ಕೃಷಿ

ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ

ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆಯ ʼಕಲ್ಪಸಮೃದ್ಧಿʼ ಯೋಜನೆಯಡಿಯಲ್ಲಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ. ಜನವರಿ 30 ಕೊನೆಯ ದಿನಾಂಕವಾಗಿದ್ದು, 200 ಜನರಿಗೆ ಮಾತ್ರ ಅವಕಾಶವಿರುತ್ತದೆ.    ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಬೆಳೆ ಬೆಳೆದ ರೈತನಿಗೆ ಗರಿಷ್ಟ ಲಾಭ ತಂದು ಕೊಡಬೇಕು ಎಂಬ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಕರಾವಳಿ ಕರ್ನಾಟಕದಲ್ಲಿ ಅಕ್ಷರಶ:  ಸಾಕಾರಗೊಳಿಸುತ್ತಿರುವುದು “ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆ”.  ರೈತರಿಂದಲೇ ಸ್ಥಾಪಿತವಾದ ಈ ಸಂಸ್ಥೆ ತೆಂಗಿನಮರ ಹಾಗೂ ಅದರ ಸಂಪೂರ್ಣ ಉತ್ಪನ್ನವನ್ನು […]

ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಉದನಡ್ಕ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ. ಅವಿರೋಧ ಆಯ್ಕೆ

ಕಾಣಿಯೂರು : ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಉದನಡ್ಕ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ಆಯ್ಕೆ ಪ್ರಕ್ರಿಯೆ ಬಳಿಕ ನಡೆದ ಸಭೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕೆಡೆಂಜಿ, ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಾಯಿತು.

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಗಣೇಶ್ ಉದನಡ್ಕ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಐ. ಅವಿರೋಧ ಆಯ್ಕೆ Read More »

ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ

ಪುತ್ತೂರು: ಅಡಿಕೆ ಆಮದು ಕುರಿತು ಸುದ್ದಿಗಳು ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದು, ಪರಿಣಾಮ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಡಿಕೆ ಆಮದು ತಡೆಗೆ ಸರಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ. ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ

ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ Read More »

ರೈತರಿಗೆ ವರದಾನವಾದ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ| ರೈತರ ಖಾತೆಗೆ ಲಕ್ಷಕ್ಕಿಂತಲೂ ಅಧಿಕ ಜಮೆಯಾದ ಮೊತ್ತ | ದೇಶದ ಬೆನ್ನೆಲುಬಾದ ರೈತ ಫುಲ್ ಖುಷ್

ಹೊಸದಿಲ್ಲಿ: ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಮೊತ್ತ ಬಿಡುಗಡೆಗೊಂಡಿದ್ದು, ಲಕ್ಷಕ್ಕಿಂತಲೂ ಅಧಿಕ ಮೊತ್ತ ರೈತರ ಖಾತೆಗೆ ಜಮೆಯಾಗುತ್ತಿದೆ. ಪರಿಣಾಮ ರೈತ ವರ್ಗದಲ್ಲಿ ಸಂತಸ ಉಂಟು ಮಾಡಿದೆ. 2016 ರಲ್ಲಿ ಕೇಂದ್ರ ಸರಕಾರದ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ  ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ್ಯಾರಿಗೊಳಿಸಿದ್ದು, ರೈತರಿಗೆ ವರದಾನವಾಗಿ ಪರಿಣಮಿಸಿದೆ. ಈ ಯೋಜನೆಯಡಿ ಸರಕಾರದ ರೈತರ ಬೆಳೆಗಳಿಗೆ ವಿಮೆ ಲಾಭವನ್ನು ನೀಡುತ್ತದೆ. ಪ್ರಾಕೃತಿಕ ವಿಕೋಪದಿಂದ ರೈತನ ಬೆಳೆ ನಾಶವಾದರೆ ರೈತನಿಗೆ ಪರಿಹಾರ ನೀಡುವ ಯೋಜನೆಯಾಗಿದೆ. ಸಂಕಷ್ಟ

ರೈತರಿಗೆ ವರದಾನವಾದ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ| ರೈತರ ಖಾತೆಗೆ ಲಕ್ಷಕ್ಕಿಂತಲೂ ಅಧಿಕ ಜಮೆಯಾದ ಮೊತ್ತ | ದೇಶದ ಬೆನ್ನೆಲುಬಾದ ರೈತ ಫುಲ್ ಖುಷ್ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್‍ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್‍ ಪಡ್ನೂರು ಮತ್ತಿತರರು ಉಪಸ್ಥಿತರಿದ್ದರು.

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ Read More »

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ತೆಕ್ಕೆಗೆ

ಕಾಣಿಯೂರು: ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಎಲ್ಲಾ 12 ಸ್ಥಾನಗಳಲ್ಲಿ ಜಯಭೇರಿ ಗಳಿಸಿದ್ದು, ಈ ಮೂಲಕ ಆಡಳಿತ ಸಹಕಾರಿ ಭಾರತಿ ತೆಕ್ಕೆಗೆ ಬಿದ್ದಿದೆ. ಭಾನುವಾರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯ ಅನಂತ ಕುಮಾರ್, ಗಣೇಶ್ ಉದನಡ್ಕ, ಪರಮೇಶ್ವರ ಅನಿಲ, ಬಾಲಕೃಷ್ಣ ಇಡ್ಯಡ್ಕ, ಸುಂದರ, ವಿಶ್ವನಾಥ ದೇವಿನಗರ, ಲೋಕೇಶ್ ಆತಾಜೆ, ರತ್ನಾವತಿ, ರಮೇಶ್ ಉಪ್ಪಡ್ಕ, ವೀಣಾ ಅಂಬುಲ, ಶೀಲಾವತಿ ಮುಗರಂಜ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ದಿವಾಕರ

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ತೆಕ್ಕೆಗೆ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯಿಂದ ‘ಕಲ್ಪವಿಕಾಸ’ ಯೋಜನೆ ಆರಂಭ

ಪುತ್ತೂರು: ತೆಂಗಿನ ಮರದ ಮೌಲ್ಯವರ್ಧನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ ‘ಕಲ್ಪವಿಕಾಸ’ ಯೋಜನೆಯನ್ನು ಆರಂಭಿಸಿದೆ ಎಂದು ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ ಪುತ್ತೂರು ಶಾಖಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ತೆಂಗು ಬೆಳೆ ಪ್ರಮುಖ ಸ್ಥಾನಗಳನ್ನು ಪಡೆದಿದ್ದರೂ ಪ್ರಾಕೃತಿಕ ವಿಕೋಪ, ರೋಗಗಳು ಮುಂತಾದವುಗಳಿಗೆ ತುತ್ತಾಗಿ ಹಾನಿಗೊಳಗಾದ ತೆಂಗಿನ ಮರಗಳಿಗೆ ನ್ಯಾಯಯುತ ಪರಿಹಾರ ಸಿಗದೆ ರೈತ ಕಂಗೆಟ್ಟಿದ್ದಾನೆ.

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯಿಂದ ‘ಕಲ್ಪವಿಕಾಸ’ ಯೋಜನೆ ಆರಂಭ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಒಟ್ಟು 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದಾಗ 9 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 3 ಮಂದಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ

ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ  ಪ್ರೇಮ ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ Read More »

error: Content is protected !!
Scroll to Top