ಸುದ್ದಿ

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ, ದೇವಾಲಯದ ಆಧಾರಿತ ಪ್ರವಾಸೋದ್ಯಮದ ಮಹತ್ವದ ಕುರಿತು ಸದನದಲ್ಲಿ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ ಮತ್ತು ದೇವಾಲಯ ಆಧಾರಿತ ಪ್ರವಾಸೋದ್ಯಮದ ಮಹತ್ವದ ಬಗ್ಗೆ ಸರ್ಕಾರದ ಗಮನ ಸೆಳೆದರು. ಕೇಂದ್ರ ಸರ್ಕಾರದ ಪ್ರಸಾದ ಯೋಜನೆಗಾಗಿ ಕರ್ನಾಟಕ ಸರ್ಕಾರ 16 ಪ್ರಸ್ತಾವನೆಗಳನ್ನು ಕಳಿಸಿದ್ದರೂ, ಕೇವಲ 2 ಪ್ರಸ್ತಾಪಗಳು ಮಾತ್ರ ಅನುಮೋದನೆಯಾಗಿವೆ. ಉಳಿದ 14 ಪ್ರಸ್ತಾಪಗಳ ಬಗ್ಗೆ ರಾಜ್ಯ ಸರ್ಕಾರವು ಸ್ಪಷ್ಟವಾಗಿ ಉತ್ತರಿಸಬೇಕೆಂದು ಅವರು ಆಗ್ರಹಿಸಿದರು. ಉತ್ತರ ಪ್ರದೇಶದಲ್ಲಿ ನಡೆದ ಕುಂಭಮೇಳದ ಆಯೋಜನೆಗೆ ಕೇವಲ 16 ಕೋಟಿ ವೆಚ್ಚ ಮಾಡಿ, […]

ರಾಜ್ಯದ ದೇವಸ್ಥಾನಗಳ ಅಭಿವೃದ್ಧಿ, ದೇವಾಲಯದ ಆಧಾರಿತ ಪ್ರವಾಸೋದ್ಯಮದ ಮಹತ್ವದ ಕುರಿತು ಸದನದಲ್ಲಿ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು Read More »

ಮನನೊಂದ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು  | ಪುತ್ತೂರಿನ ಯುವಕ ನಾಪತ್ತೆ |  ಪ್ರಕರಣ ದಾಖಲು

ಪುತ್ತೂರು:  ಸುಳ್ಯದ ಡೆಂಟಲ್ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ತೆಲಸಂಗ ಗ್ರಾಮದ ಕೃತಿಕಾ ಸಿದ್ದಣ್ಣ ನಿಡೋಣಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಮೃತಳ ತಂದೆ ನೀಡಿದ ದೂರಿನ ಮೇರೆಗೆ ಪುತ್ತೂರಿನ ನವೀನ್ ಮತ್ತು ವಸತಿ ಗ್ರಹದ ಮೇಲ್ವಿಚಾರಕಿ ತಾರ ಕುಮಾರಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಗೆ ಪುತ್ತೂರಿನ ನವೀನ್ ಎಂಬಾತ ಪದೇ ಪದೇ ಕರೆ ಮಾಡಿ ತೊಂದರೆ ನೀಡಿ ಫೋಟೋ ವಿಡಿಯೋಗಳನ್ನು ತಂದೆಗೆ

ಮನನೊಂದ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು  | ಪುತ್ತೂರಿನ ಯುವಕ ನಾಪತ್ತೆ |  ಪ್ರಕರಣ ದಾಖಲು Read More »

ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ

ಪುತ್ತೂರು: ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ ಗುರುವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್‍. ಗೌರಿ ಪ್ರಾಸ್ತಾವಿಕವಾಗಿ ಮಾತನಾಡಿ, ವೇತನ, ರಜೆ, ಮೂಲಭೂತ ಸೌಲ್ಯಗಳನ್ನು ಪಡೆದುಕೊಳ್ಳುವಲ್ಲಿ ತಾರತಮ್ಯ ಧೋರಣೆ ಇದ್ದ ಸಂದರ್ಭದಲ್ಲಿ ಪುರುಷರಷ್ಟೇ ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು 1909 ರಲ್ಲಿ ಮಹಿಳೆಯರು ದಂಗೆ ಎದ್ದು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಲ್ಲಿ ಪ್ರತಿಭಟನೆ ಮಾಡಿ ಇದೊಂದು ಕ್ರಾಂತಿಯಾದ ಪರಿಣಾಮ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಮೋದಿ ಸರಕಾರ ಬಂದ ನಂತರ ಮಹಿಳಾ ಸಬಲೀಕರಣಗೊಳ್ಳುವಲ್ಲಿ

ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ Read More »

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ

ಖರ್ಗೆ ಕುಟುಂಬದ ಒಡೆತನದ ಕಾಲೇಜಿನಲ್ಲಿ ನಡೆದ ಅಕ್ರಮ ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ

ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ Read More »

ಮನೆಯಲ್ಲಿದ್ದ ಬೈಕ್‍ ಕಳವು

ನಾರಾವಿ : ಕುತ್ತೂರು ಗ್ರಾಮದ ಸಮೃದ್ಧಿ ಮನೆ ನಿವಾಸಿ ಟಿ. ಎಸ್. ಸಲೀಂ ಎಂಬವರ ಬೈಕ್ ನ್ನು ಅವರ ಮನೆಯಿಂದ ಕದ್ದೊಯ್ದ ಘಟನೆ ನಡೆದಿದೆ. ಘಡನಾನುಸಾರವಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾ.4ರ ಬೆಳಗಿನ ಜಾವ 3ರಿಂದ 3.30ಗಂಟೆ ಮಧ್ಯೆ ಬೈಕ್ ಕಳ್ಳತನವಾಗಿದ್ದು, ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡುವ ದೃಶ್ಯ ಮನೆಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕಳವಾದ ಬೈಕ್ ನ ಮೊತ್ತ ಸುಮಾರು  ರು. 60ಸಾವಿರ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಯಲ್ಲಿದ್ದ ಬೈಕ್‍ ಕಳವು Read More »

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮೇಲೆ ಖಲಿಸ್ಥಾನಿ ಉಗ್ರರಿಂದ ಹಲ್ಲೆ ಯತ್ನ

ವಾಹನಕ್ಕೆ ಕಟ್ಟಿದ್ದ ಭಾರತದ ಧ್ವಜವನ್ನು ಹರಿದು ಹಾಕಿದ ಉಗ್ರರು ಲಂಡನ್ : ಲಂಡನ್‌ಗೆ ಭೇಟಿ ನೀಡಿದ್ದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮೇಲೆ ಖಲಿಸ್ತಾನ್ ಉಗ್ರರ ಗುಂಪೊಂದು ದಾಳಿ ನಡೆಸಲು ಯತ್ನಿಸಿದ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ ಸಚಿವರು ಶೆವನಿಂಗ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಾಣಿಸುತ್ತಿದೆ. ಮತ್ತೊಂದು ವೀಡಿಯೊದಲ್ಲಿ ಖಾಲಿಸ್ಥಾನ್ ಉಗ್ರಗಾಮಿಗಳು ಹೊರಗೆ ಧ್ವಜಗಳನ್ನು

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮೇಲೆ ಖಲಿಸ್ಥಾನಿ ಉಗ್ರರಿಂದ ಹಲ್ಲೆ ಯತ್ನ Read More »

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಲ್ಲಿ ಸಹಕಾರ ಭಾರತಿಗೆ ಅಭೂತಪೂರ್ವ ಗೆಲುವು | ಪುತ್ತೂರು ಬಿಜೆಪಿ ವತಿಯಿಂದ ಅಭಿನಂದನೆ

ಕೊಳ್ತಿಗೆ : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಸಹಕಾರಿ ಭಾರತೀಯ ಎಲ್ಲಾ ನೂತನ ನಿರ್ದೇಶಕರುಗಳಿಗೆ ಭಾರತೀಯ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮಾತನಾಡಿ, ಕೊಳ್ತಿಗೆ ಸಹಕಾರಿ ಸಂಘದಲ್ಲಿ ಈ ಹಿಂದೆ ಕಾಂಗ್ರೆಸ್ ಬೆಂಬಲಿತರು ಆಡಳಿತ ನಡೆಸುತ್ತಿದ್ದರು. ಆದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನ

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಲ್ಲಿ ಸಹಕಾರ ಭಾರತಿಗೆ ಅಭೂತಪೂರ್ವ ಗೆಲುವು | ಪುತ್ತೂರು ಬಿಜೆಪಿ ವತಿಯಿಂದ ಅಭಿನಂದನೆ Read More »

ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಆಜೀಜ್ ನಿಧನ

ತೊಕ್ಕೊಟ್ಟು : ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಆರ್.ಕೆ.ಸಿ. ಅಬ್ದುಲ್ ಆಜೀಜ್ (42) ಹೃದಯಾಘಾತದಿಂದ ಬುಧವಾರ ಸಂಜೆ ನಿಧಾನರಾದರು.   ಮುಂಬಯಿಗೆ ತೆರಳಿದ್ದ ಅವರು ರೈಲಿನಲ್ಲಿ ವಾಪಾಸಾಗುತ್ತಿದ್ದಾಗ ಕುಮಟಾ ಬಳಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದರು. ಕುತ್ತಾರು ಮದನಿ ನಗರದ ನಿವಾಸಿಯಾಗಿದ್ದ ಅಬ್ದುಲ್ ಆಜೀಜ್ ರಸ್ತೆ ನಿರ್ಮಾಣ ಗುತ್ತಿಗೆ ಸಂಸ್ಥೆ ಆರ್ ಕೆ ಸಿ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲಕರ ಪುತ್ರರಾಗಿದ್ದ ಅವರು ಉದ್ಯಮಿಯಾಗಿ ಯುವಕರಿಗೆ  ಹೊಸ ಹೊಸ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಿದ್ದರು. ತನ್ನ ಮಾಲೀಕತ್ವದಲ್ಲಿದ್ದ ನಾಟೇಕಲ್ ಸಮೀಪದ

ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಆಜೀಜ್ ನಿಧನ Read More »

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ

ಕನ್ನಡದ ನಟಿಯ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗೆದಷ್ಟೂ ಆಳ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿ ಒಂದೆರಡು ಬಾರಿ ಅಲ್ಲ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಬಂಧನವಾಗುವ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು ನಾನು ಡಿಜಿಪಿ ಮಗಳು

ಎರಡು ವರ್ಷದಲ್ಲಿ 40 ಬಾರಿ ದುಬೈ ಪ್ರಯಾಣ ಕೈಗೊಂಡಿದ್ದ ನಟಿ ರನ್ಯಾ Read More »

ಮೂರನೇ ಫೈನಲ್‌ ಮುಖಾಮುಖಿಗೆ ಸಜ್ಜಾದ ಭಾರತ-ನ್ಯೂಜಿಲ್ಯಾಂಡ್‌

ಭಾನುವಾರ ದುಬೈಯಲ್ಲಿ ನಡೆಯಲಿದೆ ಹೈ ವೋಲ್ಟೇಜ್‌ ಫೈನಲ್‌ ಕದನ ದುಬೈ: ನಿನ್ನೆ ನಡೆದ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಬಗ್ಗುಬಡಿದು ನ್ಯೂಜಿಲ್ಯಾಂಡ್‌ ತಂಡ ಫೈನಲ್‌ಗೆ ಪ್ರವೇಶಿಸಿರುವುದರೊಂದಿಗೆ ಭಾರತವನ್ನು ಎದುರಿಸಲು ವೇದಿಕೆ ಸಿದ್ಧವಾಗಿದೆ. ಭಾನುವಾರ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಫೈನಲ್​ಗೇರಿದರೆ, ದ್ವಿತೀಯ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ನ್ಯೂಝಿಲೆಂಡ್ ಫೈನಲ್

ಮೂರನೇ ಫೈನಲ್‌ ಮುಖಾಮುಖಿಗೆ ಸಜ್ಜಾದ ಭಾರತ-ನ್ಯೂಜಿಲ್ಯಾಂಡ್‌ Read More »

error: Content is protected !!
Scroll to Top