ಕೃಷಿ

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ

ಪುತ್ತೂರು: ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆಗೊಳಿಸುವಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಶಸ್ವಿಯಾಗಿದ್ದಾರೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಅವಧಿ ಮುಗಿಯುತ್ತಾ ಬಂದರೂ ಪ್ರೀಮಿಯಂ ಪಾವತಿಯ ಬಗ್ಗೆ ರೈತರಿಗೆ ಯಾವುದೇ ಸೂಚನೆ ನೀಡದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಮತ್ತು ಕಾಳುಮೆಣಸನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ರೈತರು ನಿರಾಶಡಗೊಂಡಿದ್ದರು. ಈ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕ ಅಶೋಕ್ ರೈ ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ […]

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ Read More »

ನೂರರ ಗಡಿ ದಾಟಿದ ಟೊಮೆಟೋ ದರ | ಮಳೆ ಶುರುವಾಗುತ್ತಿದ್ದಂತೆ ತರಕಾರಿ ಬೆಲೆ ಏರಿಕೆ

ಪುತ್ತೂರು : ಮಳೆಗಾಲ ಶುರುವಿಟ್ಟುಕೊಂಡ ಬೆನ್ನಲ್ಲೇ ತರಕಾರಿ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಟೊಮೆಟೋ ದರ ನೂರರ ಗಡಿ ದಾಟಿದೆ. ಕಳೆದ ಕೆಲವು ದಿನಗಳಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹ ಉಂಟಾಗಿದ್ದು, ಟೊಮೆಟೋ ಬೆಳೆಗೆ ಹಾನಿಯಾಗುವುದರ ಜತೆಗೆ ಮಾರುಕಟ್ಟೆಗೆ ಪೂರೈಕೆಯಲ್ಲಿ ಕುಂಠಿತವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಟೊಮೆಟೋ ಬೆಲೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದ್ದು, ಒಟ್ಟಿನಲ್ಲಿ ಟೊಮೆಟೋ ಉತ್ಪಾದನೆ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. ಒಂದೂವರೆ ವರ್ಷದ ಹಿಂದೆ ಟೊಮೆಟೋ ನೂರರ ಗಡಿ ದಾಟಿತ್ತು. ಬಳಿಕ ಇಳಿಮುಖವಾದ ದರ

ನೂರರ ಗಡಿ ದಾಟಿದ ಟೊಮೆಟೋ ದರ | ಮಳೆ ಶುರುವಾಗುತ್ತಿದ್ದಂತೆ ತರಕಾರಿ ಬೆಲೆ ಏರಿಕೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಮಹಾತ್ವಾಕಾಂಕ್ಷೆ ಯೋಜನೆ ವಿವೇಕ ಸಂಜೀವಿನಿಯ ಗ್ರಾಮ ಸಂಜೀವಿನಿ ಕಾರ್ಯಕ್ರಮ ಕೆದಿಲ ಗ್ರಾಮದಲ್ಲಿ ನಡೆಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಕೆದಿಲ ಶ್ರೀರಾಮ ಭಜನಾ ಮಂದಿರ, ಊರ ನಾಗರಿಕರ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಕೆದಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಧನಂಜಯ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಶಾಲೆಯಿಂದ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾನ್ಯ ಕಾರ್ಯಕ್ರಮಗಳಾದ ಬದು ನಿರ್ಮಾಣ, ಗದ್ದೆ ಕೊಯ್ಲು, ಭಜನಾ ಉತ್ಸವ,

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳದ ಮೂರು ವರ್ಷಗಳ ಹಿಂದೆ ಆರಂಭಿಸಿದ ಹಡಿಲು ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸುಮಾರು ಎರಡು ಎಕ್ರೆ ಜಾಗದಲ್ಲಿ ಏಣೇಲು ಬೇಸಾಯಕ್ಕೆ ಶಾಸಕ ಅಶೋಕ್ ಕುಮಾರ್ ರೈ ಬೀಜ ಬಿತ್ತುವ ಮೂಲಕ ಚಾಲನೆ ನೀಡಿದರು. 2021 ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಯೋಜನೆಯಂತೆ ತಾಲೂಕಿನಲ್ಲಿ ಹಲವು ದೇವಸ್ಥಾನಗಳ ಗದ್ದೆ ಸೇರಿದಂತೆ ಇನ್ನಿತರ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಈ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತದ ಬೆಳೆಗೆ ಬೀಜ ಬಿತ್ತನೆ ಮೂಲಕ ಚಾಲನೆ Read More »

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ

ಪುತ್ತೂರು : ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಇಕೋ ಕ್ಲಬ್  ವತಿಯಿಂದ ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚತಾ ಕಾರ್ಯಕ್ರಮ ಹಾಗೂ ವಿವಿಧ ರೀತಿಯ ಸಸ್ಯಗಳನ್ನು ನಡಲಾಯಿತು ಇಕೋ ಕ್ಲಬ್ ಸ್ವಯಂ ಸೇವಕರಿಂದ ಪರಿಸರದ ಬಗೆಗಿನ ಜಾಗೃತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಇಕೋ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ಇಕೋ ಕ್ಲಬ್‍ ವತಿಯಿಂದ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ Read More »

ಕೆಯ್ಯೂರು ಪಬ್ಲಿಕ್ ಸ್ಕೂಲ್‍ನಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ

ಪುತ್ತೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕಿನ ಕೆದಂಬಾಡಿ ವಲಯದ ಪರಿಸರ ಮಾಹಿತಿ ಕಾರ್ಯಕ್ರಮ, ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಇಕೋ ಕ್ಲಬ್ ವನಶ್ರೀ ಇಕೋ ಕ್ಲಬ್ ಸಂಯೋಗದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು. ವಲಯ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆಯ್ಯೂರು ಗ್ರಾಪಂ ಅಧ್ಯಕ್ಷೆ ಜಯಂತಿ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ. ಪಿ,

ಕೆಯ್ಯೂರು ಪಬ್ಲಿಕ್ ಸ್ಕೂಲ್‍ನಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ Read More »

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ

ಪೆರ್ನೆ: ಶೌರ್ಯ ವಿಪತ್ತು  ವಾರ್ಷಿಕೋತ್ಸವದ  ಅಂಗವಾಗಿ. ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ  ಕೆದಿಲ ಗಾಂಧಿನಗರ  ಅಂಗನವಾಡಿಯಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸುತ್ತಮುತ್ತಲು ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ. ಪೆರ್ನೆ ವಲಯ ಮೇಲ್ವಿಚಾರಕಿ ಶಾರದ  ,ಪೆರ್ನೆ ಶೌರ್ಯ ವಿಪತ್ತು ಘಟಕದ ಸಂಯೋಜಕಿ ಅಶ್ಮಿತಾ ,ಸದಸ್ಯರಾದ  ಜಗದೀಶ  ವೆಂಕಪ್ಪ. ಗಿರೀಶ . ಸುರೇಶ. ಕೇಶವ. ಮತ್ತು ಸೇವಾಪ್ರತಿನಿದಿಗಳಾದ  ಶಾರದ, ಜಯಂತಿ, ಜಯಶ್ರೀ  ಅಂಗನವಾಡಿ  ಶಿಕ್ಷಕಿ. ಲೀನಾ ಸಂಜೀವಿನಿ ಸಂಯೋಜಕಿ ಆಶಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನೆಡುವ ಕಾರ್ಯಕ್ರಮ Read More »

ಉಪ್ಪಿನಂಗಡಿ ವಲಯ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವ | ಔಷಧೀಯ ಗಿಡಗಳ ನಾಟಿ ಮೂಲಕ ಆಚರಣೆ

ಉಪ್ಪಿನಂಗಡಿ : ಉಪ್ಪಿನಂಗಡಿ ವಲಯ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವದ ಸವಿನೆನಪಿಗಾಗಿ ಮುದ್ಯ ದೇವಸ್ಥಾನ ವಠಾರದಲ್ಲಿ ಔಷಧಿ ಗಿಡಗಳ ನಾಟಿ ಮಾಡುವುದರ ಮೂಲಕ ವಾರ್ಷಿಕ ದಿನಾಚರಣೆ ಆಚರಿಸಲಾಯಿತು. ವಲಯ ಮೇಲ್ವಿಚಾರಕ ಶಿವಪ್ಪ.ಎಂ. ಕೆ ಮಾಹಿತಿ,  ಮಾರ್ಗದರ್ಶನ ನೀಡಿದರು. ಔಷಧಿ ಗಿಡಗಳನ್ನು ಗ್ರಾಮ ವಿಕಾಸ ಯೋಜನೆ ಶ್ರೀರಾಮ ಶಾಲೆ ಉಪ್ಪಿನಂಗಡಿ ನೀಡಿ ಸಹಕರಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಸೋಮಸುಂದರ ಕೊಡಿಪಾನ, ವಲಯ ಅಧ್ಯಕ್ಷ ನಾರಾಯಣ ಕೆಳಗಿನಮನೆ, ಶ್ರೀರಾಮ ಶಾಲೆ ಆಡಳಿತ ಮಂಡಳಿ ಸದಸ್ಯ ಗಣೇಶ್ ಕುಲಾಲ್, ಒಕ್ಕೂಟದ ಮಾಜಿ

ಉಪ್ಪಿನಂಗಡಿ ವಲಯ ಶೌರ್ಯ ವಿಪತ್ತು ತಂಡದಿಂದ ವಾರ್ಷಿಕೋತ್ಸವ | ಔಷಧೀಯ ಗಿಡಗಳ ನಾಟಿ ಮೂಲಕ ಆಚರಣೆ Read More »

ಪರಿಸರ ಮಾಹಿತಿ, ಸಸಿ ವಿತರಣಾ ಕಾರ್ಯಕ್ರಮ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ತಾಲೂಕು ಬೆಟ್ಟಂಪಾಡಿ ವಲಯದ ಪರಿಸರ ಮಾಹಿತಿ ಮತ್ತು ಸಸಿ ವಿತರಣಾ ಕಾರ್ಯಕ್ರಮ ಉಪ್ಪಳಿಗೆ ಸರಕಾರಿ ಪ್ರೌಢಶಾಲೆ ಯಲ್ಲಿ ನಡೆಯಿತು. ವೇದಿಕೆಯಲ್ಲಿ ನಿಕಟಪೂರ್ವ ಡಿಎಂಸಿ ಅಧ್ಯಕ್ಷ ಕೃಷ್ಣಪ್ರಸಾದ ಆಳ್ವ, ಯೋಜನಾಧಿಕಾರಿ ಶಶಿಧರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯೆ ಮೀನಾಕ್ಷಿ, ವಲಯ ಅಧ್ಯಕ್ಷ ಬಾಲಕೃಷ್ಣ, ಶಿಕ್ಷಕ ರಾಮಚಂದ್ರ, ಒಕ್ಕೂಟದ ಅಧ್ಯಕ್ಷ ಹರೀಶ್ ಗೌಡ ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕ ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಶ್ಯಾಮಲ ಸ್ವಾಗತಿಸಿದರು. ವಲಯದ

ಪರಿಸರ ಮಾಹಿತಿ, ಸಸಿ ವಿತರಣಾ ಕಾರ್ಯಕ್ರಮ Read More »

ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ

ಪುತ್ತೂರು:  ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಬಪ್ಪಳಿಗೆ ಜೈನ ಭವನ ದಲ್ಲಿ ನಡೆದ ಎರಡು ದಿನಗಳ ಹಲಸು ಮತ್ತು ಹಣ್ಣುಗಳ ಮೇಳದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಎರಡು ದಿನಗಳಲ್ಲಿ ಹಲಸಿನ ಮೇಳದ ಜೊತೆಗೆ ವಿವಿಧ ಸ್ಪರ್ಧೆಗಳು ನಡೆದಿದ್ದು, ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಸಮಾರೋಪದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ,

ಹಲಸು-ಹಣ್ಣುಗಳ ಮೇಳ-2023 ಸಮಾರೋಪ | ನಿರೀಕ್ಷೆಗೂ ಮೀರಿದ ಜನಸಾಗರ | ಯಶಸ್ವಿಯಾದ ಹಲಸು ಮೇಳ Read More »

error: Content is protected !!
Scroll to Top