ಸುದ್ದಿ

ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಹಾಗೂ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಜೂ.1 ಭಾನುವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ 2024 ರ ಆಗಸ್ಟ್ ನಲ್ಲಿ ನೋಂದಾವಣೆಗೊಂಡು ಅಸ್ತಿತ್ವಕ್ಕೆ ಬಂದಿದೆ. ನೋಂದಾವಣೆಗೊಂಡು ಒಂದು ವರ್ಷದ […]

ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ Read More »

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ

ಬೆಳ್ತಂಗಡಿ : ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಘಟನಾ ಕುರಿತು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ಧಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು

ಯುವಕನಿಗೆ  ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ Read More »

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ

ಸಿಂಧು ನದಿ ನೀರಿಗಾಗಿ ಪರಿತಪಿಸುತ್ತಿರುವ ಪಾಕಿಸ್ಥಾನ ಇಸ್ಲಾಮಾಬಾದ್:‌ ಕದನ ವಿರಾಮಕ್ಕೆ ಅಂಗಲಾಚಿದ್ದ ಪಾಕಿಸ್ತಾನ ಪರಿಸ್ಥಿತಿ ತುಸು ಸಹಜ ಸ್ಥಿತಿ ಬರುತ್ತಿರುವಂತೆಯೇ ತನ್ನ ಕಂತ್ರಿ ಬುದ್ಧಿ ತೋರಿಸಲಾರಂಭಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಯೋತ್ಪಾದಕ ಹಫೀಜ್ ಸಯೀದ್‌ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರಲ್ಲಿ

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ Read More »

ದೇಶದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌ : ಮಾಸ್ಕ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಆಂಧ್ರ, ಕೇರಳ, ಗುಜರಾತ್‌ನಲ್ಲಿ ಪಾಸಿಟಿವ್‌ ಪ್ರಕರಣಗಳ ಏರಿಕೆ ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ.ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿವೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್

ದೇಶದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌ : ಮಾಸ್ಕ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ Read More »

ಮಂಗಳೂರು : ಮದುವೆ ತಕರಾರಿನ ಹಿನ್ನೆಲೆಯಲ್ಲಿ ಇರಿದು ಕೊಲೆ

ಇಬ್ಬರು ಮಕ್ಕಳಿಗೂ ಚೂರಿ ಇರಿತದ ಗಾಯ ಮಂಗಳೂರು: ಮಂಗಳೂರಿನ ಬಳಿ ಮತ್ತೊಂದು ಕೊಲೆ ನಡೆದಿದೆ. ಮದುವೆ ವಿಚಾರಕ್ಕೆ ನಡೆದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ಗುರುವಾರ ತಡರಾತ್ರಿ ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸುಲೈಮಾನ್‌ (50) ಎಂಬವರನ್ನು ಅವರ ಸಂಬಂಧಿ ಮುಸ್ತಾಫ ಎಂಬಾತ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಸುಲೈಮಾನ್‌ರ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಮಂಗಳೂರು : ಮದುವೆ ತಕರಾರಿನ ಹಿನ್ನೆಲೆಯಲ್ಲಿ ಇರಿದು ಕೊಲೆ Read More »

ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ

ಬೆಂಗಳೂರಿನಲ್ಲಿ ಜಿ ಕೆಟಗರಿ ಸೈಟ್‌ ಕೊಡಲು ಸಂಪುಟ ತೀರ್ಮಾನ ಬೆಂಗಳೂರು: ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೆಂಗಳೂರಿನಲ್ಲಿ ‘ಜಿ’ ಕೆಟಗರಿ ನಿವೇಶನ ನೀಡಿ ಗೌರವಿಸಲು ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ದೀಪಾ ಭಾಸ್ತಿ ಅವರು ಇಂಗ್ಲಿಷ್‌ಗೆ ಅನುವಾದಿಸಿದ ಬಾನು ಅವರ ಕನ್ನಡ ಕೃತಿ ‘ಎದೆಯ ಹಣತೆ’ 2025ರ ಬೂಕರ್ ಪ್ರಶಸ್ತಿಯನ್ನು ಗೆದ್ದಿದೆ. ಬಾನು ಮತ್ತು ದೀಪಾ ಇಬ್ಬರನ್ನೂ ಅಭಿನಂದಿಸಲು ಕ್ಯಾಬಿನೆಟ್ ನಿರ್ಣಯ ಅಂಗೀಕರಿಸಿದೆ. ಬಾನು ಮುಷ್ತಾಕ್ ಅವರು ಬಯಸಿದರೆ,

ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ಗೆ ಸರ್ಕಾರದಿಂದ ಸೈಟ್‌ ಕೊಡುಗೆ Read More »

ಪರಮೇಶ್ವರ್‌ ಸಂಸ್ಥೆಗಳ ಮೇಲಿನ ಇ.ಡಿ. ದಾಳಿಯಲ್ಲಿ ಕಾಂಗ್ರೆಸ್‌ ಕೈವಾಡ : ಜೋಶಿ

ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್‌ನ ಒಂದು ಗುಂಪಿನಿಂದ ದೂರು ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಕಾಲೇಜುಗಳು ಸೇರಿ ವಿವಿಧ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಲು ಕಾಂಗ್ರೆಸ್‌ ನಾಯಕರೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಪರಮೇಶ್ವರ್‌ ಕ್ರಮ ಕೈಗೊಳ್ಳುವಂತೆ ರಾಜ್ಯದ ಕಾಂಗ್ರೆಸ್ ನಾಯಕರ ಗುಂಪೊಂದು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಮಾಹಿತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಡಾ. ಪರಮೇಶ್ವರ್ ಅವರಿಗೆ

ಪರಮೇಶ್ವರ್‌ ಸಂಸ್ಥೆಗಳ ಮೇಲಿನ ಇ.ಡಿ. ದಾಳಿಯಲ್ಲಿ ಕಾಂಗ್ರೆಸ್‌ ಕೈವಾಡ : ಜೋಶಿ Read More »

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಮೋಡೆಲ್‌ ಆಗಲು ಇದು ಕಾರಣವಂತೆ

ಭಾರಿ ವಿರೋಧ ವ್ಯಕ್ತವಾದ ಬಳಿಕ ಸ್ಪಷ್ಟನೆ ನೀಡಿದ ಸಚಿವ ಬೆಂಗಳೂರು: ರಾಜ್ಯ ಸರ್ಕಾರ ಒಡೆತನದ ಮೈಸೂರು ಸ್ಯಾಂಡಲ್‌ಸೋಪ್‌ಗೆ ಟಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಈ ನಿರ್ಧಾರವನ್ನು ಸಚಿವ ಎಂ.ಬಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ನಮ್ಮ ನಾಡಿನ ಹೆಮ್ಮೆಯ ಸೋಪ್ ಬ್ರ್ಯಾಂಡ್ ಮೈಸೂರು ಸ್ಯಾಂಡಲನ್ನು ಜಾಗತಿಕ ಮಟ್ಟದ ಒಂದು ಬ್ರ್ಯಾಂಡ್ ಆಗಿ ಮಾಡುವ ಇಚ್ಛಾಶಕ್ತಿಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ತಮನ್ನಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಮೋಡೆಲ್‌ ಆಗಲು ಇದು ಕಾರಣವಂತೆ Read More »

ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದ ಸರ್ಕಾರ : ಕ್ಯಾ.ಬ್ರಿಜೇಶ್‌ ಚೌಟ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಆಕ್ರೋಶ ಮಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆದೇಶದ ಮೂಲಕ ಸಿದ್ದರಾಮಯ್ಯ ಸರ್ಕಾರ ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದು ಅವರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲು ಹೊರಟಿದೆ ಎಂದಿದ್ದಾರೆ. ದೇಶಾದ್ಯಂತ ಯಶಸ್ವಿ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ

ಬಡಜನರ ಆರೋಗ್ಯಕ್ಕೆ ಮರಣ ಶಾಸನ ಬರೆದ ಸರ್ಕಾರ : ಕ್ಯಾ.ಬ್ರಿಜೇಶ್‌ ಚೌಟ Read More »

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಬುನಾದಿ ಶಿಕ್ಷಣ ಚಿಂತನಾ ಬೈಠಕ್ ‘ ಅಂಕುರ-25 ‘ ಉದ್ಘಾಟನೆ.

ಮಾನವನ ಶರೀರವು ಪಂಚಭೂತಗಳಿಂದ ನಿರ್ಮಿತವಾಗಿದೆ.ಅದು ಪಂಚಕರ್ಮಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಶಾಲೆಯಲ್ಲಿ  ವಿದ್ಯಾರ್ಥಿಗಳ ಬೆಳವಣಿಗೆಗೆ ಬುನಾದಿ ಶಿಕ್ಷಣವನ್ನು ಸಮರ್ಪಕವಾಗಿ ಬಳಸಬೇಕು. ಅದಕ್ಕಾಗಿ ಇಂತಹ ತರಬೇತಿಯು ಅಗತ್ಯವಿದೆ. ವಿದ್ಯಾಭಾರತಿ ಕರ್ನಾಟಕ ತನ್ನ ಶೈಕ್ಷಣಿಕ ಸಂಯೋಜಿತ ಸಂಸ್ಥೆಯ ಗುರೂಜಿ ಮಾತಾಜಿಯವರಿಗೆ ಔಚಿತ್ಯ ಪೂರ್ಣವಾಗಿ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯಿಂದ ನೀಡುವುದು ಶ್ಲಾಘನೀಯ ಎಂದು ಅಧ್ಯಕ್ಷರು ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರದ ಕೃಷ್ಣರಾಯ ಶಾನುಭಾಗ್ ಹೇಳಿದರು. ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರ ಸಂಸ್ಥೆಯಲ್ಲಿ ನಡೆದ ಬುನಾದಿ ಶಿಕ್ಷಣ ಚಿಂತನ ಬೈಠಕ್ ಅಂಕುರ – 25 

ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಬುನಾದಿ ಶಿಕ್ಷಣ ಚಿಂತನಾ ಬೈಠಕ್ ‘ ಅಂಕುರ-25 ‘ ಉದ್ಘಾಟನೆ. Read More »

error: Content is protected !!
Scroll to Top