ಸ್ಥಳೀಯ ಸುದ್ದಿ

ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ

ಅಧ್ಯಕ್ಷರಾಗಿ ಮೋಹನ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ರಾಜೇಂದ್ರ ಪ್ರಸಾದ್ ಶೆಟ್ಟಿ ನೇಮಕ ಪುತ್ತೂರು: ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿಯ ಕುರಿಯ ಏಳ್ನಾಡುಗುತ್ತಿನ ವಾರ್ಷಿಕ ಮಹಾಸೇವೆ ಅಧ್ಯಕ್ಷ ಚೆನ್ನಪ್ಪ ರೈ ಬಳಜ್ಜ ಇವರ ನೇತೃತ್ವದಲ್ಲಿ ಸಾಂಗವಾಗಿ ಜರುಗಿತು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ವರದಿ ಮಂಡನೆ, ಅನುಮೋದನೆಗಳು ನಡೆದವು. ಸಮಿತಿಯ ಪುನಾರಚನೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಮೋಹನ್ ರೈ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ ಅಧ್ಯಕ್ಷ ಮತ್ತು G5 Nexus […]

ಕುರಿಯ ಏಳ್ನಾಡುಗುತ್ತು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನ ಸಮಿತಿ ರಚನೆ Read More »

ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ

ಸಂಪ್ಯ:ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ‘ವಾಣಿಜ್ಯ ವ್ಯೂಹ’ ಎಂಬ ಶಿರೋನಾಮೆಯಲ್ಲಿ ಭಿತ್ತಿಪತ್ರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಕೇಶವ್ ಅಮೈ (ಆಡಳಿತ ನಿರ್ದೇಶಕರು ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು) ಇವರು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರು ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ. ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ವಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಮುಖ್ಯ ಅತಿಥಿ ಡಾ. ಅಕ್ಷಯ್ (ಕಾರ್ಯದರ್ಶಿ ಅಕ್ಷಯ ಸಮೂಹ

ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ Read More »

ಯುಗಾದಿ ಪ್ರಯುಕ್ತ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‌ವಿಶೇಷ ಆಫರ್

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ 50%ವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದಾಗಿದೆ. ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಹಬ್ಬದ ಸಂಭ್ರಮವನ್ನು ಹೊಸ ಆಭರಣಗಳೊಂದಿಗೆ ಆಚರಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಈ ಕೊಡುಗೆ ಮಾರ್ಚ್ 18ರಿಂದ 23ರವರೆಗೆ ಮಾತ್ರ

ಯುಗಾದಿ ಪ್ರಯುಕ್ತ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ‌ವಿಶೇಷ ಆಫರ್ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಉಪ್ಪಿನಂಗಡಿ: ಪಾರದರ್ಶಕತೆಯಿಂದ ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಸಂಸ್ಥೆಗಳಿಗೆ ಜನರ ಬೆಂಬಲವಿದ್ದು ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಸೇವಾ ಕಾರ್ಯಗಳನ್ನು ನಡೆಸಲು ಕರ್ನಾಟಕ ಸೇವಾ ಭಾರತೀ ಸಂಸ್ಥೆಯು ಮಾರ್ಗದರ್ಶನ ನೀಡಲು ಬದ್ಧವಾಗಿದೆ ಎಂದು ಸೇವಾ ಭಾರತಿ ಸಂಸ್ಥೆಯ ದಕ್ಷಿಣ ಪ್ರಾಂತ್ಯದ ಸಂಚಾಲಕ ಕೆ. ಚೆನ್ನಯ್ಯ ಸ್ವಾಮಿ ದೇರೆಬೈಲು ತಿಳಿಸಿದರು. ಉಪ್ಪಿನಂಗಡಿಯ ಪಾತಾಳ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸಿದ್ಧ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ಮಾ. 15: ಕೋಕೋ ಮಿತ್ರ ಸಂಸ್ಥೆ ಶುಭಾರಂಭ

ಸುಳ್ಯ: ನೂತನವಾದ ಕೋಕೋ ‌ಮಿತ್ರ ಎಂಬ ಹೆಸರಿನ ಪರಿಶುದ್ಧ ತೆಂಗಿನೆಣ್ಣೆ ಮತ್ತು ಇತರ ವಸ್ತುಗಳ ತಯಾರಿಕಾ ಘಟಕವು ಮಾ. 15 ರ ಆದಿತ್ಯವಾರದಂದು ‌ನಿಂತಿಕಲ್ಲಿನಲ್ಲಿ ಶುಭಾರಂಭಗೊಳ್ಳಲಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಮಂಗಳೂರು ಇಲ್ಲಿನ ಪರಮ ಪೂಜ್ಯ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಪವಿತ್ರ ಪಾವಕ ಪ್ರಜ್ವಲನೆ ಮತ್ತು ಆಶೀರ್ವಚನ ನೀಡಲಿದ್ದಾರೆ.ಶಾಸಕಿ ಭಾಗೀರಥಿ ಮುರುಳ್ಯ ಅವರು ಘಟಕದ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ಜಾನಪದ ವಿವಿ ಹಾವೇರಿಯ ‌ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ

ಮಾ. 15: ಕೋಕೋ ಮಿತ್ರ ಸಂಸ್ಥೆ ಶುಭಾರಂಭ Read More »

ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ

ಸುಳ್ಯ: ಸ್ವಾವಲಂಬಿ ಬದುಕು ವ್ಯಕ್ತಿಯನ್ನು ಬಲಿಷ್ಠನಾಗಿಸುತ್ತದೆ. ತನ್ನ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಬದುಕುವ ವ್ಯಕ್ತಿ ಸಮಾಜಕ್ಕೆ ಮಾದರಿಯಾಗುತ್ತಾನೆ. ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ, ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ಸುಳ್ಯ ತಾಲೂಕಿನ ದೊಡ್ಡೇರಿ ಕಾರ್ಯಕ್ಷೇತ್ರದಲ್ಲಿ ಅಮೃತ ಜ್ಞಾನವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದ

ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ Read More »

ಕುಸಿದು ಬಿದ್ದು ಉಪನ್ಯಾಸಕ ಮೃತ್ಯು

ಸುಳ್ಯ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೈಸೂರಿನ ಕೆ. ಆರ್. ನಗರದ ಬೇರ್ಯ ನಿವಾಸಿ ಮಂಜು (42) ಎಂಬವರೇ ‌ಮೃತ ದುರ್ದೈವಿ. ಗುರುವಾರ ತರಗತಿ ಮುಗಿಸಿದ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಹೀಗಾಗಿ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆದಿದ್ದರು. ಬಳಿಕ ಸ್ಥಳೀಯ ಮೆಡಿಕಲ್‌ಗೆ ಔಷಧ ಖರೀದಿಗೆ ಹೋಗಿದ್ದರು. ಅಲ್ಲಿ ಇದ್ದಕ್ಕಿದ್ದ ಹಾಗೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ‌ ಅವರು

ಕುಸಿದು ಬಿದ್ದು ಉಪನ್ಯಾಸಕ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ

ಸುಳ್ಯ: ನಿನ್ನೆ ರಾತ್ರಿ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ. ಕಾರಿಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಕಾರು ಮಾವಿನಕಟ್ಟೆಯಿಂದ ಸುಳ್ಯದತ್ತ ಬರುತ್ತಿರುವ ಸಮಯದಲ್ಲಿ ಈ ದುರಂತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ Read More »

ವಿವಾಹ ಆರತಕ್ಷತೆ ಪ್ರಯುಕ್ತ ಯಕ್ಷಗಾಯನ

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿದ ಸನತ್ ಮತ್ತು ಹರ್ಷಿತಾ ಆರತಕ್ಷತೆ ಪ್ರಯುಕ್ತ ಯಕ್ಷ ಗಾಯನ ಜರಗಿತು. ಭಾಗವತರಾಗಿ ಮಹೇಶ್ ಕನ್ಯಾಡಿ, ಸುಶಾಂತ್ ಆಚಾರ್ಯ ಕೈಕಂಬ, ಪದ್ಮನಾಭ ಕುಲಾಲ್ ಇಳಂತಿಲ, ಡಿ.ಕೆ. ಆಚಾರ್ಯ ಅಲಂಕಾರು ಮತ್ತು ಸಂಧ್ಯಾ ಬಂಟ್ವಾಳ ಭಾಗವಹಿಸಿದರು. ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಮೋಹನ ಶರವೂರು ಭಾಗವಹಿಸಿದ್ದರು. ಕಲಾವಿದ ಸತೀಶ್ ಆಚಾರ್ಯ ಮಾಣಿ ಕಾರ್ಯಕ್ರಮ ನಿರೂಪಿಸಿದರು. ಕಲಾವಿದರನ್ನು ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ. ಎಲ್. ಗೌರವಿಸಿದರು. ಕುಟುಂಬದ ಹಿರಿಯರಾದ ಯಕ್ಷಗಾನ ಕಲಾವಿದ

ವಿವಾಹ ಆರತಕ್ಷತೆ ಪ್ರಯುಕ್ತ ಯಕ್ಷಗಾಯನ Read More »

ಜಾತಿಗೆ ಬೆಲೆ ನಮ್ಮ ದೇಶದಲ್ಲಿ ಇರಲಿಲ್ಲ ಎನ್ನುವುದು ಇತಿಹಾಸ ಓದಿದರೆ ತಿಳಿಯುತ್ತದೆ: ಅನಂತ ಕುಮಾರ್ ಹೆಗಡೆ

ಭಟ್ಕಳ: ಭಾರತದಲ್ಲಿ ಜಾತಿಗೆ ಎಂದೂ ಬೆಲೆ ಇರಲಿಲ್ಲ. ಯೋಗ್ಯತೆಗೆ ಬೆಲೆ ಇತ್ತು. ನಮ್ಮಂತಹ ಬುದ್ಧಿವಂತರು ಜಾತಿಗೆ ಪ್ರಾಶಸ್ತ್ಯ ನೀಡಿದ್ದು. ನಮ್ಮ ಹಿಂದಿನ ಕಾಲದ ಸತ್ಯ ಏನು ಎನ್ನುವುದು ಇತಿಹಾಸ ಓದಿದರೆ ಅರಿವಾಗುತ್ತದೆ ಎಂದು ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ತಿಳಿಸಿದ್ದಾರೆ. ಅವರು ಭಟ್ಕಳದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ಇತಿಹಾಸದಲ್ಲಿ ಆಗಿ ಹೋದ 90% ಗಳಷ್ಟು ಋಷಿಗಳು ಬ್ರಾಹ್ಮಣರಲ್ಲ. ವಾಲ್ಮೀಕಿ, ವಿಶ್ವಾಮಿತ್ರರೂ ಬ್ರಾಹ್ಮಣರಲ್ಲ. ಜಾತ್ಯಾತೀತತೆ ಎಂದರೆ ಅದು ಹಿಂದುತ್ವ. ನಾವು

ಜಾತಿಗೆ ಬೆಲೆ ನಮ್ಮ ದೇಶದಲ್ಲಿ ಇರಲಿಲ್ಲ ಎನ್ನುವುದು ಇತಿಹಾಸ ಓದಿದರೆ ತಿಳಿಯುತ್ತದೆ: ಅನಂತ ಕುಮಾರ್ ಹೆಗಡೆ Read More »

error: Content is protected !!
Scroll to Top