ಸುದ್ದಿ

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಹಾಗೂ ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದ ವ್ಯಾಪಾರ ಹಾಗೂ ಸಾರಿಗೆ ವ್ಯವಸ್ಥೆ ತೀವ್ರ ಅಡಚಣೆಯಾಗುತ್ತಿದೆ ಎಂದು ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಇಂದು ವಿಧಾನ ಪರಿಷತ್ತಿನಲ್ಲಿ ಚರ್ಚಿಸಿದ್ದಾರೆ. ಈ ಹಿಂದೆ ಮಾನ್ಯ ಉಪಮುಖ್ಯಮಂತ್ರಿಗಳು “ಮಂಗಳೂರು ಸಂಜೆ 8 ಗಂಟೆಗೆ ಬಂದ್ ಆಗುತ್ತದೆ” ಎಂದು ಹೇಳಿದ ಕಾರಣಕ್ಕೂ ಸಮರ್ಪಕ ರಸ್ತೆ ಸಂಪರ್ಕದ ಅಭಾವವೇ ಕಾರಣ ಎಂಬುದಾಗಿ ಶಾಸಕರು ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ನಡುವಿನ […]

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು Read More »

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ

ಗಡ್ಕರಿ ಎದುರು 6.5 ಲಕ್ಷ ಮತಗಳಿಂದ ಸೋತವನೇ ಗಲಭೆಯ ಸೂತ್ರಧಾರ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿರುವ ಕೋಮು ಹಿಂಸಾಚಾರದ ರೂವಾರಿಯ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಫಾಹಿಮ್‌ ಶಮೀಮ್‌ ಖಾನ್‌ ಎಂಬಾತನ ಪ್ರಚೋದನಕಾರಿ ಭಾಷಣದಿಂದ ಹಿಂಸಾಚಾರ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಫಾಹಿಮ್‌ ಖಾನ್‌ ನಾಗಪುರದ ಯಶೋಧರ ನಗರದ ಸಂಜಯ್‌ ಭಾಗ್‌ ಕಾಲನಿಯ ನಿವಾಸಿಯಾಗಿದ್ದು, ಗಲಭೆಯ ಬಳಿಕ ತಲೆಮರೆಸಿಕೊಂಡಿದ್ದಾನೆ. ನಾಗಪುರ ನಗರದಲ್ಲಿ ರಾಜಕೀಯ ಮುಖಂಡನಾಗಿ ಗುರುತಿಸಿಕೊಂಡಿದ್ದ 38ರ

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ Read More »

ಮೀನಿನ ಬರಕ್ಕೆ ಲೈಟ್‌ ಫಿಶಿಂಗ್‌ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು

ಕೊನೆಗೂ ಕಾರ್ಯಾಚರಣೆಗಿಳಿದ ಮೀನುಗಾರಿಕೆ ಇಲಾಖೆ ಉಡುಪಿ : ಈ ವರ್ಷ ಕಂಡುಬಂದಿರುವ ಮೀನಿನ ಕೊರತೆಗೆ ಸಮುದ್ರದಲ್ಲಿ ನಡೆಯುತ್ತಿರುವ ಲೈಟ್‌ಫಿಶಿಂಗ್‌ ಕಾರಣ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೀನುಗಾರಿಕೆ ಇಲಾಖೆ ಕರಾವಳಿ ರಕ್ಷಣಾ ಪಡೆಯ ಸಹಯೋಗದಲ್ಲಿ ಲೈಟ್‌ ಫಿಶಿಂಗ್‌ ಮಟ್ಟ ಹಾಕಲು ತೀವ್ರ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವರ್ಷ ಮಾರ್ಚ್‌ಗಾಗುವಾಗಲೇ ಮೀನಿನ ತೀವ್ರ ಬರ ಕಂಡುಬಂದಿದ್ದು, ಸಾಕಷ್ಟು ಮೀನು ದೊರೆಯದೆ ಹಾಕಿದ ಡೀಸೆಲ್‌ನ ಖರ್ಚು ಕೂಡ ಹುಟ್ಟುತ್ತಿಲ್ಲ ಎಂಬ ಕಾರಣಕ್ಕೆ ಆಳ ಸಮುದ್ರ ಮೀನುಗಾರಿಕೆಯ ಮೀನುಗಳೆಲ್ಲ

ಮೀನಿನ ಬರಕ್ಕೆ ಲೈಟ್‌ ಫಿಶಿಂಗ್‌ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು Read More »

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ

ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾರ್ಚ್ 28, 2022 ರಂದು ಅಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ 780 ಕೋಟಿ ರೂ. ಅನುದಾನ ಬಿಡುಗಡೆ ಆದೇಶ ಆಗಿದ್ದು, ಜತೆಗೆ 230 ಕೋಟಿ ರೂ. ಕಡಬ, ಬೆಳ್ತಂಗಡಿ, ಪುತ್ತೂರಿಗೆ ಅನುದಾನ ನೀಡಲಾಗಿದೆ. ಆದರೆ ಪುತ್ತೂರು ಹಾಲಿ ಶಾಸಕರು 780 ಕೋಟಿ ರೂ. ಅನುದಾನದ ಬದಲಿಗೆ 1010 ಕೋಟಿಯ ಫ್ಲೆಕ್ಸ್ ಗಳನ್ನು  ಹಾಕಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿರುವುದು ನಾಚಿಕೆ ಗೇಡಿನ ವಿಚಾರ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ Read More »

ಠಾಣೆಯಲ್ಲೇ ಇಸ್ಪೀಟ್‌ ಆಡಿದ ಪೊಲೀಸರು!

ಎಎಸ್‌ಐ ಸಹಿತ ಐವರು ಅಮಾನತು ಬೆಂಗಳೂರು: ಜೂಜಾಡುವವರನ್ನು ಹಿಡಿದು ತಂದು ರುಬ್ಬಿ ಪಾಠ ಕಲಿಸಬೇಕಾದ ಪೊಲೀಸರು ತಾವೇ ಠಾಣೆಯಲ್ಲಿ ಯೂನಿಫಾರ್ಮ್‌ ಧರಿಸಿಕೊಂಡು ಜೂಜಾಡಿದರೆ ಹೇಗೆ? ಇಂಥ ಒಂದು ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೊಲೀಸ್‌ ಠಾಣೆಯಲ್ಲಿ ಸಂಭವಿಸಿದೆ. ಜೂಜಾಡಿದ ಐವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಚಿತ್ತಾಪುರ ತಾಲೂಕಿನ ವಾಡಿ ಠಾಣೆಯ ಎಎಸ್​ಐ ಮಹಿಮೂದ್ ಮಿಯಾ, ಹೆಡ್​ಕಾನ್ಸ್‌ಟೆಬಲ್‌ಗಳಾದ ನಾಗರಾಜ್, ಸಾಯಿಬಣ್ಣ, ಇಮಾಮ್ ಮತ್ತು ಕಾನ್‌ಸ್ಟೆಬಲ್‌ ನಾಗಭೂಷಣ್

ಠಾಣೆಯಲ್ಲೇ ಇಸ್ಪೀಟ್‌ ಆಡಿದ ಪೊಲೀಸರು! Read More »

ವಿದ್ಯಾರಶ್ಮಿಯಲ್ಲಿ 11ವರ್ಷ ಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಸೀತಾರಾಮ ಕೇವಳ |  ಸ್ವಯಂ ಸೇವಾ ನಿವೃತ್ತಿ ಪಡೆದ ಸೀತಾರಾಮ ಕೇವಳ

ಪುತ್ತೂರು : ಸವಣೂರಿನ ವಿದ್ಯಾರಶ್ಮಿಯಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವಾನಿರತರಾಗಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕ ಸೀತಾರಾಮ  ಕೇವಳ ಅವರು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. 1988ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ದ್ವಿತೀಯ rankನೊಂದಿಗೆ ತೇರ್ಗಡೆಯಾದ ಅವರು ಮುಂದೆ ಕುವೆಂಪು ವಿಶ್ವ ವಿದ್ಯಾನಿಲಯದಿಂದ ಇಂಗ್ಲೀಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು. ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದ ಅವರು 1990ರಲ್ಲಿ  ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಅರೆಕಾಲಿಕ

ವಿದ್ಯಾರಶ್ಮಿಯಲ್ಲಿ 11ವರ್ಷ ಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಸೀತಾರಾಮ ಕೇವಳ |  ಸ್ವಯಂ ಸೇವಾ ನಿವೃತ್ತಿ ಪಡೆದ ಸೀತಾರಾಮ ಕೇವಳ Read More »

ಸುನಿತಾ ವಿಲ್ಲಿಯಮ್ಸ್‌ ಪುನರಾಗಮನ : ಜಗತ್ತಿನಾದ್ಯಂತ ಮುಗಿಲು ಮುಟ್ಟಿದ ಹರ್ಷೋದ್ಗಾರ

45 ದಿನಗಳ ಚಿಕಿತ್ಸೆ ಬಳಿಕ ಹೊರ ಜಗತ್ತಿಗೆ ಕಾಲಿಡಲಿದ್ದಾರೆ ಗಗನಯಾತ್ರಿಗಳು ನ್ಯೂಯಾರ್ಕ್‌: ಅಂತರಿಕ್ಷದಲ್ಲಿ 9 ತಿಂಗಳು ಕಳೆದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಸು ಕರೆತರುವ ಕಾರ್ಯಾಚರಣೆ ಕೊನೆಗೂ ಯಶ್ವಿಯಾಗಿ ಮುಗಿದಿದೆ. ನಾಸಾದ ಗಗನಯಾನಿಗಳಾದ ನಿಕ್ ಹೇಗ್ ಮತ್ತು ರಷ್ಯಾದ ಅಲೆಕ್ಸಾಂಡರ್ ಗೊರ್ಶನೋವ್ ಜೊತೆಗೂಡಿ ಸುನಿತಾ ಮತ್ತು ವಿಲ್ಮೋರ್ ಭಾರತೀಯ ಕಾಲಮಾನದ ಪ್ರಕಾರ ಇಂದು ನಸುಕಿನ ಹೊತ್ತು ಯಶಸ್ವಿಯಾಗಿ ಭೂಮಿಗೆ ಬಂದಿದ್ದಾರೆ.ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ 10.35ಕ್ಕೆ ಸರಿಯಾಗಿ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ

ಸುನಿತಾ ವಿಲ್ಲಿಯಮ್ಸ್‌ ಪುನರಾಗಮನ : ಜಗತ್ತಿನಾದ್ಯಂತ ಮುಗಿಲು ಮುಟ್ಟಿದ ಹರ್ಷೋದ್ಗಾರ Read More »

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು

ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲು ಇನ್ನೋರ್ವ ಸಚಿವರಿಂದ ಪ್ರಯತ್ನ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು ಕೇಳಿಸಲಾರಂಭಿಸಿದೆ. ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ತುಮಕೂರು ಕಡೆಯ ಸಚಿವರನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಿ ಮಟ್ಟ ಹಾಕಲು ಪ್ರಯತ್ನಿಸಲಾಗಿದೆ. ಈ ಹನಿಟ್ರ್ಯಾಪ್‌ ಜಾಲ ಹೆಣೆದಿರುವುದು ಕಾಂಗ್ರೆಸಿನವರೇ ಆದ ಇನ್ನೊಬ್ಬ ಪ್ರಭಾವಿ ಸಚಿವರು ಎಂಬ ವದಂತಿಗಳು ಕಳೆದ ಎರಡು ದಿನಗಳಿಂದ ಹರಿದಾಡುತ್ತಿವೆ. ಕೆಲ ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಮಾಡಿ ಸಿಕ್ಕಿಬಿದ್ದರುವ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಅಕುಲ ಅನುರಾಧ ಎಂಬವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್‌ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್‌ ಸೆಕ್ಷನ್‌ 79 ಅಡಿ ಎಫ್‌ಐಆರ್‌ ದಾಖಲಾಗಿದೆ.ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌ Read More »

9 ತಿಂಗಳ ಅಂತರಿಕ್ಷ ವಾಸದ ಬಳಿಕ ಭೂಮಿ ತಾಯಿಯ ಮಡಿಲಿಗೆ ಸುನಿತಾ ವಿಲ್ಲಿಯಮ್ಸ್‌

ಗಗನಯಾತ್ರಿಗಳನ್ನು ಕರೆತರುವ ಮಿಷನ್‌ ಯಶಸ್ವಿ ಸಂಪನ್ನ ಫ್ಲೋರಿಡಾ: ಭಾರತೀಯ ಸಂಜಾತೆ ಗಗನಯಾತ್ರಿ ಸುನಿತಾ ವಿಲ್ಲಿಯಮ್ಸ್‌ ಬರೋಬ್ಬರಿ 9 ತಿಂಗಳ ಕಾಲ ಅಂತರಿಕ್ಷ ವಾಸ ಮುಗಿಸಿ ಇಂದು ಮುಂಜಾನೆ ವೇಳೆ ಭೂಸ್ಪರ್ಶ ಮಾಡಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 286 ದಿನ ಬಾಕಿಯಾಗಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ ಅವರನ್ನು ಭೂಮಿಗೆ ಕರೆತರುವ ಮಿಷನ್‌ ಯಶಸ್ವಿಯಾಗಿದೆ ಎಂದು ನಾಸಾ ಘೋಷಿಸಿದೆ. ಇಬ್ಬರನ್ನು ಸುರಕ್ಷಿತರವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು

9 ತಿಂಗಳ ಅಂತರಿಕ್ಷ ವಾಸದ ಬಳಿಕ ಭೂಮಿ ತಾಯಿಯ ಮಡಿಲಿಗೆ ಸುನಿತಾ ವಿಲ್ಲಿಯಮ್ಸ್‌ Read More »

error: Content is protected !!
Scroll to Top