ಸುದ್ದಿ

ಬಸ್‌-ಟೆಂಪೋ ಟ್ರಾವೆಲರ್‌ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ

ಸುಬ್ರಹ್ಮಣ್ಯ ದೇವಸ್ಥಾನ ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲರ್‌ ಸುಳ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಎಂಬವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ 14 […]

ಬಸ್‌-ಟೆಂಪೋ ಟ್ರಾವೆಲರ್‌ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ Read More »

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು

ಡಿಟೆಕ್ಟ್‌-ಡಿಲೀಟ್‌-ಡಿಪೊರ್ಟ್‌ ನೀತಿ ಘೋಷಣೆಯಾದ ಬಳಿಕ ತಾಯ್ನಾಡಿಗೆ ಧಾವಿಸುತ್ತಿರುವ ಅಕ್ರಮ ವಲಸಿಗರು ಕೋಲ್ಕತ್ತಾ: ಬಿಜೆಪಿ ಸರ್ಕಾರದ ನೂತನ “ಪತ್ತೆ ಹಚ್ಚಿ, ಪಟ್ಟಿಯಿಂದ ಹೆಸರು ಅಳಿಸಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಹಲವು ಗಡಿ ಪ್ರದೇಶಗಳಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಎನ್ನಲಾದ ಅಪಾರ ಸಂಖ್ಯೆಯ ಜನರು ಲಗ್ಗೆ ಇಡುತ್ತಿದ್ದಾರೆ. ಉತ್ತರ 24 ಪರಗಣ ಮತ್ತು ಮಾಲ್ಡಾ ಜಿಲ್ಲೆಗಲ್ಲಿ ಕಂಡುಬರುತ್ತಿರುವ ದೃಶ್ಯಗಳು, ನುಸುಳುಕೋರ ವಿರೋಧಿ ಅಭಿಯಾನ ಕೇವಲ ರಾಜಕೀಯ ಭಾಷಣಕ್ಕೆ ಸೀಮಿತವಾಗದೆ

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು Read More »

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ?

ಕೊನೆಗೂ ಪಟ್ಟ ಬಿಡಲು ಸಿದ್ದರಾಮಯ್ಯ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್‌ ಬೆಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ ತಲುಪಿದ್ದು, ಕೊನೆಗೂ ಕಾಂಗ್ರೆಸ್‌ ಹೈಕಮಾಂಡ್‌ ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಗುರುವಾರ ರಾಜೀನಾಮೆ ಬಳಿಕ

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ? Read More »

ಮರದ ಗೆಲ್ಲು ಕಡಿಯುವ ‌ವಿಷಯಕ್ಕೆ ಗಲಾಟೆ: ದೂರು ದಾಖಲು

ಬಂಟ್ವಾಳ: ಮರದ ಗೆಲ್ಲು ಕಡಿಯುವ ‌ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ದೂರು ದಾಖಲಾಗಿರುವ ಘಟನೆ ಸಮೀಪ ನಡು ಗ್ರಾಮದಲ್ಲಿ ನಡೆದಿದೆ. ಸುರೇಶ್ ರೈ ಎಂಬವರ ತಾಯಿಯ ಮನೆಗೆ ಸೋಮನಾಥ ಭಂಡಾರಿ ಎಂಬವರು ನೋಡಿಕೊಳ್ಳುತ್ತಿದ್ದ ಮರದ ಕೊಂಬೆ ತಾಗುತ್ತಿತ್ತು. ಇದನ್ನು ಕಡಿಯುವಂತೆ ಹಲವು ಬಾರಿ ಸೂಚಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಸುರೇಶ್ ಅವರೇ ಕಡಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಸೋಮನಾಥ್ ಅವರು ಸ್ಥಳಕ್ಕೆ ಬಂದು ಸುರೇಶ್ ಅವರಿಗೆ ಕಲ್ಲು, ತೆಂಗಿನಕಾಯಿ‌ಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ.ಹಾಗೆಯೇ ಮದ್ಯೆ

ಮರದ ಗೆಲ್ಲು ಕಡಿಯುವ ‌ವಿಷಯಕ್ಕೆ ಗಲಾಟೆ: ದೂರು ದಾಖಲು Read More »

ದೈವಕ್ಕೆ ಅಪಮಾನ: ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚಿಸಿದ ರಣವೀರ್ ಸಿಂಗ್

ಬೆಂಗಳೂರು: ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ಚಿತ್ರದಲ್ಲಿ ಬರುವ ದೈವದ ಪಾತ್ರಕ್ಕೆ ಅವಮಾನ ಮಾಡಿದ್ದು, ಆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚನೆ ಮಾಡಿದ್ದಾರೆ. ಯಾರಿಗೂ ಮಾಹಿತಿ ಸಿಗದ ಹಾಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ, ಪೂಜೆ ಸಲ್ಲಿಸಿ, ಕ್ಷಮೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲೇ ರಣವೀರ್ ತಮ್ಮ ಎಕ್ಸ್ ಖಾತೆಯ ಮೂಲಕ ದೈವ ಭಕ್ತರಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡಿ

ದೈವಕ್ಕೆ ಅಪಮಾನ: ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚಿಸಿದ ರಣವೀರ್ ಸಿಂಗ್ Read More »

ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ

ಬಳ್ಳಾರಿ: ಕಸಾಯಿಖಾನೆಗೆ ತೆಗೆದುಕೊಂಡು ಹೋಗುವುದಕ್ಕಾಗಿ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳನ್ನು ಹಳೇ ಬೈಪಾಸ್ ಬಳಿಯ ಗೋಲಬಡಿ ‌ದಾರಿಯಲ್ಲಿ ರಕ್ಷಣೆ ಮಾಡಲಾಗಿದೆ. ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯನ್ನು ಆಧರಿಸಿ ಕೌಲಬಜಾರ್ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಾತಕ್ಕಾಗಿ ಇಷ್ಟೊಂದು ಗೋವುಗಳನ್ನು ಕೊಟ್ಟಿಗೆಯಲ್ಲಿ ಇರಿಸಲಾಗಿದೆ ಎನ್ನುವ ಪ್ರಶ್ನೆಗೆ ಸೂಕ್ತ ಉತ್ತರ ಸಿಕ್ಕಿಲ್ಲ ಎಂದು ವರದಿಯಾಗಿದೆ. ಸದ್ಯ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿದ್ದ ಎಲ್ಲಾ ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು, ಅವುಗಳನ್ನು ಗೋಶಾಲೆೆಗೆ ರವಾನೆ ಮಾಡುವುದಾಗಿ ಪೊಲೀಸರು

ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ Read More »

ಆಟೋ – ಬೈಕ್ ಅಪಘಾತ: ಆರು ತಿಂಗಳ ಮಗು ಸೇರಿ ಮೂವರು ಸಾವು

ಬೆಳಗಾವಿ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಬೆಳಗಾವಿ ಜಿಲ್ಲೆಯ ರಾಯಭಾಗದ ರೈಲು ನಿಲ್ದಾಣದ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಒಂದೇ ಕುಟುಂಬದ ಮೂರು ಜನರು ಮೃತಪಟ್ಟ ಘಟನೆ ನಡೆದಿದೆ. ಅಪ್ಪ, ಅಮ್ಮನ ಜೊತೆಗೆ ಆರು ತಿಂಗಳ ಮಗು ಮೃತಪಟ್ಟಿರುವುದಾಗಿದೆ. ಬೊಮ್ಮನಾಳ‌ ನಿವಾಸಿಗಳಾದ ಮಹಾಂತೇಶ್ ಮಾನೆ, ಸಾಕ್ಷಿ ಮಾನೆ ಹಾಗೂ ಇನ್ನೂ ಹೆಸರು ಸಹ ಇರಿಸದ ಅವರ ಆರು ತಿಂಗಳ ಮಗು ಈ ದುರ್ಘಟನೆಯಲ್ಲಿ ಬಲಿಯಾದ ದುರ್ದೈವಿಗಳು. ದಂಪತಿ ಮಗುವಿನ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ

ಆಟೋ – ಬೈಕ್ ಅಪಘಾತ: ಆರು ತಿಂಗಳ ಮಗು ಸೇರಿ ಮೂವರು ಸಾವು Read More »

ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಪಾಗಲ್ ಪ್ರೇಮಿ

ಕೊಯಮತ್ತೂರು: ತನ್ನ ಪ್ರೀತಿಯನ್ನು ಯುವತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆಕೆಯ ಮನೆಗೆ ಪಾಗಲ್ ಪ್ರೇಮಿ ಪೆಟ್ರೋಲ್ ಬಾಂಬ್ ಎಸೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಯುವಕ ಪೆಟ್ರೋಲ್ ಬಾಂಬ್ ಎಸೆದ ದೃಶ್ಯಗಳು ಸಿಸಿ‌ಟಿವಿ‌ಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ‌ಸಾಕಷ್ಟು ವೈರಲ್ ಆಗಿದೆ. ತೊಂಡಾಮುತ್ತೂರು ಎಂಬಲ್ಲಿ ಯುವಕ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಆತನ ಪ್ರೀತಿಯನ್ನು ಯುವತಿ ಒಪ್ಪಿಕೊಂಡಿಲ್ಲ. ಇದೇ ಸಿಟ್ಟಿನಲ್ಲಿ ಯುವತಿಯ ಮನೆಗೆ ಆತ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಬಾಂಬ್

ಪ್ರೀತಿ ನಿರಾಕರಿಸಿದ ಯುವತಿಯ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಪಾಗಲ್ ಪ್ರೇಮಿ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಮಂಗಳೂರು: ಕಾರ್ ಮತ್ತು ಬೈಕ್ ನಡುವೆ ಸೋಮಂತಡ್ಕ‌ ಅಗರಿ ‌ಕ್ರಾಸ್ ಸಮೀಪ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ (36) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿಯ ಕಳೆಂಜ ನಿವಾಸಿಯಾದ ಇವರು ಉಜಿರೆಯಲ್ಲಿ ತಮ್ಮದೇ ಸ್ಟುಡಿಯೋ ನಡೆಸುತ್ತಿದ್ದರು. ಮೇ 24 ರಂದು ಉಜಿರೆಯಿಂದ ಕಕ್ಕಿಂಜೆಗೆ ಬೈಕಿನಲ್ಲಿ ತೆರಳುವ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು, ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಘಟನೆಗೆ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು Read More »

ಪುತ್ತೂರು : ವಿದ್ಯುತ್‌ ಶಾಕ್‌ ಹೊಡೆದು ಯುವಕ ಮೃತ್ಯು

ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ಮೇ 24ರಂದು ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ. ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ನಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್‌ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ.

ಪುತ್ತೂರು : ವಿದ್ಯುತ್‌ ಶಾಕ್‌ ಹೊಡೆದು ಯುವಕ ಮೃತ್ಯು Read More »

error: Content is protected !!
Scroll to Top