ಸುದ್ದಿ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ವ್ಯಾಪಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿದ ಪರಿಣಾಮ ಸಾವುಗಳು ಸಂಭವಿಸಿವೆ. ಅಗ್ನಿಶಾಮಕ ಪಡೆಯ ನೆರವಿನಿಂದ ಪರಿಸ್ಥಿತಿಯನ್ನು ಕ್ಷಿಪ್ರವಾಗಿ ಹತೋಟಿಗೆ ತರಲಾಗಿದ್ದು, 200ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು Read More »

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ

ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಬಾರ್‌, ಮದ್ಯದಂಗಡಿಗಳು ಬಂದ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಲ್ಲದೆ ಮಂಗಳೂರು ಆಯುಕ್ತರ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ರೌಡಿ ಶೀಟರ್ ಮತ್ತು ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ Read More »

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ

ತನಿಖೆಯನ್ನು ಎನ್‌ಐಎಗೊಪ್ಪಿಸಲು ವಿಜಯೇಂದ್ರ ಆಗ್ರಹ ಮಂಗಳೂರು: ಗುರುವಾರ ರಾತ್ರಿ ಬಜಪೆ ಬಳಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಿನ್ನೆ ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 41 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಸೃಜನ್.ಕೆ-618 (ಸುಧೀರ್ ಕೆ ಮತ್ತು ಸುಪ್ರಿಯ ಇವರ ಪುತ್ರ),  ಹೆಚ್.ಎಸ್.ಶ್ರುತ ಜೈನ್-617 (ಹೆಚ್ ಶ್ರೇಯಾಂಸ ಕುಮಾರ್ ಇಂದ್ರ ಮತ್ತು ಶ್ವೇತ ಬಿ ಎಸ್ ಇವರ ಪುತ್ರಿ), ಎಂ.ವೈಷ್ಣವಿ-616 (ಲಕ್ಷ್ಮೀಶ ಮತ್ತು ರಾಧಿಕ

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್ Read More »

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಗೆ ನೂರು ಶೇಕಡಾ ಫಲಿತಾಂಶ

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು 2025 ಮಾರ್ಚ ನಲ್ಲಿ ಜರಗಿದ ಎಸ್. ಎಸ್. ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳು  ಉತ್ತೀರ್ಣರಾಗಿ ನೂರು ಶೇಕಡ ಫಲಿತಾಂಶ ಬಂದಿರುತ್ತದೆ. ಸಂಸ್ಥೆಯ ಪರಮ ಪೋಷಕರಾದ ಪೂಜ್ಯ  ಶ್ರೀ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾದ ಸೂರ್ಯ ಕುಮಾರ್ ಹಳೆಯಂಗಡಿ, ಕಾರ್ಯದರ್ಶಿ ಗುರುರಾಜ ಕೆ ಮಂಗಳೂರು ಮತ್ತು ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ  ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಗೆ ನೂರು ಶೇಕಡಾ ಫಲಿತಾಂಶ Read More »

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ

ಕೂದಲೆಳೆ ಅಂತರದಿಂದ ಪಾರಾದ ಇಬ್ಬರು ಯುವಕರು ಉಡುಪಿ: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆದ ಬೆನ್ನಲ್ಲೇ ಉಡುಪಿ ಸಮೀಪ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಹಿರಿಯಡಕ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಯತ್ನಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಮದು ಪೊಲೀಸರು ತಿಳಿಸಿದ್ದಾರೆ. ಸುಶಾಂತ್ ಮತ್ತು ಸಂದೇಶ್ ಪೂಜಾರಿ ಬಂಧಿತ ಆರೋಪಿಗಳು. ನಿನ್ನೆ

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ

ನಮ್ಮ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಸಾರ್ವಜನಿಕ ಹತ್ಯೆಯು ಮತ್ತೊಮ್ಮೆ ಕರಾವಳಿಗರ ಹೃದಯದಲ್ಲಿ ಮನಸ್ಸಿನಲ್ಲಿ ಅಳಿಸಲಾಗದ ಆಘಾತ ಸೃಷ್ಟಿಸಿದೆ. ಇಂತಹ ನೋವು ಮೊದಲನೆಯದಲ್ಲ, ಹೊಸತೂ ಅಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ನಮ್ಮ ಭಾಗದ ಹಿಂದೂ ಕಾರ್ಯಕರ್ತರ ಗುರಿಯಾಗಿ ಹತ್ಯೆಗಳ ಪ್ರವೃತ್ತಿ ಹೆಚ್ಚಾಗುತ್ತವೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಗುರಿ ಇಟ್ಟು ನಡೆಸಿದ ಹತ್ಯೆಯ ರೀತಿಯಲ್ಲಿಯೇ ಈ ಘಟನೆಯು ನಡೆದಿದೆ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐ ನಂತಹ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ Read More »

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ

ಕೆಲವು ಬಸ್‌ಗಳಿಗೆ ಕಲ್ಲುತೂರಾಟ; ಅಂಗಡಿ ಹೋಟೆಲ್‌ಗಳು ಬಂದ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದನ್ನು ಅನುಸರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಆದೇಶ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿದ್ದು, ಮೇ 6 ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ನಿಷೇಧಾಜ್ಞೆಯನ್ನು ತಕ್ಷಣದಿಂದಲೇ ಜಾರಿಗೆ

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ Read More »

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು

ಪುತ್ತೂರು: ಸುಹಾಸ್‍ ಶೆಟ್ಟಿ ಹತ್ಯೆ  ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಂದ್ ಗೆ ಕರೆ ನೀಡಿದರೂ ಶುಕ್ರವಾರ ಪುತ್ತೂರಿನಲ್ಲಿ ಕೆಲವು ಅಂಗಡಿಗಳು ಬಂದ್‍ ಮಾಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ನಡೆದಿದೆ. 11 ಗಂಟೆ ಸುಮಾರಿಗೆ ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ, ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು. ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು Read More »

ದೆಹಲಿಯಲ್ಲಿ ಭಾರಿ ಮಳೆಗೆ ಹಲವು ಅನಾಹುತ : ನಾಲ್ವರು ಸಾವು

100ಕ್ಕೂ ಹೆಚ್ಚು ವಿಮಾನಗಳು ವಿಳಂಬ, 40 ವಿಮಾನಗಳ ಮಾರ್ಗ ಬದಲು ನವದೆಹಲಿ: ರಾಜಧಾನಿ ದೆಹಲಿ ಎನ್​ಸಿಆರ್​ನಲ್ಲಿ ಇಂದು ಬೆಳಗ್ಗಿನಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಅನೇಕೆ ಅನಾಹುತಗಳು ಸೃಷ್ಟಿಯಾಗಿವೆ. ನಜಾಫ್‌ಗಢ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಮನೆ ಕುಸಿದು ಓರ್ವ ಮಹಿಳೆ ಮತ್ತು ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು ಈ ದುರಂತ ಅಪಘಾತ ಸಂಭವಿಸಿದೆ. ದೆಹಲಿಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಂಚಾರ ವ್ಯವಸ್ಥೆಯನ್ನೂ ಮಳೆ

ದೆಹಲಿಯಲ್ಲಿ ಭಾರಿ ಮಳೆಗೆ ಹಲವು ಅನಾಹುತ : ನಾಲ್ವರು ಸಾವು Read More »

error: Content is protected !!
Scroll to Top