ಸುದ್ದಿ

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ. […]

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ

ಕಾವು: ಇಲ್ಲಿನ ಪುತ್ತಿಲ ಪರಿವಾರದ ವತಿಯಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವರಿಗೆ ಸೋಮವಾರ ಪೂಜೆ ನೆರವೇರಿಸಲಾಯಿತು. ನೇತೃತ್ವ ವಹಿಸಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಗೌರವ ಸ್ವೀಕರಿಸಿ ಮಾತನಾಡಿ, ನಾವು ಒಗ್ಗಟ್ಟಿನಿಂದ ನಡೆಸುವ ಧಾರ್ಮಿಕ ಕಾರ್ಯಕ್ರಮಗಳು  ಹಿಂದೂ ಸಮಾಜಕ್ಕೆ ಶಕ್ತಿಯನ್ನು ತುಂಬುತ್ತವೆ. ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹಿಂದುಗಳಲ್ಲಿ ಜಾಗೃತಿಯೂ ಮೂಡುತ್ತದೆ. ಎಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದರು. ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕೇಂದ್ರ ಕಚೇರಿ ಅಧ್ಯಕ್ಷರು, ಪದಾಧಿಕಾರಿಗಳು, ಕಾವು ಘಟಕದ ಪದಾಧಿಕಾರಿಗಳು, ಸದಸ್ಯರು ಮೊದಲಾದವರು

ಧಾರ್ಮಿಕ ಕಾರ್ಯಕ್ರಮ ಸಮಾಜಕ್ಕೆ ಶಕ್ತಿ: ಪುತ್ತಿಲ Read More »

ಜ.14ರಂದು ಪುತ್ತೂರಿನ ತೆಂಕಿಲದಲ್ಲಿ ಅಯೋಧ್ಯೆಯ ಸಮಗ್ರ ಕಥನ `ಶ್ರೀರಾಮ ಕಥಾ ವೈಭವ” | 3 ಗಂಟೆ, 3 ವೇದಿಕೆ, 300 ವಿದ್ಯಾರ್ಥಿಗಳು `ಶ್ರೀರಾಮ ಕಥಾ ವೈಭವ’ದ ವಿಶೇಷತೆ

ಪುತ್ತೂರು: ರಾಮನ ಚರಿತ್ರೆಯನ್ನು‌ ಯುವಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಜ.14 ರಂದು ಪುತ್ತೂರಿನ ತೆಂಕಿಲದ ವಿವೇಕ ನಗರದಲ್ಲಿ ವೈಭವದ ಆಯೋಧ್ಯೆಯ ಸಮಗ್ರ ಕಥನವನ್ನು ಪ್ರಸ್ತುತಪಡಿಸುವ ‘ಶ್ರೀರಾಮ ಕಥಾ ವೈಭವ’ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿ ಗೌರವಾಧ್ಯಕ್ಷ ಬಲರಾಮ ಆಚಾರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14 ರಂದು ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ

ಜ.14ರಂದು ಪುತ್ತೂರಿನ ತೆಂಕಿಲದಲ್ಲಿ ಅಯೋಧ್ಯೆಯ ಸಮಗ್ರ ಕಥನ `ಶ್ರೀರಾಮ ಕಥಾ ವೈಭವ” | 3 ಗಂಟೆ, 3 ವೇದಿಕೆ, 300 ವಿದ್ಯಾರ್ಥಿಗಳು `ಶ್ರೀರಾಮ ಕಥಾ ವೈಭವ’ದ ವಿಶೇಷತೆ Read More »

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ!

ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ನಡೆಯನ್ನು ಟೀಕಿಸುತ್ತಲೇ ಬರುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿದೆ. ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸದ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿರುವುದಲ್ಲದೇ, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದೂ ಹೇಳಿಕೊಂಡಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ “ಬಿಜೆಪಿಗೆ ಸನ್ಮತಿ ದೇ

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ! Read More »

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ.ಗೆ ಸುಪ್ರೀಂ ಜಾಮೀನು!!

ಸುಳ್ಯ: ಪ್ರೊ. ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶೂರಿಟಿ ಕೊಟ್ಟ ಬಳಿಕ ಡಾ. ರೇಣುಕಾ ಪ್ರಸಾದ್ ಕೆ.ವಿ. ಬಿಡುಗಡೆಯಾಗಲಿದ್ದು, ಮಂಗಳವಾರ ಬಿಡುಗಡೆ ಆಗಲಿದ್ದಾರೆ ಎಂದು ಹೇಳಲಾಗಿದೆ. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಡಾ. ರೇಣುಕಾ

ಜೀವಾವಧಿ ಶಿಕ್ಷೆಗೊಳಗಾಗಿದ್ದ ಡಾ. ರೇಣುಕಾ ಪ್ರಸಾದ್ ಕೆ.ವಿ.ಗೆ ಸುಪ್ರೀಂ ಜಾಮೀನು!! Read More »

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!!

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ವರ್ಷ ಬಳಿಕ ಕೆಎಫ್ ಡಿ ಮತ್ತೆ ಬಲಿ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ

ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!! Read More »

ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!!

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಅಂಗವಾಗಿ ಕಟೌಟ್ ಕಟ್ಟಲು ಹೋಗಿದ್ದ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹನುಮಂತ ಹರಿಜನ್, ಮುರಳಿ ನಡವಿನಮನಿ  ಮತ್ತು ನವೀನ್ ಗಾಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಹುಟ್ಟುಹಬ್ಬ ಆಚರಿಸಲು ಇವರೆಲ್ಲರೂ ಯೋಜಿಸಿದ್ದರು ಎನ್ನಲಾಗಿದೆ. ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಈ ಸಂಬಂಧ

ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್! | ಮೂವರು ಅಭಿಮಾನಿಗಳು ಮೃತ್ಯು!! Read More »

ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಮರು ಆಯ್ಕೆ

ಢಾಕಾ: ಭಾನುವಾರ ಬಾಂಗ್ಲಾದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಶೇಖ್ ಹಸೀನಾ ಅವರು ಸತತ ಐದನೇ ಬಾರಿಗೆ ಪ್ರಧಾನಿಯಾಗಿ ಮರು ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಚುನಾವಣಾ ಫಲಿತಾಂಶದಲ್ಲಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್ 300 ಸಂಸದೀಯ ಸ್ಥಾನಗಳ ಪೈಕಿ 224 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಾಂಗ್ಲಾದೇಶದ ರಾಷ್ಟ್ರೀಯ ಪಕ್ಷವು ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರರು 62 ಸ್ಥಾನಗಳಲ್ಲಿ ಗೆಲುವು

ಬಾಂಗ್ಲಾ ಪ್ರಧಾನಿಯಾಗಿ ಶೇಖ್ ಹಸೀನಾ ಮರು ಆಯ್ಕೆ Read More »

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ

ಬೆಂಗಳೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಂಗಳೂರಿನ ಲಗ್ಗೆರೆ ನಮ್ಮನೆ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಭಾನುವಾರ ನಡೆಯಿತು. ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗು, ದ.ಕ. ಗೌಡ ಸಮಾಜ ಇಡೀ ಸಮುದಾಯ, ರಾಜ್ಯ ಒಂದು ಅದ್ಭುತ ಕಾರ್ಯಕ್ರಮ ಸಂಘಟನೆ ಮಾಡುತ್ತಿದೆ. ವಿಶೇಷವಾಗಿ ದ.ಕ., ಕೊಡಗು ಗೌಡ ಸಮಾಜ ಇಡೀ ಸಮುದಾಯ ರಾಜ್ಯಕ್ಕೆ, ದೇಶಕ್ಕೆ ಅಭೂತಪೂರ್ವ

ದ.ಕ., ಕೊಡಗು ಗೌಡ ಸಮಾಜ ದೇಶಕ್ಕೆ ಅಭೂತಪೂರ್ವ ಸಂಸ್ಕಾರ, ಸಂಸ್ಕೃತಿ ನೀಡಿದೆ | ಬೆಂಗಳೂರಿನಲ್ಲಿ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಡಿ.ವಿ.ಸದಾನಂದ ಗೌಡ Read More »

40 ಸಿಸಿ ಕ್ಯಾಮರಾಗಳ ಪೂಟೇಜ್ ಪರಿಶೀಲನೆ | ಸುಳ್ಯ ಬ್ಯಾನರ್ ವಿವಾದಕ್ಕೆ ತೆರೆ !

ಸುಳ್ಯ: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ, ಸುಳ್ಯ ಆಟೋ ರಿಕ್ಷಾ ಸಂಘದ ವತಿಯಿಂದ ಅಳವಡಿಸಿದ್ದ ಬ್ಯಾನರ್‌ನ ಮಧ್ಯಭಾಗವನ್ನು ಯಾರೋ ಹರಿದು ತೆಗೆದುಕೊಂಡು ಹೋಗಿರುವ ಬಗ್ಗೆ ಜ.06ರಂದು ಆಟೊ ರಿಕ್ಷಾ ಸಂಘದ ಅದ್ಯಕ್ಷರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕೃತ್ಯವೆಸಗಿದವರ ಪತ್ತೆಗಾಗಿ ಪೋಲೀಸರು ಸುಳ್ಯದಲ್ಲಿರುವ ಸುಮಾರು 40 ಸಿಸಿ ಕ್ಯಾಮಾರಗಳ ಪೂಟೇಜ್‌ಗಳನ್ನು ಪರಿಶೀಲನೆ ಮಾಡಿದ್ದರು. ಜ.5 ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿರುವ ಅಪರಿಚಿತ ವಯಸ್ಸಾದ ವ್ಯಕ್ತಿಯೋರ್ವ ಬ್ಯಾನರ್ ಹರಿದು ತನ್ನ

40 ಸಿಸಿ ಕ್ಯಾಮರಾಗಳ ಪೂಟೇಜ್ ಪರಿಶೀಲನೆ | ಸುಳ್ಯ ಬ್ಯಾನರ್ ವಿವಾದಕ್ಕೆ ತೆರೆ ! Read More »

error: Content is protected !!
Scroll to Top