ಸುದ್ದಿ

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ!

ಜಲಕ್ಷಾಮ ಎದುರಿಸಲು ನೀರಿನ ಮಿತ ಬಳಕಗೆ ಸೂಚನೆ ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನಲ್ಲಿ ಕಾರು ತೊಳೆದರೆ ಬರೋಬ್ಬರಿ 5 ಸಾವಿರ ರೂ. ದಂಡ ಬೀಳಲಿದೆ. ಈ ಬಾರಿ ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವುದು ಸೇರಿದಂತೆ ಹಲವು ಮಹತ್ವದ ಸೂಚನೆಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶನ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು […]

ಕುಡಿಯುವ ನೀರಿನಲ್ಲಿ ಕಾರು ತೊಳೆದರೆ 5 ಸಾವಿರ ರೂ. ದಂಡ! Read More »

ಮಂಗಳೂರಿನ ಪ್ಯಾರಾಮೆಡಿಕಲ್  ವಿದ್ಯಾರ್ಥಿ ನಾಪತ್ತೆ

ಮಂಗಳೂರು: ಬಜ್ಪೆ ವಲಯದ ಮೂಡುಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ ನಿತಿನ್ ಬೆಲ್ಚಡ ಕಾಣೆಯಾಗಿದ್ದಾರೆ. ನಾಪತ್ತೆಯಾದವರ ಈ ಕುರಿತು ಘಟನೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಯುವಕ ವಿದ್ಯಾರ್ಥಿ ಮಂಗಳ ಕಾಲೇಜು ಪ್ಯಾರಾಮೆಡಿಕಲ್ ಸೈನ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಫೆಬ್ರವರಿ 13ರಂದು ಕಾಲೇಜ್‍ನಿಂದ ಮನೆಗೆ ಬಂದು ಯಾರಿಗೂ ಹೇಳದೆ ಹೊರಗೆ ಹೋದವ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ನಿತಿನ್ ಬೆಲ್ಚಡ 5 ಅಡಿ 5 ಇಂಚು ಉದ್ದ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಕಾಣೆಯಾದ ದಿನ

ಮಂಗಳೂರಿನ ಪ್ಯಾರಾಮೆಡಿಕಲ್  ವಿದ್ಯಾರ್ಥಿ ನಾಪತ್ತೆ Read More »

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ

ಮಂಗಳೂರು: ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಬೆಂಚ್ ಮೇಲೆ ನಿಶಕ್ತಿಯಿಂದ ಮಲಗಿದ್ದ ವ್ಯಕ್ತಿಗೆ ರೈಲ್ವೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪೊಲೀಸರು ಹಲ್ಲೆ ಮಾಡಿದ ಪರಿಣಾಮ ಕಾಲು ತುಂಡರಿಸುವಂತಾಗಿದೆ ಎಂದು ಕೇರಳ ಮೂಲದ ವಾಯುಪಡೆಯ ನಿವೃತ್ತ ಅಧಿಕಾರಿ ಪಿ.ವಿ. ಸುರೇಶನ್ ಎಂಬವರ ಆರೋಪವನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ತಳ್ಳಿಹಾಕಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ಚಿತ್ರಣ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಫೆ.1 ರಂದು ದೂರುದಾರ ಸುರೇಶನ್‌ಗೆ

ರೈಲ್ವೆ ಪೊಲೀಸರಿಂದ ವಾಯುಪಡೆಯ ನಿವೃತ್ತ ಅಧಿಕಾರಿಗೆ ಹಲ್ಲೆ  ನಡೆಸಿರುವ ಆರೋಪ Read More »

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ

ಐಎಸ್‌ಐ ಏಜೆಂಟ್‌ ಹನಿಟ್ರ್ಯಾಪ್‌ಗೆ ಬಿದ್ದು ಮಹತ್ವದ ಮಾಹಿತಿಗಳನ್ನು ನೀಡಿದ್ದ ನೌಕರರು ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಎಂಬಿಬ್ಬರನ್ನು ಹೈದರಾಬಾದ್ ಮೂಲದ ಎನ್​ಐಎ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್​ಐಎ ತಂಡ ಸೋಮವಾರ ಕಾರವಾರಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ.ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ 2024ರ ಆಗಸ್ಟ್ ತಿಂಗಳಲ್ಲಿ ಮೂವರನ್ನು ವಿಚಾರಣೆ

ಕಾರವಾರ ನೌಕಾನೆಲೆ ಮಾಹಿತಿ ಪಾಕಿಸ್ಥಾನಕ್ಕೆ ಸೋರಿಕೆ : ಇಬ್ಬರ ಬಂಧನ Read More »

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

ಸುಳ್ಯ : ಸಂಪಾಜೆ ಯಕ್ಷೋತ್ಸವ, ಯಕ್ಷಗಾನ  ಮತ್ತು ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದಕಲಾವಿದ,ವಿದ್ವಾಂಸರಿಗೆ ಗೌರವ,  ತಾಳಮದ್ದಳೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಯಕ್ಷಗಾನ ಮೇಳದ ಮೂಲಕ ರುಚಿ ಶುದ್ದಿಯ ಯಕ್ಷಗಾನ ಪ್ರದರ್ಶನ ನೀಡುವಲ್ಲಿ ಮಾರ್ಗದರ್ಶಕರಾದ ಕಲಾಪೋಷಕ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಇವರಿಗೆ ಯಕ್ಷ ಭಾರತಿ ರಿ. ಬೆಳ್ತಂಗಡಿ ಸಂಸ್ಥೆಯ ದಶಮಾನೋತ್ಸವದ ಗೌರವ ಸನ್ಮಾನವನ್ನು  ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿದ ಶ್ಯಾಮ್ ಭಟ್ ಅವರು ಯಕ್ಷ

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ Read More »

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು

ಟೊರೊಂಟೊ : ಕೆನಡದ ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಡೆಲ್ಟಾ ಏರ್​ಲೈನ್ಸ್ ವಿಮಾನ ತಲೆಕೆಳಗಾಗಿದ್ದು, ಈ ಅಪಘಾತದಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ವಿಮಾನವು ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಲ್ಲಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಇತರರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 80 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರು ತಲೆಕೆಳಗಾದ ವಿಮಾನದಿಂದ ತೆವಳಿಕೊಂಡು ಹೊರಬರುತ್ತಿರುವ ದೃಶ್ಯ ಸೋಷಿಲ್‌ ಮೀಡಿಯಾದಲ್ಲಿ ಭಾರಿ

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು Read More »

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್‌ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿ ಜನವರಿ 26, 2029ರವರೆಗೆ ಇರಲಿದೆ. ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ Read More »

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್‌

ಕೊಬ್ಬಿನಂಶ ಹೆಚ್ಚು ಇದೆ ಎಂಬ ಕಾರಣಕ್ಕೆ ವಿತರಣೆ ಸ್ಥಗಿತಗೊಳಿಸಲು ಸರಕಾರದ ಆದೇಶ ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ

ಶಾಲೆಗಳಲ್ಲಿ ಚಿಕ್ಕಿ ವಿತರಣೆ ಬಂದ್‌ Read More »

ಹೃದಯಾಘಾತದಿಂದ ಯುವತಿ ನಿಧನ

ಮಡುಕೋಡಿ: ಗ್ರಾಮದ ನಡ್ತಿರಲ್ಲು ಅರ್ಬು ಮನೆ, ಸುಂದರರವರ ಪುತ್ರಿ ಸುಕನ್ಯಾ (18 ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ ಸುಂದರ, ತಾಯಿ ಕುಸುಮ, ಸಹೋದರ ಶ್ರವಣ್ ಕುಮಾರ್, ಸಹೋದರಿ ಧನ್ಯ ಇವರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಯುವತಿ ನಿಧನ Read More »

ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ಮಾಡಿದ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್

ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ದ ಪ್ರಕರಣ ದಾಖಲು ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ಹಲ್ಲೆ ನಡೆಸಿರುವ ಘಟನೆ ಫೆ. 17ರಂದು ನಡೆದಿದೆ. ಹಲ್ಲೆ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಬಗ್ಗೆ ಪೊಲೀಸರಿಗೆ ದೂರಿದ್ದಾರೆ. ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ

ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ಮಾಡಿದ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ Read More »

error: Content is protected !!
Scroll to Top