಲ್‌ನಲ್ಲಿ ಸುಮಾರು 2 ಸಾವಿರ ಅಶ್ಲೀಲ ಫೋಟೋಗಳು ಹಾಗೂ 40ರಿಂದ 50 ವಿಡಿಯೋಗಳಿದ್ದವು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ಸೋಮವಾರ ಪ್ರಕರಣದ ವಿಚಾರಣೆಗೆ ಹಾಜರಾದ ಕಾರ್ತಿಕ್‌, ಪ್ರಜ್ವಲ್‌ ಮೊಬೈಲ್‌ನಲ್ಲಿದ್ದ […]

ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋ Read More »

ನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ

ನಕಲಿ ಫೋಟೊ ಉಡುಗೊರೆ ಕೊಟ್ಟು ಜಗತ್ತಿನೆದುರು ಅಪಹಾಸ್ಯಕ್ಕೀಡಾದ ಪಾಕ್‌ ನವದೆಹಲಿ : ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್‌ ಷರೀಫ್‌ಗೆ ಅಲ್ಲಿನ ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ ನೀಡಿದ ಫೋಟೊ ಇಡೀ ಜಗತ್ತಿನಲ್ಲಿ ನಗೆಪಾಟಲಾಗಿದೆ. ಚೀನದ 2019ರ ಮಿಲಿಟರಿ ಡ್ರಿಲ್‌ನ ಫೋಟೊವನ್ನು ಆಪರೇಷನ್‌ ಸಿಂಧೂರ ಸಂದರ್ಭದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕಿದ ಗೆಲುವು ಎಂದು ಹೇಳಿಕೊಂಡು ಸನ್ಮಾನ ಸಮಾರಂಭದಲ್ಲಿ ಮುನೀರ್‌ ಈ ಫೋಟೊವನ್ನು ಪ್ರಧಾನಿಗೆ ಉಡುಗೊರೆ ನೀಡಿದ್ದರು. ಕ್ಷಣಾರ್ಧದಲ್ಲಿ ಈ ಫೋಟೊದ ಅಸಲಿ ಮೂಲ ಪತ್ತೆಯಾಗಿದ್ದು, ಪಾಕಿಸ್ತಾನದ ಸೇನೆ ಇನ್ನಿಲ್ಲದಂತೆ

ನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ Read More »

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ

ಆರೋಗ್ಯದಲ್ಲಿ ವ್ಯತ್ಯಾಸವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ಸಲಹೆ ಬೆಂಗಳೂರು: ರಾಜ್ಯದಲ್ಲಿ ಕೊರೊನ ಪ್ರಕರಣಗೂ ವರದಿಯಾಗುತ್ತಿದ್ದರೂ ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಹೊರಡಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅವುಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ

ಶಾಲೆಗಳಿಗೆ ಕೊರೊನ ಮಾರ್ಗಸೂಚಿ ಸದ್ಯಕ್ಕಿಲ್ಲ : ಮಧು ಬಂಗಾರಪ್ಪ Read More »

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

ವೀರಮಂಗಲ  : ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆಯು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ನಡೆಯಿತು. ದಿ.ರಾಮಚಂದ್ರ ಅರ್ಬಿತ್ತಾಯ ಸಂಸ್ಮರಣೆ ಹಾಗೂ ಸುಶ್ರಾವ್ಯ ಸ್ವರದ ಯಕ್ಷಗಾನ ಭಾಗವತರಾದ ಕು.ರಚನಾ ಚಿದ್ಗಲ್ ಇವರಿಗೆ  ಶ್ರವಣಸ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಯಾಗಿದ್ದುಕೊಂಡು ಯಕ್ಷಗಾನದಲ್ಲಿ ಸಾಧನೆ ಮಾಡುತ್ತಿರುವ ಕಲಾವಿದರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಆ ಬಳಿಕ ನಡೆದ  ಜಾಂಬವತಿ‌ ಕಲ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದ ಭಾಗವತರಾಗಿ ಆನಂದ ಸವಣೂರು,  ಕು.ರಚನಾ ಹಾಗೂ

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ Read More »

ಕಿರುತೆರೆ ನಟ ಶ್ರೀಧರ ನಾಯಕ್‌ ನಿಧನ

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ (47) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಉಲ್ಬಣಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ. ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್​ನಲ್ಲಿ

ಕಿರುತೆರೆ ನಟ ಶ್ರೀಧರ ನಾಯಕ್‌ ನಿಧನ Read More »

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಕಾರಿನೊಳಗೆ ಕುಳಿತು ವಿಷ ಸೇವಿಸಿದ ಇಡೀ ಕುಟುಂಬ ಹರ್ಯಾಣ: ಸಾಲ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲದ ಬಾಗೇಶ್ವರ

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್‌

ಬಜ್ಪೆ ಚಲೋ ಆಯೋಜಕರು, ಭಾಷಣಕಾರರ ವಿರುದ್ಧ ಎಫ್‌ಐಆರ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ನಡೆಸಿದ ಬಜ್ಪೆ ಚಲೋ ಪ್ರತಿಭಟನೆಯ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ಪ್ರತಿಭಟನೆಯನ್ನು ಪೊಲೀಸರ ಅನುಮತಿಯಿಲ್ಲದೆ ನಡೆಸಲಾಗಿತ್ತು.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್‌ Read More »

ಜೂ.1 : ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-ರಾಷ್ಟ್ರೀಯ ಕಲಾ ಸಮ್ಮೇಳನ

ಎಂಟು ತಂಡಗಳಿಂದ ಯಕ್ಷಗಾನ ಸ್ಪರ್ಧೆ; ಕ್ರಿಕೆಟಿಗ ರೋಹಿತ್‌ ಶರ್ಮ ತಾರಾ ಮೆರುಗು ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಜೂನ್ 1ರಂದು ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ತಿಳಿಸಿದ್ದಾರೆ. ಕಳೆದ ವರ್ಷ ಯಕ್ಷ ಸಂಭ್ರಮಕ್ಕೆ ಜನಪ್ರಿಯ ನಟ ಸುದೀಪ್‌ ತಾರಾ ಮೆರುಗು ನೀಡಿದ್ದರೆ ಈ ವರ್ಷ ಖ್ಯಾತ

ಜೂ.1 : ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-ರಾಷ್ಟ್ರೀಯ ಕಲಾ ಸಮ್ಮೇಳನ Read More »

ಭಾರೀ ಮಳೆ ಹಿನ್ನಲೆ | ಪುತ್ತೂರಿಗೆ ಆಗಮಿಸಿದ ಎನ್‍ ಡಿಆರ್ ಎಫ್‍ ತಂಡ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪುತ್ತೂರಿಗೆ 25 ಸದಸ್ಯರನ್ನೊಳಗೊಂಡ ಎನ್‍ ಡಿಆರ್‍ ಎಫ್ ತಂಡ ಆಗಮಿಸಿದೆ. ಸದ್ಯ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಎನ್‍ ಡಿಆರ್ ಎಫ್  ಸದಸ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಪುತ್ತೂರು ಕೇಂದ್ರವಾಗಿರಿಸಿ‌ ಕಾರ್ಯಾಚರಣೆ ನಡೆಸಲಿರುವ ತಂಡ, ಮಳೆಯಿಂದ‌ ಹೆಚ್ಚು ಹಾನಿಗೊಳಗಾಗುವ ಬೆಳ್ತಂಗಡಿ, ಕಡಬ, ಬಂಟ್ವಾಳ, ಸುಳ್ಯ ಮತ್ತು ಪುತ್ತೂರು ತಾಲೂಕಿನ ಪರಿಸ್ಥಿತಿ ಅವಲೋಕಿಸಲಿದೆ. ಕಾರ್ಯಾಚರಣೆಯ ವೇಳೆ ಅಪಾಯಕ್ಕೊಳಗಾದ ಜನರನ್ನು ಪತ್ತೆಹಚ್ಚಲು ಬಳಸುವ ಶ್ವಾನ ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳೊಂದಿಗೆ

ಭಾರೀ ಮಳೆ ಹಿನ್ನಲೆ | ಪುತ್ತೂರಿಗೆ ಆಗಮಿಸಿದ ಎನ್‍ ಡಿಆರ್ ಎಫ್‍ ತಂಡ Read More »

ಆಪರೇಷನ್ ಸಿಂದೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪುತ್ತೂರಿನ ಮಳುವೇಲಿನ ಸುಬೇದಾರ್ ಪದ್ಮನಾಭ ಗೌಡರಿಗೆ ಅಭಿನಂದನೆ

ಪುತ್ತೂರು: ಪುತ್ತೂರಿನ ಮಳುವೇಲು ಮನೆಯ ಬಿಎಸ್ಫ್ 148 ಕಂಪೆನಿ ಕಮಾಂಡೆಂಟ್ ಆಗಿದ್ದು 150 ಯೋಧರು ಮತ್ತು ಅಧಿಕಾರಿಗಳನ್ನು ಒಳಗೊಂಡ ಪಡೆಯನ್ನು ಮುನ್ನಡೆಸಿ ಸಮಗ್ರ ಭಾರತವೇ ಹೆಮ್ಮೆ ಪಡುವಂತಹ ಇತ್ತೀಚೆಗೆ ನಡೆದ ‘ಆಪರಷನ್ ಸಿಂಧೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸುಬೇದಾರ್ ಪದ್ಮನಾಭ ಗೌಡರನ್ನು ಮಳುವೇಲು ಕುಟುಂಬ ಆತ್ಮೀಯವಾಗಿ ಬರಮಾಡಿಕೊಂಡು ಅಭಿನಂದಿಸಿತು. ಮಳುವೇಲು ಚೆನ್ನಪ್ಪ ಮತ್ತು ಉಮ್ಮಕ್ಕ ದಂಪತಿಗಳ ಸುಪುತ್ರನಾಗಿರುವ ಗೌಡರು ಪಾಕಿಸ್ತಾನದ ವಿರುದ್ಧ ಬಾರತ ಹೂಡಿದ್ದ ರಕ್ಷಣಾತ್ಮಕ ಯುದ್ಧ ಚಟುವಟಿಕೆಯಲ್ಲಿ ಭಾಗವಹಿಸಿರುವುದು ಪುತ್ತೂರು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಾಘಾ

ಆಪರೇಷನ್ ಸಿಂದೂರ’ದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪುತ್ತೂರಿನ ಮಳುವೇಲಿನ ಸುಬೇದಾರ್ ಪದ್ಮನಾಭ ಗೌಡರಿಗೆ ಅಭಿನಂದನೆ Read More »

error: Content is protected !!
Scroll to Top