ಸುದ್ದಿ

ಪುಣೆ ಅತ್ಯಾಚಾರ ಆರೋಪಿ ಕೊನೆಗೂ ಸೆರೆ

13 ತಂಡಗಳಿಂದ 75 ತಾಸುಗಳಲ್ಲಿ ನಿರಂತರ ಹುಡುಕಾಟದ ಬಳಿಕ ಸೆರೆಸಿಕ್ಕ ಆರೋಪಿ ಪುಣೆ: ಇಲ್ಲಿನ ಸ್ವಾರ್ಗೇಟ್‌ ಸರಕಾರಿ ಬಸ್‌ ಡಿಪೊದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು 75 ತಾಸುಗಳ ತೀವ್ರ ಕಾರ್ಯಾಚರಣೆಯ ಬಳಿಕ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರೇಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್ ತಾಲೂಕಿನಿಂದ ಬಂಧಿಸಿದ್ದಾರೆ. ಪೊಲೀಸರ ಮೂಗಿನಡಿಯಲ್ಲೇ ನಡೆದ ಈ […]

ಪುಣೆ ಅತ್ಯಾಚಾರ ಆರೋಪಿ ಕೊನೆಗೂ ಸೆರೆ Read More »

ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ

ಭಾರತ, ಚೀನಾದಲ್ಲೂ ಭೂಮಿ ಕಂಪಿಸಿದ ಅನುಭವ ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ನೇಪಾಳದ ಪೂರ್ವ ಮತ್ತು ಮಧ್ಯ ಭಾಗಗಳಲ್ಲಿರುವ ಜನರಿಗೆ ಭೂಕಂಪದ ಅನುಭವ ಆಗಿದೆ. ಭಾರತ,ಚೀನಾ ಮತ್ತು, ಟಿಬೆಟ್‌ನ ಕೆಲವು ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.ನೇಪಾಳದ ಮಧ್ಯ ಭಾಗದಲ್ಲಿರುವ ಹಿಮಾಲಯ ಪ್ರದೇಶದಲ್ಲಿ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಹೇಳಲಾಗಿದೆ. ಭೂಕಂಪದ ಕೇಂದ್ರಬಿಂದು ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿದ್ದು,

ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು ಫೆ, 27ರಂದು ಆನ್ಲೈನ್ ಮೂಲಕ ಪ್ರಾರಂಭವಾಗಿದೆ.  ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ. ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು, ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ

ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ Read More »

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು : 32ನೇ ವರ್ಷದ ಪುತ್ತೂರಿನ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.1 ಹಾಗೂ 2 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೀರ್ತಿಶೇಷ ಜಯಂತ ರೈ ಹಾಗೂ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ Read More »

ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌ ಆದೇಶ

ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಬರುವುದು ದೃಢಪಟ್ಟ ಬಳಿಕ ಕ್ರಮ ಬೆಂಗಳೂರು : ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ಹಾಳೆಗಳಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆ ಬರುತ್ತದೆ ಎಂಬುದು ಬಹಿರಂಗವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯದ ಹೋಟೆಲ್‌, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿದೆ. . ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ

ಹೋಟೆಲ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ನಿಷೇಧ : ದಿನೇಶ್‌ ಗುಂಡೂರಾವ್‌ ಆದೇಶ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ | ರಾತ್ರಿ ಚಂದ್ರಮಂಡಲ ಉತ್ಸವ, ವೈಭವದ ತೆಪ್ಪೋತ್ಸವ | ಕಿಕ್ಕಿರಿದು ತುಂಬಿದ ಜನಸಾಗರ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ತಡ ರಾತ್ರಿ ವರೆಗೂ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ ಶ್ರೀ ದೇವಸ್ಥಾನಕ್ಕೆ ಭಕ್ತಾದಿಗಳ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ | ರಾತ್ರಿ ಚಂದ್ರಮಂಡಲ ಉತ್ಸವ, ವೈಭವದ ತೆಪ್ಪೋತ್ಸವ | ಕಿಕ್ಕಿರಿದು ತುಂಬಿದ ಜನಸಾಗರ Read More »

ಪುತ್ತೂರು : ಹೆಜ್ಜೇನು ದಾಳಿ | ವಿದ್ಯಾರ್ಥಿಗಳು ಸಹಿತ 15ಕ್ಕು ಹೆಚ್ಚು ಮಂದಿಗೆ ಗಾಯ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಯ ಸಂಪರ್ಕ ರಸ್ತೆಯಲ್ಲಿ ಅದರ್ಶ ಆಸ್ಪತ್ರೆಯ ಎದುರು ಹೆಚ್ಚೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ಸುಮಾರು 9.30ರ ಹೊತ್ತಿಗೆ ಪುತ್ತೂರಿನಲ್ಲಿ ಈ ಘಟನೆ ನಡೆದಿದೆ. ಹೆಚ್ಚೇನು ದಾಳಿಯಿಂದ ಸುಮಾರು 10 ರಿದ 15 ಜನರಿಗೆ ಗಾಯಗಳಾಗಿದ್ದು, ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡವರನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟ ಕೆಲವರಿಗೆ  ಹೆಚ್ಚೇನು  ದಾಳಿ ನಡೆಸಿದೆ. ಅಲ್ಲದೇ ಹೆಜ್ಜೆನು ವ್ಯಕ್ತಿಯೋರ್ವರ ಮೇಲೆ ಸುಮಾರು 20

ಪುತ್ತೂರು : ಹೆಜ್ಜೇನು ದಾಳಿ | ವಿದ್ಯಾರ್ಥಿಗಳು ಸಹಿತ 15ಕ್ಕು ಹೆಚ್ಚು ಮಂದಿಗೆ ಗಾಯ Read More »

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು?

ಹೆಸರು ಬಹಿರಂಗವಾದ ಬಳಿಕ ನಾಪತ್ತೆಯಾಗಿರುವ ಉಡುಪಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಮಂಗಳೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಿದ ಘಟನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ.ವಾಮಾಚಾರಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.ಈಗ ವಾಮಾಚಾರ

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು? Read More »

ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕಳ ನೀಡಿದ ಯುವಕ | ಆರೋಪಿ ವಿರುದ್ದ ಫೋಕ್ಸೋ ಪ್ರಕರಣ  ದಾಖಲು

ಪುತ್ತೂರು : ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು  9 ವರ್ಷದ ಅಪ್ರಾಪ್ತ ಬಾಲಕಿಗೆ  ತೋರಿಸಿ,  ಲೈಂಗಿಕ ಕಿರುಕುಳದ ಆರೋಪದ ಹಿನ್ನಲೆ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಮಹಮ್ಮದ್ ಇರ್ಷಾದ್(20) ಲೈಂಗಿಕ ಕಿರುಕುಳ ನೀಡಿದ ಆರೋಪಿ ಎನ್ನಲಾಗಿದೆ. ಮಹಮ್ಮದ್ ಇರ್ಷಾದ್ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.  ಆರೋಪಿ 9 ವರ್ಷದ ಅಪ್ರಾಪ್ತಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ ಪೋಷಕರು ಹಾಗೂ ಅಪ್ರಾಪ್ತೆ ಬಾಲಕಿ ದೂರು

ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕಳ ನೀಡಿದ ಯುವಕ | ಆರೋಪಿ ವಿರುದ್ದ ಫೋಕ್ಸೋ ಪ್ರಕರಣ  ದಾಖಲು Read More »

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ

ನಿಲ್ಲಿಸಿದ್ದ ಬಸ್‌ಗಳಲ್ಲಿ ರಾಶಿ ರಾಶಿ ಕಾಂಡೋಮ್‌, ಬಿಯರ್‌ ಬಾಟಲಿ, ಒಳ ಉಡುಪು ಪತ್ತೆ ಪುಣೆ : ಪುಣೆಯ ಜನನಿಬಿಡ ಸ್ವಾರ್ಗೇಟ್ ಸರಕಾರಿ ಬಸ್​ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ನಡೆದಿರುವ ಅತ್ಯಾಚಾರ ಕೃತ್ಯ ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ನಿಲ್ಲಿಸಿದ್ದ ಸ್ಟೇಷನರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಬಸ್​ಗಳಲ್ಲಿ ರಾಶಿಗಟ್ಟಲೆ ಕಾಂಡೋಮ್, ಮದ್ಯದ ಬಾಟಲಿಗಳು, ಮಹಿಳೆಯರ ಒಳಉಡುಪುಗಳು ಪತ್ತೆಯಾಗಿದ್ದು ಬಹಳ ಕಾಲದಿಂದ ಇಲ್ಲಿ ಅತ್ಯಾಚಾರ ಮತ್ತಿತರ ಅಪರಾಧ

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ Read More »

error: Content is protected !!
Scroll to Top