ಸುದ್ದಿ

ಮನೆಯಲ್ಲಿದ್ದ ಕಾರು ಹಿಂದಕ್ಕೆ ಚಲಿಸಿ ವ್ಯಕ್ತಿಯೋರ್ವ ಮೃತ್ಯು

ಸುಳ್ಯ : ಅಂಗಳದಲ್ಲಿ ನಿಂತಿದ್ದ ಕಾರು ಹಿಂದಕ್ಕೆ ಚಲಿಸಿದಾಗ ವ್ಯಕ್ತಿಯೋರ್ವರು ಮೇಲೇ ಹರಿದುಹೋಗಿರುವ ಪರಿಣಾಮ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿವೃತ್ತ ರೇಂಜರ್ ಜೋಸೆಫ್ (74) ಎಂದು ಪತ್ತೆಹಚ್ಚಲಾಗಿದೆ. ಸುಳ್ಯ ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ಜೋಸೇಫ್ ಅವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದೆ. ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಅರಣ್ಯ ಇಲಾಖೆಯಲ್ಲಿ […]

ಮನೆಯಲ್ಲಿದ್ದ ಕಾರು ಹಿಂದಕ್ಕೆ ಚಲಿಸಿ ವ್ಯಕ್ತಿಯೋರ್ವ ಮೃತ್ಯು Read More »

ಮಹಾಭಾರತ ಸರಣಿಯಲ್ಲಿ ಗಾಂಧಾರಿ  ವಿವಾಹ ತಾಳಮದ್ದಳೆ

ಉಪ್ಪಿನಂಗಡಿ  : ಉಪ್ಪಿನಂಗಡಿ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 69ನೇ ಕಾರ್ಯಕ್ರಮವಾಗಿ ಗಾಂಧಾರಿ ವಿವಾಹ  ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ,ಪ್ರಕಾಶ ಅಭ್ಯಂಕರ ಬೆಳ್ತಂಗಡಿ,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ  ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ, ಅರ್ಜುನ ಅಭ್ಯಂಕರ ಬೆಳ್ತಂಗಡಿ,  ಅರ್ಥಧಾರಿಗಳಾಗಿ ಸತೀಶ ಶಿರ್ಲಾಲು (ದ್ವಾಪರ), ರವೀಂದ್ರದರ್ಬೆ ( ಕಲಿ)

ಮಹಾಭಾರತ ಸರಣಿಯಲ್ಲಿ ಗಾಂಧಾರಿ  ವಿವಾಹ ತಾಳಮದ್ದಳೆ Read More »

ವೃದ್ಧ ತಂದೆ ತಾಯಿಯನ್ನು ಉಪೇಕ್ಷಿಸಿದರೆ ಮಕ್ಕಳಿಗೆ ಸಿಗಲ್ಲ ಆಸ್ತಿ

ಪೋಷಕರಿಂದ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ಉಯಿಲು ರದ್ದುಪಡಿಸಲು ಆದೇಶ ಬೆಂಗಳೂರು : ವಯಸ್ಸಾದ ತಂದೆ ತಾಯಿಯನ್ನು ಉಪೇಕ್ಷಿಸಿದರೆ ಅವರ ಆಸ್ತಿ ಮಕ್ಕಳಿಗೆ ಸಿಗಲ್ಲ. ಹೀಗೊಂದು ಆದೇಶವನ್ನು ಕರ್ನಾಟಕ ಸರಕಾರ ನೀಡಿದೆ. ವಯಸ್ಸಾದ ತಂದೆ ತಾಯಿಯನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ತಂದು ದಾಖಲಿಸಿ ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕರಾರ ಈ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲೆಯೊಂದರಲ್ಲೇ ಇಂಥ 150ಕ್ಕೂ ಹೆಚ್ಚು ಪ್ರಕರಣಗಳು ಇತ್ತೀಚೆಗೆ ಪತ್ತೆಯಾಗಿದ್ದವು. ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ. ಭಾರತೀಯ

ವೃದ್ಧ ತಂದೆ ತಾಯಿಯನ್ನು ಉಪೇಕ್ಷಿಸಿದರೆ ಮಕ್ಕಳಿಗೆ ಸಿಗಲ್ಲ ಆಸ್ತಿ Read More »

ನಾಳೆಯೇ ಸುನೀತಾ ವಿಲ್ಲಿಯಮ್ಸ್‌ ಭೂಮಿಗೆ ಮರಳುವ ಸಾಧ್ಯತೆ

9 ತಿಂಗಳ ಅಂತರಿಕ್ಷ ವಾಸಕ್ಕೆ ಕೊನೆಗೂ ಮುಕ್ತಿ ಸನ್ನಿಹಿತ ನ್ಯೂಯಾರ್ಕ್‌ : ಒಂಬತ್ತು ತಿಂಗಳಿಂದ ಅಂತರಿಕ್ಷದಲ್ಲಿ ಸಿಕ್ಕಿಬಿದ್ದಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲ್ಲಿಯಮ್ಸ್‌ ಅವರನ್ನು ಭೂಮಿಗೆ ಕರೆತರಲು ಕ್ಷಣಗಣನೆ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಂಗಳವಾರ ಸಂಜೆಗಾಗುವಾಗ ಸುನೀತಾ ವಿಲ್ಲಿಯಮ್ಸ್‌ ಇರುವ ಗಗನನೌಕೆ ಭೂಮಿ ಸ್ಪರ್ಶ ಮಾಡಲಿದೆ. ಆ ಮೂಲಕ ಸುದೀರ್ಘ 9 ತಿಂಗಳ ಅಂತರಿಕ್ಷ ವಾಸ ಅಂತ್ಯಗೊಳ್ಳಲಿದೆ. ಆರಂಭದಲ್ಲಿ ಬುಧವಾರ ಅಥವಾ ಗುರುವಾರ ಇಬ್ಬರು ಗಗನಯಾತ್ರಿಗಳನ್ನು ವಾಪಸ್‌ ಕರೆತರಲು ಯೋಜನೆ ರಚಿಸಲಾಗಿತ್ತು. ಆದರೆ ಈ

ನಾಳೆಯೇ ಸುನೀತಾ ವಿಲ್ಲಿಯಮ್ಸ್‌ ಭೂಮಿಗೆ ಮರಳುವ ಸಾಧ್ಯತೆ Read More »

ಒಂದು ವರ್ಷದಲ್ಲಿ 59 ಸಲ ಡ್ರಗ್ಸ್‌ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು

ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ ಬೃಹತ್‌ ಡ್ರಗ್ಸ್‌ ಜಾಲದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿರುವ ರಾಜ್ಯದ ಅತಿದೊಡ್ಡ ಡ್ರಗ್ಸ್ ಜಾಲದ ಹಲವು ಮಾಹಿತಿಗಳು ಬೆಚ್ಚಿಬೀಳಿಸುವಂತಿದೆ. ದಾಖಲೆಯ 75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜೊತೆ ಸಿಕ್ಕಿಬಿದ್ದಿರುವ ಇಬ್ಬರು ವಿದೇಶಿ ಮಹಿಳೆಯರು ಈ ಮೊದಲು ಒಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 59 ಸಲ ಡ್ರಗ್ಸ್‌ ಸಾಗಿಸಿದ್ದರೂ ಸಿಕ್ಕಿಬೀಳದೆ ಪಾರಾಗಿದ್ದರು. ಆದರೆ ಅದು ಹೇಗೆ ಸಾಧ್ಯವಾಯಿತು ಎನ್ನುವ ಪ್ರಶ್ನೆಯೊಂದು ಕಾಡುತ್ತಿದೆ. ರನ್ಯಾ ರಾವ್‌

ಒಂದು ವರ್ಷದಲ್ಲಿ 59 ಸಲ ಡ್ರಗ್ಸ್‌ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು Read More »

ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ 415 ಕೋ. ರೂ. ದಂಡ!

ಸ್ಟಾರ್‌ಬಕ್ಸ್‌ ಕಂಪನಿ ವಿರುದ್ಧ ತೀರ್ಪು ನೀಡಿದ ನ್ಯಾಯಾಲಯ ಕ್ಯಾಲಿಫೋರ್ನಿಯಾ : ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ ಸ್ಟಾರ್‌ಬಕ್ಸ್‌ ಭಾರಿ ಬೆಲೆಯನ್ನೇ ತೆರಬೇಕಾಗಿ ಬಂದಿದೆ. ಸ್ಟಾರ್‌ಬಕ್ಸ್‌ನ ಬಿಸಿ ಕಾಫಿ ತೊಡೆ ಭಾಗದ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಗೆ 50 ಮಿಲಿಯನ್‌ ಡಾಲರ್‌ ಅಂದರೆ ಸುಮಾರು 415 ಕೋಟಿ ರೂ. ಪರಿಹಾರ ನೀಡಬೇಕೆಂದು ಸ್ಟಾರ್‌ಬಕ್ಸ್‌ಗೆ ಕೋರ್ಟ್ ಆದೇಶ ನೀಡಿದೆ. ಕಾಫಿ ಮುಚ್ಚಳವನ್ನು ಸರಿಯಾಗಿ ಮುಚ್ಚದೆ ಕೊಟ್ಟಿದ್ದರಿಂದ ಬಿಸಿ ಕಾಫಿ ತೊಡೆ ಮೇಲೆ ಬಿದ್ದಿದ್ದು, ಪರಿಣಾಮ ಆ ವ್ಯಕ್ತಿಯ ಜನನಾಂಗಕ್ಕೂ ಗಾಯಗಳಾಗಿದ್ದವು.

ಕಾಫಿ ಮೈಮೇಲೆ ಚೆಲ್ಲಿದ್ದಕ್ಕೆ 415 ಕೋ. ರೂ. ದಂಡ! Read More »

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು

ಯತ್ನಾಳ್‌ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್‌ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »

ಕಿನ್ನಿಗೋಳಿಯ ಉಳವಾಡಿಯಲ್ಲಿ ಚಿರತೆಯ ಶವ ಪತ್ತೆ

ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ (ಮಾ.೧೬) ಕಿನ್ನಿಗೋಳಿ ಸಮೀಪದ ಉಳವಾಡಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ ಹಲವು ಬಾರಿ ಚಿರತೆ ಕಂಡು ಬಂದಿದ್ದು, ಸಾಕು ನಾಯಿಗಳು ಚಿರತೆಗೆ ಆಹಾರವಾಗಿವೆ ಎನ್ನಲಾಗಿದೆ. ಚಿರತೆ ಓಡಾಡುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಕೆಲ ತಿಂಗಳ ಹಿಂದೆ ಮೂಲ್ಕಿಯಲ್ಲಿ ಮನೆಯೊಳಗೆ ಚಿರತೆ ನುಗ್ಗಿದೆ ಎಂದು ತಿಳಿದು ಬಂದಿದೆ.

ಕಿನ್ನಿಗೋಳಿಯ ಉಳವಾಡಿಯಲ್ಲಿ ಚಿರತೆಯ ಶವ ಪತ್ತೆ Read More »

ಕೆರೆಗೆ ಸ್ನಾನಕ್ಕೆಂದು ತೆರಳಿದ ಬಾಲಕ ಮೃತ್ಯು

ಗದಗ: ಹೋಳಿ ಹಬ್ಬದ ಸಂದರ್ಭದಲ್ಲಿ ಗ್ರಾಮದ ತುಂಬೆಲ್ಲಾ ರಂಗುರಂಗಿನ ಹೋಳಿ ಆಟವಾಡಿ ಕೆರೆಯಲ್ಲಿ ಸ್ನಾನಕ್ಕೆ ಹೋದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ದೇವೇಂದ್ರ ರಾಚನಗೌಡ (16) ಎಂದು ಪತ್ತೆ ಹಚ್ಚಲಾಗಿದೆ. ದೇವೇಂದ್ರ ಬೆಳಗ್ಗೆಯಿಂದ ಸ್ನೇಹಿತರೊಂದಿಗೆ ಊರಲ್ಲಿ ಬಣ್ಣದ ಹೋಳಿ ಆಟವಾಡಿದ್ದಾನೆ. ನಂತರ ನಾಲ್ಕು ಜನ ಸ್ನೇಹಿತರು ಒಟ್ಟಾಗಿ ಕೆರೆಗೆ ಈಜಲು ಹೋಗಿದ್ದರು.  ಮೂರು ಜನ ದಡದಲ್ಲಿ ಸ್ನಾನ ಮಾಡಿದ್ದು,

ಕೆರೆಗೆ ಸ್ನಾನಕ್ಕೆಂದು ತೆರಳಿದ ಬಾಲಕ ಮೃತ್ಯು Read More »

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025

ಪುತ್ತೂರು:  ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ  ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು  IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.  2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ 2 ಸಲ ನ್ಯಾಷನಲ್ ಅವಾರ್ಡ್, 2023ರಲ್ಲಿ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿ, 2023ರಲ್ಲಿ ಕರ್ನಾಟಕ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025 Read More »

error: Content is protected !!
Scroll to Top