ಸುದ್ದಿ

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಬಳಿಯ ತಣ್ಣೀರುಪಂಥದ ಯುವಕನೊಬ್ಬನ ಮೇಲೆ ಕೇಸ್‌ ದಾಖಲಾಗಿದೆ. ಬೆಳ್ತಂಗಡಿಯ ಧನುಷ್ ಎಂದು ಗುರುತಿಸಲಾದ ಯುವಕ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ವಿಷಯವನ್ನು ಪ್ರಸಾರ ಮಾಡಿದ್ದಾನೆ ಎಂದು ಆರೋಪಿಸಿ ಭಾನುವಾರ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಪ್ರಚೋದನಕಾರಿ […]

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ

ವಿದೇಶದಿಂದಲೂ ಬಂದಿದೆ ಹಣ; ಸ್ಥಳೀಯ ಪ್ರಭಾವಿಗಳಿಂದ ಹಣಕಾಸಿನ ನೆರವು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗಾಗಿ ಲಕ್ಷಾಂತರ ರೂಪಾಯಿ ಫಂಡಿಂಗ್‌ ಆಗಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಪ್ರತೀಕಾರಕ್ಕೆ ನಡೆದ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಸುರತ್ಕಲ್‌ ಕಾಟಿಪಳ್ಳದ ಫಾಝಿಲ್ ಹತ್ಯೆಯ ಪ್ರತೀಕಾರಕ್ಕಾಗಿ ಸುಹಾಸ್‌ ಶೆಟ್ಟಿಯನ್ನು ಗುರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಕೆಲವು ಪ್ರಭಾವಿ ಮುಸ್ಲಿಮರು

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ Read More »

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ವಾಹನದ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದೆ ಏಂದು ಜಯಂತ್ ಗೌಡ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಜಾನುವಾರ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು,

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ Read More »

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌

ತೆಕ್ಕಾರು ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪ ಉಪ್ಪಿನಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕುರಿತು ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿದ್ದು, ಇದರ ಧಾರ್ಮಿಕ ಸಭೆಯಲ್ಲಿ ಹರೀಶ್‌ ಪೂಂಜ ಮುಸ್ಲಿಮರನ್ನು ತೆಗಳಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಹರೀಶ್‌ ಪೂಂಜ ಮಾಡಿದ ಪ್ರಚೋದನಕಾರಿ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ Read More »

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ

ಮೇ 5ರಂದು ನಿನ್ನ ಸ್ಥಳಕ್ಕೆ ಬಂದು ಸಾಯಿಸುತ್ತೇವೆ ಎಂದು ಟಾರ್ಗೆಟ್‌ ಫಿಕ್ಸ್‌ ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲು ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ ಎಂದು ಭರತ್‌ ಕುಮ್ಡೇಲು ಫೋಟೊ ಸಹಿತ ಸೋಷಿಯಲ್‌ ಮೀಡಿಯಾದಲಿ ಪೋಸ್ಟ್‌ ಮಾಡಲಾಗಿದೆ. ಸುಹಾಸ್‌ ಶೆಟ್ಟಿ

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ Read More »

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ

ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌, ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ.

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌

ಚಿಕ್ಕಮಗಳೂರು : ಕಾಶ್ಮೀರದ ಪಹಲ್ಗಾಮ್​​ನಲ್ಲಿ ಹಿಂದುಗಳ ಮಾರಣಹೋಮ ಮತ್ತು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸೋಮವಾರ ಚಿಕ್ಕಮಗಳೂರು ಬಂದ್‌ಗೆ ಕರೆನೀಡಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕುಗಳಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌ Read More »

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ

ಹಿಂದುಗಳನ್ನು ದಮನಿಸುವ ಷಡ್ಯಂತ್ರ ಎಂದು ಆರೋಪ ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರಿಗೆ ಶನಿವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೋಮು ಹಿಂಸಾಚಾರ ನಿಗ್ರಹಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್ ಸ್ಥಾಪನೆಯ ಘೋಷಣೆ ಮಾಡಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಿಂದುಗಳನ್ನು ದಮನಿಸಲು, ಆ ಮೂಲಕ ತನ್ನ ವೋಟ್‌ಬ್ಯಾಂಕ್‌ ಪರವಾಗಿರುವವರನ್ನು ಖುಷಿಪಡಿಸಲು ಕಾಂಗ್ರೆಸ್‌ ಸರಕಾರ ಕೈಗೊಂಡಿರುವ ಕ್ರಮ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸಂಸದ ಕ್ಯಾ.ಬ್ರಿಜೇಶ್‌ ಚೌಟ,

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ Read More »

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌

ಕನ್ನಡಿಗರ ಅಭಿಮಾನವನ್ನು ಉಗ್ರರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿರುವ ಗಾಯಕ ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿರುವ ಜನಪ್ರಿಯ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿಗಳು ಕೋರಿದಾಗ ಕನ್ನಡ…ಕನ್ನಡ… ಈ ರೀತಿಯ

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ

ಆರೋಪಿಗಳ ರಕ್ಷಣೆಗೆ ಸ್ಪೀಕರ್‌ ನಿಂತಿದ್ದಾರೆ ಎಂದು ಆರೋಪ; ಹಾಗೇ ಹೇಳಿಲ್ಲ ಎಂದು ಖಾದರ್‌ ಸ್ಪಷ್ಟನೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಸ್ಪೀಕರ್‌ ಯು.ಟಿ.ಖಾದರ್‌ ನೀಡಿದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು ಸ್ವತಃ ಸ್ಪೀಕರ್‌ ಮುಂದಾಗಿರುವುದು ದುರದೃಷ್ಟಕರ, ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಸುಹಾಸ್‌ ಶೆಟ್ಟಿ ಹತ್ಯೆಗೂ ಮೂರು ವರ್ಷದ ಹಿಂದೆ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಫಾಝಿಲ್‌ ಕುಟುಂಬದವರೊಂದಿಗೆ ನಾನು

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ Read More »

error: Content is protected !!
Scroll to Top