ಸುದ್ದಿ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ

ಪಹಲ್ಗಾಮ್‌ ದಾಳಿ ಕುರಿತು ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಸ್ಥಿತಿಯನ್ನು ವಿಶ್ವಸಂಸ್ಥೆಗೆ ಒಯ್ದು ಬಚವಾಗಲು ಯತ್ನಿಸಿದ್ದ ಕಂತ್ರಿ ಪಾಕಿಸ್ಥಾನಕ್ಕೆ ದೊಡ್ಡಮಟ್ಟದಲ್ಲಿ ಮುಖಭಂಗವಾಗಿದೆ. ಪಾಕಿಸ್ಥಾನದ ಒತ್ತಾಯದ ಮೇರೆಗೆ ಇಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಹಸ್ಯ ಸಮಾಲೋಚನಾ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ. ಆದರೆ ಇದೇ ವೇಳೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹಾಕಿದೆ. ಮೇ ತಿಂಗಳಿನ ವಿಶ್ವಸಂಸ್ಥೆ ಭದ್ರತಾ ಮಂಡಳಿಯ […]

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

ಇಸ್ರೇಲ್‌ ಪ್ರತೀಕಾರದ ದಾಳಿ : ಯೆಮೆನ್‌ ಬಂದರು ಧ್ವಂಸ

30 ಯುದ್ಧ ವಿಮಾನಗಳಿಂದ ಬಾಂಬ್‌ಗಳ ಸುರಿಮಳೆ ಟೆಲ್‌ ಅವೀವ್‌: ತನ್ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೌತಿ ಉಗ್ರರು ದಾಳಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಸೋಮವಾರ ರಾತ್ರಿ ಯೆಮೆನ್‌ನ ಹೊಡೈದಾ ಬಂದರು ಮೇಲೆ ಭಯಾನಕ ಬಾಂಬ್‌ ದಾಳಿ ನಡೆಸಿದೆ. ಈ ಸಾವಿನಿಂದಾದ ನಾಶನಷ್ಟ ಮತ್ತು ಸಾವುನೋವಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಆದರೆ ಇಡೀ ಬಂದರು ಮತ್ತು ಅದರ ಸಮೀಪವಿದ್ದ ಸಿಮೆಂಟ್‌ ಫ್ಯಾಕ್ಟರಿ ಸರ್ವನಾಶವಾಗಿದೆ ಎಂದು ವರದಿಗಳು ತಿಳಿಸಿವೆ. ಇಸ್ರೇಲ್‌ನ 30 ಯುದ್ಧ ವಿಮಾನಗಳು ಯೆಮೆನ್‌ನ ಹೊಡೈದಾ

ಇಸ್ರೇಲ್‌ ಪ್ರತೀಕಾರದ ದಾಳಿ : ಯೆಮೆನ್‌ ಬಂದರು ಧ್ವಂಸ Read More »

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ

ಶ್ರೀನಗರ: ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿದೆ. ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ. ಕಾಡಿನಲ್ಲಿ ಅಡಗಸಿಟ್ಟಿದ್ದ ಅಪಾರ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿದೆ.

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ Read More »

ಲಾರಿ-ಕಾರು ಮುಖಾಮುಖಿ ಡಿಕ್ಕಿ : ಐವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಮತ್ತು ಕಾರು ಮುಖಾಮುಖಿ ದಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಈಂದು ಬೆಳಗ್ಗೆ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಲಾರಿ-ಕಾರು ಮುಖಾಮುಖಿ ಡಿಕ್ಕಿ : ಐವರು ಸ್ಥಳದಲ್ಲೇ ಸಾವು Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ

ಆಯುಧ ಇಟ್ಟುಕೊಳ್ಳದಂತೆ ಮಾಡಿ ಹಂತಕರಿಗೆ ಓಡಾಟದ ಸುಳಿವು ನೀಡಿದ್ದಾರೆಂದು ಗುಮಾನಿ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರ ಕೈವಾಡ ಇದೆ ಎಂಬ ಗಂಭೀರವಾದ ಆರೋಪ ಕೇಳಿ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ ಹುಟ್ಟುತ್ತಲೇ ಇದೆ. ಮೊದಲಿಗೆ ಸೇಡು ತೀರಿಸಲು ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಹೇಳಲಾಗಿತ್ತು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿತ್ತು.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ Read More »

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ

ಕೊಲೆಗಡುಕರಿಗೆ ಪೊಲೀಸರ ಪೂರ್ಣ ಸಹಕಾರ ಇತ್ತು ಎಂದ ಶಾಸಕ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಹೀಗಾಗಿ ಅವರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಎನ್‌ಐಎ ತನಿಖೆಯಾದರೆ ಮಾತ್ರ ಪೂರ್ಣ ಸತ್ಯ ಹೊರಬರಬಹುದು ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆಗೆ, ಕೊಲೆಗಡುಕರಿಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಅಪಾದಿಸಿದರು. ಕೊಲೆ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ.

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಮಂಗಳವಾರ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಬುಧವಾರ ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ಯುದ್ಧ ಸಂಭವಿಸಿದರೆ ನಾಗರಿಕರನ್ನು ರಕ್ಷಿಸಲು ಸಿದ್ಧತೆ ಹೊಸದಿಲ್ಲಿ: ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯಗಳು ಬುಧವಾರ ಅಣಕು ರಕ್ಷಣಾ ಕವಾಯತುಗಳನ್ನು ನಡೆಸಲಿವೆ. ಯುದ್ಧ ಸಂಭವಿಸಿದರೆ ನಾಗರಿಕರನ್ನು ರಕ್ಷಿಸುವ ಉದ್ದೇಶದಿಂದ ರಕ್ಷಣಾ ಕವಾಯತು ನಡೆಸಲಾಗುತ್ತಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಗುಂಡಿಕ್ಕಿ ಸಾಯಿಸಿದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದ್ದು, ಯುದ್ಧದ ಕಾರ್ಮೋಡ ಆವರಿಸಿದೆ. ಇದರ ಬೆನ್ನಲ್ಲೇ ಕೇಂದ್ರದಿಂದ ರಕ್ಷಣಾ ಕವಾಯತು ನಡೆಸಲು ಸೂಚನೆ ಬಂದಿರುವುದು ಮಹತ್ವ ಪಡೆದುಕೊಂಡಿದೆ. ಮೇ 7ರಂದು ಅಣಕು ರಕ್ಷಣಾ ಕವಾಯತುಗಳನ್ನು

ಬುಧವಾರ ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ Read More »

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌

ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ನಲ್ಲಿ ಪೋಸ್ಟ್‌ ಮಂಗಳೂರು: ಬಜ್ಪೆ ಸಮೀಪ ಕಿನ್ನಿಪದವು ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್‌ನಲ್ಲಿ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ಪೋಸ್ಟ್ ಮಾಡಿದ ಪುತ್ತೂರಿನ ಯುವಕನ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರಿನ ಮನೀಷ್ ಎಂಬಾತ ವಾಟ್ಸಾಪ್ ಗ್ರೂಪ್‌ನಲ್ಲಿ ಮಹೇಶ್ ಎಸ್. ಎಂಬ ಹೆಸರಿನಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಆತನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗಿದೆ. ಮನೀಷ್

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌ Read More »

error: Content is protected !!
Scroll to Top