ಸುದ್ದಿ

ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ

ಬೆಳಗ್ಗೆಯೇ ಬೀದಿಗಿಳಿದ ಸಾವಿರಾರು ಜನ ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಕಾಶ್ಮೀರದ ಸೈದಾ ಕಡಲ್‌ ಪ್ರದೇಶದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ನಡೆಸಿರುವ ಕ್ಷಿಪಣಿ ದಾಳಿಯಲ್ಲಿ ಅಯಾತೊಲ್ಲಾ ಅಲಿ ಖಮೇನಿ ಜೊತೆಗೆ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳು ಕೂಡ ಸಾವಿಗೀಡಾಗಿದ್ದಾರೆ. ಕಾಶ್ಮೀರದಲ್ಲಿ ಸಾವಿರಾರು ಜನರು ಖಮೇನಿಯ ಫೋಟೊ, ಫಲಕ ಹಿಡಿದುಕೊಂಡು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಡೊನಾಲ್ಡ್‌ […]

ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ Read More »

ಮಿಸೈಲ್‌ ದಾಳಿಗೆ ಖಮೇನಿ ಪುತ್ರಿ, ಅಳಿಯ, ಮೊಮ್ಮಗಳೂ ಬಲಿ

ಖಮೇನಿ ಅಧಿಕೃತ ನಿವಾಸವನ್ನು ಗುರಿ ಮಾಡಿಕೊಂಡ ನಡೆದ ಕ್ಷಿಪಣಿ ದಾಳಿ ಟೆಹ್ರಾನ್‌ : ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದ ದೃಢಪಟ್ಟ ಬೆನ್ನಿಗೆ ವೈಮಾನಿಕ ದಾಳಿಯಲ್ಲಿ ಖಮೇನಿ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳೂ ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ ಕ್ಷಿಪಣಿ ದಾಳಿಗೆ ಬಲಿಯಾದ ಇರಾನ್‌ ರಕ್ಷಣಾ ಸಚಿವ ಅಮೀರ್‌ ನಾಸಿರ್ಜಾದೆ ಅವರ ಮೃತದೇಹ ಪತ್ತೆಯಾಗಿದೆ ಎಂದೂ ಇಸ್ರೇಲ್‌ ಮಾಧ್ಯಮಗಳು ವರದಿ

ಮಿಸೈಲ್‌ ದಾಳಿಗೆ ಖಮೇನಿ ಪುತ್ರಿ, ಅಳಿಯ, ಮೊಮ್ಮಗಳೂ ಬಲಿ Read More »

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ

ಯುದ್ಧದಿಂದಾಗಿ ವಿಮಾನಗಳು ರದ್ದಾಗಿ ಆತಂಕದ ಸ್ಥಿತಿ ಬೆಂಗಳೂರು: ಯುದ್ಧದಿಂದಾಗಿ ವಿಮಾನ ಸಂಚಾರ ರದ್ದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ

ಗಲ್ಫ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಕಲ ಕ್ರಮ: ಸಿದ್ದರಾಮಯ್ಯ ಭರವಸೆ Read More »

ಇರಾನ್‌ನ ಪರಮೋಚ್ಚ ನಾಯಕ ಅಯಾತೊಲ್ಲ ಖಮೇನಿ ಹತ್ಯೆ

ಕ್ಷಿಪಣಿ ದಾಳಿಗೆ ಬಲಿ ಎಂಉದ ಅಮೆರಿಕ ಘೋಷಣೆ; ದೃಢಪಡಿಸಿದ ಇರಾನ್‌ ಟೆಹ್ರಾನ್: ಇರಾನ್‌ನ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಮಾಧ್ಯಮ ಕೂಡ ಹತ್ಯೆಯನ್ನು ದೃಢಪಡಿಸಿದೆ. ಇಸ್ರೇಲ್-ಇರಾನ್-ಅಮೆರಿಕ ನಡುವಿನ ಯುದ್ಧದಲ್ಲಿ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್

ಇರಾನ್‌ನ ಪರಮೋಚ್ಚ ನಾಯಕ ಅಯಾತೊಲ್ಲ ಖಮೇನಿ ಹತ್ಯೆ Read More »

ಯಕ್ಷಭಾರತಿಯಿಂದ ಶ್ರೀರಂಗ ತುಲಾಭಾರ ತಾಳಮದ್ದಳೆ

ಧರ್ಮಸ್ಥಳ: ಕನ್ಯಾಡಿಯ ಗಣೇಶ ಪ್ರಸನ್ನದಲ್ಲಿ ಯಕ್ಷಭಾರತಿ (ರಿ) ಕನ್ಯಾಡಿ ತಂಡದಿಂದ ಪ್ರೊ. ಪವನ್ ಕಿರಣ್ ಕೆರೆ ವಿರಚಿತ ಪ್ರಸಂಗ ಶ್ರೀರಂಗ ತುಲಾಭಾರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಹೇಶ ಕನ್ಯಾಡಿ, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು. ಅರ್ಥಧಾರಿಗಳಾಗಿ ಶ್ರೀ ಕೃಷ್ಣನ ಪಾತ್ರದಲ್ಲಿ ಹರಿದಾಸ ಗಾಂಭೀರ ಧರ್ಮಸ್ಥಳ, ಸತ್ಯಭಾಮೆಯಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ನಾರದನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಬಲರಾಮನಾಗಿ ಶಶಿಧರ ಕನ್ಯಾಡಿ, ರುಕ್ಮಿಣಿಯಾಗಿ ಕುI ವೈಷ್ಣವಿ ಜೆ. ರಾವ್

ಯಕ್ಷಭಾರತಿಯಿಂದ ಶ್ರೀರಂಗ ತುಲಾಭಾರ ತಾಳಮದ್ದಳೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾಗವನ್ನು ದೇವರಿಗೆ ಪ್ರೀತಿಯಿಂದ ಬಿಟ್ಟು ಕೊಟ್ಟ ವಾಲ್ಟರ್ ಲೋಬೋ

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಅಭಿವೃದ್ಧಿ ಹಿನ್ನೆಲೆ ದೇಗುಲಕ್ಕೆ ‌ಸೇರಿದ ಜಮೀನನ್ನು ಮರು ವಶ ಮಾಡಿಕೊಳ್ಳುವ ಕೆಲಸ ನಡೆಯುತ್ತಿದ್ದು, ನೆಲ್ಲಿಕಟ್ಚೆಯ ಅಶ್ವತ್ಥ ಮರದ ಸಮೀಪ ಇದ್ದ ಮನೆಯನ್ನು ಸೌಹಾರ್ಧಯುತವಾಗಿ ‌ತೆರವು ಮಾಡಲಾಗಿದೆ. ಈ ಜಮೀನು ವಾಲ್ಟರ್ ಲೋಬೋ ಎಂಬವರು 60 ವರ್ಷಗಳಿಂದ ಮನೆ ಹೊಂದಿದ್ದು, ಅದನ್ನು ಬಾಡಿಗೆಗೆ ನೀಡುತ್ತಿದ್ದರು. ಸುಮಾರು ಎಂಟರಿಂದ ಹತ್ತು ಸೆಂಟ್ಸ್ ಜಾಗವನ್ನು ವಾಲ್ಟರ್ ಲೋಬೋ ಅವರು ದೇವಸ್ಥಾನಕ್ಕೆ ಪ್ರೀತಿಯಿಂದ ಬಿಟ್ಟುಕೊಟ್ಟಿದ್ದಾರೆ. ಇದರ ಮೌಲ್ಯ ಸುಮಾರು ಒಂದು ಕೋಟಿಗೂ ಅಧಿಕವಾಗಿದ್ದು,

ಪುತ್ತೂರು ಶ್ರೀ ಮಹಾಲಿಂಗೇಶ್ವರ ಜಾಗವನ್ನು ದೇವರಿಗೆ ಪ್ರೀತಿಯಿಂದ ಬಿಟ್ಟು ಕೊಟ್ಟ ವಾಲ್ಟರ್ ಲೋಬೋ Read More »

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ

ಮಂಗಳೂರು: MDMA ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕಾ ವೇಯಿಂಗ್ ಬ್ರಿಜ್ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ಸಮಯದಲ್ಲಿ ಅಕ್ಕಪಕ್ಕದಲ್ಲಿ ಎರಡು ಕಾರುಗಳು ನಿಂತಿರುವುದು ಕಂಡು ಬಂದಿದೆ. ಒಂದು ಕಾರಿನಲ್ಲಿ ಕಾವು ನಿವಾಸಿ ಜಕರಿಯಾ ಮತ್ತು ಇನ್ನೊಂದು ಕಾರಿನಲ್ಲಿ ಮಿಥುನ್ ಪೂಜಾರಿ ಎಂಬವರು ಇದ್ದರು. ಇವರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡಲು ಬಂದಿರುವುದು ತಿಳಿದು ಬಂದಿದೆ. ಆರೋಪಿಗಳನ್ನು ವಶಕ್ಕೆ

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರು ಪೊಲೀಸ್ ವಶಕ್ಕೆ Read More »

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಬೆಳಗಾವಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಚ ಘಟನೆ ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಮಾಳಂಗಿ(17) ಮೃತ ದುರ್ದೈವಿ. ಇಂದಿನಿಂದ ದ್ವಿತೀಯ ಪಿಯು ಅಂತಿಮ ಪರೀಕ್ಷೆ ಆರಂಭವಾಗಿದ್ದು, ಆಕೆ ಅದಕ್ಕಾಗಿ ಉತ್ತಮ ಸಿದ್ಧತೆ ಸಹ ಮಾಡಿಕೊಂಡಿದ್ದರು. ಇಂದು ಬೆಳಗ್ಗೆಯೂ ಪರೀಕ್ಷೆಗೆ ತೆರಳುವುದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಆದರೆ ಬೆಳಗ್ಗೆ ಸ್ನಾನ ಮುಗಿಸಿ ಬರುತ್ತಿದ್ದ ಹಾಗೆಯೇ ಆಕೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ Read More »

ಯುವತಿಯ ಪ್ರಾಣಕ್ಕೆ ಕಂಟಕವಾದ ಜ್ಯೋತಿಷಿಯ ಮಾತು

ಬೆಂಗಳೂರು: ಜ್ಯೋತಿಷಿ ಹೇಳಿದ ಭವಿಷ್ಯವಾಣಿಗೆ ಹೆದರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕುಂಟೆಯಲ್ಲಿ ನಡೆದಿದೆ. ವಿದ್ಯಾ ಜ್ಯೋತಿ (29) ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವತಿ. ಆಕೆಗೆ ಜ್ಯೋತಿಷಿ ಅಲ್ಪಾಯುಷಿ ಎಂದು ಭವಿಷ್ಯ ಹೇಳಿದ್ದು, ಇದರಿಂದಾಗಿ ಹೆದರಿ ಆಕೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ‌ವ್ಯಕ್ತವಾಗಿದೆ. ಯುವತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ವರ್ಕ್ ಫ್ರಂ ಹೋಂ ಮಾಡುತ್ತಿದ್ದಳು. ಹೆತ್ತವರು ಸಹ ಮಗಳಿಗಾಗಿ ‌ಎಲ್ಲವನ್ನೂ ಮಾಡಿದ್ದರು. ಅವಳ ಇಷ್ಟದಂತೆ ಆಕೆ ಪ್ರೀತಿಸಿದ ಯುವಕನನ್ನೇ ‌ವಿವಾಹವಾಗುವುದಕ್ಕೂ ಸಮ್ಮತಿ

ಯುವತಿಯ ಪ್ರಾಣಕ್ಕೆ ಕಂಟಕವಾದ ಜ್ಯೋತಿಷಿಯ ಮಾತು Read More »

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು: 2 ಸಾವು, ಓರ್ವ ಗಂಭೀರ

ಹಾಸನ: ಅತಿ ವೇಗದಿಂದ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಕಲೇಶಪುರದ ಗುಲಗಳಲೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಕಾರು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಮೃತಪಟ್ಟವರು ‌ತಮಿಳುನಾಡು ಮತ್ತು ಕೆಜಿಎಫ್ ಮೂಲದವರೆಂದು ತಿಳಿದು ಬಂದಿದೆ‌. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು: 2 ಸಾವು, ಓರ್ವ ಗಂಭೀರ Read More »

error: Content is protected !!
Scroll to Top