ಕೃಷಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದಿಂದ ಏಮಾಜೆ ಶಾಲೆಯಲ್ಲಿ ಪರಿಸರ  ಜಾಗೃತಿ ದಿನ ಆಚರಣೆ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ವತಿಯಿಂದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ,  ಶ್ರೀಕ್ಷೇತ್ರದ ವತಿಯಿಂದ  ನಡೆಸುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಶಾಲಾಭಿವೃದ್ಧಿ ಸಮಿತಿ  ಉಪಾಧ್ಯಕ್ಷ  ಹರೀಶ್  ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದಿಂದ ಏಮಾಜೆ ಶಾಲೆಯಲ್ಲಿ ಪರಿಸರ  ಜಾಗೃತಿ ದಿನ ಆಚರಣೆ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ | ತೆಂಗಿನ ಬೆಲೆ ಏರಿಕೆಯಲ್ಲಿ ತೆಂಗು ರೈತ ಉತ್ಪಾದಕರ ಕಂಪೆನಿಯ ಮಹತ್ವ ಬಹಳಷ್ಟಿದೆ : ಸುಭಾಸ್ ರೈ ಕಡಮಜಲು | ಧಾರ್ಮಿಕ, ಔಷಧವಾಗಿ ತೆಂಗು ಮಹತ್ವ ಪಡೆದಿದೆ : ಶಂಕರ ಭಟ್‍ ಬದನಾಜೆ | ಮುಂದಿನ ದಿನಗಳಲ್ಲಿ ಕಂಪೆನಿಯನ್ನು ದೇಶಾದ್ಯಂತ ವಿಸ್ತರಿಸುವ ಯೋಜನೆಯಿದೆ : ಕುಸುಮಾಧರ್ ಎಸ್‍.ಕೆ.

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ ಪುತ್ತೂರು ಜೈನಭವನದಲ್ಲಿ ಗುರುವಾರ ನಡೆಯಿತು. ಕಂಪೆನಿ ಸಲಹೆಗಾರ ಶಂಕರ ಭಟ್‍ ಬದನಾಜೆ ಮಹಾಸಭೆ ಉದ್ಘಾಟಿಸಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಅದರಲ್ಲೂ ಸಮುದ್ರ ತೀರ ಪ್ರದೇಶದಲ್ಲಿ ತೆಂಗು ಬೆಳೆ ಅಧಿಕವಾಗಿ ಬೆಳೆಯುತ್ತದೆ. ಕೇರಳ ಎಂಬ ಹೆಸರು ಬಂದಿದ್ದೇ ತೆಂಗಿನಿಂದಾಗಿ. ಕಲ್ಪವೃಕ್ಷ ಎಂದೇ ಕರೆಯಲ್ಪಡುವ ತೆಂಗು ಪ್ರಸ್ತುತ ಮೌಲ್ಯವರ್ಧಿತ ಉತ್ಪನ್ನಗಳಲ್ಲಿ ದೇಶಾದ್ಯಂತ ತನ್ನದೇ ಆದ ಛಾಪನ್ನು ಮೂಡಿಸಿದೆ. ಔಷಧವಾಗಿಯೂ ತೆಂಗಿನ ಮರದ ವಿವಿಧ ಭಾಗಗಳು ಉಪಯೋಗಿಸಲ್ಪಡುತ್ತಿದೆ. ಸುಮಾರು

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ | ತೆಂಗಿನ ಬೆಲೆ ಏರಿಕೆಯಲ್ಲಿ ತೆಂಗು ರೈತ ಉತ್ಪಾದಕರ ಕಂಪೆನಿಯ ಮಹತ್ವ ಬಹಳಷ್ಟಿದೆ : ಸುಭಾಸ್ ರೈ ಕಡಮಜಲು | ಧಾರ್ಮಿಕ, ಔಷಧವಾಗಿ ತೆಂಗು ಮಹತ್ವ ಪಡೆದಿದೆ : ಶಂಕರ ಭಟ್‍ ಬದನಾಜೆ | ಮುಂದಿನ ದಿನಗಳಲ್ಲಿ ಕಂಪೆನಿಯನ್ನು ದೇಶಾದ್ಯಂತ ವಿಸ್ತರಿಸುವ ಯೋಜನೆಯಿದೆ : ಕುಸುಮಾಧರ್ ಎಸ್‍.ಕೆ. Read More »

ನಾಳೆ (ಜೂ.26) : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ

ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ ಜು.26 (ನಾಳೆ) ಗುರುವಾರ ಜೈನ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಸಭೆಯಲ್ಲಿ ವಾರ್ಷಿಕ ವರದಿ ವಾಚನ,  2023-24ನೇ ಸಾಲಿನ ಹಣಕಾರು ವರದಿಗಳ ಅಂಗೀಕಾರ, ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು. ಮಹಾಸಭೆಯಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್‍.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜೂ.26) : ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪೆನಿಯ ವಾರ್ಷಿಕ ಮಹಾಸಭೆ Read More »

ಕಾಡು ಪ್ರಾಣಿಗಳ ಜತೆಗೆ ಆನೆ ದಾಳಿಯಿಂದ ಕೃಷಿಕರನ್ನು ರಕ್ಷಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ಯಂ.ಜಿ.ಸತ್ಯನಾರಾಯಣ ಆಗ್ರಹ

ಪುತ್ತೂರು: ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಜತೆ ಮುಖ್ಯವಾಗಿ ಆನೆ ದಾಳಿಯಿಂದಾಗಿ ಕೃಷಿಕರು ಕಂಗಾಲಾಗಿದ್ದು, ಕಾಡು ಪ್ರಾಣಿಗಳ ಉಪಟಳದಿಂದ ರಕ್ಷಣೆಯ ಜತೆಗೆ ಬೆಳೆನಾಶಕ್ಕೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾಸ್‍ಸಂಘದ ಜಿಲ್ಲಾಧ್ಯಕ್ಷ  ಯಂ.ಜಿ.ಸತ್ಯನಾರಾಯಣ ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಈ ಕುರಿತು ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಂತ್ರಸ್ತ ರೈತ ಸದಸ್ಯರ ಸಭೆ ಕರೆದು ಈ ವಿಚಾರವನ್ನು ಸಂಬಂಧ ಪಟ್ಟ ಇಲಾಖೆ

ಕಾಡು ಪ್ರಾಣಿಗಳ ಜತೆಗೆ ಆನೆ ದಾಳಿಯಿಂದ ಕೃಷಿಕರನ್ನು ರಕ್ಷಿಸಬೇಕು : ಪತ್ರಿಕಾಗೋಷ್ಠಿಯಲ್ಲಿ ಯಂ.ಜಿ.ಸತ್ಯನಾರಾಯಣ ಆಗ್ರಹ Read More »

ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ.  2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ ‘ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ’ ಇದರಡಿಯಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಯಾವುದಕ್ಕೆ ಧನ ಸಹಾಯ? ಜೇನು ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್ ಖರೀದಿಸಿದ್ದರ ಸಲುವಾಗಿ ಸಹಾಯ ಧನ ಪಡೆಯಬಹುದಾಗಿದೆ. ಜೇನು ಕೃಷಿಕರು ಏನು ಮಾಡಬೇಕು? ಮೊದಲಿಗೆ ಜೇನು ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಬಳಿಕ ಜೇನು

ಜೇನು ಕೃಷಿಗೆ ಅರ್ಜಿ ಆಹ್ವಾನ Read More »

ಪುತ್ತೂರಿನಲ್ಲಿ ಘಮಘಮಿಸಿದ ಹಲಸು ಹಣ್ಣು ಮೇಳ | ಸುಮಾರು 70 ಮಳಿಗೆಗಳಲ್ಲಿ ಹಲಸಿನ ತಿಂಡಿ ತಿನಿಸುಗಳು, ಖಾದ್ಯಗಳು

ಪುತ್ತೂರು: ನವತೇಜಸ್ ಅರ್ಪಿಸುವ ಘಮಘಮಿಸುವ ಮೂರು ದಿನಗಳ ’ಹಲಸು ಹಣ್ಣು ಮೇಳ’ಕ್ಕೆ ಶುಕ್ರವಾರ ಬೆಳಗ್ಗೆ ನಗರದ ಕಿಲ್ಲೇ ಮೈದಾನದಲ್ಲಿ ಚಾಲನೆ ನೀಡಲಾಯಿತು. ಈ ಹಣ್ಣಿನ ಮೇಳಕ್ಕೆ ಗ್ರಾಹಕ ವರ್ಗ ಸಜ್ಜಾಗಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿದ್ದರು. ಸುಮಾರು 70 ಮಳಿಗೆಗಳನ್ನು ಮೇಳದಲ್ಲಿ ಜೋಡಿಸಲಾಗಿದ್ದು, ವಿವಿಧ ರೀತಿಯ ಹಣ್ಣುಗಳ ಜತೆಗೆ ಹಲಸಿನ ಹಣ್ಣಿನಿಂದ ತಯಾರಿಸಿ ವಿವಿಧ ಖಾದ್ಯಗಳನ್ನು ಗ್ರಾಹಕರು ಸೇವಿಸಿ ಮನತಣಿಸಿಕೊಂಡರು. ಮೇಳದಲ್ಲಿ ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ದೋಸೆ, ಸೇಮಿಗೆ, ಬನ್ಸ್, ಪಲಾವ್,

ಪುತ್ತೂರಿನಲ್ಲಿ ಘಮಘಮಿಸಿದ ಹಲಸು ಹಣ್ಣು ಮೇಳ | ಸುಮಾರು 70 ಮಳಿಗೆಗಳಲ್ಲಿ ಹಲಸಿನ ತಿಂಡಿ ತಿನಿಸುಗಳು, ಖಾದ್ಯಗಳು Read More »

ಜೂ.6 ರಿಂದ 8 : ನವತೇಜಸ್ ಸಂಘಟಿಸುವ 7ನೇ ವರ್ಷದ ‘ಹಲಸು ಹಣ್ಣು ಮೇಳ’

ಪುತ್ತೂರು: ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ. 6 ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಳಿಯ ಪ್ರಾಪರ್ಟೀಸ್‍, ದ್ವಾರಕಾ ಕಾರ್ಪೋರೇಶನ್‍ ಪ್ರೈ.ಲಿ., ಕ್ಯಾಂಪ್ಕೋ ಮಂಗಳೂರು, ಗ್ರಾಮಜನ್ಯ, ಎಸ್‍ ಆರ್‍ ಕೆ. ಲ್ಯಾಡರ್ಸ್‍, ವಿಜಯ ಸೋಲಾರ್, ಕೊಕನಟ್‍ ಫಾರ್ಮಲ್‍ ಪ್ರೊಡ್ಯೂಸರ್ ಪ್ರೈ. ಲಿ., ಪಶುಪತಿ ಇಲೆಕ್ಟ್ರಾನಿಕ್ಸ್‍, ಹಾಗೂ ರಾಧಾಸ್ ಸಹಯೋಗದಲ್ಲಿ ಹಲಸು

ಜೂ.6 ರಿಂದ 8 : ನವತೇಜಸ್ ಸಂಘಟಿಸುವ 7ನೇ ವರ್ಷದ ‘ಹಲಸು ಹಣ್ಣು ಮೇಳ’ Read More »

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ

ಪುತ್ತೂರು: ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಬೆಳೆಗಾರರಲ್ಲಿ ಹೊಸ ಭರವಸೆ ಮತ್ತು ಸಂಭ್ರಮವನ್ನು ಸೃಷ್ಟಿಸಿದೆ. ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸುವ ಸುದ್ದಿ ಹೊರಬಿದ್ದಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ Read More »

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳ ಖರೀದಿಗೆ ಸಹಾಯ ಧನ – ವಿವಿಧ ಕೃಷಿಗೆ ಸಹಾಯ ಧನ | ತೋಟಗಾರಿಕೆ ಇಲಾಖೆ ಮಾಹಿತಿ

ಪುತ್ತೂರು: ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳಾದ ಪ್ರೋಪಿಕೋನಜಾಲ್, ಟ್ಯುಬಿಕೊನಾಜಾಲ್, ಪ್ರೋಪಿನೆಬ್, ಕಾರ್ಬನ್ ಡೈಜಿಮ್ + ಮ್ಯಾಂಕೇಜೆಬ್, ಕಾಪರ್ ಸಲ್ವೇಟ್ (ಮೈಲು ತುತ್ತು) ಖರೀದಿಗೆ ಶೇಕಡಾ 30 ರಂತೆ ಪ್ರತೀ ಎಕರೆಗೆ ರೂ. 600 ಸಹಾಯಧನ ಲಭ್ಯವಿದೆ. ಪ್ರತಿ ರೈತರಿಗೆ 5 ಎಕರೆಗೆ ಗರಿಷ್ಟ 3000 ಸಹಾಯಧನ ನೀಡಲಾಗುವುದು. ರೈತರು ಅರ್ಜಿಯೊಂದಿಗೆ 1) ಅಧಿಕೃತ ಕೀಟನಾಶಕ ಮಾರಾಟ ಪರವಾನಿಗೆ ಇರುವ ಮಾರಾಟಗಾರರಿಂದ ಮೇಲಿನ ಸಸ್ಯ ಸಂರಕ್ಷಣಾ ಔಷಧಿ ಖರೀದಿಸಿ, ಜಿ.ಎಸ್.ಟಿ. ಬಿಲ್ಲು.

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಬಳಸುವ ರೋಗ ನಾಶಕಗಳ ಖರೀದಿಗೆ ಸಹಾಯ ಧನ – ವಿವಿಧ ಕೃಷಿಗೆ ಸಹಾಯ ಧನ | ತೋಟಗಾರಿಕೆ ಇಲಾಖೆ ಮಾಹಿತಿ Read More »

ಕಾಳುಮೆಣಸು ಬೆಳೆದವರಿಗೆ ಬಂಪರ್‌ ಲಾಭ

ಪೂರೈಕೆ ಕೊರತೆ ಬೇಡಿಕೆ ಹೆಚ್ಚಳದಿಂದ ಕೆಜಿಗೆ 1,000 ರೂ. ಆಗುವ ಸಾಧ್ಯತೆ ಮಂಗಳೂರು : ಕಾಳುಮೆಣಸು ಬೆಳೆದಿರುವ ರೈತರಿಗೆ ಬಂಪರ್‌ ಲಾಭ ಸಿಗಲಿದೆ. ಈಗಾಗಲೇ ಕೆಜಿಗೆ 750 ರೂ. ದಾಟಿ ಮುನ್ನುಗ್ಗುತ್ತಿರುವ ಕಾಳುಮೆಣಸು ಬೆಲೆ ಶೀಘ್ರ 1,000 ರೂ. ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಸಂಸ್ಥೆಯೊಂದು ಭವಿಷ್ಯ ನುಡಿದಿದೆ. ಕಳೆದ ಎರಡು ವರ್ಷಗಳಿಂದ ಶೇ.40ರಷ್ಟು ದರ ಏರಿಕೆ ಕಂಡಿರುವ ಕಾಳುಮೆಣಸು ಪೂರೈಕೆ ಕೊರತೆ ಮತ್ತು ಬೇಡಿಕೆ ಹೆಚ್ಚಳದ ಪರಿಣಾಮ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಕಾಳುಮೆಣಸು ದರ

ಕಾಳುಮೆಣಸು ಬೆಳೆದವರಿಗೆ ಬಂಪರ್‌ ಲಾಭ Read More »

error: Content is protected !!
Scroll to Top