ಸುದ್ದಿ

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು

7 ವಿದ್ಯಾರ್ಥಿನಿಯರು ಅಸ್ವಸ್ಥ; ನಾಲ್ಕು ಮಂದಿ ಗಂಭೀರ ಬೆಂಗಳೂರು: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ ಏಳು ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್)ಗೆ ಸ್ಥಳಾಂತರಿಸಲಾಗಿದೆ. ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು Read More »

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು

ಒಂಬತ್ತು ತಿಂಗಳಿಂದ ಅಂತರಿಕ್ಷದಲ್ಲಿ ಬಾಕಿಯಾಗಿರುವ ಭಾರತೀಯ ಮೂಲದ ಖಗೋಲ ವಿಜ್ಞಾನಿ ವಾಷಿಂಗ್ಟನ್: ಗಗನಯಾತ್ರಿ ಸುನೀತಾ ವಿಲ್ಲಿಯಮ್ಸ್‌ ಅವರ ಅಂತರಿಕ್ಷ ವಾಸಕ್ಕೆ ಕೊನೆಗೂ ಮುಕ್ತಿ ಸಿಗುವ ಗಳಿಗೆ ಸನ್ನಿಹಿತವಾಗಿದೆ. ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು 9 ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆಯನ್ನು ನಾಸಾ ಮರಳಿ ಪ್ರಾರಂಭಿಸಿದೆ.ಅಮೆರಿಕ ಬ್ಯಾಹ್ಯಾಕಾಶ ಸಂಸ್ಥೆ (ನಾಸಾ) ಮತ್ತು ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್

ಗಗನ ಯಾತ್ರಿ ಸುನೀತಾ ವಿಲ್ಲಿಯಮ್ಸ್‌ರನ್ನು ಭೂಮಿಗೆ ಕರೆತರುವ ಕಾರ್ಯಾಚರಣೆ ಶುರು Read More »

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ

ಪಾಕ್‌ ಸೇನೆ ಸುಳ್ಳು ಹೇಳಿ ಜಗತ್ತಿನ ದಿಕ್ಕುತಪ್ಪಿಸಿದೆ ಎಂದು ಆರೋಪ ಇಸ್ಲಾಮಾಬಾದ್: ಜಾಫರ್‌ ಎಕ್ಸ್‌ಪ್ರೆಸ್‌ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲ 214 ಪ್ರಯಾಣಿಕರನ್ನು ಹತ್ಯೆ ಮಾಡಲಾಗಿದೆ ಎಂದು ಬಲೂಚ್‌ ಲಿಬರೇಶನ್‌ ಆರ್ಮಿ (ಬಿಎಲ್‌ಎ) ಹೇಳಿಕೊಂಡಿದೆ.ನಮ್ಮ ಹೋರಾಟಗಾರರಿಂದ ಒತ್ತೆಯಾಳುಗಳಾಗಿದ್ದ ಎಲ್ಲ 214 ಮಂದಿಯನ್ನೂ ಹತ್ಯೆ ಮಾಡಲಾಗಿದೆ. ಪಾಕಿಸ್ಥಾನಿ ಭದ್ರತಾ ಪಡೆಗಳೊಂದಿಗೆ ಇನ್ನೂ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದೆ. ಬಿಎಲ್‌ಎ ಪ್ರತ್ಯೇಕತಾವಾದಿಗಳನ್ನು ಸದೆಬಡಿದು ಜನರ ರಕ್ಷಣೆ ಮಾಡಿರುವುದಾಗಿ ಪಾಕಿಸ್ಥಾನ ಹೇಳಿಕೆ ನೀಡಿತ್ತು. ಆದರೆ, ಈ ಹೇಳಿಕೆಗೆ ತದ್ವಿರುದ್ಧವಾದ ಹೇಳಿಕೆಯನ್ನು ಬಿಎಲ್‌ಎ ನೀಡಿದೆ.

ಹೈಜಾಕ್‌ ಮಾಡಿದ ರೈಲಿನಲ್ಲಿದ್ದ 214 ಪ್ರಯಾಣಿಕರ ಹತ್ಯೆ : ಬಂಡುಕೋರರ ಹೇಳಿಕೆ Read More »

ಮಕ್ಕಳಲ್ಲಿ ಹುಟ್ಟುವ ಭಯದ ಮೂಲ ಯಾವುದು?

ಭಯ ಮಗುವಿನ ವ್ಯಕ್ತಿತ್ವವನ್ನೇ ಬದಲಾಯಿಸುತ್ತದೆ 1999ರ ಹೊತ್ತಿಗೆ ಆಸ್ಟ್ರೇಲಿಯ ಕ್ರಿಕೆಟ್ ಟೀಮನಲ್ಲಿ ಬ್ರೆಟ್ ಲೀ ಎಂಬ ಅತ್ಯಂತ ವೇಗದ ಬೌಲರ್ ಇದ್ದರು. ಗಂಟೆಗೆ 150 ಕಿ.ಮೀ. ವೇಗದಲ್ಲಿ ಆತ ಬೌಲಿಂಗ್ ಮಾಡುತ್ತಿದ್ದರೆ ಯಾವ ಬ್ಯಾಟ್ಸ್‌ಮ್ಯಾನ್‌ ಎದೆ ಕೂಡ ಒಮ್ಮೆ ನಡುಗುತ್ತಿತ್ತು. ಅದೇ ಹೊತ್ತಿಗೆ ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್ ಜೀವನದ ಶಿಖರದಲ್ಲಿ ಇದ್ದರು. ಬ್ರೆಟ್ ಲೀ ವಿರುದ್ಧ ಅವರು ನಿರ್ಭೀತಿಯಿಂದಲೆ ಆಡುತ್ತಿದ್ದರು. ಸಚಿನ್ ಕೊಟ್ಟ ಉತ್ತರವು ಅತ್ಯಂತ ಮಾರ್ಮಿಕ ಆಗಿತ್ತು ಆಗ ಯಾರೋ ಸಚಿನ್ ಅವರನ್ನು ಕೇಳಿದ್ದರು,

ಮಕ್ಕಳಲ್ಲಿ ಹುಟ್ಟುವ ಭಯದ ಮೂಲ ಯಾವುದು? Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 15 (ನಾಳೆ) ರಂದು ಮಧ್ಯಾಹ್ನ 1:45 ಕ್ಕೆ ಮತ್ತು ಮಾ. 16 ಭಾನುವಾರ 2:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ Read More »

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶರವೂರು ಜಾತ್ರೋತ್ಸವ

ಶರವೂರು : ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶರವೂರು ಜಾತ್ರೋತ್ಸವದ ಅಂಗವಾಗಿ ಶ್ರೀ ದೇವಿಯ ವರ್ಷಾವಧಿ ಉತ್ಸವ, ಪರಿವಾರ ದೈವಗಳಿಗೆ ಭಂಡಾರ ಹಿಡಿದು ನೇಮೋತ್ಸವ ಹಾಗೂ ಶ್ರೀ ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ಪೂಜೆ ಮಾ. 14 ರಿಂದ ಮಾ. 24 ರವರೆಗೆ ನಡೆಯಲಿದೆ. ಮಾ. 14 ರಂದು ಬೆಳಗ್ಗೆ 8 ಗಂಟೆಗೆ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ, ಕಲಶಾಭಿಷೇಕ, ಗೊನೆ ಮುಹೂರ್ತ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಗಂಟೆಗೆ ಧ್ವಜಾರೋಹಣ, ಮಹಾಪೂಜೆ, ಭೂತಬಲಿ,

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶರವೂರು ಜಾತ್ರೋತ್ಸವ Read More »

ಸ್ಕೌಟ್ ಮತ್ತು ಬುಲ್ ಬುಲ್ ಅರ್ಹತಾ ಪತ್ರ ವಿತರಣೆ

ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು ಇಲ್ಲಿನ ಸ್ಕೌಟ್ ಮತ್ತು ಬುಲ್ ಬುಲ್ ಘಟಕದ ದ್ವಿತೀಯ ಸೋಪಾನ ಪರೀಕ್ಷೆಯಲ್ಲಿ ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಸೂರ್ಯಕುಮಾರ ಹಳೆಯಂಗಡಿ ಇವರ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು. ಅರುಣ್ ಪಿ ಆಚಾರ್ಯ ಮುಂಬೈ  ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಗುರುರಾಜ ಕೆ ಜೆ ಮಂಗಳೂರು, ಜನಾರ್ದನ ಬಜಕೂಡ್ಲು,ಸುಧೀಶ್, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ, ಮುಖ್ಯ

ಸ್ಕೌಟ್ ಮತ್ತು ಬುಲ್ ಬುಲ್ ಅರ್ಹತಾ ಪತ್ರ ವಿತರಣೆ Read More »

ಕಲ್ಲಡ್ಕ ವಲಯದ  ಮಾಮೇಶ್ವರ  ಒಕ್ಕೂಟದ  ಉಮಾಮಹೇಶ್ವರ ದೇವಸ್ಥಾನದ  ಸಮುದಾಯ ಭವನ ರಚನೆಗೆ  ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ  ಅನುದಾನ ಮಂಜೂರು

ಕಲ್ಲಡ್ಕ  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಕಲ್ಲಡ್ಕ ವಲಯದ  ಮಾಮೇಶ್ವರ ಒಕ್ಕೂಟದ ಉಮಾಮಹೇಶ್ವರ ದೇವಸ್ಥಾನದ ಸಮುದಾಯ ಭವನ ರಚನೆಗೆ  ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ರಮೇಶ್  ದೇವಸ್ಥಾನದ ಆಡಳಿತ ಸಮಿತಿಯವರಿಗೆ  ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ದೇವಸ್ಥಾನದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ

ಕಲ್ಲಡ್ಕ ವಲಯದ  ಮಾಮೇಶ್ವರ  ಒಕ್ಕೂಟದ  ಉಮಾಮಹೇಶ್ವರ ದೇವಸ್ಥಾನದ  ಸಮುದಾಯ ಭವನ ರಚನೆಗೆ  ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ  ಅನುದಾನ ಮಂಜೂರು Read More »

ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ Read More »

ತುಳುನಾಡಿನ ರಂಗಭೂಮಿ ಹಾಗೂ ಚಲನಚಿತ್ರ ಹಾಸ್ಯ ಕಲಾವಿದ ವಿವೇಕ್‍  ಮಾಡೂರ್ ಹೃದಯಘಾತದಿಂದ ನಿಧನ

ಉಳ್ಳಾಲ: ತುಳು ಚಿತ್ರರಂಗದಲ್ಲಿ ನಟನೆಯ ಮೂಲಕ ಕುಬ್ಜ ದೇಹದಿಂದಲೇ ಕಲಾ ಪ್ರೇಮಿಗಳನ್ನು ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್‌ ಮಾಡೂರು (52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ತಮ್ಮ ಮನೆಯ ಶೌಚಾಲಯದಲ್ಲಿ ಬಿದ್ದಿದ್ದ ವಿವೇಕ್‌,  ನಿದ್ದೆಗೆ ಜಾರಿ ವಿಶ್ರಾಂತಿ ಪಡೆದಿದ್ದಾರೆ. ಬೆಳಗ್ಗೆ ಮನೆ ಮಂದಿ ಎಬ್ಬಿಸುವಾಗ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಟೆಲಿಫೋನ್‌ ಎಸ್‌ಟಿಡಿ ಬೂತ್‌ ನಡೆಸುತ್ತಿದ್ದ ವಿವೇಕ್‌ ಅವರು ಬೂತ್‌ ಮುಚ್ಚಿದ ನಂತರ ಅಣ್ಣನ ದಿನಸಿ ಅಂಗಡಿಯಲ್ಲಿ ಪ್ಲಾಸ್ಟಿಕ್‌ ಮನೆ

ತುಳುನಾಡಿನ ರಂಗಭೂಮಿ ಹಾಗೂ ಚಲನಚಿತ್ರ ಹಾಸ್ಯ ಕಲಾವಿದ ವಿವೇಕ್‍  ಮಾಡೂರ್ ಹೃದಯಘಾತದಿಂದ ನಿಧನ Read More »

error: Content is protected !!
Scroll to Top