ಸುದ್ದಿ

ಸರಕಾರಿ ಬಸ್ಸಿನಿಂದ ಎಸೆಯಲ್ಪಟ್ಟ ಪ್ರಯಾಣಿಕ

ಪುತ್ತೂರು: ಪ್ರಯಾಣಿಕರೋರ್ವರು ಕೆಎಸ್ ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆದಿದೆ. ದರ್ಬೆ ಜಂಕ್ಷನ್ ಬಳಿ ಪ್ರಯಾಣಿಕರೋರ್ವರು ಬಸ್ ಗೆ ಹತ್ತಿದ್ದರು. ಬಸ್ ಸ್ವಲ್ಪ ಮುಂದೆ ಹೋಗಿತ್ತಷ್ಟೇ, ಅಷ್ಟರಲ್ಲೇ ಪ್ರಯಾಣಿಕ ಬಸ್ ನಿಂದ ಎಸೆಯಲ್ಪಟ್ಟಿದ್ದಾರೆ. ಗಾಯಗೊಂಡ ಅವರನ್ನು ಬಸ್ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.

ಸರಕಾರಿ ಬಸ್ಸಿನಿಂದ ಎಸೆಯಲ್ಪಟ್ಟ ಪ್ರಯಾಣಿಕ Read More »

ನಾಳೆ (ಮೇ. 13) :  ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ –  ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ

ಪುತ್ತೂರು : ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ  ಸಂಘ ಇವರಿಂದ ಮೇ 13 ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ . ಗೊಂಬೆಯಾಟ  ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ  ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು

ನಾಳೆ (ಮೇ. 13) :  ಪುತ್ತೂರು ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ –  ಯಕ್ಷಗಾನ ಬೊಂಬೆಯಾಟ – ದೇವಿ ಮಹಾತ್ಮೆ Read More »

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್

ಸುಳ್ಯ : ಪಿಕಪ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಮೇ. 11) ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವು ಬಳಿ ಸಮೀಪಿಸುತ್ತಿದ್ದಂತೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕನು ಕೂಡಲೇ ವಾಹನ ನಿಲ್ಲಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಗ್ನಿಯ ತೀವ್ರತೆಗೆ ಪಿಕಪ್ ವಾಹನ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್ Read More »

ಮುಗಿದಿಲ್ಲ ಆಪರೇಷನ್‌ ಸಿಂದೂರ : ಪಾಕ್‌ ಜೊತೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ

ಒಂದೇ ಒಂದು ಗುಂಡು ಹಾರಿದರೆ ಮತ್ತೆ ದಾಳಿ ಎಂದು ಖಡಕ್‌ ಎಚ್ಚರಿಕೆ ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆರಂಭಿಸಿರುವ ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಸ್ಥಗಿತಗೊಂಡಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಾಕಿಸ್ಥಾನದೊಂದಿಗೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲದ ಕಾರಣ ಆಪರೇಷನ್‌ ಸಿಂಧೂರ ಮುಂದುವರಿಯಲಿದೆ. ಮೂರೂ ಸಶಸ್ತ್ರ ಪಡೆಗಳು ಯುದ್ಧ ಸನ್ನದ್ಧತೆಯಲ್ಲಿದ್ದು, ಯಾವುದೇ ಸಂಭಾವ್ಯ ದಾಳಿಯನ್ನು ಎದುರಿಸಲು ಸಮರ್ಥವಾಗಿದ್ದೇವೆ. ಕದನ ವಿರಾಮ ಘೋಷಣೆಯಾಗಿದ್ದರೂ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಇನ್ನೂ ಸಕ್ರಿಯವಾಗಿದೆ ಎಂಬ ಸಂದೇಶವನ್ನು ಭಾರತದ

ಮುಗಿದಿಲ್ಲ ಆಪರೇಷನ್‌ ಸಿಂದೂರ : ಪಾಕ್‌ ಜೊತೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ Read More »

19 ದಿನಗಳ ಬಳಿಕ ಶಾಂತವಾದ ಗಡಿ

ಶೆಲ್‌, ಗುಂಡಿನ ದಾಳಿಯಿಲ್ಲದೆ ನೆಮ್ಮದಿಯಾಗಿ ನಿದ್ದೆ ಮಾಡಿದ ಜನ ನವದೆಹಲಿ: ಭಾರತ ಹಾಗೂ ಪಾಕಿಸ್ಥಾನ​ ನಡುವೆ ಕಳೆದ 19 ದಿನಗಳಿಂದ ಮೊದಲ ಬಾರಿ ನಿನ್ನೆ ರಾತ್ರಿ ಗಡಿ ಶಾಂತವಾಗಿತ್ತು. ಯುದ್ಧ ಪ್ರಾರಂಭವಾದ ಬಳೀಕ ನಿತ್ಯ ಶೆಲ್ಲಿಂಗ್‌ ಮತ್ತಿತರ ದಾಳಿ ನಡೆಯುತ್ತಿದ್ದ ಗಡಿಯಲ್ಲಿ ನಿನ್ನೆ ರಾತ್ರಿ ಒಂದೇ ಒಂದು ಗುಂಡು ಹಾರಿಲ್ಲ. ಜಮ್ಮು ಮತ್ತು ಕಾಶ್ಮೀರ ಹಾಗೂ ಇತರ ಗಡಿ ಪ್ರದೇಶಗಳಲ್ಲಿ ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ. ಶಾಂತಿ ನೆಲೆಸಿದೆ ಎಂದು ಭಾರತೀಯ

19 ದಿನಗಳ ಬಳಿಕ ಶಾಂತವಾದ ಗಡಿ Read More »

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ

ಅಮೆರಿಕಕ್ಕೆ ಭಾರತದ ಸ್ಪಷ್ಟ ನಿಲುವು ತಿಳಿಸಿದ ಪ್ರಧಾನಿ ಮೋದಿ ನವದೆಹಲಿ: ಪಾಕಿಸ್ಥಾನ ಮತ್ತೆ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡುತ್ತೇವೆ. ಆ ಕಡೆಯಿಂದ ಗುಂಡು ಹಾರಿಸಿದರೆ ಇಲ್ಲಿಂದಲೂ ಗುಂಡು ಸಿಡಿಯುತ್ತದೆ. ನಮಗೆ ಯಾರ ಮಧ್ಯಸ್ಥಿಕೆ ಕೂಡ ಬೇಕಾಗಿಲ್ಲ ಎಂದು ಅಮೆರಿಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್​ ಜೊತೆ ಪಾಕ್ ಕದನ ವಿರಾಮ ಉಲ್ಲಂಘಿಸಿದ ಬಳಿಕ ಮೋದಿ ಫೋನ್ ಮೂಲಕ ಮಾತುಕತೆ ನಡೆಸಿ ಭಾರತದ ನಿಲುವನ್ನು ತಿಳಿಸಿದ್ದಾರೆ. ಕಾಶ್ಮೀರದ ಬಗ್ಗೆ ಭಾರತ

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ Read More »

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು

ರಾಯ್​ಪುರ: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿ 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಮಡಿದವರಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸೇರಿದ್ದಾರೆ. ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರಾಯ್‌ಪುರ ಎಸ್‌ಪಿ

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು Read More »

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಸ್ನೇಹಿತನ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗ ಬಂದ ಸಾವು ಕಾರ್ಕಳ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೇ 11ರಂದು ತಡರಾತ್ರಿ ಮಿಯ್ಯಾರು ಎಂಬಲ್ಲಿ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಸಂದರ್ಭ ರಾಕೇಶ್‌

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ Read More »

ಆಪರೇಷನ್‌ ಸಿಂದೂರ್‌ನಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ

ಸಾಕ್ಷಿ ಸಮೇತ ಮಾಹಿತಿ ನೀಡಿದ ಸೇನೆಯ ಡಿಜಿಎಂಒ ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಮೇ 7ರಂದು ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ. ಕದನ ವಿರಾಮ ಘೋಷಣೆಯಾಗಿ ಒಂದು ದಿನದ ಬಳಿಕ ಭಾರತದ ವಿವಿಧ ಪಡೆಗಳ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂದೂರ್ ಹಾಗೂ ನಂತರದ ಭಾರತದ

ಆಪರೇಷನ್‌ ಸಿಂದೂರ್‌ನಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ Read More »

ಆಪರೇಷನ್ ಸಿಂದೂರ ಮುಂದುವರೆದಿದೆ ಎಂದ ಭಾರತಿಯ ವಾಯು ಸೇನೆ

ಮಂಗಳೂರು/ನವದೆಹಲಿ: ಅಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಪಹಾಲ್ಗಮ್ ಯುದ್ಧದ ಬಳಿಕ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಎಂಬ ಶೀರ್ಷಿಕೆಯಡಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ದಾಳಿಯ ನಂತರ ಭಾರತ – ಪಾಕ್ ನಡುವೆ ಕದನ ವಿರಾಮಕ್ಕೆ ಒಪ್ಪಂದ ಮಾಡಲಾಯಿತು. ಕದನ ವಿರಾಮವನ್ನು ಉಲ್ಲಂಘನೆ ಮಾಡಿ ಯುದ್ಧ ಮಾಡಿದೆ ಎನ್ನಲಾಗಿದೆ. ಇದೀಗ ಮತ್ತೇ ಆಪರೇಷನ್ ಸಿಂಧೂರ ಕಾರ್ಯಚರಣೆ ಮುಂದುವರೆದಿದೆ. ಸೂಕ್ತ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು.  ಅಲ್ಲಿಯವರೆಗೆ

ಆಪರೇಷನ್ ಸಿಂದೂರ ಮುಂದುವರೆದಿದೆ ಎಂದ ಭಾರತಿಯ ವಾಯು ಸೇನೆ Read More »

error: Content is protected !!
Scroll to Top