ಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಕಳೆದ ಎಂಟು ದಿನಗಳಿಂದ ವೈಭವದಿಂದ ನಡೆಯುತ್ತಿದ್ದು, ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಶ್ರಿ ದೇವಸ್ಥಾನದ ಒಳ ಹಾಗೂ ಹೊರಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು, ಬಳಿಕ ಶ್ರೀ ದೇವರು ರಥಬೀದಿಗೆ ಬರುವರು. ಆನಂತರ ಶ್ರೀ ಮಹಾಲಿಂಗೇಶ್ವರ ದೇವರು ರಥಾರೋಢರಾಗುವರು. ಈ ಹೊತ್ತಿನಲ್ಲಿ ಸಿಡಿಮದ್ದು ಪ್ರದರ್ಶನ ಪ್ರಾರಂಭಗೊಂಡು ಸುಮಾರು ಒಂದೂವರೆ ಗಂಟೆಗಳ ಕಾಲ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ಸಾವಿರಾರು ಭಕ್ತಾದಿಗಳ ಕೈಗಳ ಜಯಘೋಷಗಳೊಂದಿಗೆ ಬ್ರಹ್ಮರಥವನ್ನು ಎಳೆಯುತ್ತಾರೆ. […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಇಂದು ರಾತ್ರಿ ವಿಜ್ರಂಭಣೆಯಿಂದ ನೆರವೇರಲಿದೆ ಬ್ರಹ್ಮರಥೋತ್ಸವ Read More »

ಏ.24ರಂದು ಕು.ವಿದುಷಿ ಸಿಂಚನಲಕ್ಷ್ಮೀ ಕೊಡಂದೂರ್ ರಿಂದ  ಭರತನಾಟ್ಯ ರಂಗ ಪ್ರವೇಶವು

ಪೆರ್ನಾಜೆ: ಸುಮ್ಮನೆ ಕುಳಿತವರು ಹೆಜ್ಜೆ ಗುರುತನ್ನು ಮೂಡಿಸಲಾರರು ಹೆಜ್ಜೆ ಗುರುತು  ಮೂಡಿಸಬೇಕೆಂದರೆ ಎದ್ದು ನಡೆಯಲೇಬೇಕು ಕಲಾತ್ಮಕ ಅರ್ಥಪೂರ್ಣವಾದ ಹೆಜ್ಜೆ ಗೆಜ್ಜೆಯ ಸದ್ದಿಗೆ ಅದ್ಭುತ ಭರತನಾಟ್ಯದ ರಂಗಪ್ರವೇಶವು ಏ 24ರಂದು ನಾಟ್ಯ ಸಿಂಚನ ಲಕ್ಷ್ಮಿ ಕೊಡಂದೂರ್ ರವರು ವಿಟ್ಲ ಗಾರ್ಡನ್ ಆಡಿಟೋರಿಯಂ ನಲ್ಲಿ  ಸಂಜೆ 5 ಗಂಟೆಗೆ ಗಣ್ಯರ ಸಮ್ಮುಖದಲ್ಲಿ ಪ್ರದರ್ಶಿಸಲಿದ್ದಾರೆ.  ಕಿರು ಪರಿಚಯ:- ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾನಿಲಯ ಮೈಸೂರ್ ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ

ಏ.24ರಂದು ಕು.ವಿದುಷಿ ಸಿಂಚನಲಕ್ಷ್ಮೀ ಕೊಡಂದೂರ್ ರಿಂದ  ಭರತನಾಟ್ಯ ರಂಗ ಪ್ರವೇಶವು Read More »

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ

ಶಾಲೆ ದಾಖಲಾತಿಗಾಗಿ ಹೊಸ ನಿಯಮ ರಚಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಈಗ ಶಾಲೆ ಕಾಲೇಜುಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕಾಗಿ ಪ್ರವೇಶಾತಿ ಭರದಿಂದ ನಡೆಯುತ್ತಿದೆ. ಈ ಸಂದರ್ಭದಲ್ಲೇ ಖಾಸಗಿ ಶಾಲೆಗಳ ದಾಖಲಾತಿಗಾಗಿ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಬಿಡುಗಡೆ ಮಾಡಿ ಮೊದಲಿದ್ದ ಕೆಲವು ನಿಯಮಗಳಿಗೆ ಬ್ರೇಕ್ ಹಾಕಿದೆ. ದಾಖಲಾತಿ ಹೆಸರಲ್ಲಿ ಮಕ್ಕಳು, ಪೋಷಕರಿಗೆ ಕಿರುಕುಳ ಕೊಡುವುದು, ಮಕ್ಕಳ ದಾಖಲಾತಿಗೆ ಪೋಷಕರಿಗೆ ಪರೀಕ್ಷೆ ಇಡುವುದು ಹಾಗೂ ದುಬಾರಿ ಶುಲ್ಕ ವಸೂಲು ಮಾಡುವುದು ಇತ್ಯಾದಿಗಳಿಗೆ ಕಡಿವಾಣ ಹಾಕಲಾಗಿದೆ. ಶಾಲೆಗಳಿಗೆ ಮಕ್ಕಳನ್ನು ಸೇರಿಸುವಾಗ

ಖಾಸಗಿ ಶಾಲೆಗಳ ಬೇಕಾಬಿಟ್ಟಿ ಶುಲ್ಕ ವಸೂಲಿಗೆ ತಡೆ Read More »

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ

ಪುತ್ತೂರು: ಅಕ್ಷಯ    ಕಾಲೇಜಿನಲ್ಲಿ   ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು  ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ  ಉದ್ಘಾಟನೆ ಯನ್ನು  ಶ್ರೀ  ಅರುಣ್ ನಾಗೇ ಗೌಡ  ಡಿ.ವೈ.ಎಸ್. ಪಿ  ಪುತ್ತೂರು  ವಿಭಾಗ  ಇವರು  ನಿರ್ವಹಿಸಿ  ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು ಸಮರ್ಪಕವಾಗಿ  ನಿಭಾಯಿಸಿ ತಮ್ಮ  ಪೋಷಕರಿಗೆ, ತಮಗೆ  ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮ ಬದ್ಧವಾದ  ಜೀವನ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ  ಮಾತ್ರವಲ್ಲ  ಸಮಾಜದಲ್ಲಿ

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ Read More »

ತಮಿಳು ನಟ-ರಾಜಕಾರಣಿ ವಿಜಯ್‌ ವಿರುದ್ಧ ಜಾರಿಯಾಯಿತು ಫತ್ವಾ

ಇಫ್ತಾರ್‌ ಕೂಟಕ್ಕೆ ಕುಡುಕರನ್ನು ಆಹ್ವಾನಿಸಿದ್ದಕ್ಕೆ ಫತ್ವಾ ಚೆನ್ನೈ: ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸಿರುವ ತಮಿಳಿನ ಖ್ಯಾತ ಹೀರೊ ವಿಜಯ್‌ ವಿರುದ್ಧ ಉತ್ತರ ಪ್ರದೇಶದ ಬರೇಲಿಯ ಸುನ್ನಿ ಮುಸ್ಲಿಮ್‌ ಮಂಡಳಿ ಫತ್ವಾ ಜಾರಿಗೊಳಿಸಿದೆ. ಅಖಿಲ ಭಾರತ ಮುಸ್ಲಿಮ್‌ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಚಶ್ಮೆ ದಾರೂಲ್‌ ಇಫ್ತಾದ ಮುಖ್ಯ ಮುಫ್ತಿ ಆಗಿರುವ ಮೌಲಾನ ಶಹಾಬುದ್ದೀನ್‌ ರಝ್ವಿ ಬರೇಲಿ ಅವರು ನಟ ವಿಜಯ್‌ ವಿರುದ್ಧ ಫತ್ವಾ ಜಾರಿಗೊಳಿಸಿದ್ದಾರೆ. ರಮ್ಜಾನ್‌ ಉಪವಾಸ ವ್ರತದ ಸಂದರ್ಭದಲ್ಲಿ ಆಯೋಜಿಸಿದ ಇಫ್ತಾರ್‌ ಕೂಟಕ್ಕೆ ಮದ್ಯ ಸೇವಿಸುವವರನ್ನು ಮತ್ತು

ತಮಿಳು ನಟ-ರಾಜಕಾರಣಿ ವಿಜಯ್‌ ವಿರುದ್ಧ ಜಾರಿಯಾಯಿತು ಫತ್ವಾ Read More »

ಐಪಿಎಲ್‌ ಪಂದ್ಯಗಳ ಮೇಲೆ ಮತ್ತೆ ಫಿಕ್ಸಿಂಗ್‌ ಕರಿನೆರಳು

ಉಡುಗೊರೆ, ಪಾರ್ಟಿಗಳ ಮೂಲಕ ಆಟಗಾರರನ್ನು ಸೆಳೆಯಲು ಯತ್ನಿಸುತ್ತಿರುವ ಉದ್ಯಮಿ ಮುಂಬಯಿ: ಐಪಿಎಲ್‌ ಮೇಲೆ ಮತ್ತೊಮ್ಮೆ ಫಿಕ್ಸಿಂಗ್‌ ಕರಿನೆರಳು ಆವರಿಸಿದೆ. ಹೈದರಾಬಾದ್‌ ಮೂಲದ ಉದ್ಯಮಿಯೊಬ್ಬ ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ ಪಂದ್ಯಗಳನ್ನು ಫಿಕ್ಸ್‌ ಮಾಡಲು ಯತ್ನಿಸುತ್ತಿದ್ದಾನೆ ಎಂಬ ಗುಪ್ತ ಮಾಹಿತಿ ಸಿಕ್ಕಿದ ಬಳಿಕ ಬಿಸಿಸಿಐ ಅಲರ್ಟ್‌ ಆಗಿದೆ.ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ ಐಪಿಎಲ್‌ ಲೀಗ್‌ನ ಎಲ್ಲ 10 ತಂಡಗಳಿಗೆ ಫಿಕ್ಸಿಂಗ್‌ ಬಗ್ಗೆ ಎಚ್ಚರಿಕೆ ರವಾನಿಸಿ ಉದ್ಯಮಿ ಯಾವುದೇ ರೀತಿಯಲ್ಲಿ ಸಂಪರ್ಕಿಸಲು ಪ್ರಯತ್ನಿಸಿದರೆ ಕೂಡಲೇ ತಿಳಿಸಿ ಎಂದು ಸೂಚಿಸಿದೆ.ಉದ್ಯಮಿ

ಐಪಿಎಲ್‌ ಪಂದ್ಯಗಳ ಮೇಲೆ ಮತ್ತೆ ಫಿಕ್ಸಿಂಗ್‌ ಕರಿನೆರಳು Read More »

ಶುಕ್ರವಾರ ಅಡ್ಯಾರಿನಲ್ಲಿ ವಕ್ಫ್‌ ಕಾಯ್ದೆ ವಿರುದ್ಧ ಬೃಹತ್‌ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗ ಬಳಸಲು ಸೂಚನೆ ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಏಪ್ರಿಲ್ 18ರಂದು ಅಡ್ಯಾರ್‌ ಕಣ್ಣೂರಿನಲ್ಲಿ ಮುಸ್ಲಿಮರ ಬೃಹತ್‌ ಪ್ರತಿಭಟನೆ ನಡೆಯಲಿದೆ. ಕನಿಷ್ಠ 50 ಸಾವಿರ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಹೇಳಿದ್ದು, ಈ ಹಿನ್ನೆಲೆಯಲ್ಲಿ, ಶುಕ್ರವಾರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರತಿಭಟನೆಯಿಂದಾಗಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9ರವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಡೀಲ್-ಕಣ್ಣೂರು-ಅಡ್ಯಾರ್-ಸಹ್ಯಾದ್ರಿ-ಅರ್ಕುಳ ಮಾರ್ಗಗಳಲ್ಲಿ ತೀವ್ರ ವಾಹನ

ಶುಕ್ರವಾರ ಅಡ್ಯಾರಿನಲ್ಲಿ ವಕ್ಫ್‌ ಕಾಯ್ದೆ ವಿರುದ್ಧ ಬೃಹತ್‌ ಪ್ರತಿಭಟನೆ Read More »

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ

ಮೋದಿ, ಅಮಿತ್‌ ಶಾ ಕರ್ನಾಟಕ ಸರಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪ ಬೆಂಗಳೂರು: ರಾಜ್ಯದಲ್ಲಿರುವ ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ. ಒಗ್ಗಟ್ಟಾಗಿ ಇರದೆ ಹೋದರೆ ಸರ್ಕಾರ ಉರುಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತುಮ್ಮೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ನೀವು ಹುಷಾರಾಗಿರಬೇಕು. ಮೋದಿ, ಅಮಿತ್ ಶಾ ನಿಮ್ಮ ಸರ್ಕಾರ ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪವಿದ್ದರೂ ಒಗ್ಗಟ್ಟಾಗಿರಬೇಕು ಎಂದು ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಕಿವಿಮಾತು

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ Read More »

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ

ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಭೀತಿ ಬೆಂಗಳೂರು: ಡೀಸೆಲ್‌ ಬೆಲೆ ಏರಿಕೆ ಪ್ರತಿಭಟಿಸಿ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಲಾರಿ ಮುಷ್ಕರವನ್ನು ಇಂದಿನಿಂದ ಮತ್ತಷ್ಟು ತೀವ್ರರಗೊಳಿಸಲು ತೀವ್ರಗೊಳಿಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಲಾರಿಗಳು ನಿಂತಲ್ಲೇ ನಿಂತಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಆಗುತ್ತಿದ್ದು, ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಅಭಾವದ ಬಿಸಿ ತಟ್ಟಲು ಶುರುವಾಗಿದೆ. ಮಾರುಕಟ್ಟೆಗಳಲ್ಲಿ ಅಕ್ಕಿ, ಬೇಳೆ, ಎಣ್ಣೆ ಸೇರಿದಂತೆ ಅನೇಕ ವಸ್ತುಗಳು ದುಬಾರಿಯಾಗುತ್ತಿವೆ.ಲಾರಿ ಮುಷ್ಕರವನ್ನು ನೆಪವಾಗಿಟ್ಟುಕೊಂಡು ಕಾಳಸಂತೆ ದಂಧೆಕೋರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ

ಲಾರಿ ಮುಷ್ಕರ ಇಂದಿನಿಂದ ಇನ್ನಷ್ಟು ತೀವ್ರ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಬನ್ನೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು ಸಾಧ್ಯ. ಮಕ್ಕಳು ಎಳವೆಯಿಂದಲೇ ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಅಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ Read More »

error: Content is protected !!
Scroll to Top