ಸುದ್ದಿ

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ […]

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್ Read More »

ಸುಬ್ರಹ್ಮಣ್ಯ ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಸ್ವೀಕರಿಸಿದ ಎಸ್‍ ಆರ್‍ ಕೆ ಲ್ಯಾಡರ್ಸ್ ಮಾಲಕ ಕೇಶವ                             

ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರತಿವರ್ಷದಂತೆ ಅತ್ಯುತ್ತಮ ಸಾಧಕರಿಗೆ ನೀಡುವ  ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ನಡೆಯಿತು. ಈ ಬಾರಿಯ ಪ್ರಶಸ್ತಿಯನ್ನು ಸಾಧಕ ಉದ್ಯಮಿ ಮೂಲತ ಬಿಳಿ ನೆಲೆಯ ನೋಣಯ್ಯ ಉಗ್ರಾಣಿಯವರ ಸುಪುತ್ರ ಎಸ್. ಆರ್. ಕೆ .ಲ್ಯಾಡರ್ಸ್ ನ ಮಾಲಕರಾದ ಕೇಶವ ಅವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಕೇಶವ ರವರು, ದಿವಂಗತ ಕುಮಾರ ನಾಯರ್ ಅವರ ದೂರ ದೃಷ್ಟಿಯಿಂದ ಸಾವಿರಾರು ಮಕ್ಕಳಿಗೆ ಇಂದು ಉನ್ನತ ಮಟ್ಟದ

ಸುಬ್ರಹ್ಮಣ್ಯ ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಸ್ವೀಕರಿಸಿದ ಎಸ್‍ ಆರ್‍ ಕೆ ಲ್ಯಾಡರ್ಸ್ ಮಾಲಕ ಕೇಶವ                              Read More »

ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿ ನ. 12ರಂದು ಆರಂಭಗೊಂಡಿತು. ಯಕ್ಷಗಾನ ಗುರು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್, ಕಾರ್ಯದರ್ಶಿ ಭಾಸ್ಕರ್ ಎಂ.ಎಸ್, ಮಂಜುನಾಥೇಶ್ವರ ಭಜನಾ ಮಂಡಳಿ ಗೌರವಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಭಜನಾ ಮಂಡಳಿಯ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ, ಸನತ್ ಬರಮೇಲು ಉಪಸ್ಥಿತರಿದ್ದರು. ಬಳಿಕ ಯಕ್ಷಗಾನ ಗುರು ಶಶಿಕುಮಾರ್ ಕಾವು ಅವರು ತರಬೇತಿ ಕಾರ್ಯಾಗಾರ ನಡೆಸಿದರು.

ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ Read More »

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು

ಬೆಂಗಳೂರು: ಅಪರಿಚಿತರ ಗುಂಪೊಂದು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಸೂರ್ಯ (22) ಹತ್ಯೆಯಾದ ಯುವಕ. ಭಾನುವಾರ ರಾಮೇಶ್ವರ ಸಮೀಪದ ರೆಸ್ಟೋರೆಂಟ್ ಒಂದಲ್ಲಿ ಸೂರ್ಯ ನಾಲ್ವರು ಸ್ನೇಹಿತರೊಂದಿಗೆ ಫೋಟೊ ಶೂಟ್ ಮಾಡುತ್ತಿದ್ದ ವೇಳೆ ಅಪರಿಚಿತರ ಗುಂಪೊಂದು ಅವರ ಜತೆ ಕಿರಿಕ್ ತೆಗೆದಿದೆ. ಅಪರಿಚಿತರ ತಂಡ ಫೋಟೋ ತೆಗೆದಿದ್ದ ಕ್ಯಾಮೆರಾ ಕಿತ್ತುಕೊಂಡು ನಾಲ್ವರು ಯುವಕರ ಮೇಲೆ ಹಲ್ಲೆ ಮಾಡಿ, ಸೂರ್ಯನಿಗೆ ಚಾಕುವಿನಿಂದ ಇರಿದಿದ್ದಾರೆ.

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು Read More »

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ವೈ.ವಿಜಯೇಂದ್ರ ಅವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಶನಿವಾರ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಅವರ ಆಪ್ತ ಬೆಂಬಲಿಗರು ಉಪಸ್ಥಿತರಿದ್ದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ

ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ. ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ಅಂತರಾಷ್ಟ್ರೀಯ ಲಯನ್ಸ್  ಜಿಲ್ಲೆಯ 317 ಡಿ ಪ್ರಾಂತೀಯ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ | ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನ ಅರಿತು ಸೇವೆ ಸಲ್ಲಿಸೋಣ : ರೇಣುಕಾ ಸದಾನಂದ ಜಾಕೆ Read More »

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ

ಜಾಲ್ಸೂರು: ಜಾಲ್ಲೂರು- ಕಾಸರಗೋಡು ಅಂತರಾಜ್ಯ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಸುಳ್ಯ ಸಮೀಪದ ಪಂಜಿಕಲ್ಲಿನಲ್ಲಿ ಶನಿವಾರ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪಾಡಿ ಗ್ರಾಮ ಸುತ್ತ ಮುತ್ತ ಕಾಡಿನಿಂದ  ಆವರಿಸಿದ್ದು, ಈ ಪರಿಸರದಲ್ಲಿ ರಾತ್ರಿ, ಹಗಲೆನ್ನದೆ ಆನೆಗಳು ಓಡಾಡುತ್ತಿರುತ್ತವೆ. ಇಲ್ಲಿನ ಜನ ಪ್ರತಿ ದಿನ ಆತಂಕದಲ್ಲೇ ಬದುಕುವಂತಾಗಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿಕರ ತೋಟಗಳಿಗೆ ದಾಳಿ ಇಡುತ್ತಿದ್ದು, ಕೃಷಿಯನ್ನು ಹಾನಿ ಮಾಡುತ್ತಿವೆ. ಕಾಸರಗೋಡು

ಜಾಲ್ಸೂರು-ಕಾಸರಗೋಡು ರಸ್ತೆಯಲ್ಲಿ ಆನೆ ಪ್ರತ್ಯಕ್ಷ | ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡ ಬೈಕ್ ಸವಾರ Read More »

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು. ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಜಿಲ್ಲಾ ಸಮ್ಮೇಳನ ನಡೆಯಲಿದ್ದು, ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ Read More »

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

ಉಡುಪಿ: ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪದಲ್ಲಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ. 15 ವರ್ಷಗಳ ಹಿಂದೆ ನಡೆದ ಈ ಪ್ರಕರಣದಲ್ಲಿ ಸಿಒಡಿ ಪರ ವಿಶೇಷ ಸರಕಾರಿ ಅಭಿಯೋಜಕರಾಗಿ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಪುತ್ತೂರಿನ ಕೆ.ಶಿವಪ್ರಸಾದ್ ಆಳ್ವ ಅವರು ವಾದ ಮಂಡನೆ ಮಾಡಿ

ಉಡುಪಿ ಮಾಜಿ ಶಾಸಕರ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣ | ಆರೋಪಿ ಅತುಲ್ ರಾವ್‍ ಗೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ Read More »

error: Content is protected !!
Scroll to Top