ಸ್ಥಳೀಯ ಸುದ್ದಿ

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ನೆಕ್ಕಿಲಾಡಿ ಮಸೀದಿಯ ಹಿಂಬದಿಯ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿರುವುದಾಗಿದೆ. ನದಿಯಲ್ಲಿನ ಗಿಡ ಗಂಟಿಗಳ ನಡುವೆ ಶವ ಕಂಡು ಬಂದಿದ್ದು, ನದಿಯಲ್ಲಿ ತೇಲಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ

ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ, ಪುತ್ತೂರು ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ವಿದ್ಯಾರ್ಥಿಗಳಿಗಾಗಿ “ವಿಮಾನಯಾನ” ವಿಶೇಷ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ವಿಮಾನ ನಿಲ್ದಾಣದ ನೈಜ ಕಾರ್ಯಪದ್ಧತಿ ಮತ್ತು ಉದ್ಯೋಗಾವಕಾಶಗಳ ಅರಿವು ಮೂಡಿಸುವುದು ತರಬೇತಿಯ ಮುಖ್ಯ ಉದ್ದೇಶವಾಗಿತ್ತು. ತರಬೇತಿಯ ಭಾಗವಾಗಿ ವಿದ್ಯಾರ್ಥಿಗಳು ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್, ಬೆಂಗಳೂರುಗೆ ಭೇಟಿ ನೀಡಿದರು. ಅಲ್ಲಿ ನಡೆಯುವ ಚೆಕ್-ಇನ್, ಬೋರ್ಡಿಂಗ್, ಭದ್ರತಾ ತಪಾಸಣೆ, ಗ್ರೌಂಡ್ ಹ್ಯಾಂಡ್ಲಿಂಗ್ ಹಾಗೂ ಗ್ರಾಹಕ ಸೇವೆ ಸೇರಿದಂತೆ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು

ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ Read More »

ಕಡಬದ ‌ಯುವಕ ಐರ್ಲೆಂಡಿನಲ್ಲಿ ಮೃತಪಟ್ಟ ‌ಸ್ಥಿತಿಯಲ್ಲಿ ಪತ್ತೆ

ಕಡಬ: ಉದ್ಯೋಗಕ್ಕಾಗಿ ಐರ್ಲೆಂಡಿಗೆ ತೆರಳಿದ್ದ ಕಡಬದ ಯುವಕನೊಬ್ಬ ತನ್ನ ನಿವಾಸದಲ್ಲೇ ನಿಗೂಢವಾಗಿ ಮೃತಪಟ್ಚಿರುವ ಘಟನೆ ನಡೆದಿದೆ. ಮೃತನನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿಯ ಸಾಂಜೋ ‌ಸುನಿಲ್ (31) ಎಂದು ಗುರುತಿಸಲಾಗಿದೆ. ಸಾಂಜೋ ಅವರು ಐರ್ಲೆಂಡಿನ ತಮ್ಮ ನಿವಾಸದಲ್ಲಿ ಶವವಾಗಿ ‌ಪತ್ತೆಯಾಗಿದ್ದು, ಐರಿಶ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ. ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಪತಿಯ ಸಾವಿನ ವಿಷಯ ಕೇಳಿದ ಸಾಂಜೋ ಅವರ ಪತ್ನಿ ಆಘಾತಕ್ಕೆ ಒಳಗಾಗಿ ಅಸ್ವಸ್ಥರಾಗಿದ್ದಾಗಿ ತಿಳಿದು ಬಂದಿದೆ.

ಕಡಬದ ‌ಯುವಕ ಐರ್ಲೆಂಡಿನಲ್ಲಿ ಮೃತಪಟ್ಟ ‌ಸ್ಥಿತಿಯಲ್ಲಿ ಪತ್ತೆ Read More »

ಅಡಿಕೆ ಕಳ್ಳತನ: ಓರ್ವ ಆರೋಪಿಗೆ ನ್ಯಾಯಾಂಗ ಬಂಧನ, ಮತ್ತೊಬ್ಬನಿಗೆ ನಿರೀಕ್ಷಣಾ ಜಾಮೀನು

ಕಡಬ: ತಮ್ಮ ತೋಟದಿಂದ ಅಡಿಕೆ ಕಳ್ಳತನ ಮಾಡಿರುವುದಾಗಿ ‌ಅಲಂಕಾರಿನ ಸತೀಶ್ ಎಂಬವರು ಜ. 25ರಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಪ್ರಕರಣದ ಆರೋಪಿಗಳಲ್ಲಿ ಓರ್ವನಿಗೆ ನ್ಯಾಯಾಂಗ ಬಂಧನ ಮತ್ತು ಇನ್ನೊಬ್ಬನಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಸತೀಶ್ ಅವರ ತೋಟದಿಂದ ಅಡಿಕೆ ಕಳವು ಮಾಡಿ ಆರೋಪಿಗಳಾದ ಕಾಯಿಕಾಣ ಗ್ರಾಮದ ಜಯಂತ್ ಎಂ. ಮತ್ತು ಕಾಣಿಯೂರು ಗ್ರಾಮದ ಲಿಂಗಪ್ಪ ಎಂಬವರು ಪರಾರಿಯಾಗಿದ್ದರು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ಪೈಕಿ ಜಯಂತ್‌ಗೆ ನ್ಯಾಯಾಂಗ

ಅಡಿಕೆ ಕಳ್ಳತನ: ಓರ್ವ ಆರೋಪಿಗೆ ನ್ಯಾಯಾಂಗ ಬಂಧನ, ಮತ್ತೊಬ್ಬನಿಗೆ ನಿರೀಕ್ಷಣಾ ಜಾಮೀನು Read More »

ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಮಾರಿಷಸ್‌‌ಗೆ ಇಂಟರ್ನ್‌ಶಿಪ್‌ಗೆ ಆಯ್ಕೆ

ಪುತ್ತೂರು: ಸಂಪ್ಯದ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟಿನ ಮುಖಾಂತರ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದ್ದು, ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಏವಿಯೇಷನ್(Aviation), ಕೃತಕ ಬುದ್ಧಿಮತ್ತೆ (Artificial Intelligence) ಹಾಗೂ ಹಾಸ್ಪಿಟಾಲಿಟಿ ಸೈನ್ಸ್(Hotel Management) ಕೋರ್ಸ್ಗಳನ್ನು ಪರಿಚಯಿಸಿದ ಪ್ರಥಮ ಕಾಲೇಜು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಈಗಾಗಲೇ ಸತತ ಮೂರು ವರ್ಷಗಳಿಂದ ಏವಿಯೇಷನ್ ಕೋರ್ಸ್ ಮುಖಾಂತರ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಲವಾರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಹಾಗೂ ಏರ್‌ಲೈನ್ಸ್‌ಗಳಲ್ಲಿ

ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಮಾರಿಷಸ್‌‌ಗೆ ಇಂಟರ್ನ್‌ಶಿಪ್‌ಗೆ ಆಯ್ಕೆ Read More »

ಫೆ: 22: ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ), ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ ಕಾರ್ಯಕ್ರಮ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ

ಫೆ: 22: ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಮಂಗಳೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಚಂದ್ರಹಾಸ ಪೂಂಜ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ವಹಿಸಿದ್ದರು. ಮೇಲ್ಕಾರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶಂಕರಪತ್ತಿನ ಸಹಕಾರಿ ಸಂಘದ ಶಾಖೆಯನ್ನು ಪುತ್ತೂರು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ಫೆ.20-24: ಶ್ರೀ ಕಾಣಿಯೂರು ಮಠದಲ್ಲಿ ಜಾತ್ರಾ ಮಹೋತ್ಸವ

ಕಾಣಿಯೂರು: ಶ್ರೀ ಜಗದ್ಗುರು ಶ್ರೀ ಮನ್ಮದ್ವಚಾರ್ಯ ಮೂಲ‌ ಮಹಾಸಂಸ್ಥಾನಂ ಶ್ರೀ ಕಾಣಿಯೂರು ಮಠ, ಕಾಣಿಯೂರಿನ ಜಾತ್ರಾ ಮಹೋತ್ಸವವು ಫೆ. 20 ರಿಂದ 24 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಡೆಯಲಿದೆ. ಫೆ. 13 ರಂದು ಬೆಳಿಗ್ಗೆ 9 ಗಂಟೆಗೆ ಗೊನೆ ಕಡಿಯುವ ಕಾರ್ಯಕ್ರಮದ ಮೂಲಕ ಜಾತ್ರಾ ಸಿದ್ಧತೆಗೆ ಚಾಲನೆ ದೊರೆತಿದೆ. ಫೆ. 18 ರಂದು 10 ಗಂಟೆಗೆ : ಮುಂಡ್ಯ ಹಾಕುವುದು ಫೆ. 20 ರಂದು: ಶ್ರೀ ಲಕ್ಷ್ಮೀನೃಸಿಂಹ ದೇವರು ಮತ್ತು ಮುಖ್ಯಪ್ರಾಣ

ಫೆ.20-24: ಶ್ರೀ ಕಾಣಿಯೂರು ಮಠದಲ್ಲಿ ಜಾತ್ರಾ ಮಹೋತ್ಸವ Read More »

ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

ಪುತ್ತೂರು: ಬೈಪಾಸ್ ರಸ್ತೆಯಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು. ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷಶ್ರೀ ಜಿತಕಾಮನಂದಜಿ ಉದ್ಘಾಟಿಸಿ ಮಾತನಾಡಿ, ಲಕ್ಷ್ಯ ಡೇ ಕೇರ್ ಒಂದು ವಿನೂತನ ಹೆಜ್ಜೆಯನ್ನು ಇಡುತ್ತಿದೆ. ಮನಃಶಾಸ್ತ್ರದ ಹಾಗೂ ಆತ್ಯಾತ್ಮಿಕ ಹಿನ್ನೆಯಲ್ಲಿ ಮಕ್ಕಳಿಗೆ ಅನೇಕ ಚಟುವಟಿಕೆಗಳನ್ನು ಜೋಡಿಸಿಕೊಂಡಿರುವುದು ಶ್ಲಾಘನೀಯ ಸಂಗತಿ. ಒಂದು ಮಗುವಿಗೆ ಕೇವಲ ಉತ್ತಮ ಆಹಾರಕ್ರಮ

ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ Read More »

ಫೆ. 14 – 22: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ಚೇಂಜ್ ಮೇಳ’

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಫೆ. 14 ರಿಂದ ಫೆ. 22 ರ ವರೆಗೆ ‘ಓಲ್ಡ್ ಗೋಲ್ಡ್ ಎಕ್ಸ್‌ಚೇಂಜ್ ಮೇಳ’ವನ್ನು ಆಯೋಜನೆ ಮಾಡಲಾಗಿದೆ. ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಚಿನ್ನಾಭರಣಗಳ ಜೊತೆಗೆ ಬದಲಾವಣೆ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಗ್ರಾಹಕರು ನೀಡುವ ಹಳೆಯ ಚಿನ್ನಾಭರಣಗಳನ್ನು ತಕ್ಷಣವೇ ಪರಿಶೀಲನೆ ಮಾಡಿ ಈಗಿರುವ ಮಾರುಕಟ್ಟೆ ದರದ ಅನ್ವಯ ಯಾವುದೇ ಕಡಿತ ಇಲ್ಲದೆ ಈ ವಿನಿಮಯ ಸೌಲಭ್ಯವನ್ನು ಸಂಸ್ಥೆ ಒದಗಿಸುತ್ತಿದೆ. ಜೊತೆಗೆ ಪ್ರತೀ ಗ್ರಾಂ‌ಗೆ ರೂ.

ಫೆ. 14 – 22: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ಚೇಂಜ್ ಮೇಳ’ Read More »

error: Content is protected !!
Scroll to Top