ಸುದ್ದಿ

50 ಎಸಿ, 75 ಸೀಲಿಂಗ್‌ ಸ್ಪೀಕರ್‌, 12 ಕೋಟಿ ರೂ. ಮೌಲ್ಯದ ಟಾಯ್ಲೆಟ್‌…

ಆಮ್‌ ಆದ್ಮಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌ ಬಂಗಲೆಯಲ್ಲಿದ್ದ ಸೌಲಭ್ಯಗಳಿವು ಹೊಸದಿಲ್ಲಿ : 50 ಎಸಿಗಳು, 75 ಬೋಸ್‌ ಸೀಲಿಂಗ್‌ ಸ್ಪೀಕರ್‌ಗಳು, ಜಾಕುಝಿ, ಮಸಾಜ್‌ ಕೇಂದ್ರ, ಟಚ್‌ಸ್ಕ್ರೀನ್‌ ಅಳವಡಿಸಿದ 73 ಲೀಟರ್‌ ಸ್ಟೀಮ್‌ ಓವನ್‌…ಇದು ದಿಲ್ಲಿಯ ಆಮ್‌ ಆದ್ಮಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಗಲೆಯಲ್ಲಿದ್ದ ಐಷರಾಮಿ ಸೌಲಭ್ಯಗಳು!ಮದ್ಯ ಹಗರಣದಲ್ಲಿ ಸಿಕ್ಕಿಬಿದ್ದು ಜೈಲುಪಾಲಾದ ಬಳಿಕ ಮುಖ್ಯಮಂತ್ರಿ ಹುದ್ದೆಗೆ ಅರವಿಂದ ಕೇಂಜ್ರಿವಾಲ್‌ ರಾಜೀನಾಮೆ ನೀಡಿದ್ದಾರೆ. ಬಳಿಕ ಅವರು ವಾಸವಾಗಿದ್ದ ದಿಲ್ಲಿಯ ಸಿವಿಲ್‌ ಲೈನ್ಸ್‌ನ 6 ಫ್ಲ್ಯಾಗ್‌ಸ್ಟಾಫ್‌ ರಸ್ತೆಯಲ್ಲಿರುವ ಸರಕಾರಿ ಬಂಗಲೆಯಲ್ಲಿದ್ದ ಸೊತ್ತುಗಳ […]

50 ಎಸಿ, 75 ಸೀಲಿಂಗ್‌ ಸ್ಪೀಕರ್‌, 12 ಕೋಟಿ ರೂ. ಮೌಲ್ಯದ ಟಾಯ್ಲೆಟ್‌… Read More »

ಮುಡಾ ಹಗರಣ : ಕೆಲವು ನಿವೇಶನಗಳ ಕಡತಗಳೇ ನಾಪತ್ತೆ

ಸಭೆಯಲ್ಲಿ ಕಡತ ನಾಪತ್ತೆಯಾಗಿರುವುದನ್ನು ಒಪ್ಪಿಕೊಂಡ ಅಧಿಕಾರಿಗಳು ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 14 ಮುಡಾ ಸೈಟ್‌ಗಳನ್ನು ಪಡೆದುಕೊಂಡ ವಿಚಾರ ಬಯಲಾದ ಬಳಿಕ ಮುಡಾದ ಕಡತಗಳು ನಾಪತ್ತೆಯಾಗಿರುವ ಆರೋಪ ಕೆಳಿಬಂದಿತ್ತು. ಈಗ ಮುಡಾ ಅಧಿಕಾರಿಗಳೇ ಕಡತಗಳು ನಾಪತ್ತೆಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಮುಡಾದ 50:50 ಅನುಪಾತದ ದಾಖಲೆಗಳೇ ಮಾಯವಾಗಿರುವುದನ್ನು ಮುಡಾ ಸಭೆಯಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿರುವ ಅಧಿಕಾರಿಗಳು ಅಸಹಾಯಕತೆ ತೋಡಿಕೊಂಡಿದ್ದಾರೆ. 50:50 ಅನುಪಾತದ ‘ಆಯ್ದ ಕೆಲವು ಸೈಟ್‌’ಗಳ ದಾಖಲೆಗಳೇ ಮಾಯವಾಗಿವೆ. ಮುಡಾ ಪ್ರಾಧಿಕಾರದ ಸದಸ್ಯರಿಗೆ ಅಧಿಕೃತವಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 50:50 ಅನುಪಾತದ ಕೆಲವು

ಮುಡಾ ಹಗರಣ : ಕೆಲವು ನಿವೇಶನಗಳ ಕಡತಗಳೇ ನಾಪತ್ತೆ Read More »

ಎಸ್‌ಆರ್‌ಕೆ ಲ್ಯಾಡರ್ಸ್‌ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ

ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸು ಗಳಿಸಿದವರು ಕೇಶವ ಅಮೈ : ಜುಬಿನ್ ಮೊಹಾಪಾತ್ರ ಮಾನವೀಯ ಗುಣಗಳನ್ನು ಗುಣಗಳನ್ನು ಬೆಳೆಸಿಕೊಂಡರೆ ಯಶಸ್ಸು ಸಾಧ್ಯ : ಜಿ.ಎಲ್. ಬಲರಾಮ ಆಚಾರ್ಯ ಪುತ್ತೂರು: ಎಸ್‌ಆರ್‌ಕೆ ಲ್ಯಾಡರ್ಸ್‌ನ ದಶಮಾನೋತ್ಸವದ ಅಂಗವಾಗಿ ಪುತ್ತೂರು ರೋಟರಿ ಕ್ಲಬ್ ಹಾಗೂ ಎಸ್‌ಆರ್‌ಕೆ ಲ್ಯಾಡರ್ಸ್ ಸಹಯೋಗದಲ್ಲಿ ದೀಪಾವಳಿ ಸಂಭ್ರಮ, ಎಸ್‌ಆರ್‌ಕೆ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಕೊಯಿಲ ಕಲಾಯಿಗುತ್ತುನಲ್ಲಿ ಶುಕ್ರವಾರ ನಡೆಯಿತು.ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ಪುತ್ತೂರು ಸಹಾಯಕ ಆಯುಕ್ತ

ಎಸ್‌ಆರ್‌ಕೆ ಲ್ಯಾಡರ್ಸ್‌ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ Read More »

ಕೇರಳ ಹಲ್ವಾದಲ್ಲೂ ಅಪಾಯಕಾರಿ ಕೃತಕ ಬಣ್ಣ ಬಳಕೆ

31 ಕುರುಕು ತಿಂಡಿಗಳಲ್ಲಿ ರಾಸಾಯನಿಕ ಅಂಶ ಪತ್ತೆ ಬೆಂಗಳೂರು : ಹಲ್ವಾ ಸೇರಿದಂತೆ ಕೇರಳದಿಂದ ಬರುವ ಹಲವು ಕುರುಕು ತಿಂಡಿಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಆರೋಪ ಕೇಳಿಬಂದ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೇರಳದ ಹಲ್ವಾ ಬಹಳ ಜನಪ್ರಿಯ ತಿಂಡಿಯಾಗಿದ್ದು, ನಿತ್ಯ ರೈಲಿನಲ್ಲಿ ಮಂಗಳೂರು, ಉಡುಪಿಯಿಂದ ಹಿಡಿದ ಮುಂಬಯಿ ತನಕ ಪೂರೈಕೆಯಾಗುತ್ತದೆ. ಶಬರಿಮಲೆ ಯಾತ್ರೆ ಸಹಿತ ಕೇರಳ ಪ್ರವಾಸ ಕೈಗೊಳ್ಳುವವರು ಈ ಹಲ್ವಾ ತಂದು ಹಂಚುವುದು ವಾಡಿಕೆ. ಈಗಾಗಲೆ ಗೋಬಿಮಂಚೂರಿ, ಪಾನಿಪುರಿ, ಕೇಕ್‌ ಸೇರಿದಂತೆ ಅನೇಕ ತಿನಿಸುಗಳಿಗೆ

ಕೇರಳ ಹಲ್ವಾದಲ್ಲೂ ಅಪಾಯಕಾರಿ ಕೃತಕ ಬಣ್ಣ ಬಳಕೆ Read More »

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌

ರೈತನ ಆತ್ಮಹತ್ಯೆಗೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪ ಹೊರಿಸಿ ಕೇಸ್‌ ಬೆಂಗಳೂರು: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ Read More »

ಒಂದು ತಿಂಗಳಲ್ಲಿ ಗತಿ ಕಾಣಿಸುತ್ತೇವೆ, ಧೈರ್ಯವಿದ್ದರೆ ಉಳಿಸಿ…

ಸಲ್ಮಾನ್‌ ಖಾನ್‌ಗೆ ಬಂತು ಮತ್ತೊಂದು ಬೆದರಿಕೆ ಕರೆ ಮುಂಬಯಿ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ಬಳಿಕ ಭೀತಿಯಿಂದಲೇ ಬದುಕುತ್ತಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ಮುಂಬಯಿಯ ಟ್ರಾಫಿಕ್‌ ಕಂಟ್ರೋಲ್‌ ರೂಮ್‌ಗೆ ಗುರುವಾರ ಮಧ್ಯರಾತ್ರಿ ಕರೆ ಬಂದಿದ್ದು, ಜೈಲಿನಲ್ಲಿರುವ ಲಾರೆನ್ಸ್‌ ಬಿಷ್ಣೋಯ್‌ ಮತ್ತು ಸಲ್ಮಾನ್‌ ಖಾನ್‌ ಹೆಸರು ಸೇರಿಸಿ ಹಾಡು ಬರೆದ ಹಿಂದಿ ಸಿನೇಮಾಗಳ ಗೀತ ರಚನೆಕಾರನಿಗೆ ಒಂದು ತಿಂಗಳಲ್ಲಿ ಒಂದು ಗತಿ ಕಾಣಿಸುತ್ತೇವೆ ಎಂದು ಬೆದರಿಕೆಯೊಡ್ಡಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.ಹಾಡು

ಒಂದು ತಿಂಗಳಲ್ಲಿ ಗತಿ ಕಾಣಿಸುತ್ತೇವೆ, ಧೈರ್ಯವಿದ್ದರೆ ಉಳಿಸಿ… Read More »

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ

ಚಿಕ್ಕಮಗಳೂರು : ಕಾರ್ಕಳದ ಬಳಿಕ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ನಕ್ಸಲರ ಓಡಾಟದ ಶಂಖೆ ವ್ಯಕ್ತವಾಗಿದೆ. ಆರು ಮಂದಿ ನಕ್ಸಲರು ಓಡಾಡಿದ್ದಾರೆ ಎಂಬ ಮಾಹಿತಿ ಹರಿದಾಡಿ ಆಧಾರದ ಮೇಲೆ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದೆ.ಕಳಸ ಮತ್ತು ಶೃಂಗೇರಿ ತಾಲೂಕಿನ ಘಟ್ಟ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಗೊಂಡಿದೆ. ಹಲವು ವರ್ಷಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಓಡಾಟದ ಸದ್ದು ಕೇಳಿದ್ದು, ಈ ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.ಈ ವರ್ಷ ಏಪ್ರಿಲ್‌ನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಕರಾವಳಿ ಭಾಗದಲ್ಲಿ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರ ಓಡಾಟದ ಶಂಕೆ Read More »

ಇಬ್ಬರು ಗ್ರಾಮ ರಕ್ಷಕರನ್ನು ಅಪಹರಿಸಿ ಸಾಯಿಸಿದ ಉಗ್ರರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ (ವಿಡಿಜಿ) ಸದಸ್ಯರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಜೈಶ್-ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಹತ್ಯೆಯಾದವರನ್ನು ಓಹ್ಲಿ ಕುಂಟ್ವಾರ ಗ್ರಾಮದ ನಿವಾಸಿಗಳಾದ ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ.ಮೃತದೇಹಗಳ ಪತ್ತೆಗೆ ಪೊಲೀಸರು ಭಾರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಜೀರ್ ಮತ್ತು ಕುಲದೀಪ್ ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋದಾಗ ಭಯೋತ್ಪಾದಕರು ಅಪಹರಿಸಿದ್ದಾರೆ.

ಇಬ್ಬರು ಗ್ರಾಮ ರಕ್ಷಕರನ್ನು ಅಪಹರಿಸಿ ಸಾಯಿಸಿದ ಉಗ್ರರು Read More »

ಸರಕಾರದ ಸೂಚನೆಯಂತೆ ಪಹಣಿಯಲ್ಲಿ ವಕ್ಫ್‌ ಹೆಸರು ಸೇರ್ಪಡೆ : ಜಗದಂಬಿಕಾ ಪಾಲ್‌

ರೈತರ ಅಹವಾಲು ಆಲಿಸಲು ಬಂದ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಬೆಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ, ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಈ ರೀತಿ ಎಲ್ಲ ಆಗಲು ಸಾಧ್ಯವಿಲ್ಲ ಎಂಬುದಾಗಿ ವಕ್ಫ್‌ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಆರೋಪಿಸಿದರು.ಇಂದು ಹುಬ್ಬಳ್ಳಿಗೆ ಭೇಟಿ ನೀಡಿ ವಕ್ಫ್‌ ಎಂದು ನಮೂದಾಗಿರುವ ರೈತರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಅವರು, ರೈತರ ಜಮೀನು, ದೇಗುಲ, ಪಾರಂಪರಿಕ

ಸರಕಾರದ ಸೂಚನೆಯಂತೆ ಪಹಣಿಯಲ್ಲಿ ವಕ್ಫ್‌ ಹೆಸರು ಸೇರ್ಪಡೆ : ಜಗದಂಬಿಕಾ ಪಾಲ್‌ Read More »

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ

ಲೈಸೆನ್ಸ್‌ ಕೊಡಿಸುವುದಾಗಿ ನಂಬಿಸಿ ಬಾರ್‌ ಮಾಲೀಕರಿಗೆ ಕೋಟ್ಯಂತರ ರೂ. ವಂಚನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಭ್ರಷ್ಟಾಚಾರದ ಸೂತ್ರಧಾರ ಅಬಕಾರಿ ಸಚಿವ ಆರ್​​.ಬಿ ತಿಮ್ಮಾಪುರ ಅವರ ಆಪ್ತ ಜೀವನ್ ಶೆಟ್ಟಿ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿ ಇಷ್ಟೊಂದು ಅಕ್ರಮ ನಡೆಯಲು ಜೀವನ್ ಶೆಟ್ಟಿಯೇ ಕಾರಣ ಎಂದು ಆರೋಪಿಸಲಾಗಿದೆ. ಇವರು ಸಿಎಲ್- 2 ಲೈಸೆನ್ಸ್ ಕೊಡಿಸುತ್ತೇನೆ ಎಂದು ಬಾರ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್​.ಬಿ ತಿಮ್ಮಾಪುರ ಅಬಕಾರಿ ಸಚಿವರಾಗಿದ್ದನಿಂದಲೂ

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ Read More »

error: Content is protected !!
Scroll to Top