ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟರ್ ಮಳೆಯಾಗುತ್ತಿದ್ದು ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ ಸಪ್ಟೆಂಬರ್ ತನಕವು ನಿರಂತರವಾಗಿ ಸುರಿಯುತ್ತಿದ್ದು ಜಿಲ್ಲೆಯಲ್ಲಿ ಅತೀವೃಷ್ಟಿಯಾಗಿದ್ದು ಪ್ರಮುಖವಾಗಿ ಕೃಷಿಕರು ಅಪಾರ ಕೃಷಿ ಹಾನಿ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರೈತರ ಪರವಾಗಿ ನಿಲ್ಲಬೇಕು ಎಂದು ದ.ಕ.ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ, […]










