ಸ್ಥಳೀಯ ಸುದ್ದಿ

ಉಡುಪಿಯಲ್ಲಿ 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ

ಉಡುಪಿ: ಕೊಡಗಿನ ಹೋಂ‌ಸ್ಚೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆ ಹೋಂ ಸ್ಟೇ‌ಗಳ ಮೇಲೆ ಹದ್ದಿನ ಕಣ್ಣಿರಿಸಲು ಆರಂಭಿಸಿದೆ. ಮಾನ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ 32 ಅಕ್ರಮ ಹೋಂಸ್ಟೇಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ […]

ಉಡುಪಿಯಲ್ಲಿ 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ Read More »

ಎ. 27: ಲೋಕ ಕಲ್ಯಾಣಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸಿಯಾಳಾಭಿಷೇಕ

ಪುತ್ತೂರು: ಲೋಕ ಕಲ್ಯಾಣಕ್ಕಾಗಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಎ. 27 ರಂದು ವಿಶೇಷ ಸಿಯಾಳಾಭಿಷೇಕ ಸೇವೆ ನಡೆಯಲಿದೆ. ಶ್ರೀ ದೇವರಿಗೆ ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ವರೆಗೆ ಸೀಯಾಳಾಭಿಷೇಕ ನಡೆಯಲಿದೆ. ಈ ಪುಣ್ಯ ಕಾರ್ಯಕ್ಕೆ ಶ್ರೀ ದೇವರಿಗೆ ಎಳನೀರು ಸಮರ್ಪಣೆ ಮಾಡುವ ಭಕ್ತರು ಆನದಿನ 9.30 ಕ್ಕೆ ಮುಂಚಿತವಾಗಿ ದೇವಾಲಯದ ಒಳಗೆ ಸಮರ್ಪಿಸುವಂತೆ ಮನವಿ ಮಾಡಲಾಗಿದೆ. ಈ ಮಹತ್ಕಾರ್ಯದಲ್ಲಿ ಹೆಚ್ಚಿನ ಭಕ್ತಬಾಂಧವರು ಪಾಲ್ಗೊಂಡು, ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವ್ಯವಸ್ಥಾಪನಾ ಮಂಡಳಿ ವಿನಂತಿಸಿಕೊಂಡಿದೆ.

ಎ. 27: ಲೋಕ ಕಲ್ಯಾಣಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸಿಯಾಳಾಭಿಷೇಕ Read More »

ಮಾಜಿ ಪತ್ನಿಯ ಸಂಬಂಧಿಕರ ‌ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್

ಮಂಗಳೂರು: ಕುಟುಂಬ ಕಲಹದ ಹಿನ್ನೆಲೆ ಪತ್ನಿಯ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ವಾಮಂಜೂರಿನ ನವೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್ ಪತ್ನಿ ವಿಚ್ಛೇದನ ಪಡೆದು ಕೆಲವು ತಿಂಗಳುಗಳಿಂದ ಜೋಕಟ್ಟೆಯಲ್ಲಿ ಬೇರೆ ವಾಸವಿದ್ದರು. ಇದೇ ಸಿಟ್ಟಿನಲ್ಲಿ ನವೀನ್ ಕತ್ತಿ ಹಿಡಿದು ಜೋಕಟ್ಟೆಗೆ ರಾತ್ರಿ ಬೈಕ್‌ನಲ್ಲಿ ಆಗಮಿಸಿದ್ದಾನೆ. ನವೀನ್ ಕಳವರದ ದೇವಿಪ್ರಸಾದ್ ಎಂಬವರ ಮೇಲೆ ಹಲ್ಲೆ ನಡೆಸುವ ಹಿನ್ನೆಲೆ ಆಯುಧದ ಜೊತೆ ಬಂದಿದ್ದಾನೆ. ದೇವಿಪ್ರಸಾದ್ ಮತ್ತು ಪೋಷಕರ ಮೇಲೆ ಹಲ್ಲೆಗೆ ಪ್ರಯತ್ನ ಮಾಡಿದ್ದಾನೆ. ತಕ್ಷಣವೇ ದೇವಿಪ್ರಸಾದ್

ಮಾಜಿ ಪತ್ನಿಯ ಸಂಬಂಧಿಕರ ‌ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್ Read More »

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಪುತ್ತೂರು: ಕಲ್ಲೇಗ ‌ಟೈಗರ್ಸ್ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಹತ್ಯೆ ಮಾಡಿದ 1 ಮತ್ತು 2 ನೇ ಆರೋಪಿಗಳಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ನೀಡಿದೆ. ನವೆಂಬರ್ 6, 2023 ರಂದು ರಾತ್ರಿ ವೇಳೆ ನೆಹರೂ ನಗರದಲ್ಲಿ ಅಕ್ಷಯ್ ಕಲ್ಲೇಗನ ಮೇಲೆ ಭೀಕರ ಹಲ್ಲೆ ನಡೆಸಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣದ 1 ನೇ ಆರೋಪಿ ಪಡೀಲಿನ ಮನೀಶ್, 2 ನೇ ಆರೋಪಿ ಕೃಷ್ಣನಗರದ ‌ಚೇತನ್

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ

ಕಾರ್ಕಳ: ಗಾಂಧಿ ಮೈದಾನದ ಹತ್ತಿರದಲ್ಲಿರುವ ಶಾಂಭವಿ ಡಿವೈನ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಈ ದುರಂತ ನಡೆದಿದ್ದು, ಸುಮಾರು ಐದು ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸಂದೀಪ್ ಹೆಗ್ಡೆ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ಟಿವಿ ಸೇರಿದಂತೆ ಇತರ ಪರಿಕರಗಳು ಬೆಂಕಿಗೆ ಆಹುತಿಯಾಗಿವೆ.

ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ Read More »

ಕಾಡಾನೆ ದಾಳಿ: ಮೂವರು ಇಟಿಎಫ್ ಸಿಬ್ಬಂದಿಗೆ ಗಾಯ

ಹಾಸನ: ಇಟಿಎಫ್‌ನ ಮೂವರು ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬೇಲೂರಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ರಮೇಶ್, ವಿಶ್ವ, ಜೀವನ್ ಎಂದು ಗುರುತಿಸಲಾಗಿದೆ. ಅದರಲ್ಲಿ ರಮೇಶ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ‌. ಗ್ರಾಮದ ಹಾಸ್ಟೆಲ್ ಹಿಂಭಾಗದಲ್ಲಿ ಸಿಬ್ಬಂದಿ ಮೇಲೆ ಆನೆ ದಾಳಿ ನಡೆದಿರುವುದಾಗಿದೆ. ಕಾಡಾನೆಗಳ ಹೆಜ್ಜೆಗುರುತು ಹಿಂಬಾಲಿಸಿಕೊಂಡು ಈ ಸಿಬ್ಬಂದಿ ಮುನ್ನಡೆಯುತ್ತಿದ್ದರು. ಈ ಸಮಯದಲ್ಲಿ ಇವರ ಮೇಲೆ ಏಕಾಏಕಿ ಆನೆ ದಾಳಿ ನಡೆದಿರುವುದಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ

ಕಾಡಾನೆ ದಾಳಿ: ಮೂವರು ಇಟಿಎಫ್ ಸಿಬ್ಬಂದಿಗೆ ಗಾಯ Read More »

ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ಶಾರದಾ ಪ್ರೌಢಶಾಲೆಗೆ 100% ಫಲಿತಾಂಶ

ಸುಳ್ಯ: ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಶ್ರೀ ಶಾರದಾ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 7 ಮಂದಿ ಡಿಸ್ಟಿಂಕ್ಷನ್, 25 ಮಂದಿ ಪ್ರಥಮ ದರ್ಜೆ, 5 ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗುತ್ತಿಗಾರು ಕಮಿಲದ ಕೆ. ಬಾಲಕೃಷ್ಣ ಪೂಜಾರಿ ಮತ್ತು ಲಲಿತಾ ದಂಪತಿಯ ಪುತ್ರಿ ತನುಶ್ರೀ-589 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ದುಗಲಡ್ಕದ ಸುರೇಶ್ ಐ. ಮತ್ತು ಜಯಶೀಲ ಬಿ. ವಿ. ದಂಪತಿಯ ಪುತ್ರಿ ಸಮೀಕ್ಷಾ

ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ಶಾರದಾ ಪ್ರೌಢಶಾಲೆಗೆ 100% ಫಲಿತಾಂಶ Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 26 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಅಯಿಷತ್ ಇಹ್‌ಶಾನ-602 (ಕಲಂಬಿ ಪಲ್ಲತ್ತಾರು ಅಬ್ಬಾಸ್ ಮತ್ತು ರೆಹನತ್ ದೇಂಬಲೆ ಇವರ ಮಗಳು), ಶಝ ಫಾತಿಮ ಪಿ – 600 (ಉಮ್ಮರ್ ಶಾಫಿ ಪಿ. ಮತ್ತು ಫಾತಿಮತ್ ಶಹರ್ ಬಾನ್ ಪಿ.

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್ Read More »

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ಏಳು ಜನರ ಗುಂಪೊಂದು ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬೆಳ್ತಂಗಡಿ ಆದಿಲ್ ಹುಸೈನ್ (21) ಎಂದು ಗುರುತಿಸಲಾಗಿದೆ. ಈ ಹಿಂದೆ ನಡೆದಿದ್ದ ಜಗಳವೊಂದನ್ನು ಬಿಡಿಸಿದ್ದಕ್ಕೆ ‌ಪ್ರತಿಕಾರವಾಗಿ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಎ. 22 ರಂದು ತನ್ನ ಗೆಳೆಯರಿಬ್ಬರ ಜೊತೆಗೆ ಪುತ್ತೂರು ಬಸ್‌ಸ್ಟಾಂಡ್‌ನಲ್ಲಿ ‌ಟಿ ಕುಡಿಯುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು Read More »

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಮಹೇಶ ಮರ್ದಿನಿ ಯಕ್ಷಕಲಾ ಪ್ರತಿಷ್ಠಾನ (ರಿ )ಚಾರ – ಹೆಬ್ರಿ ಸಂಯೋಜನೆಯಲ್ಲಿ ಚಾರ ಪ್ರದೀಪ ಹೆಬ್ಬಾರ್ ರಚಿತ ಉಲೂಪಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ದೇವಿ ಪ್ರಸಾದ್ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥಧಾರಿಗಳಾಗಿ ಶ್ರೀಧರ ಎಸ್. ಪಿ. ಕೃಷ್ಣಾಪುರ (ಅರ್ಜುನ), ದಿವಾಕರ ಆಚಾರ್ಯ ಗೇರುಕಟ್ಟೆ(ಉಲೂಪಿ), ಸಂಜೀವ ಪಾರೆಂಕಿ (ಕೌರವ್ಯ), ಚಾರ ಪ್ರದೀಪ ಹೆಬ್ಬಾರ್( ದೃತರಾಷ್ಟ್ರ) ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ Read More »

error: Content is protected !!
Scroll to Top