ಸುದ್ದಿ

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ

ಸಿಲಿಂಡರ್‌ಗಳು ಸ್ಫೋಟಿಸಿ ಕನಿಷ್ಠ 25 ಟೆಂಟ್‌ಗಳು ಭಸ್ಮ ಪ್ರಯಾಗ್‌ರಾಜ್‌: ಮಹಾಕುಂಭಮೇಳ ನಡೆಯುವ ಸ್ಥಳದಲ್ಲಿ ಸಾಧುಗಳಿಗೆ ತಂಗಲು ನಿರ್ಮಿಸಿದ್ದ ಕನಿಷ್ಠ 25 ಟೆಂಟ್‌ಗಳು ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಭಸ್ಮವಾಗಿವೆ. ಮಹಾಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡು ಟೆಂಟ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಟೆಂಟ್​ಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾರಿಗೂ ಕೂಡ ಗಾಯಗಳಾಗಿಲ್ಲ. ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪ್ರಯಾಗ್​ರಾಜ್​​ ಎಡಿಜಿಪಿ ಭಾನು ಭಾಸ್ಕರ್ ತಿಳಿಸಿದ್ದಾರೆ. ಅಗ್ನಿ […]

ಮಹಾಕುಂಭಮೇಳದಲ್ಲಿ ಬೆಂಕಿ ಅವಘಡ : ಉನ್ನತ ತನಿಖೆಗೆ ಆದೇಶ Read More »

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ

ಪಕ್ಕಾ ಪ್ಲಾನ್‌ ಮಾಡಿ ನಡೆಸಿದ ಪರ್ಫೆಕ್ಟ್‌ ದರೋಡೆ ಮಂಗಳೂರು: ಇಡೀ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯದ ಹಿಂದೆ ಸ್ಥಳೀಯರ ಕೈವಾಡವಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಹಳ ವ್ಯವಸ್ಥಿತವಾಗಿ ಪ್ಲಾನ್‌ ರೂಪಿಸಿ ಮಾಡಿದ ದರೋಡೆ. ಸ್ಥಳೀಯ ಎಲ್ಲ ವಿಚಾರಗಳನ್ನು ತಿಳಿದುಕೊಂಡು ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್‌ ಇರುವ ಸ್ಥಳ, ಬ್ಯಾಂಕಿನಲ್ಲಿರುವ ಚಿನ್ನ ಮತ್ತು ನಗದು ಹಣದ ಮಾಹಿತಿ ಮತ್ತು ತಪ್ಪಿಸಿಕೊಳ್ಳುವ ದಾರಿ ತಿಳಿದವರು ಯಾರೋ

ಕೋಟೆಕಾರು ಬ್ಯಾಂಕ್‌ ದರೋಡೆ : ಸ್ಥಳೀಯ ವ್ಯಕ್ತಿಯ ಕೈವಾಡ ಶಂಕೆ Read More »

ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ

ಹಿಂದು ಹೆಸರು ಇಟ್ಟುಕೊಂಡು ನೌಕರಿಗೆ ಸೇರುತ್ತಿದ್ದ ಆರೋಪಿ ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಥಾಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ. ವಿಚಾರಣೆಯಿಂದ ಈತ ಬಾಂಗ್ಲಾದೇಶದ ಅಕ್ರಮ ನುಸುಳುಕೋರ ಎಂಬ ಮಾಹಿತಿ ಹೊರಬಿದ್ದಿದೆ.ಬಂಧಿತ ಆರೋಪಿ ಭಾರತೀಯನಲ್ಲ, ಬದಲಿಗೆ ಬಾಂಗ್ಲಾದೇಶದ ನುಸುಳುಕೋರ ಎಂಬ ಅನುಮಾನವಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಾಮ್‌ ತಿಳಿಸಿದ್ದಾರೆ. ಆರೋಪಿ ಬಳಿ ಭಾರತಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್

ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ Read More »

ಥೈರಾಯ್ಡ್‌, ಬಿಪಿ, ಶುಗರ್‌ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು

ವೈದ್ಯಕೀಯ ಪರೀಕ್ಷೆ ವೇಳೆ ತೀವ್ರ ಆರೋಗ್ಯ ಸಮಸ್ಯೆಯಿರುವುದು ಪತ್ತೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಇತ್ತೀಚೆಗೆ ಶರನಾಗಿರುವ ಮಲೆನಾಡಿನ ಆರು ನಕ್ಸಲರು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆರು ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ವೈದ್ಯರ ಬಳಿ ತಮ್ಮ ಅನಾರೋಗ್ಯ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ತನಿಖಾಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತಿನಲ್ಲಿ ನಕ್ಸಲರನ್ನು ಗುರುವಾರ ರಾತ್ರಿಯೇ

ಥೈರಾಯ್ಡ್‌, ಬಿಪಿ, ಶುಗರ್‌ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು Read More »

ವರದಕ್ಷಿಣೆ ಕಿರುಕುಳ, ಅನೈತಿಕ ಸಂಬಂಧ : ಎಸ್‌ಐ ವಿರುದ್ಧ ಪತ್ನಿ ದೂರು

ಕಾಪು ಠಾಣೆಯಲ್ಲಿರುವಾಗ ಅನೈತಿಕ ಸಂಬಂಧವಿತ್ತು ಎಂದು ಆರೋಪಿಸಿದ ಪತ್ನಿ ಚಿಕ್ಕಮಗಳೂರು: ಕಳಸ ಪಿಎಸ್‌ಐ ನಿತ್ಯಾನಂದ ಗೌಡ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳ ಮತ್ತು ಅನೈತಿಕ ಸಂಬಂಧದ ಕುರಿತು ದೂರು ನೀಡಿದ್ದಾರೆ. ನ್ಯಾಯ ಕೇಳಿಕೊಂಡು ಪೊಲೀಸ್ ಠಾಣೆಗೆ ಬರುವ ಮಹಿಳೆಯರನ್ನು ನಿತ್ಯಾನಂದ ಗೌಡ ಶೋಷಿಸುತ್ತಾರೆ. ತನಗೆ50 ಲಕ್ಷ ರೂ. ವರದಕ್ಷಿಣೆ ತರಲು ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ನಿ ಗಂಭೀರ ಆರೋಪ ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಎಸ್‌ಐ ನಿತ್ಯಾನಂದ ಗೌಡ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ

ವರದಕ್ಷಿಣೆ ಕಿರುಕುಳ, ಅನೈತಿಕ ಸಂಬಂಧ : ಎಸ್‌ಐ ವಿರುದ್ಧ ಪತ್ನಿ ದೂರು Read More »

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ?

ಶಾಲೆಗಳನ್ನು ಸಂಯೋಜಿಸಲು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಅನುಮಾನವೊಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಉಂಟಾಗಿದೆ. ಕಡಿಮೆ ಮಕ್ಕಳು ಇರುವ ಶಾಲೆಯನ್ನು ಹತ್ತಿರದ ಮತ್ತೊಂದು ಶಾಲೆ ಜೊತೆ ಸಂಯೋಜಿಸಲು ಶಿಕ್ಷಣ ಇಲಾಖೆ ಸಿದ್ಧತೆ ಶುರು ಮಾಡಿದೆ. ಅದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇದು ಭಾರಿ ಕಳವಳಕ್ಕೆ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ? Read More »

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ

ಮುಂಬಯಿಯ ಪಕ್ಕದಲ್ಲೇ ಇದ್ದ ಆರೋಪಿ ಮುಂಬಯಿ: ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ ಮನೆಗೆ ನುಗ್ಗಿ ನಟನಿಗೆ ಇರಿದು ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಕ್ಕದ ಥಾಣೆಯಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಬಾಂದ್ರಾ ಪೊಲೀಸ್‌ ಠಾಣೆಗೆ ತಂದು ಪ್ರಶ್ನಿಸಿದ್ದು, ಈ ವೇಳೆ ಆತ ತಾನು ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿದ್ದನ್ನು ಒಪ್ಪಿಕೊಂಡಿದ್ದಾನೆ. ಮೂಲತಃ ಪಶ್ಚಿಮ ಬಂಗಾಳದವನಾದ ಆತ ಮುಂಬಯಿಯಲ್ಲಿ ಬೇರೆ ಬೇರೆ ಹೆಸರಿಟ್ಟುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ಆರೋಪಿಯನ್ನು

ಸೈಫ್‌ ಅಲಿಖಾನ್‌ ಹಲ್ಲೆ ಪ್ರಕರಣ: ಕೊನೆಗೂ ನಿಜವಾದ ಆರೋಪಿ ಸೆರೆ Read More »

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕುಂದಾಪುರ : ಬಳ್ಳೂರು ಸಮೀಪದ ಹೊಳೆಯ ಬದಿಗೆ ಹೋಗಿದ್ದು ಅಲ್ಲಿ ಸ್ಕೂಟಿಯನ್ನು ನಿಲ್ಲಿಸಿ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಶೃತಿ ಹಾಗೂ ವಿನಯ್ ಅಂತರ್ಜಾತಿ ವಿವಾಹವಾಗಿದ್ದು, ಸಾಲಿಗ್ರಾಮದ ಮೂಲದ  ಶೃತಿ ಬ್ರಾಹ್ಮಣರಾಗದ್ದರು, ಕಾಲೇಜಲ್ಲಿರುವಾಗ ವಿನಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರಸ್ತುತವಾಗಿ ಬಳ್ಳೂರು ಸಮೀಪದ ಬಿಹೆಚ್ ನಲ್ಲಿ ನೆಲೆಸಿದ್ದ ವಿನಯ್ ಹಾಗೂ ಶೃತಿ ದಂಪತಿ, ಬಳ್ಳೂರಿನಲ್ಲಿ ಜಾಗ ಖರೀದಿ ಮಾಡಿದ್ದರು  ಈ ಸಂಬಂಧ ಬುಧವಾರ ಜಾಗದ ನೋಂದಣಿಗೆ ಹೋಗಿ ಮರುಳಿದ ಬಳಿಕ ಶ್ರುತಿ ಅವರು

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ನಟ ಸೈಫ್‌ ಹಲ್ಲೆ ಪ್ರಕರಣ : ಬಂಧಿಸಿದ ವ್ಯಕ್ತಿ ಆರೋಪಿಯಲ್ಲ

ಸಂಶಯದ ಮೇಲೆ ಬಂಧಿಸಿದ್ದ ವ್ಯಕ್ತಿ ಸ್ಥಳೀಯ ಕಾರ್ಪೆಂಟರ್‌ ; ನಿಜವಾದ ಆರೋಪಿ ಪಲಾಯನ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕುವಿನಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರ ಬಂಧಿಸಿದ್ದ ವ್ಯಕ್ತಿ ನಿಜವಾದ ಆರೋಪಿಯಲ್ಲ. ವಿಚಾರಣೆ ಬಳಿಕ ತಾವು ಬೇಸ್ತುಬಿದ್ದ ಸಂಗತಿ ಪೊಲೀಸರಿಗೆ ತಿಳಿದುಬಂದಿದ್ದು, ಅವನನ್ನು ಬಿಟ್ಟು ಕಳಿಸಿದ್ದಾರೆ. ಆತ ಸ್ಥಳೀಯವಾಗಿ ಬಡಗಿ ಕೆಲಸ ಮಾಡಿಕೊಂಡಿರುವ ವ್ಯಕ್ತಿ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಆತ ಸಿಸಿಟಿವಿಯಲ್ಲಿ ಕಂಡ ವ್ಯಕ್ತಿಯ ಚಹರೆ ಹೋಲುತ್ತಿದ್ದ ಕಾರಣ ಪೊಲೀಸರು

ನಟ ಸೈಫ್‌ ಹಲ್ಲೆ ಪ್ರಕರಣ : ಬಂಧಿಸಿದ ವ್ಯಕ್ತಿ ಆರೋಪಿಯಲ್ಲ Read More »

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌

ಕಚ್ಚಾಡುತ್ತಿರುವ ಕರ್ನಾಟಕದ ನಾಯಕರ ಕಿವಿ ಹಿಂಡಿದ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಪಕ್ಷದದ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದಿದ್ದಾರೆ. ಕೆಲವರು ಹೇಳಿದ

ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ : ಕಾಂಗ್ರೆಸ್‌ ನಾಯಕರಿಗೆ ಖರ್ಗೆ ವಾರ್ನಿಂಗ್‌ Read More »

error: Content is protected !!
Scroll to Top