ಸುದ್ದಿ

ಗೋಕರ್ಣ ಕರಾವಳಿ ತೀರದಲ್ಲಿರುವ 40ಕ್ಕೂ ಅಧಿಕ ರೆಸಾರ್ಟ್‌ಗಳು ತೆರವು

ನಿಯಮ ಉಲ್ಲಂಘಿಸಿ ನಿರ್ಮಿಸಿದ ರೆಸಾರ್ಟ್‌ಗಳ ವಿರುದ್ಧ ಕಾರ್ಯಾಚರಣೆ ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಸೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್‌ಗಳ […]

ಗೋಕರ್ಣ ಕರಾವಳಿ ತೀರದಲ್ಲಿರುವ 40ಕ್ಕೂ ಅಧಿಕ ರೆಸಾರ್ಟ್‌ಗಳು ತೆರವು Read More »

ಪತ್ನಿ ಮತ್ತು ಆಕೆಯ ಹೆತ್ತವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ: ಆರೋಪಿ ಬಂಧನ

ಬೆಂಗಳೂರು: ಬೈಕ್ ವಿಷಯಕ್ಕೆ ಪತ್ನಿ, ಅತ್ತೆ ಮತ್ತು ಮಾವನನ್ನು ಪೆಟ್ರೋಲ್ ಹಾಕಿ, ಬೆಂಕಿ ಹಚ್ಚಿ ಕೊಲೆ ಮಾಡಲು ಆಟೋ ಚಾಲಕನೊಬ್ಬ ಯತ್ನಿಸಿದ ಘಟನೆ ಪೀಣ್ಯ ದಾಸರಹಳ್ಳಿಯಲ್ಲಿ ‌ನಡೆದಿದ್ದು, ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮಹಾಲಕ್ಷ್ಮೀ ಲೇ‌ಔಟ್‌ನ ಪಾಂಡುರಂಗ(32) ಎಂದು ಗುರುತಿಸಲಾಗಿದೆ. ಪತ್ನಿ ಸುಮಲತಾ, ಆಕೆಯ ತಂದೆ ಶ್ರೀರಾಮ, ತಾಯಿ ಮಂಜುಳಾ ಅವರ ಮೇಲೆ ಆರೋಪಿ ಪಾಂಡುರಂಗ ಕ್ರೌರ್ಯ ಮೆರೆದಿರುವುದಾಗಿದೆ. ಗಾಯಾಳುಗಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದ ಕಾರಣಕ್ಕೆ ಕಳೆದ ಕೆಲ ಸಮಯದಿಂದ

ಪತ್ನಿ ಮತ್ತು ಆಕೆಯ ಹೆತ್ತವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ: ಆರೋಪಿ ಬಂಧನ Read More »

ಸಹೋದರಿಯ ಸಾವಿನ ದುಃಖದ ನಡುವೆ ಆಡಿ ಭಾರತವನ್ನು ಗೆಲ್ಲಿಸಿದ ಇಶಾನ್‌ ಕಿಶನ್‌

ಅಕ್ಕ, ಬಾವ ಅಪಘಾತಕ್ಕೆ ಬಲಿಯಾಗಿದ್ದರೂ ನೋವು ನುಂಗಿ ಅಮೋಘವಾಗಿ ಆಡಿದ ಇಶಾನ್‌ ಕಿಶನ್‌ ಅಹ್ಮದಾಬಾದ್‌: ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವಿರುದ್ಧ ಟೀಮ್ ಇಂಡಿಯಾ 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಆದರೆ ಈ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಆಟಗಾರ ಇಶಾನ್‌ ಕಿಶನ್‌ ಸಹೋದರಿಯ ಸಾವಿನ ದುಃಖದಲ್ಲೇ ಆಡಿದ್ದರು ಎಂಬ ವಿಚಾರ ಈಗ

ಸಹೋದರಿಯ ಸಾವಿನ ದುಃಖದ ನಡುವೆ ಆಡಿ ಭಾರತವನ್ನು ಗೆಲ್ಲಿಸಿದ ಇಶಾನ್‌ ಕಿಶನ್‌ Read More »

ಟಿ20 ಚಾಂಪಿಯನ್‌ ಭಾರತ ತಂಡಕ್ಕೆ ಮೋದಿ ಅಭಿನಂದನೆ

ಸೂರ್ಯಕುಮಾರ್‌ ಪಡೆಗೆ ಬರೋಬ್ಬರಿ 27 ಕೋ. ರೂ. ಬಹುಮಾನ ಮೊತ್ತ ನವದೆಹಲಿ: ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯ ಮುಗಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಗೆಲುವು ಅಸಾಧಾರಣ ಕೌಶಲ, ದೃಢ ನಿಶ್ಚಯ ಮತ್ತು ಟೀಂ ವರ್ಕ್ ಅನ್ನು ಪ್ರತಿಬಿಂಬಿಸುತ್ತದೆ. ಈ ಗೆಲುವಿನಿಂದ ಪ್ರತಿಯೊಬ್ಬ ಭಾರತೀಯನ ಹೃದಯ ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಶ್ಲಾಘಿಸಿದ್ದಾರೆ. ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ

ಟಿ20 ಚಾಂಪಿಯನ್‌ ಭಾರತ ತಂಡಕ್ಕೆ ಮೋದಿ ಅಭಿನಂದನೆ Read More »

ಮೊಜ್ತಬಾ ಖಮೇನಿ ಸರ್ವೋಚ್ಚ ನಾಯಕ : ಇರಾನ್‌ ಅಧಿಕೃತ ಘೋಷಣೆ

ಅಮೆರಿಕ-ಇಸ್ರೇಲ್‌ ಬೆದರಿಕೆ ನಡುವೆ ಸರ್ವೋಚ್ಚ ನಾಯಕನ ಆಯ್ಕೆ ಪ್ರಕಟಿಸಿದ ಇರಾನ್‌ ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್‌ ದಾಳಿಯಲ್ಲಿ ಹತ್ಯೆಯಾದ ಇರಾನ್‌ನ ಸರ್ವೋಚ್ಚ ನಾಯಕ ಅಯತೋಲ್ಲಾ ಖಮೇ ಸ್ಥಾನಕ್ಕೆ ಅವರ ಮಗ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಇರಾನ್‌ ಅಧಿಕೃತವಾಗಿ ಘೊಷಿಸಿದೆ. ಸರ್ವೋಚ್ಚ ನಾಯಕನ ಹುದ್ದೆ ಇಸ್ಲಾಮಿಕ್ ಗಣರಾಜ್ಯದಲ್ಲಿ ನಾಯಕನಿಗೆ ಎಲ್ಲ ವಿಷಯಗಳಲ್ಲೂ ನಿರ್ಧಾರ ಕೈಗೊಳ್ಳುವ ಪರಮಾಧಿಕಾರ ನೀಡುತ್ತದೆ. ಆದರೆ ಇರಾನ್‌ ಆಯ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಗುರಿಯಾಗುವ ಸಾಧ್ಯತೆ ಇದೆ.

ಮೊಜ್ತಬಾ ಖಮೇನಿ ಸರ್ವೋಚ್ಚ ನಾಯಕ : ಇರಾನ್‌ ಅಧಿಕೃತ ಘೋಷಣೆ Read More »

ಉಪ್ಪಿನಂಗಡಿ : ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸಾವು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಪದ್ಮುಂಜ ಸಹಕಾರಿ ಸಂಘದ ಹಿರಿಯ ಉದ್ಯೋಗಿ ಚಿದಾನಂದ ಗೌಡ (56) ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದವರು. ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡ ಕಾರ್ಯನಿಮಿತ್ತ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ

ಉಪ್ಪಿನಂಗಡಿ : ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸಾವು Read More »

ಟೀಮ್‌ ಇಂಡಿಯಾ ಟಿ20 ಕ್ರಿಕೆಟ್‌ ಸಾರ್ವಭೌಮ

ಸತತ ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತ 96 ರನ್‌ಗಳ ಅಮೋಘ ಗೆಲುವಿನೊಂದಿಗೆ ಹಲವು ವಿಶ್ವ ದಾಖಲೆ ಬರೆದ ಸೂರ್ಯ ಪಡೆ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೇಂಡ್‌ ವಿರುದ್ಧ ಅಮೋಘ 96 ರನ್‌ಗಳ ಗೆಲುವು ದಾಖಲಿಸುವ ಮೂಲಕ ಭಾರತ ಹಲವು ವಿಶ್ವದಾಖಲೆಗಳನ್ನು ಬರೆದಿದೆ. ಸೂರ್ಯಕುಮಾರ್‌ ಯಾದವ್‌ ನೇತೃತ್ವದ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಗೆದ್ದ ತಂಡ ಎಂಬ ಅಪೂರ್ವ ದಾಖಲೆ ಭಾರತದ ಪಾಲಾಗಿದೆ.

ಟೀಮ್‌ ಇಂಡಿಯಾ ಟಿ20 ಕ್ರಿಕೆಟ್‌ ಸಾರ್ವಭೌಮ Read More »

ಎರಡನೇ ವಾರ ಪ್ರವೇಶಿಸಿದ ಯುದ್ಧ : ಇರಾನ್‌ ಪ್ರಬಲ ತಿರುಗೇಟು

ಕ್ಷಮೆ ಯಾಚಿಸದ ಬಳಿಕವೂ ಗಲ್ಫ್‌ ದೇಶಗಳ ಮೇಲೆ ಇರಾನ್‌ ದಾಳಿ ಟೆಹ್ರಾನ್‌ : ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇರಾನ್ ಹಾಗೂ ಮಧ್ಯಪ್ರಾಚ್ಯದ ಇತರ ದೇಶಗಳಲ್ಲಿ ದಾಳಿಗಳು ಮುಂದುವರಿದಿವೆ. ಇಸ್ರೇಲ್ ಸೇನೆ ಲೆಬನಾನ್ ಮೇಲೂ ಹೆಚ್ಚಿನ ದಾಳಿಗಳನ್ನು ನಡೆಸುತ್ತಿದೆ. ಇಸ್ರೇಲ್‌-ಅಮೆರಿಕ ಜಂಟಿ ಕಾರ್ಯಾಚರಣೆಗೆ ಇರಾನ್‌ ಅಷ್ಟೇ ಪ್ರಬಲವಾಗಿ ತಿರುಗೇಟು ನೀಡುತ್ತಿದ್ದು, ಸೋಲು – ಗೆಲುವಿನ ನಿರ್ಧಾರವಾಗುತ್ತಿಲ್ಲ. ಎರಡೂ ಕಡೆಯಿಂದಲೂ ಏಟು-ಎದಿರೇಟು ಬೀಳುತ್ತಿದೆ. ಸದ್ಯಕ್ಕೆ ಈ ಯುದ್ಧ ನಿಲ್ಲುವ ಅಧ್ಯತೆ ಗೋಚರಿಸುತ್ತಿಲ್ಲ

ಎರಡನೇ ವಾರ ಪ್ರವೇಶಿಸಿದ ಯುದ್ಧ : ಇರಾನ್‌ ಪ್ರಬಲ ತಿರುಗೇಟು Read More »

ಅಪಘಾತ : ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಬೆಂಗಳೂರು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಇಂದು ನಸುಕಿನ ಹೊತ್ತು ನಡೆದಿದೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬವನಿಗೆ ಗಂಭೀರ ಗಾಯವಾಗಿದ್ದು, ಆತನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗ್ಗಿನ ಜಾವ 3

ಅಪಘಾತ : ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು Read More »

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ

ಏಳು ವಿದ್ಯಾರ್ಥಿಗಳು, ವಾರ್ಡನ್‌ಗೆ ಗಂಭೀರ ಗಾಯ ; ರಾಜ್ಯವನ್ನು ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆ ಬಳ್ಳಾರಿ: ಒಂಬತ್ತನೇ ತರಗತಿ ವಿದ್ಯಾರ್ಥಿ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ತನ್ನ ಸಹಪಾಠಿಯನ್ನು ಕೊಂದು, ಇತರ ಏಳು ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್‌ ವಾರ್ಡನ್‌ನನ್ನು ಗಾಯಗೊಳಿಸಿದ ಬೆಚ್ಚಿಬೀಳಿಸುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಗರದ ಹೊರವಲಯದ ಖಾಸಗಿ ಗುರುಕುಲ ಶಾಲೆಯ ಹಾಸ್ಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ

9ನೇ ತರಗತಿ ವಿದ್ಯಾರ್ಥಿಯ ಕ್ರೌರ್ಯ : ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಸಹಪಾಠಿಯ ಕೊಲೆ Read More »

error: Content is protected !!
Scroll to Top