ಸುದ್ದಿ

ಮೂವಪ್ಪೆಯಲ್ಲಿ ಹಾಲು ಸಂಗ್ರಹಣಾ ಉಪಕೇಂದ್ರ ಆರಂಭ

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಂಘದ ಹಾಲು ಸಂಗ್ರಹಣಾ ಉಪಕೇಂದ್ರವನ್ನು ಕೊಡಿಯಾಲದ ಮೂವಪ್ಪೆ ಶಾಲಾ ಬಳಿ ಉದ್ಘಾಟನೆಗೊಂಡಿತು. ಕೆ.ಎಂ.ಎಫ್.ನ ಡಿಎಂ ಸತೀಶ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ವಿಸ್ತರಣಾಧಿಕಾರಿ ನಾಗೇಶ್, ಕಾಣಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ನಿರ್ದೇಶಕರಾದ ಮುರಳೀಧರ ಪುಣ್ಚತ್ತಾರು, ಭರತ್ ಅಗಳಿ, ಸದಾನಂದ ನಾವೂರು, ರಾಜೇಶ್ ಮೀಜೆ, ಸೌಮ್ಯ ಪೈಕ, ಹೇಮಾವತಿ ಮುಗರಂಜ, ಮಾಜಿ ನಿರ್ದೇಶಕರಾದ ಜಿನ್ನಪ್ಪ ಗೌಡ ಕಲ್ಪಡ, ಕಾಣಿಯೂರು ಗ್ರಾ.ಪಂ.  ಸದಸ್ಯ ಪ್ರವೀಣ್ ರೈ ಕುಮೇರು, ಕಲ್ಪಡ ಶ್ರೀ […]

ಮೂವಪ್ಪೆಯಲ್ಲಿ ಹಾಲು ಸಂಗ್ರಹಣಾ ಉಪಕೇಂದ್ರ ಆರಂಭ Read More »

ಕುಕ್ಕೆ ದೇವಾಲಯದಲ್ಲಿ ಪರ್ಸ್, ಮೊಬೈಲ್ ಕಳ‍್ಳತನ! | ಸಿಸಿ ಕ್ಯಾಮರಾ ಸಹಾಯದಿಂದ ಮಹಿಳೆಯನ್ನು ಪತ್ತೆ ಹಚ್ಚಿದ ಭದ್ರತಾ ಸಿಬ್ಬಂದಿ ಗಂಗಾಧರ ನಾಡೋಳಿ

ಸುಬ್ರಹ್ಮಣ್ಯ: ಭಕ್ತರೊಬ್ಬರ ಪರ್ಸ್ ಕದ್ದು ಪರಾರಿಯಾಗಲು ಯತ್ನಿಸುತ್ತಿದ್ದ ಮಹಿಳೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿ ಗಂಗಾಧರ ನಾಡೋಳಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ದೂರದ ಊರಿನಿಂದ ಆಗಮಿಸಿದ ಭಕ್ತರೊಬ್ಬರ ಮೊಬೈಲ್ ಹಾಗೂ ಪರ್ಸ್ ಕಳೆದು ಹೋಗಿರುವ ಬಗ್ಗೆ ದೇವಸ್ಥಾನದ ಕಚೇರಿಗೆ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಎಲ್ಲಾ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸುವಾಗ ಮಹಿಳೆಯೊಬ್ಬಳು ಪರ್ಸ್ ಕಳ್ಳತನ ಮಾಡುತ್ತಿರುವ ದೃಶ್ಯ ಕಂಡುಬಂದಿತ್ತು.

ಕುಕ್ಕೆ ದೇವಾಲಯದಲ್ಲಿ ಪರ್ಸ್, ಮೊಬೈಲ್ ಕಳ‍್ಳತನ! | ಸಿಸಿ ಕ್ಯಾಮರಾ ಸಹಾಯದಿಂದ ಮಹಿಳೆಯನ್ನು ಪತ್ತೆ ಹಚ್ಚಿದ ಭದ್ರತಾ ಸಿಬ್ಬಂದಿ ಗಂಗಾಧರ ನಾಡೋಳಿ Read More »

ವೆಬ್ ಚಾನೆಲ್ ಸಬ್ ಸ್ಕ್ರೈಬ್: ವಿಜೇತರ ಘೋಷಣೆ

ಪುತ್ತೂರು: ಸಬ್ ಸ್ಕ್ರೈಬ್ ಆಗಿ ಬಹುಮಾನ ಗೆಲ್ಲಿ ವಿಶೇಷ ಕಾರ್ಯಕ್ರಮದ ವಿಜೇತರ ಹೆಸರನ್ನು ಘೋಷಣೆ ಮಾಡಲಾಗಿದೆ. ಪ್ರಥಮ ಬಹುಮಾನವನ್ನು ರಂಜಿತ್, ದ್ವಿತೀಯ ಬಹುಮಾನವನ್ನು ಸುಜಿತ್ ಕೋಡಿಂಬಾಳ, ತೃತೀಯ ಬಹುಮಾನವನ್ನು ಮನೋಹರ್ ಗೌಡ ಪಡೆದುಕೊಂಡಿದ್ದಾರೆ. ನ್ಯೂಸ್ ಪುತ್ತೂರು ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ವೆಬ್ ಚಾನೆಲ್ ಸಬ್ ಸ್ಕ್ರೈಬ್: ವಿಜೇತರ ಘೋಷಣೆ Read More »

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ

ಸುಳ್ಯ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಪುತ್ತೂರು ಎಸ್.ಆರ್.ಕೆ. ಲ್ಯಾಡರ್ಸ್, ತನ್ನ ಸರಣಿಯ ಎರಡನೇ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸುಳ್ಯ ಎಂ.ಬಿ. ಫೌಂಡೇಷನ್ ಪ್ರವರ್ತಿತ ಸಾಂದೀಪ್ ವಿಶೇಷ ಶಾಲೆಯ ಕ್ಷೇಮಾಭಿವೃದ್ಧಿ ನಿಧಿಗೆ ಧನ ಸಹಾಯ ನೀಡಲಾಯಿತು. ಕಾರ್ಯಕ್ರಮದ ಬಳಿಕ ಸಹಭೋಜನ ಜರಗಿತು. ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ ಮಾತನಾಡಿ, ವಿಶೇಷ ಶಾಲೆ ನಡೆಸುವುದೆಂದರೆ ಸಣ್ಣ ವಿಚಾರವಲ್ಲ. ಹಾಗಿದ್ದು ಎಂ.ಬಿ. ಫೌಂಡೇಷನ್ ದೊಡ್ಡ ಸಾಹಸವನ್ನೇ ಮಾಡುತ್ತಿದೆ. ಫೌಂಡೇಶನಿನ ಸಾಮಾಜಿಕ ಕಾರ್ಯ ಶ್ಲಾಘನೀಯ

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ Read More »

ಪುರುಷ ಮೃಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ಪ್ರಯುಕ್ತ ಮಹಾಭಾರತ ಸರಣಿಯ ಪುರುಷಮೃಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಡಿ.ಕೆ. ಆಚಾರ್ಯ ಅಲಂಕಾರು. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೆರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಶ್ರೀ ಕೃಷ್ಣ), ಬಾಲಕೃಷ್ಣ ಕೇಪುಳು (ಧರ್ಮರಾಯ), ಗುಡ್ಡಪ್ಪ ಬಲ್ಯ (ಭೀಮ), ಜಯರಾಮ ಭಟ್ ದೇವಸ್ಯ (ಹನುಮಂತ), ಹರೀಶ ಆಚಾರ್ಯ ಬಾರ್ಯ (ಪುರುಷ ಮೃಗ), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಅರ್ಜುನ)

ಪುರುಷ ಮೃಗ ತಾಳಮದ್ದಳೆ Read More »

ನೂತನ ಸಹಾಯಕ ಆಯುಕ್ತರಿಗೆ ಸುಳ್ಯದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತ

ಸುಳ್ಯ: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಹಾಗೂ ದಂಡಾಧಿಕಾರಿಯಾಗಿರುವ ಜುಬಿನ್ ಮೊಹಪಾತ್ರ ಅವರು ಸುಳ್ಯಕ್ಕೆ ಭೇಟಿ ನೀಡಿದ ಸಂಧರ್ಭ ಗ್ರಾಮ ಪಂಚಾಯತ್ ಜಿಲ್ಲಾ ಒಕ್ಕೂಟದ ವತಿಯಿಂದ ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಉಬರಡ್ಕ ಅವರು ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತಿಸಿದರು. ಪುತ್ತೂರು, ಕಡಬ, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿರುವ ಜುಬಿನ್ ಮೊಹಪಾತ್ರ ಅವರು 2021ರ ಬ್ಯಾಚಿನ ಐ.ಎ.ಎಸ್. ಅಧಿಕಾರಿ.

ನೂತನ ಸಹಾಯಕ ಆಯುಕ್ತರಿಗೆ ಸುಳ್ಯದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತ Read More »

ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕೇಸು | ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ

ಮಂಗಳೂರು: ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ದ.ಕ. ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ,ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ

ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕೇಸು | ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ Read More »

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ | 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ

ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ  613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ  ಚಾರ್ಮಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73  ಕೋಟಿ

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ | 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ Read More »

ಸುಬ್ರಹ್ಮಣ್ಯದಲ್ಲಿ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.                                 

ಸುಬ್ರಹ್ಮಣ್ಯ: ದಿನನಿತ್ಯ ಸಾವಿರಾರು ಭಕ್ತಾದಿಗಳು ಬರುವ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ 24 * 7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪ್ರಸ್ತುತ ಇರುವ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರವಾಗಿ ವಿವರಿಸಿ ಶ್ರೀ ಕ್ಷೇತ್ರಕ್ಕೆ

ಸುಬ್ರಹ್ಮಣ್ಯದಲ್ಲಿ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.                                  Read More »

ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು !

ಬೆಳ್ತಂಗಡಿ: ಮರ ಕಡಿಯುವ ಸಂದರ್ಭ ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಎಂಬಲ್ಲಿ ಬುಧವಾರ ನಡೆದಿದೆ. ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್‌ ಪೂಜಾರಿ (46) ಮೃತಪಟ್ಟವರು. ಮನೆಗೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಅವರು ಸಹೋದರ ಪ್ರಮೋದ್ ಜೊತೆ ಸೇರಿ ಕಟ್ಟಿಂಗ್ ಮೆಷಿನ್ ಮೂಲಕ ಮರ ಕಡಿಯುತ್ತಿದ್ದರು. ಈ ವೇಳೆ ಮೆಷಿನ್ ಪ್ರಶಾಂತ್ ಹಿಡಿತ ತಪ್ಪಿ ಕೆಳಕ್ಕೆ ಬಿದ್ದಿದ್ದು ಚಲನೆ ಸ್ಥಿತಿಯಲ್ಲಿ

ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು ! Read More »

error: Content is protected !!
Scroll to Top