ಸುದ್ದಿ

30ಕ್ಕೂ ಅಧಿಕ ಮಕ್ಕಳ ಲೈಂಗಿಕ ಶೋಷಣೆ : ದಂಪತಿಗೆ ಮರಣ ದಂಡನೆ

ವಿಡಿಯೋ ಮಾಡಿ ಪೋರ್ನ್‌ ವೆಬ್‌ಸೈಟ್‌ಗಳಿಗೆ ಮಾರಾಟ ಮಾಡುತ್ತಿದ್ದ ದಂಪತಿ ಲಖನೌ: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋ ಮಾಡಿ ಡಾರ್ಕ್‌ವೆಬ್‌ ಪೋರ್ನ್‌ ಸೈಟಿಗೆ ಮಾರಿದ ಪ್ರಕರಣದಲ್ಲಿ ದಂಪತಿಗೆ ಉತ್ತರ ಪ್ರದೇಶದ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಸಂತ್ರಸ್ತ ಮಕ್ಕಳಲ್ಲಿ ಕೆಲವರು ಮೂರು ವರ್ಷ ವಯಸ್ಸಿನವರಾಗಿದ್ದಾರೆ. ಉತ್ತರ ಪ್ರದೇಶದ ಬಂಡಾ ಜಿಲ್ಲೆಯ ಪೋಕ್ಸೊ ಕಾಯ್ದೆಯ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಆರೋಪಿಗಳಾದ ಉತ್ತರ ಪ್ರದೇಶ ಚಿತ್ರಕೂಟದ ರಾಮಭವನ್ ಮತ್ತು ಆತನ ಪತ್ನಿ ದುರ್ಗಾವತಿಯನ್ನು ಲೈಂಗಿಕ […]

30ಕ್ಕೂ ಅಧಿಕ ಮಕ್ಕಳ ಲೈಂಗಿಕ ಶೋಷಣೆ : ದಂಪತಿಗೆ ಮರಣ ದಂಡನೆ Read More »

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ

ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಶಂಕೆ ಪುತ್ತೂರು: ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಹಳಿಯ ಬಳಿ ಶವವನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ Read More »

ಪುತ್ತೂರು : ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂನಿಂದ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ.ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆ ಬೆಂಕಿಗೆ ಆಹುತಿಯಾಗಿದೆ. ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪ್‌, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸಲು ಸ್ಥಳೀಯರು ಶ್ರಮಿಸಿದರು.

ಪುತ್ತೂರು : ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ Read More »

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ದೂರು ದಾಖಲಾದ ಮರುಕ್ಷಣವೇ ಬಂಧಿಸಿ, ಮನೆಗೆ ದಾಳಿ ಮಾಡಿರುವ ಪೊಲೀಸರು ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಸೈಟ್‌ ಕಬಳಿಕೆ ಪ್ರಕರಣದ ಮುಖ್ಯ ದೂರುದಾರರಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ದೂರು ನೀಡಿದ ಮರುಕ್ಷಣವೇ ಬಂಧಿಸಿದ್ದಲ್ಲದೆ ಅವರ ಮನೆಗೆ ದಾಳಿ ಮಾಡಿ ಶೋಧ ಕಾರ್ಯ ಮಾಡಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಹಿಂದೆ ಯಾರ ಕೈವಾಡ ಇದೆ ಎಂದು ಅನುಮಾನ ಈಗ ಉಂಟಾಗಿದೆ.

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ Read More »

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

ನಾಲ್ಕು ವರ್ಷದ ಹಿಂದೆ ಶಿಬಾಜೆಯ ತೋಟದಲ್ಲಿ ಕೊಲೆಯಾಗಿದ್ದ ಶ್ರೀಧರ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡದಲ್ಲಿ ಉಡುಪಿ ಜಿಲ್ಲಾ ಎಸ್‌ಪಿ ಹರಿರಾವ್ ಶಂಕರ್, ಡಿವೈಎಸ್‌ಪಿ ಎಂ.ಆರ್ ಹರೀಶ್ ಅವರಿದ್ದಾರೆ. 2022ರ ಡಿ‌.18ರಂದು ಶಿಬಾಜೆಯ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ Read More »

ಏ.1ರಿಂದ ಟೋಲ್‌ಗೇಟ್‌ಗಳಲ್ಲಿ ಶುಲ್ಕ ನಗದು ಪಾವತಿ ಇಲ್ಲ

ಡಿಜಿಟಲ್‌ ವಿಧಾನದಲ್ಲಿ ಮಾತ್ರ ಶುಲ್ಕ ಸ್ವೀಕರಿಸಲು ನಿರ್ಧಾರ ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಗೇಟ್‌ಗಳಲ್ಲಿ ಮುಂಬರುವ ಏ.1ರಿಂದ ನಗದು ಪಾವತಿಗೆ ಅವಕಾಶವಿಲ್ಲ. ವಾಹನ ಚಾಲಕರು ಕಡ್ಡಾಯವಾಗಿ ಮೊತ್ತವನ್ನು ಡಿಜಿಟಲ್ ವಿಧಾನದಲ್ಲೇ ಅಂದರೆ ಫಾಸ್ಟ್ಯಾಗ್ ಅಥವಾ ಯುಪಿಐ ಮೂಲಕವೇ ಪಾವತಿಸಬೇಕಾಗುತ್ತದೆ. ದೇಶಾದ್ಯಂತ ನೂತನ ವ್ಯವಸ್ಥೆ ಹೊಸ ಹಣಕಾಸು ವರ್ಷದ ಆರಂಭದ ದಿನ ಜಾರಿಗೆ ಬರಲಿದೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ನಿಯಮಾವಳಿಗಳ ಪ್ರಕಾರ, ಟೋಲ್ ಪ್ಲಾಝಾ ದಾಟುವ ವಾಹನಗಳು ಫಾಸ್ಟ್ಯಾಗ್ ಹೊಂದಿಲ್ಲದಿದ್ದಲ್ಲಿ, ನಗದು ರೂಪದಲ್ಲಿ

ಏ.1ರಿಂದ ಟೋಲ್‌ಗೇಟ್‌ಗಳಲ್ಲಿ ಶುಲ್ಕ ನಗದು ಪಾವತಿ ಇಲ್ಲ Read More »

ದೇವಸ್ಥಾನಗಳಲ್ಲಿ ರೀಲ್ಸ್‌ ಶೂಟಿಂಗ್‌ ಮಾಡಲು ತೆರಬೇಕು ಶುಲ್ಕ!

ಯೂಟ್ಯೂಬರ್ಸ್‌, ರೀಲ್ಸ್‌ ಮಾಡುವವರ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಮ ಬೆಂಗಳೂರು : ಇನ್ನು ಮುಂದೆ ದೇವಸ್ಥಾನಗಳಲ್ಲಿ ರೀಲ್ಸ್‌ ಮತ್ತಿತರ ಉದ್ದೇಗಳಿಗೆ ಶೂಟಿಂಗ್‌ ಮಾಡಬೇಕಾದರೆ ಶುಲ್ಕ ಪಾವತಿಸಬೇಕು. ರಾಜ್ಯದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ರೀಲ್ಸ್ ಮತ್ತು ವೀಡಿಯೋ ಶೂಟಿಂಗ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ನಿಯಮಗಳನ್ನು ಜಾರಿಗೆ ತರುವ ನಿರ್ಧಾರ ಮಾಡಿದೆ. ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕಾದರೆ ಆಯ್ಕೆ ಮಾಡಿದ ಸ್ಥಳಗಳಲ್ಲಿ ಮಾತ್ರ ಅವಕಾಶ ದೊರೆಯಲಿದೆ ಮತ್ತು ಅದಕ್ಕಾಗಿ ಶುಲ್ಕ ಕಡ್ಡಾಯವಾಗಲಿದೆ. ರಾಜ್ಯದ ಎಲ್ಲ ಎ ಮತ್ತು ಬಿ

ದೇವಸ್ಥಾನಗಳಲ್ಲಿ ರೀಲ್ಸ್‌ ಶೂಟಿಂಗ್‌ ಮಾಡಲು ತೆರಬೇಕು ಶುಲ್ಕ! Read More »

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌

ದೂರು ಕೊಟ್ಟ ಮರುಕ್ಷಣದಲ್ಲೇ ಬಂಧಿಸಿ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮುಂಬಡ್ತಿಗಾಗಿ ನಟೇಶ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.ಇದರ ಬೆನ್ನಲ್ಲೇ ನಿನ್ನೆ

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌ Read More »

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ

ಶಾಂತಿ ಸಭೆ ವಿಫಲ; ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ಬಾಗಲಕೋಟೆ : ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಜಯಪುರ ಜೈಲಿಗೆ ಅಟ್ಟಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ Read More »

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸವಾರರಿಬ್ಬರ ಸಾವು

ಹಾಸನ: ಬೈಕ್‌ಗಳು ಢಿಕ್ಕಿ ಹೊಡೆದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಯುವಕರಿಬ್ಬರು ಮೃತಪಟ್ಚ ಘಟನೆ ಗುಟ್ಟೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ನಡೆದಿದೆ. ಮೃತರನ್ನು ಗುಟ್ಟೇನಹಳ್ಳಿ ನಿವಾಸಿ ರಾಕೇಶ್ (28) ಮತ್ತು ವಲ್ಲಭಾಯಿ ರಸ್ತೆಯ ಮಯೂರ(25) ಎಂದು ಗುರುತಿಸಲಾಗಿದೆ. ರಾಕೇಶ್ ಅವರ ಬೈಕ್ ಮತ್ತು ಮಯೂರ್ ಅವರ ಹೋಂಡಾ ಆಕ್ಟಿವಾ ನಡುವೆ ಅಪಘಾತ ಸಂಭವಿಸಿರುವುದಾಗಿದೆ. ಸವಾರರ ಅತಿ ವೇಗ ಮತ್ತು ನಿಯಂತ್ರಣ ತಪ್ಪಿದ ಕಾರಣವೇ ಈ ಅಪಘಾತ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸವಾರರು

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸವಾರರಿಬ್ಬರ ಸಾವು Read More »

error: Content is protected !!
Scroll to Top