ಸುದ್ದಿ

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ

ಹೈದರಾಬಾದ್‌ : ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೈದರಾಬಾದ್‌ನಾದ್ಯಂತ ಕಂಪನಗಳ ಅನುಭವಗಳಾಗಿವೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ ಭೂಕಂಪ ಬೆಳಗ್ಗೆ 7.27ರ ವೇಳೆಗೆ ಸಂಭವಿಸಿದೆ. ಕಂಪನ ಕೇಂದ್ರ ಭೂಮಿಯ 40 ಕಿ. ಮೀ. ಆಳದಲ್ಲಿತ್ತು. ಭೂಕಂಪ ಈ ಪ್ರದೇಶಗಳ ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ. ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಅಧಿಕಾರಿಗಳು ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಜನರಿಗೆ ಜಾಗರೂಕರಾಗಿರಲು ಮತ್ತು ಕಿಕ್ಕಿರಿದ ಹಾಗೂ ಅಸುರಕ್ಷಿತ […]

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ Read More »

ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಣೆ

ಮೊಬೈಲ್‌ ಫೋನ್‌ ಮೂಲಕವೇ ಟಿಕೆಟ್‌ನ ಹಣ ಪಾವತಿಸಬಹುದು ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್​ಆರ್​​ಟಿಸಿ ಬಸ್​ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆ್ಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನ.6ರಂದು ಕೆಎಸ್​ಆರ್​​ಟಿಸಿ ಬಸ್​​ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲ 8,941 ಬಸ್‌ಗಳಿಗೆ ಈ ವ್ಯವಸ್ಥೆಯನ್ನು

ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಣೆ Read More »

ಎಲ್.ಎಸ್ ಶೇಷಗಿರಿರಾಯರು ಕನ್ನಡದ ನಿಜವಾದ ಅಸ್ಮಿತೆ

ಅವರು ಬದುಕಿದ್ದರೆ ಈಗ ನೂರು ತುಂಬುತ್ತಿತ್ತು 2007ರಲ್ಲಿ ಉಡುಪಿಯಲ್ಲಿ ನಡೆದ ಅಖಿಲ ಭಾರತ 74ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರ ಮಾತುಗಳಿಗೆ, ಸಜ್ಜನಿಕೆಗೆ ಶರಣಾಗಿದ್ದೆ. ಅಷ್ಟು ದೊಡ್ಡ ಲೇಖಕರಾಗಿದ್ದರೂ ತಾನು ಏನೂ ಅಲ್ಲ ಎಂಬ ಅವರ ಆರಂಭದ ಮಾತುಗಳು ಹೃದಯದಲ್ಲಿ ಗಟ್ಟಿಯಾಗಿ ಕೂತಿದ್ದವು. ಪ್ರೊ.ಎಲ್.ಎಸ್ ಶೇಷಗಿರಿರಾಯರು ಕನ್ನಡ ಸಾರಸ್ವತ ಲೋಕದ ಧ್ರುವತಾರೆ ಎಂದು ನನಗೆ ಅಂದು ಅರ್ಥವಾಗಿ ಹೋಗಿತ್ತು. ಬಾಲ್ಯದಲ್ಲಿ ಓದಿದ್ದ 510 ಭಾರತ ಭಾರತಿ ಪುಸ್ತಕಗಳು ನಾನು ಬಾಲ್ಯದಲ್ಲಿ ಅತಿಹೆಚ್ಚು ಓದಿದ್ದು ‘ಭಾರತ

ಎಲ್.ಎಸ್ ಶೇಷಗಿರಿರಾಯರು ಕನ್ನಡದ ನಿಜವಾದ ಅಸ್ಮಿತೆ Read More »

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ.

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯದಿಂದ ನೊಂದ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಪುತ್ತೂರು ಬಿಜೆಪಿ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು. ಇದೇ ಸಂದರ್ಭ ಡಿ.4ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯ ಯಶಸ್ಸಿಗಾಗಿ ಪ್ರಾರ್ಥನೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷೆ ಶಿವಕುಮಾ‌ರ್ ಕಲ್ಲಿಮಾ‌ರ್, ಶಶಿಧ‌ರ್ ನಾಯಕ್, ಸಂತೋಷ್ ರೈ ಕೈಕಾರ, ನಾಗೇಶ್ ಟಿ.ಎಸ್, ನಾಗೇಂದ್ರ ಬಾಳಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ. Read More »

ಆರ್‌ಎಸ್ಎಸ್ ಪ್ರಚಾರಕ ಪ್ರಸಾದ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ, ಡಿ.2: ಸೋಮವಾರ ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದರು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ

ಆರ್‌ಎಸ್ಎಸ್ ಪ್ರಚಾರಕ ಪ್ರಸಾದ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ Read More »

ಸಚಿವ ಜಮೀರ್‌ ಕೈ ಹಿಡಿದು ಕರೆತಂದ ಪಂಜುರ್ಲಿ ದೈವ ವೇಷಧಾರಿಗಳು : ತುಳುನಾಡಿನವರ ಆಕ್ರೋಶ

ಮನೋರಂಜನಾ ಕಾರ್ಯಕ್ರಮದಲ್ಲಿ ದೈವಾರಾಧನೆಯ ಅಣಕು ಬೆಂಗಳೂರು: ಕಾಂತಾರ ಸಿನೆಮಾ ಬಂದ ಬಳಿಕ ತುಳುನಾಡಿನ ಪವಿತ್ರ ದೈವಾರಾಧನೆಯನ್ನು ನಕಲು ಮಾಡಿ ಅದೇ ರೀತಿಯ ವೇಷಭೂಷಣ ಧರಿಸಿ ನೃತ್ಯ ಮಾಡುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಈ ಬಗ್ಗೆ ತುಳುನಾಡಿನವರು ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ ಪ್ರಯೋಜನವಾಗುತ್ತಿಲ್ಲ. ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದ್ದು, ಇದರ ವೀಡಿಯೊ ವೈರಲ್‌ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದಂತೆ ವೇಷ ಧರಿಸಿದ ಇಬ್ಬರು

ಸಚಿವ ಜಮೀರ್‌ ಕೈ ಹಿಡಿದು ಕರೆತಂದ ಪಂಜುರ್ಲಿ ದೈವ ವೇಷಧಾರಿಗಳು : ತುಳುನಾಡಿನವರ ಆಕ್ರೋಶ Read More »

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಮಂಗಳೂರು: ಬಾಂಗ್ಲಾದೇಶದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹಿಂದುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಲು ಹಿಂದು ಸಂಘಟನೆಗಳು ಮಂಗಳೂರಿನಲ್ಲಿ ಡಿ.4ರಂದು ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗ್ಗೆ ಮಂಗಳೂರಿನ ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧ ತನಕ ಬೃಹತ್‌ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದು. ಹಲವು ಪ್ರಮುಖ ಹಿಂದು ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಟನೆ ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಅಲ್ಲ, ಸಮಸ್ತ ಹಿಂದುಗಳ ರಕ್ಷಣೆಗಾಗಿ ಪಕ್ಷಭೇದವಿಲ್ಲದೆ ನಡೆಯಲಿದೆ. ಹಿಂದುಗಳ ಹಿತ ಬಯಸುವ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬಹುದು ಎಂದು

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ Read More »

ಜೋಡಿ ಕೊಲೆ ಕೃತ್ಯ : ಬಾಲಿವುಡ್‌ ನಟಿಯ ಸಹೋದರಿ ಬಂಧನ

ಕಟ್ಟಡಕ್ಕೆ ಬೆಂಕಿಹಚ್ಚಿ ಪ್ರಿಯಕರ, ಆತನ ಸ್ನೇಹಿತನ ಹತ್ಯೆ ಮುಂಬಯಿ: ಪ್ರಿಯಕರ ಹಾಗೂ ಆತನ ಸ್ನೇಹಿತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್‌ನ ಜನಪ್ರಿಯ ನಟಿ ನರ್ಗಿಸ್‌ ಫಕ್ರಿಯ ಸಹೋದರಿ ಅಲಿಯಾ ಫಕ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದಿಯ ರಾಕ್‌ಸ್ಟಾರ್‌ ಸೇರಿದಂತೆ ಹಲವು ಭಾರತೀಯ ಸಿನೆಮಾಗಳಲ್ಲಿ ನಟಿಸಿರುವ ನರ್ಗಿಸ್‌ ಫಕ್ರಿ ಮೂಲತಃ ಅಮೆರಿಕದವರು. ಅವರ ಸಹೋದರಿ ಅಲಿಯಾ ಫಕ್ರಿ ಕೂಡ ಸೆಲೆಬ್ರಿಟಿಯಾಗಿದ್ದು, ಆಕೆಯ ಮೇಲೆ ನ್ಯೂಯಾರ್ಕ್‌ನಲ್ಲಿ ಬಾಯ್‌ಫ್ರೆಂಡ್‌ ಮತ್ತು ಆತನ ಗೆಳೆಯನನ್ನು ಕೊಂದ ಆರೋಪವಿದೆ. ಬಾಯ್‌ಫ್ರೆಂಡ್‌ ಎಡ್ವರ್ಡ್‌ ಜೇಕಬ್‌ (35) ಮತ್ತು

ಜೋಡಿ ಕೊಲೆ ಕೃತ್ಯ : ಬಾಲಿವುಡ್‌ ನಟಿಯ ಸಹೋದರಿ ಬಂಧನ Read More »

ಭೀಕರ ಅಪಘಾತ : ಐವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು

ತಿರುವನಂತಪುರಂ: ಕೇರಳದ ಅಲಪುಳ ಜಿಲ್ಲೆಯ ಚಂಗನಶ್ಶೇರಿ ಸಮೀಪ ನಿನ್ನೆ ರಾತ್ರಿ ಭಾರಿ ಮಳೆಯಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೆ ಸರ್ಕಾರಿ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಂದನಂ ಮೆಡಿಕಲ್‌ ಕಾಲೇಜಿನ ಪ್ರಥಮ ವರ್ಷ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತಪಟ್ಟವರು. ಕರ್ಲಕೋಡ್ ಎಂಬಲ್ಲಿ ಸೋಮವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದ

ಭೀಕರ ಅಪಘಾತ : ಐವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸಾವು Read More »

ಕರಾವಳಿಯಲ್ಲಿ ಫೆಂಗಲ್‌ ಪ್ರಭಾವದಿಂದ ಭಾರಿ ಮಳೆ : ಸಿಡಿಲಿಗೆ ಓರ್ವ ಬಲಿ

ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ; ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ನಿನ್ನೆ ಸಂಜೆಯಿಂದೀಚೆಗೆ ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ಹಲವು ಅನಾಹುತಗಳನ್ನೂ ಸೃಷ್ಟಿಸಿದೆ. ಸಿಡಿಲು ಬಡಿದು ಪುತ್ತೂರಿನ ಕೆಯ್ಯೂರು ಸಮೀಪ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬಂಟ್ವಾಳದಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿಯಾಗಿದೆ. ಮನೆ ಮಂದಿ ಅದೃಷ್ಟವಶಾತ್‌ ಪಾರಾಗಿದ್ದಾರೆ. ಉಡುಪಿ ಜಿಲ್ಲೆಯ ಕೆಲವೆಡೆಗಳಲ್ಲಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿ ಜನರು ಸಮಸ್ಯೆ ಅನುಭವಿಸಿದ್ದಾರೆ. ನಿನ್ನೆ ರಾತ್ರಿಯಿಂದೀಚೆಗೆ ಎಡೆಬಿಡದೆ ಮಳೆ

ಕರಾವಳಿಯಲ್ಲಿ ಫೆಂಗಲ್‌ ಪ್ರಭಾವದಿಂದ ಭಾರಿ ಮಳೆ : ಸಿಡಿಲಿಗೆ ಓರ್ವ ಬಲಿ Read More »

error: Content is protected !!
Scroll to Top