ಸುದ್ದಿ

ತಲೆನೋವಿಗೆ ‌ಮನೆಯಲ್ಲೇ ಇದ್ದ ಔಷಧ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿಗೆಂದು ‌ಮನೆಯಲ್ಲೇ ಇದ್ದ ಔಷಧ ಕುಡಿದ ಪರಿಣಾಮ 10 ವರ್ಷದ ಬಾಲಕ ಮೃತ ಪಟ್ಟ ಘಟನೆ ರಾಮಕುಂಜದಲ್ಲಿ ‌ನಡೆದಿದೆ. ಈ ಸಂಬಂಧ ಮೃತ ಬಾಲಕನ ತಂದೆ ಸಂಜೀವ ಪೂಜಾರಿ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಅವರ ಪುತ್ರನಿಗೆ ‌ಪದೇ ಪದೇ ತಲೆನೋವು ಕಾಣಿಸಿಕೊಂಡಿದೆ. ಮಾ. 18 ರಂದು ತಲೆನೋವು ಎಂದು ಹುಡುಗ ಮನೆಯಲ್ಲೇ ಇದ್ದ ಔಷಧ ಕುಡಿದಿದ್ದಾನೆ. ಆ ಬಳಿಕ ಆರೋಗ್ಯ ಹದೆಗೆಟ್ಟು ಬಾಲಕ ಕಂಗಾಲಾಗಿ ‌ನರಳಿದ್ದಾನೆ. ತಕ್ಷಣವೇ ಅವನನ್ನು ಆಸ್ಪತ್ರೆಗೆ […]

ತಲೆನೋವಿಗೆ ‌ಮನೆಯಲ್ಲೇ ಇದ್ದ ಔಷಧ ಸೇವಿಸಿ ಬಾಲಕ ಸಾವು Read More »

ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು: ತನ್ನ ತಾಯಿ ಮತ್ತು ಸಹೋದರಿಗೆ ‌ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸ್ನೇಹಿತನನ್ನು ಯುವಕನೊಬ್ಬ ಹತ್ಯೆ ಮಾಡಿದ ಘಟನೆ ಆವಲಹಳ್ಳಿಯಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಬಿಹಾರ ಮೂಲದ ಕುನಾಲ್ (22) ಎಂದು ಗುರುತಿಸಲಾಗಿದೆ. ಕೊಲೆಗಾರನನ್ನು ನಸ್ರುಲ್ಲಾ(24) ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹದಿನೈದು ದಿನಗಳ ಹಿಂದೆ ಇವರಿಬ್ಬರ ನಡುವೆ ಜಗಳ ನಡೆದಿತ್ತು.‌ ಈ ಸಂದರ್ಭದಲ್ಲಿ ನಸ್ರುಲ್ಲಾನ ತಾಯಿ ಮತ್ತು ಸಹೋದರಿಯ ಬಗ್ಗೆ ಕುನಾಲ್ ಕೆಟ್ಟದಾಗಿ ಮಾತನಾಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ನಸ್ರುಲ್ಲಾ ಮದ್ಯದ ಅಮಲಿನಲ್ಲಿ ಕುನಾಲ್‌ನ ರೂಮ್‌ಗೆ ನುಗ್ಗಿ ಆತನ

ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ Read More »

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು

ಕಾಲೇಜಿನ ಗೆಳೆಯರೊಂದಿಗೆ ಜಾತ್ರೆಗೆ ಬಂದಿದ್ದ ಬಾಲಕ ಬೆಳ್ತಂಗಡಿ : ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅನ್ಯಕೋಮಿನ 17 ವಯಸ್ಸಿನ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ ಮಾ.11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು Read More »

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧಿ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಪದೇಪದೆ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾರ್ಚ್ 18ರಂದು ಸಂಜೆ ಬಾಲಕ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿ ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದಾನೆಂದು ತಾಯಿ ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು Read More »

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು

ಏ.9ರಂದು ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು Read More »

ಯುಗಾದಿಗೆ ‌ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನಮೋ

ನವದೆಹಲಿ: ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೂ ಶುಭಾಶಯಗಳನ್ನು ತಿಳಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಹೊಸ ವರ್ಷ, ವಸಂತ ಋತುವಿನ ಆಗಮನ ಪ್ರತಿಯೊಬ್ಬರ ಬದುಕಿನಲ್ಲಿಯೂ ಹೊಸ ಉತ್ಸಾಹ ಮತ್ತು ಅವಕಾಶಗಳನ್ನು ತರಲಿ ‌ಎಂದು ಹಾರೈಸಿದ್ದಾರೆ. ಪ್ರಕೃತಿಯಲ್ಲಿನ ಹಸಿರು, ಹೂವುಗಳ ಸುವಾಸನೆ, ಹಣ್ಣುಗಳ ಆಗಮನ ಹೊಸ ಶಕ್ತಿಯ ಸಂಕೇತ. ರೈತಾಪಿ ವರ್ಗ ಈ ಸಂದರ್ಭದಲ್ಲಿ ಹೊಸ ಕೃಷಿ ಚಟುವಟಿಕೆಗಳಿಗೆ ತೊಡಗಲು ಸಿದ್ಧತೆ ನಡೆಸುತ್ತಿರುವ ಬಗೆಗೂ ಆವರು ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಬದುಕಿನ ಸಿಹಿ –

ಯುಗಾದಿಗೆ ‌ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನಮೋ Read More »

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ: ಸದಾನಂದ‌ ಮಾವಜಿ ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ: ಶೋಭಾ ಚಿದಾನಂದ ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ Read More »

ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ಅನಿಲ ಸ್ಥಾವರದ ಮೇಲೆ ಇರಾನ್‌ ದಾಳಿ

ಭಾರತಕ್ಕೆ ಗ್ಯಾಸ್‌ ಪೂರೈಸುತ್ತಿರುವ ಪ್ರಮುಖ ಅನಿಲ ಸ್ಥಾವರ ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ ರಫ್ತು ಸ್ಥಾವರವನ್ನು ಹೊಂದಿರುವ ಕತಾರ್‌ ಸಂಕೀರ್ಣವು ವ್ಯಾಪಕ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸುವ ಮೊದಲು ಜಾಗತಿಕ ಪೂರೈಕೆಯ ಐದನೇ ಒಂದು ಭಾಗದಷ್ಟು ಪಾಲನ್ನು ಹೊಂದಿದ್ದ ಎಲ್‌ಎನ್‌ಜಿ ಸ್ಥಾವರ ರಾಸ್ ಲಫಾನ್

ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ಅನಿಲ ಸ್ಥಾವರದ ಮೇಲೆ ಇರಾನ್‌ ದಾಳಿ Read More »

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ

ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ Read More »

error: Content is protected !!
Scroll to Top