ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯ  ಕಲ್ಲಡ್ಕ ವಲಯದ ಮಾಮೇಶ್ವರ  ಜ್ಞಾನವಿಕಾಸದ  ವಾರ್ಷಿಕೋತ್ಸವ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ  ಕಲ್ಲಡ್ಕ  ವಲಯದ ಮಮೇಶ್ವರ ಕಾರ್ಯಕ್ಷೇತ್ರದ  ನಂದ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ   ವಾರ್ಷಿಕೋತ್ಸವ  ಕಾರ್ಯಕ್ರಮ ನಡೆಯಿತು. ಕೇಂದ್ರದ  ಸದಸ್ಯೆ ಲಕ್ಷ್ಮಿ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.  ಕೇಂದ್ರದ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ತಾಲೂಕಿನ ನಿಕಟಪೂರ್ವ ಯೋಜನಾಧಿಕಾರಿಯಾದ ರಮೇಶ್  ಇವರು ಜ್ಞಾನವಿಕಾಸ ಹಾಗೂ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿದ್ದು, ಬಳಿಕ ಬಹುಮಾನ ವಿತರಣೆ  ಮಾಡಲಾಯಿತು. […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯ  ಕಲ್ಲಡ್ಕ ವಲಯದ ಮಾಮೇಶ್ವರ  ಜ್ಞಾನವಿಕಾಸದ  ವಾರ್ಷಿಕೋತ್ಸವ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಗ್ರಾಮ  ದೈವ  ಶ್ರೀ  ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಿತು. ನೇಮೋತ್ಸವದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು.. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡಲಾಯಿತು. ರಾತ್ರಿ 9 ಗಂಟೆಗೆ

ಗ್ರಾಮ  ದೈವ  ಶ್ರೀ  ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ

ಜಲಮೂಲ ಮಲಿನಗೊಳಿಸುವುದನ್ನು ತಡೆಯಲು ಸರಕಾರ ಸೂಚನೆ ಬೆಂಗಳೂರು: ಪುಣ್ಯಕ್ಷೇತ್ರಗಳ ಬಳಿಯಿರುವ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳಿಗೆ ತ್ಯಾಜ್ಯ ಎಸೆದು ಅಪವಿತ್ರಗೊಳಿಸುವುದನ್ನು ತಡೆಯಲು ಸರಕಾರ ಮುಂದಾಗಿದ್ದು, ಇಂಥ ಸ್ಥಳಗಳ 500 ಮೀಟರ್ ವ್ಯಾಪ್ತಿಯ ಸುತ್ತಮುತ್ತ ಸೋಪ್‌, ಶ್ಯಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು

ಪುಣ್ಯಕ್ಞೇತ್ರಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪ್‌, ಶ್ಯಾಂಪೂ ಮಾರಾಟ ನಿಷೇಧ Read More »

42 ವರ್ಷದ ಅಂಕಲ್‌ ಜೊತೆ 15ರ ಬಾಲಕಿಯ ಲವ್‌ ದುರಂತ ಅಂತ್ಯ

ಒಂದು ತಿಂಗಳ ಬಳಿಕ ದಟ್ಟ ಕಾಡಿನಲ್ಲಿ ಇಬ್ಬರ ಶವ ಪತ್ತೆ ಕಾಸರಗೋಡು: 42 ವರ್ಷದ ಆಟೋ ಚಾಲಕ ಅಂಕಲ್‌ ಜೊತೆ 15ರ ಹರೆಯದ ಶಾಲಾ ಬಾಲಕಿಯ ಪ್ರೀತಿ ಇಬ್ಬರ ಸಾವಿನಲ್ಲಿ ದುರಂತ ಅಂತ್ಯಗೊಂಡ ಘಟನೆಯೊಂದು ಕಾಸರಗೋಡಿನ ಕುಂಬಳೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಳೆದ ಫೆ.11ರಂದು ನಾಪತ್ತೆಯಾಗಿದ್ದ ಇವರಿಬ್ಬರ ಮೃತದೇಹಗಳು ಒಂದು ತಿಂಗಳ ಬಳಿಕ ಕಾಡಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿವೆ.ಕುಂಬಳೆ ಪೈವಳಿಕೆ ಸಮೀಪ ಮಂಡೆಕಾಪು ಗ್ರಾಮದ ಬಳಿ ಈ ಘಟನೆ ನಡೆದಿದೆ. ಆಟೋ

42 ವರ್ಷದ ಅಂಕಲ್‌ ಜೊತೆ 15ರ ಬಾಲಕಿಯ ಲವ್‌ ದುರಂತ ಅಂತ್ಯ Read More »

ನೆಲ್ಲಿದಡಿ ಗುತ್ತು ವಿವಾದ : ಯಥಾಸ್ಥಿತಿಗೆ ಜಿಲ್ಲಾಧಿಕಾರಿ ಸೂಚನೆ

ಶತಮಾನಗಳಿಂದ ನಡೆಯುತ್ತಿರುವ ದೈವಾರಾಧನೆಗೆ ಅಡ್ಡಿಯಾಗದಂತೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌)ನಿಂದ ನೆಲ್ಲಿದಡಿ ಗುತ್ತಿನ ಪ್ರಸಿದ್ಧ ಕಾಂತೇರಿ ಜುಮಾದಿ ದೈವದ ಆರಾಧನೆಗೆ ತೊಡಕುಂಟಾಗಿರುವ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯಕ್ಕೆ ಅಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚಿಸಿದ್ದಾರೆ. ನೆಲ್ಲಿದಡಿಯಲ್ಲಿ ಈವರೆಗೂ ದೈವಾರಾಧನೆ ನಿಂತಿಲ್ಲ. ಲಿಖಿತವಾಗಿ ಅನುಮತಿ ಪಡೆಯದಿದ್ದರೆ ಅವಕಾಶ ಇಲ್ಲ ಎಂದಿದ್ದರಿಂದ ಗೊಂದಲಕ್ಕೆ ಕಾರಣವಾಗಿದೆ. ಶಾಶ್ವತ ಪರಿಹಾರ ಸಿಗುವವರೆಗೂ ಯಥಾಸ್ಥಿತಿ ಕಾಪಾಡಲು ಸೂಚಿಸಲಾಗಿದೆ ಎಂದು

ನೆಲ್ಲಿದಡಿ ಗುತ್ತು ವಿವಾದ : ಯಥಾಸ್ಥಿತಿಗೆ ಜಿಲ್ಲಾಧಿಕಾರಿ ಸೂಚನೆ Read More »

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು

ನಟಿಯ ಕಂಪನಿಗೆ ಮಂಜೂರಾಗಿದೆಯಾ 12 ಎಕರೆ ಜಮೀನು? ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಜಾಲದ ಬಾಹುಗಳು ಬಹಳ ವಿಶಾಲವಾಗಿ ಚಾಚಿಕೊಂಡಿವೆ ಎಂಬ ವಿಚಾರ ತನಿಖೆ ಮುಂದುವರಿದಂತೆ ಬಯಲಾಗುತ್ತಿದೆ. ಕೆಲದಿನಗಳ ಹಿಂದೆಯಷ್ಟೇ ದಿಲ್ಲಿ ಮತ್ತು ಮುಂಬಯಿ ವಿಮಾನ ನಿಲ್ದಾಣಗಳಲ್ಲೂ ಭಾರಿ ಪ್ರಮಾಣದ ಚಿನ್ನದ ಬಿಸ್ಕಟ್‌ಗಳು ವಶವಾಗಿದ್ದು, ಈ ಪ್ರಕರಣಗಳಿಗೂ ರನ್ಯಾ ರಾವ್‌ ಒಳಗೊಂಡಿರುವ ಪ್ರಕರಣಕ್ಕೂ ಸಂಬಂಧ ಇದೆ ಎಂಬ ಅನುಮಾನ ಬಂದಿದೆ. ಮೂರು ಕಡೆ ಒಂದೇ ರೀತಿಯ ಚಿನ್ನದ ಬಿಸ್ಕೆಟ್‌ಗಳು ವಶವಾಗಿವೆ. ಮೂರೂ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು Read More »

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ

ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢ, ಬ್ಯಾನ್‌ಗೆ ಶಿಫಾರಸ್ಸು ಬೆಂಗಳೂರು: ಇಡ್ಲಿ, ಗೋಬಿಮಂಚೂರಿ, ಕಬಾಬ್‌ ಸೇರಿದಂತೆ ವಿವಿಧ ಆಹಾರ ವಸ್ತುಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಅಂಶ ಪತ್ತೆಯಾದ ಬಳಿಕ ಈಗ ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಕ್ಯಾನ್ಸರ್​ಕಾರಕ ಅಂಶ ಬಿಡುಗಡೆಯಾಗಿ ಇಡ್ಲಿಯನ್ನು ಸೇರಿಕೊಳ್ಳುತ್ತಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಬಳಿಕ ಹೊಟೇಲ್, ಉಪಾಹಾರ ಮತ್ತು ತಿನಿಸು ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಯ ಬಳಕೆಯನ್ನು ನಿಷೇಧಿಸಲಾಗಿದೆ. ಇದರ ಬೆನ್ನಲ್ಲೇ

ಕರಿದ ಹಸಿರು ಬಟಾಣಿಯಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ Read More »

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ

ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ಮೇಲೆ ಪ್ರತೀಕಾರದ ಹಿಂಸಾಚಾರ ಬೇರೂತ್‌: ಸಿರಿಯಾದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಾಶರ್‌ ಅಲ್‌ ಅಸಾದ್‌ ಬೆಂಬಲಿಗರ ನಡುವೆ ನಡೆಯುತ್ತಿರುವ ಭೀಕರ ಹಿಂಸಾಚಾರದಲ್ಲಿ 1000ಕ್ಕೂ ಅಧಿಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಡಿಟೇರಿಯನ್‌ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಹಿಂಸಾಚಾರ ನಡೆಯುತ್ತಿದೆ. ದಂಗೆಯೆದ್ದಿರುವ ಅಲ್ವೈಟ್‌ ಸಮುದಾಯದ ಜನರನ್ನು ಭದ್ರತಾ ಪಡೆ ನಿರ್ದಯವಾಗಿ ಸಾಯಿಸುತ್ತಿದೆ ಎನ್ನಲಾಗಿದೆ.ಸಿರಿಯಾದ ಹೊಸ ಸರಕಾರ ಮತ್ತು ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ನಡುವೆ

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ Read More »

ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಮಾಡುವಂತಿಲ್ಲ

ಹೈಕೋರ್ಟಿನ ಮಹತ್ವದ ಆದೇಶ ತಿರುವನಂತಪುರ: ಮದುವೆ ಮತ್ತಿತರ ಖಾಸಗಿ ಸಮಾರಂಭಗಳಲ್ಲಿ ಪ್ಲಾಸಿಕ್‌ ನೀರಿನ ಬಾಟಲಿ ಬಳಕೆ ಮಾಡಬಾರದು ಎಂದು ಕೇರಳ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ನ್ಯಾಯಾಲಯ ರಾಜ್ಯದಲ್ಲಿ ಮದುವೆ ಮತ್ತಿತರ ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಪ್ರಕೃತಿಗೆ ಹಾನಿಯನ್ನುಂಟುಮಾಡುತ್ತಿವೆ ಮತ್ತು ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ.ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳು

ಮದುವೆ ಸಮಾರಂಭದಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿ ಬಳಕೆ ಮಾಡುವಂತಿಲ್ಲ Read More »

error: Content is protected !!
Scroll to Top