ಸುದ್ದಿ

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟ

ಪಾಕಿಸ್ಥಾನ-ನ್ಯೂಜಿಲ್ಯಾಂಡ್ ನಡುವೆ ಕರಾಚಿಯಲ್ಲಿ ಇಂದು ಮೊದಲ ಪಂದ್ಯ ಇಸ್ಲಾಮಾಬಾದ್‌: ಎಂಟು ರಾಷ್ಟ್ರಗಳು ಭಾಗವಹಿಸುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್ ನಡುವೆ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ. ಎ ಗುಂಪಿನಲ್ಲಿ ಭಾರತ, ನ್ಯೂಜಿಲ್ಯಾಂಡ್‌, ಪಾಕಿಸ್ಥಾನ, ಬಾಂಗ್ಲಾದೇಶ ಇದ್ದರೆ, ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ಥಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು […]

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟ Read More »

ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತೃಶ್ರೀ ಸುಶೀಲಾ ಶಿವಾನಂದ ರಾವ್ (86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀರಾ ಇತ್ತೀಚೆಗಿನವರೆಗೂ ಆರೋಗ್ಯವಾಗಿದ್ದ ಅವರು ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪುತ್ರ, ಸೊಸೆ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ Read More »

ಭಾರತೀಯ ಕುಟುಂಬ ವ್ಯವಸ್ಥೆಗೆ ತರವಾಡು ಮನೆತನಗಳಿಂದ ಶಕ್ತಿ : ಹಿರಿಯ ಚಿಂತಕ ಗೋಪಾಲಕೃಷ್ಣ ನೆಕ್ಕಿತಪುಣಿ | ನೆಕ್ಕಿತಪುಣಿ ಕರಂಬೇರ ತರವಾಡಿನಲ್ಲಿ ವಾರ್ಷಿಕ ಸಭೆ

ವಿಟ್ಲ : ತರವಾಡು ಮನೆತನಗಳಿಂದ ಭಾರತೀಯ ಕುಟುಂಬ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದು ಹಿರಿಯ ಚಿಂತಕರು ಹಾಗೂ ನೆಕ್ಕಿತಪುಣಿ ತರವಾಡು ಮನೆತನದ ಮುಖ್ಯಸ್ಥರಾದ ಗೋಪಾಲಕೃಷ್ಣ ನೆಕ್ಕಿತಪುಣಿ ಹೇಳಿದರು. ವಿಟ್ಲ ಸಮೀಪದ ಅಳಿಕೆಯ ನೆಕ್ಕಿತಪುಣಿ ಕರಂಬೇರ ತರವಾಡಿನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ತರವಾಡಿನವರನ್ನುದ್ದೇಶಿಸಿ ಮಾತನಾಡಿದರು. ಕರಾವಳಿಯಲ್ಲಿರುವ ತರವಾಡು ಮನೆತನಗಳಿಂದ ಸಂಪ್ರದಾಯ ಹಾಗೂ ಪದ್ಧತಿಗಳ ರಕ್ಷಣೆಯ ಜೊತೆಗೆ ಕುಟುಂಬ ವ್ಯವಸ್ಥೆ ಗಟ್ಟಿಗೊಂಡು ಒಗ್ಗಟ್ಟು ಬೆಳೆಯಲು ಸಾಧ್ಯವಾಗಿದೆ. ಬಿಲ್ಲವರ ತರವಾಡು ಮನೆತನಗಳ ಮೂಲಕ ತಮ್ಮ ಜನಾಂಗದ ಅಸ್ಮಿತೆ ಉಳಿಸಲು ನೀಡಿದ ಕೊಡುಗೆ

ಭಾರತೀಯ ಕುಟುಂಬ ವ್ಯವಸ್ಥೆಗೆ ತರವಾಡು ಮನೆತನಗಳಿಂದ ಶಕ್ತಿ : ಹಿರಿಯ ಚಿಂತಕ ಗೋಪಾಲಕೃಷ್ಣ ನೆಕ್ಕಿತಪುಣಿ | ನೆಕ್ಕಿತಪುಣಿ ಕರಂಬೇರ ತರವಾಡಿನಲ್ಲಿ ವಾರ್ಷಿಕ ಸಭೆ Read More »

ಇಂದು ಹೊಸದಿಲ್ಲಿಯಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ

13 ಅಂತಸ್ತಿನ ಮೂರು ಕಟ್ಟಡಗಳು ಆಧುನಿಕ ತಂತ್ರಜ್ಞಾನದ ಸ್ಪರ್ಶದೊಂದಿಗೆ ಪ್ರಾಚೀನ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣ ಹೊಸದಿಲ್ಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಹೊಸ ಕಚೇರಿ ರಾಷ್ಟ್ರ ರಾಜಧಾನಿಯಲ್ಲಿ ಇಂದು ಉದ್ಘಾಟನೆಗೊಳ್ಳಲಿದೆ. ಈ ಹಿಂದಿದ್ದ ಕಚೇರಿ ಸ್ಥಳದಲ್ಲೇ ಹೊಸ ಕಚೇರಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಶಿವಾಜಿ ಜಯಂತಿ ದಿನವಾದ ಇಂದು 150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಟ್ಟಡವನ್ನು ʼಕೇಶವ ಕುಂಜ್ʼ ಎಂದು ಕರೆಯಲಾಗುತ್ತದೆ. ಕಟ್ಟಡದ ಸಂಕೀರ್ಣವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಡಾ.ಮೋಹನ್‌

ಇಂದು ಹೊಸದಿಲ್ಲಿಯಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ Read More »

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

26 ಕಿ.ಮೀ. ಯೋಜನೆಯಲ್ಲಿ 3.8 ಕಿ.ಮೀ. ಸುರಂಗ ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ, ಇದಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಎಂದು ತಿರಸ್ಕರಿಸಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಹಾಸನ ಜಿಲ್ಲೆಯ ಮಲೆನಾಡು ಭಾಗದ ಶಾಸಕರು ಮತ್ತು ಋಾಜ್ಯ

ಶಿರಾಡಿ ಘಾಟಿ ಸುರಂಗ ಮಾರ್ಗ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ Read More »

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ

ಪ್ರತಿತಿಂಗಳು ಕೊಡಲಿಕ್ಕೆ ಅದು ಸಂಬಳ ಅಲ್ಲ ಎಂದ ಸಚಿವ ಬೆಂಗಳೂರು: ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮಿಮತ್ತು ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾದ ಜನ ಯಾವಾಗ ಸಿಗಬಹುದು ಎಂದು ಕಾಯುತ್ತಿದ್ದಾರೆ. ಸರಕಾರ ಇನ್ನೂ ಈ ಬಗ್ಗೆ ಖಚಿತವಾದ ಹೇಳಿಕೆ ನೀಡಿಲ್ಲ. ಈ ನಡುವೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗೃಹಲಕ್ಷ್ಮೀ ಕುರಿತಾಗಿ ನೀಡಿದ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಗೃಹಲಕ್ಷ್ಮೀ ಸ್ಥಗಿವಾಗಿರುವ ಕುರಿತು ಪ್ರಶ್ನಿಸಿದಾಗ ‘ಅದೇನು ತಿಂಗಳ ಸಂಬಳ ಅಲ್ವಲ್ಲಾ’ ಎಂದು ಸಚಿವ ಕೆ.ಜೆ ಜಾರ್ಜ್ ಉಡಾಫೆ ಉತ್ತರ ನೀಡಿದ್ದಾರೆ.‘ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಹಣ ಇಷ್ಟಬಂದಾಗ ಕೊಡುತ್ತೇವೆ : ಜಾರ್ಜ್‌ ವಿವಾದಾತ್ಮಕ ಹೇಳಿಕೆ Read More »

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ

ಮಹಾರಾಷ್ಟ್ರದಲ್ಲಿ ಹುಲಿ, ಚಿರತೆ, ಕಾಗೆಗಳಿಗೂ ಹಕ್ಕಿಜ್ವರ ಬೆಂಗಳೂರು: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್​ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮೃತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಉಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ Read More »

ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ  ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ವೀರಮಂಗಲ : ಶಾಲಾ ಶಿಕ್ಷಣ ಇಲಾಖೆಯ ಮಹತ್ತರವಾದ ಶೈಕ್ಷಣಿಕ ಕಾರ್ಯಕ್ರಮವಾದ FLN ಮಕ್ಕಳ ಕಲಿಕಾ ಹಬ್ಬ ರಾಜ್ಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ನಡೆಯುತ್ತಿದ್ದು, ಪುತ್ತೂರು ತಾಲೂಕಿನ ನರಿಮೊಗರು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಫೆಬ್ರವರಿ 18 ರಂದು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಹರಿಣಿ ಉದ್ಘಾಟಿಸಿ ಶುಭ ಹಾರೈಸಿದರು. ವೀರಮಂಗಲ ಪಿಎಂಶ್ರೀ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ  ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕೊಂಬಾರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಫೆ.13 ರಿಂದ ಫೆ. 21ರವರೆಗೆ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಫೆ.13ರಂದು ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ನಡೆಯಿತು. ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಹಾಗೂ ಪರಮಪೂಜ್ಯ ರಾಜರ್ಷಿ ಡಾ| ಶ್ರೀ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »

ಮೊಬೈಲ್ ಫೋನ್‍ ಗಾಗಿ ಅಣ್ಣ-ತಂಗಿ ಜಗಳ |  ಬಾವಿಗೆ ಬಿದ್ದು ಅಣ್ಣ-ತಂಗಿಯರ ದುರ್ಮರಣ

ತಮಿಳುನಾಡು: ಮೊಬೈಲ್ ಫೋನ್ ಗಾಗಿ ನಡೆದ ಜಗಳದಲ್ಲಿ ಅಣ್ಣ ಮತ್ತು ತಂಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಪುದುಕ್ಕೊಟ್ಟೆಯಲ್ಲಿ ನಡೆದಿದೆ. 18 ವರ್ಷದ ಅಣ್ಣ ಹಾಗೂ 11 ವರ್ಷದ ತಂಗಿ ಮಕ್ಕಳು ಸಾವಿಗೀಡಾದ ಸಹೋದರ-ಸಹೋದರಿಯರು ಎಂದು ತಿಳಿದು ಬಂದಿದೆ. ಮನೆಯಲ್ಲಿ ಅಣ್ಣ ಮತ್ತು ತಂಗಿಯ ನಡುವೆ ಸಣ್ಣ ಜಗಳವಾಗಿದೆ. ಈ ವೇಳೆ ಕೋಪಗೊಂಡ ಅಣ್ಣ ತನ್ನ ತಂಗಿಯ ಫೋನ್ ಮುರಿದಿದ್ದಾನೆ. ಬೇಸರಗೊಂಡ ತಂಗಿ ಬಾವಿಗೆ ಹಾರಿದ್ದಾಳೆ. ನಂತರ ತಂಗಿ ಬಾವಿಗೆ ಹಾರಿದ್ದನ್ನು ನೋಡಿ ಕಾಪಾಡಲೆಂದು ಅಣ್ಣನೂ ಬಾವಿಗೆ

ಮೊಬೈಲ್ ಫೋನ್‍ ಗಾಗಿ ಅಣ್ಣ-ತಂಗಿ ಜಗಳ |  ಬಾವಿಗೆ ಬಿದ್ದು ಅಣ್ಣ-ತಂಗಿಯರ ದುರ್ಮರಣ Read More »

error: Content is protected !!
Scroll to Top