ಸುದ್ದಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ತಂಡ ತೃತೀಯ ಸ್ಥಾನ ಗಳಿಸಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‍ ವತಿಯಿಂದ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಾದ ಸುಮಂತ್, ಜೀವನ್, ವರುಣ್, ದಿಶಾಂತ್, ರಕ್ಷಿತ್, ವಿಜಯ್ ಕುಮಾರ್, ಅರ್ಚನಾ, ಪುನೀತ, ಪ್ರತಿಕ್ಷ, ಪ್ರಗತಿ, […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ Read More »

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ !

ಅಜ್ಜ ಸಾವನ್ನಪ್ಪಿದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ ಮೊಮ್ಮಗ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ ವಾಸ್ಥವ್ಯವಿರುವ ನಾರಾಯಣ ಪೂಜಾರಿ ವಯೋಸಹಜದಿಂದ ಮೃತಪಟ್ಟಿದ್ದರು. ಇದಾದ ಎರಡೂವರೆ ಗಂಟೆ ಬಳಿಕ ಮೊಮ್ಮಗ ನಿಶಾಂತ ಪೂಜಾರಿ (23) ವಾಹನ ಅಪಘಾತದಿಂದ ಮೃತಪಟ್ಟರು ಎನ್ನಲಾಗಿದೆ. ಮೃತ ನಿಶಾಂತ ಚಾಮರಾಜನಗರದ ಮೆಡಿಕಲ್ ಕಾಲೇಜೊಂದರಲ್ಲಿ  ಎರಡನೇ ವರ್ಷದ ಎಂಬಿ ವ್ಯಾಸಂಗ ಮಾಡುತ್ತಿದ್ದು, ಕಳೆದ ವಾರವಷ್ಟೆ ಊರಿಗೆ ಬಂದಿದ್ದ ನಿಶಾಂತ ಸೋಮವಾರ ಪರೀಕ್ಷೆ ಇದ್ದಿದ್ದರಿಂದ ಶನಿವಾರ ಚಾಮರಾಜನಗರಕ್ಕೆ ತೆರಳಿದ್ದ. ಆದರೆ

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ ! Read More »

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ

ಸುಳ್ಯ: ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಸುಳ್ಯದ ಆರಂಬೂರು ಬಳಿ ನಡೆದಿದೆ. ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಕುಡಿದ

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ Read More »

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು??

ಕತ್ತಲ ಹೊತ್ತಲ್ಲಿ ಬೆಳಕ ಚಿಮ್ಮಿಸುತ್ತಾ ಬರುವ ಮಿಂಚುಹುಳ ಯಾರಿಗೆ ಗೊತ್ತಿಲ್ಲ ಹೇಳಿ!! ಹಳ್ಳಿಯ ಮನೆಗಳಲ್ಲಿ ಬಾಲ್ಯವನ್ನು ಕಳೆದವರಿಗೆ ಮಿಂಚುಹುಳವನ್ನು ಮರೆಯಲು ಸಾಧ‍್ಯವೇ ಇಲ್ಲ. ಆದರೆ ಇಂದು ಆ ಮಿಂಚುಹುಳಗಳು ಎಲ್ಲಿ ಹೋಗಿವೆ? ಅಪರೂಪಕ್ಕಾದರೂ ನೋಡಲು ಸಿಗಬೇಕಲ್ಲವೇ? ಸಂಶೋಧಕರ ಪ್ರಕಾರ, ಪಶ್ಚಿಮ ಘಟ್ಟಗಳಲ್ಲಿಯೂ ಮಿಂಚುಹುಳುಗಳ ಸಂತತಿ ಕಡಿಮೆಯಾಗಿದೆ. ಇದಕ್ಕೆ ಹಲವು ಕಾರಣಗಳನ್ನು ಅವರು ನೀಡಿದ್ದಾರೆ. ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ ಮತ್ತು ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಸಂಶೋಧಕರು ಜೀರುಂಡೆ ಜಾತಿಗಳು ಮತ್ತು ಅವುಗಳ ಪರಿಸರ

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು?? Read More »

ನೆರಿಯದಲ್ಲಿ ಕಾಡಾನೆ ದಾಳಿ !

ನೆರಿಯ: ನೆರಿಯ ಪೋಸ್ಟ್ ಆಫೀಸ್ ಬಳಿ ಕಾಡಾನೆ ಕಾರೊಂದರ ಮೇಲೆರಗಿದ ಘಟನೆ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆರು ಜನರು ಪ್ರಯಾಣಿಸುತ್ತಿದ್ದ ಆಲ್ಟೋ ಕಾರಿನ ಮೇಲೆ ಆನೆ ದಾಳಿ ನಡೆಸಿದೆ ಎನ್ನಲಾಗಿದ್ದು, ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಹಾಗೂ ನಾಸಿಯಾ (30) ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ.

ನೆರಿಯದಲ್ಲಿ ಕಾಡಾನೆ ದಾಳಿ ! Read More »

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ

ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ

ಸುಬ್ರಹ್ಮಣ್ಯ: ಕಾರ್ತಿಕ ಹುಣ್ಣಿಮೆ ದಿನ ಕುಲ್ಕುಂದ ಜಾನುವಾರು ಜಾತ್ರೆಯ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದೊಂದಿಗೆ ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗೋ ಪೂಜೆ ಸಾಂಕೇತಿಕವಾಗಿ ನಡೆಯಿತು. ದೇವಸ್ಥಾನದ ಅರ್ಚಕರು ವಿಧಿ ವಿಧಾನದೊಂದಿಗೆ ಗೋಪೂಜೆ ನೆರವೇರಿಸಿದರು. ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್ ದೀಕ್ಷಿತ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ, ವ್ಯವಸ್ಥಾಪನ ಸಮಿತಿ ಸದಸ್ಯ ವನಜ ಭಟ್, ಶೋಭಾ ಗಿರಿಧರ, ಮನೋಜ್, ಶ್ರೀಕುಮಾರ್, ರವಿ ಶೆಟ್ಟಿ

ಕುಲ್ಕುಂದ ಜಾನುವಾರು ಜಾತ್ರೆ: ಗೋಪೂಜೆ Read More »

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ

ಬಂಟ್ವಾಳ : ಒಂದೇ ವಠಾರದ ಯುವಕ ಮತ್ತು ಯುವತಿ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಉದ್ದೊಟ್ಟು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ ಆಯಿಸತ್ ರಸ್ನಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಇಬ್ಬರೂ ಅಕ್ಕಪಕ್ಕದ ಮನೆಯವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಆಯಿಸತ್ ರಸ್ಮಾ ಒಂದು ವಾರಗಳ ಕಾಲ ರಜೆಯಿದ್ದ ಹಿನ್ನಲೆಯಲ್ಲಿ ಮನೆಯಲ್ಲಿದ್ದಳು.

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ Read More »

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ವೀಕ್ಷಿಸಿ ಊರಿಗೆ ವಾಪಾಸಾಗುತ್ತಿದ್ದಾಗ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಬಜಪೆ ಮೂಲದ ಕಿಶಾನ್‍ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ಫಿಲೀಪ್‍ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ. ನಿತೀಶ್‍ ಭಂಡಾರಿ, ಪ್ರೀತಿ ಲೋಬೋ, ಹರೀಶ್ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಕಂಬಳ ವೀಕ್ಷಿಸಿ ವಾಪಾಸಾಗುತ್ತಿದ್ದ ವೇಳೆ ಅಪಘಾತ : ಇಬ್ಬರು ಮೃತ್ಯು Read More »

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ!

ಬೆಂಗಳೂರು : ವಿವಿಧ ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಹಳೆಯ ಪ್ರಸ್ತಾವನೆಗೆ ಮತ್ತೆ ಚಾಲನೆ ನೀಡಲಾಗಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯು ಚರ್ಚೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.ಕೃಷಿ ಇಲಾಖೆಯಲ್ಲಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಕುರಿತು ನವೆಂಬರ್‌ 8ರಂದು ಹೊರಡಿಸಲಾಗಿರುವ ಅರೆ ಸರ್ಕಾರಿ ಪತ್ರದಲ್ಲಿ ಈ ಕುರಿತು ಕೂಡಲೇ

ಮೂರು ಇಲಾಖೆಗಳ ವಿಲೀನ, 2000 ಉದ್ಯೋಗ ನಷ್ಟ! Read More »

error: Content is protected !!
Scroll to Top