ಸ್ಥಳೀಯ ಸುದ್ದಿ

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಾಖೆಯಲ್ಲಿ ವೈಕುಂಠ ಏಕಾದಶಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ಇದರ ಕಳಿಯ ಗೇರುಕಟ್ಟೆ ಕ್ಷೀರಸಂಗಮ ಶಾಖೆಯಲ್ಲಿ ವೈಕುಂಠ ಏಕಾದಶಿಯ ಆಚರಣೆಯನ್ನು ಭಜನೆ, ವಿಷ್ಣು ನಾಮ ಸಂಕೀರ್ತನೆ ಮತ್ತು ವಿಷ್ಣು ನಮಸ್ಕಾರದ ಮೂಲಕ ಆಚರಿಸಲಾಯಿತು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿ, ಭಗವತ್ ಪ್ರೀತಿ ಮತ್ತು ಭಗವತ್ ಪ್ರಾಪ್ತಿಗಾಗಿ ಮಾಡುವ ಸತ್ಕರ್ಮಗಳಿಂದ ಪಡೆಯುವ ಪುಣ್ಯ ವಿಶೇಷದಿಂದ ಭಗವಂತನ ಸಾನಿಧ್ಯವನ್ನು ಪಡೆಯಬಹುದು. ಸಮರ್ಪಣ ಭಾವದಿಂದ ಮಾಡುವ ಕರ್ಮಾಚರಣೆಯಿಂದ ಜ್ಞಾನವನ್ನು […]

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಾಖೆಯಲ್ಲಿ ವೈಕುಂಠ ಏಕಾದಶಿ ಆಚರಣೆ Read More »

‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ

ಸುಳ್ಯ: ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ. ಬಿ. ಫೌಂಡೇಶನ್ ಅಧ್ಯಕ್ಷ ಎಂ. ಬಿ. ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕೃತಿಯ ಸಂಪಾದಕಿ ಡಾ. ಅನುರಾಧಾ ಕುರುಂಜಿ,

‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ Read More »

ಭಜನೆಯಿಂದ ಸಂಸ್ಕಾರ ಬೆಳೆಯುತ್ತದೆ, ಮನೆ ಮನ ಬೆಳಗುತ್ತದೆ : ರಾಧಾಕೃಷ್ಣ ಅಡ್ಯಂತಾಯ

ವಿಟ್ಲ: ಭಜನಾ ಮಂದಿರ, ದೇವಸ್ಥಾನಗಳಲ್ಲಿ ಭಜನಾ ಕಾರ್ಯಕ್ರಮ ಮಾಡುವುದರ ಜೊತೆಗೆ ಪ್ರತಿ ಮನೆಯಲ್ಲೂ ನಿರಂತರ ಭಜನೆ ನಡೆಯಬೇಕು. ವ್ಯಕ್ತಿ ನಿರ್ಮಾಣ ಶಿಕ್ಷಣ ದೊರೆತಲ್ಲಿ ಮನುಷ್ಯನ ಮನಸ್ಸು ಚಂಚಲಗೊಳ್ಳುವುದಿಲ್ಲ. ಅದಕ್ಕಾಗಿ ಧಾರ್ಮಿಕ ಶಿಕ್ಷಣ ಅತ್ಯಗತ್ಯ. ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರೇರಣೆ ನೀಡುತ್ತಿದ್ದು ಭಜನಾ ಪರಿಷತ್ತಿನ ಕಾರ್ಯ ಚಟುವಟಿಕೆಗಳು ಶ್ಲಾಘನೀಯ ಎಂದು ನಿವೃತ್ತ ಅಧ್ಯಾಪಕ ರಾಧಾಕೃಷ್ಣಾಯ ಅಡ್ಯಂತಾಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್( ರಿ) ವಿಟ್ಲ ತಾಲ್ಲೂಕು ಅಳಿಕೆ ವಲಯ ,ಶ್ರೀ ಧರ್ಮಸ್ಥಳ

ಭಜನೆಯಿಂದ ಸಂಸ್ಕಾರ ಬೆಳೆಯುತ್ತದೆ, ಮನೆ ಮನ ಬೆಳಗುತ್ತದೆ : ರಾಧಾಕೃಷ್ಣ ಅಡ್ಯಂತಾಯ Read More »

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ : ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

ಸುಳ್ಯ: ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮ ತಾಲೂಕಿನ ಸ. ಹಿ. ಪ್ರಾಥಮಿಕ ಶಾಲೆ, ಮುಳ್ಯ ಅಟ್ಲೂರಿನಲ್ಲಿ ನಡೆಯಿತು. ಟ್ರಸ್ಟ್‌ನ ಗೌರವ ಅಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಫಾಲಚಂದ್ರ ವೈ.ವಿ, ಸಲಹಾ ಸಮಿತಿ ಸದಸ್ಯೆೋೋ ಡಾ. ಅನುರಾಧಾ ಕುರುಂಜಿ, ಸ್ಥಳೀಯ ಸಮಿತಿಯ ಗೌರವ ಸಂಚಾಲಕ ಶಿವರಾಮ್ ಕೇನಾಜೆ, ಸಂಚಾಲಕ ನಾಗರಾಜ್ ಮುಳ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಅಟ್ಲೂರು, ಶಾಲಾ

ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ : ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಿತು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪಥಸಂಚಲನ ಮಾಡಿ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳು ತಂದ ಕ್ರೀಡಾ ಜ್ಯೋತಿಯಿಂದ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣಗೈದು ಮಾತನಾಡಿದ ಶ್ರೀನಿವಾಸ ಗೌಡ (NCC ಆಫೀಸರ್ ನೇವಿ ವಿಂಗ್ ವಿಠಲ ಪಿಯು ಕಾಲೇಜು ವಿಟ್ಲ), ಕ್ರೀಡೆ ಮತ್ತು ಶಿಕ್ಷಣ ಎರಡು ಕೂಡ ಜೀವನಕ್ಕೆ ಅತ್ಯಗತ್ಯ. ಸಮಾಜದಲ್ಲಿ ಕೆಟ್ಟ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ Read More »

ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷ ಸೇವಾ ಟ್ರಸ್ಟ್ ಸ್ವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 103ನೇ ತಾಳಮದ್ದಳೆ ಕಲಿಕೀಚಕ ಎಂಬ ಪ್ರಸಂಗ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಬಿ. ಸುರೇಶ ರಾವ್ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಪರಪ್ಪು ಭಾಗವಹಿಸಿದ್ದರು. ವಿರಾಟನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಮಂತ್ರಿ ಮಾತಂಗ ಮತ್ತು ಭೀಮಸೇನನಾಗಿ ಶ್ರೀಧರ ಎಸ್ ಪಿ ಕೃಷ್ಣಾಪುರ, ರಥಕಾರನಾಗಿ ಸತೀಶ ಶಿರ್ಲಾಲು, ಕೀಚಕನಾಗಿ ಜಯರಾಮ ಗೌಡ

ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ Read More »

ಡಾ. ಕೆ. ಚಿನ್ನಪ್ಪ ಗೌಡರ ಕೃತಿ ‘ಭೂತಾರಾಧನೆ- ಮಾಯದ ‌ನಡೆ ಜೋಗದ ನುಡಿ’ ಬಿಡುಗಡೆ

ಮಂಗಳೂರು: ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆಯಾದ ಡಾ. ಕೆ. ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ – ಮಾಯದ ನಡೆ ಜೋಗದ ನುಡಿ’ ಕೃತಿ ಬಿಡುಗಡೆ ಸಮಾರಂಭ ನಡೆಯಿತು. ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್. ಎಫ್. ರಸ್ಕಿನ್ಹ ಸಭಾಂಗಣ, ಎಲ್.ಸಿ.ಆರ್.ಐ. ಬ್ಲಾಕ್‌ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ

ಡಾ. ಕೆ. ಚಿನ್ನಪ್ಪ ಗೌಡರ ಕೃತಿ ‘ಭೂತಾರಾಧನೆ- ಮಾಯದ ‌ನಡೆ ಜೋಗದ ನುಡಿ’ ಬಿಡುಗಡೆ Read More »

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್: ಗ್ಲೋ ಫೆಸ್ಟ್‌ಗೆ ಚಾಲನೆ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಾರ್ಷಿಕ ವಜ್ರಾಭರಣಗಳ ಮಹೋತ್ಸವ ಗ್ಲೋಬಲ್ ಫೆಸ್ಟ್ ಇಂದಿನಿಂದ ಮುಂದಿನ ಒಂದು ತಿಂಗಳ ಕಾಲ ನಡೆಯಲಿದ್ದು, ಇಂದು ಚಾಲನೆ ದೊರೆತಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ನಳಿನಿ ಪಿ. ಶೆಟ್ಟಿ ಅವರು ದೀಪ ಬೆಳಗಿಸಿ, ಮಹೋತ್ಸವಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಬಿ. ಆಚಾರ್ಯ ಮಾತನಾಡಿ, ಪ್ರಸ್ತುತ ಮಾರುಕಟ್ಟೆಯಲ್ಲಿ ನೈಜ ವಜ್ರಗಳು ಮತ್ತು ಲ್ಯಾಬ್ ತಯಾರಿತ ವಜ್ರಗಳು ಎಂಬ ಎರಡು ವಿಧಗಳಿವೆ.

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್: ಗ್ಲೋ ಫೆಸ್ಟ್‌ಗೆ ಚಾಲನೆ Read More »

ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ

ಸಂಪ್ಯ: ಪುತ್ತೂರಿನ ಆರಕ್ಷಕ ಠಾಣೆಯ ಬಳಿ ಕಾರ್ಯಾಚರಿಸುತ್ತಿರುವ ತರಬೇತಿ ಸಂಸ್ಥೆ ವಿದತ್ (VIDATH) ಇದರ ಆಡಳಿತ ಮಂಡಳಿಯವರು ಕಚೇರಿ ನಿರ್ವಾಹಕ (Office Admin) ಹುದ್ದೆಗೆ ನೇಮಕಾತಿ ಮಾಡಲಿದ್ದು ಆಸಕ್ತರನ್ನು ಆಹ್ವಾನಿಸಿದ್ದಾರೆ. ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಶುಭಾ ಅವರು ತಿಳಿಸಿದ್ದಾರೆ.

ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ Read More »

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶವಿರುವ ಸರ್ಕಾರಿ ಅಧಿಕಾರಿ ಹುದ್ದೆಗಳನ್ನು ಪಡೆಯಲು ಕೆಎಎಸ್,ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸನ್ನು ಪಡೆಯಲು ಪಿಯುಸಿಯ ವಿದ್ಯಾರ್ಥಿಗಳು ಈ ಹಂತದಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು. ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಜ್ಞಾನಾರ್ಜನೆಗಾಗಿ ಶಿಕ್ಷಣದ ಜೊತೆಗೆ ಸಾಮಾಜಿಕ ಋಣವನ್ನು ತೀರಿಸುವುದು ಪ್ರತಿಯೊಬ್ಬರ ಕರ್ತವ್ಯವೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹಿರಿಯ ಉಪನ್ಯಾಸಕಿಯಾದ ಭಾಗ್ಯಲಕ್ಷ್ಮಿ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ Read More »

error: Content is protected !!
Scroll to Top