ಕೃಷಿ

ಕೃಷಿಕ ನವೀನ್ ಚಾತುಬಾಯಿಯವರಿಗೆ ಮ್ಯಾಕ್ಸ್ ಲೈಫ್ ಕೃಷಿಕ ರತ್ನ ಪುರಸ್ಕಾರ

ಐವರ್ನಾಡು : ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿ ಅವರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಕೊಡ ಮಾಡುವ ಕೃಷಿಕ ರತ್ನ ಪುರಸ್ಕಾರ ಜುಲೈ 5 ರಂದು ನೀಡಲಾಗಿದೆ. ಮಂಗಳೂರಿನ ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಮಾಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯ ಸೀನಿಯ‌ರ್ ಮ್ಯಾನೇಜರ್ ಸುಧಾಕರ್ ಶೆಟ್ಟಿ ಮತ್ತು ಕಂಪನಿಯ ಅಧಿಕಾರಿಗಳು ಸಿಬ್ಬಂದಿಗಳು ನಿರ್ವಹಿಸಿದರು.

ಕೃಷಿಕ ನವೀನ್ ಚಾತುಬಾಯಿಯವರಿಗೆ ಮ್ಯಾಕ್ಸ್ ಲೈಫ್ ಕೃಷಿಕ ರತ್ನ ಪುರಸ್ಕಾರ Read More »

ಜು.31 : ಅಡಿಕೆ ರೈತರಿಗೆ ವಿಮೆ ಪ್ರೀಮಿಯಂ ಕಟ್ಟಲು ಕೊನೆಯ ದಿನ

ಬೆಂಗಳೂರು: ಸರಕಾರ 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಮಾ ನೋಂದಣಿಗೆ ಅವಕಾಶ ಕಲ್ಪಿಸಿದೆ. ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕ್ ಗಳಲ್ಲಿ ಅರ್ಜಿ ಸಲ್ಲಿಸಲು ಜು.31 ಅಂತಿಮ ದಿನವಾಗಿದೆ.

ಜು.31 : ಅಡಿಕೆ ರೈತರಿಗೆ ವಿಮೆ ಪ್ರೀಮಿಯಂ ಕಟ್ಟಲು ಕೊನೆಯ ದಿನ Read More »

ಮೇ.25 : ಖ್ಯಾತ ಕೃಷಿ ಉಪಕರಣಗಳ  ತಯಾರಿಕಾ ಸಂಸ್ಥೆ “ಎಸ್.ಆರ್.ಕೆ. ಲ್ಯಾಡರ್ಸ್” ನ ರಜತ ಸಂಭ್ರಮದ ಸಮಾರೋಪ ಸಮಾರಂಭ | ನಿರಂತರ 12 ಗಂಟೆಗಳ ಕಾಲ ಮೇಳೈಸಲಿದೆ ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಕೇಶವ ಅಮೈ

ಪುತ್ತೂರು: ಖ್ಯಾತ ಕೃಷಿ ಉಪಕರಣಗಳ ತಯಾರಿಕಾ ಸಂಸ್ಥೆ ಎಸ್‍ ಆರ್‍ ಕೆ. ಲ್ಯಾಡರ್ಸ್ ನ ರಜತ ಸಂಭ್ರಮದ ಸಮಾರೋಪ ಸಮಾರಂಭ ವಿವಿಧ ಸಾಂಸ್ಕೃತಿ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ ಎಂದು ಎಸ್‍ ಆರ್‍ ಕೆ. ಲ್ಯಾಡರ್ಸ್ ಸಂಸ್ಥೆಯ ಮಾಲಕ ಕೇಶವ ಅಮೈ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಸ್ಥೆ 24 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನವೆಂಬರ್ 2023 ಕ್ಕೆ ಸಂಸ್ಥೆಯ ರಜತ ಸಂಭ್ರಮಕ್ಕೆ ಕಾಲಿಟ್ಟಿದೆ. ಈ ನಿಟ್ಟಿನಲ್ಲಿ

ಮೇ.25 : ಖ್ಯಾತ ಕೃಷಿ ಉಪಕರಣಗಳ  ತಯಾರಿಕಾ ಸಂಸ್ಥೆ “ಎಸ್.ಆರ್.ಕೆ. ಲ್ಯಾಡರ್ಸ್” ನ ರಜತ ಸಂಭ್ರಮದ ಸಮಾರೋಪ ಸಮಾರಂಭ | ನಿರಂತರ 12 ಗಂಟೆಗಳ ಕಾಲ ಮೇಳೈಸಲಿದೆ ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಕೇಶವ ಅಮೈ Read More »

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ.ಜಿ. ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶಂ. ನಾ. ಖಂಡಿಗೆ ಪೆರ್ಲ, ಎಂ.ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕಳ ಪಂಜ ಆಯ್ಕೆಯಾದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಶೋಕ್ ಕಿನಿಲ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ Read More »

ಅಡಿಕೆ ಕ್ಯಾನ್ಸರ್ ನಿರೋಧಕ | ಹೊರಬಿತ್ತು ಸಂಶೋಧನಾ ವರದಿಯಿಂದ | ರೈತರಲ್ಲಿ ಸಂತಸ ಮೂಡಿಸಿದ ಸಂಶೋಧನಾ ವರದಿ

ಅಡಿಕೆ ಬೆಳೆಗಾರರಲ್ಲಿದ್ದ ಆತಂಕ ದೂರವಾಡುವ ಸುದ್ದಿಯೊಂದು ಹೊರಬಿದ್ದಿದ್ದು, ಸಂತೇಬೆನ್ನೂರಿನ ಸಂಸ್ಥೆ ನಡೆಸಿದ ಸಂಶೋಧನೆಯಿಂದ ಬಹಿರಂಗಗೊಂಡಿದೆ. ನೆಕ್ಸ್ಜೆನ್ ಸಂಸ್ಥೆ ಸೈಟಾಕ್ಸನ್ ಬಯೋ ಸೊಲ್ಯುಷನ್ ಪ್ರೈ. ಲಿಮಿಟೆಡ್ ನ ಪ್ರಯೋಗಾಲಯದಲ್ಲಿ ನಡೆಸಿದ ಸಂಶೋಧನಾ ವರದಿಯಲ್ಲಿ ಈ ಅಂಶ ಪತ್ತೆಯಾಗಿದೆ ಎಂದು ನೆಕ್ಸ್ಜೆನ್ ಸಂಸ್ಥಾಪಕ ರಘು ಮಾದ್ಯಮಗಳಿಗೆ ತಿಳಿಸಿದ್ದಾರೆ. ಈ ಹಿಂದೆ ಅಡಿಕೆಯಲ್ಲಿ ಕ್ಯಾನ್ಸರ್ ಅಂಶ ಇದ್ದು, ಅಡಕೆ ನಿಷೇಧ ಮಾಡಬೇಕು ಎಂಬ ಮಾತು ಕೇಳಿ ಬಂದಿತ್ತು. ಇದರಿಂದ ರೈತರಲ್ಲಿ ಆತಂಕ ಮನೆಮಾಡಿತ್ತು. ಇದೀಗ ಅಡಿಕೆಯಲ್ಲಿ ಕ್ಯಾನ್ಸರ್ ನಿರೋಧಕ ಅಂಶ ಇದೆ

ಅಡಿಕೆ ಕ್ಯಾನ್ಸರ್ ನಿರೋಧಕ | ಹೊರಬಿತ್ತು ಸಂಶೋಧನಾ ವರದಿಯಿಂದ | ರೈತರಲ್ಲಿ ಸಂತಸ ಮೂಡಿಸಿದ ಸಂಶೋಧನಾ ವರದಿ Read More »

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ | ಒಂದೂವರೆ ಕೋಟಿ ವೆಚ್ಚದ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರಿಂದ ಶಿಲಾನ್ಯಾಸ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಗಳು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾದ್ಯಕ್ಷ ಬಾಲಕೃಷ್ಣ

ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ | ಒಂದೂವರೆ ಕೋಟಿ ವೆಚ್ಚದ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರಿಂದ ಶಿಲಾನ್ಯಾಸ Read More »

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ

ಸುಳ್ಯ: ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಹಾಗೂ ಹೈದರಾಬಾದ್ ರಾಷ್ಟೀಯ ಕೃಷಿ ಸಂಶೋಧನಾ ನಿರ್ವಹಣಾ ಅಕಾಡೆಮಿ ಸಹಯೋಗದಲ್ಲಿ ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ ಉಬರಡ್ಕ ಗ್ರಾಮದ ಪ್ರಗತಿಪರ ಜೇನು ಕೃಷಿಕ ಪುಟ್ಟಣ್ಣ ಗೌಡರ ತೋಟದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಪಂ ಮಹಾ ಒಕ್ಕೂಟದ ಅಧ್ಯಕ್ಷ ಹರೀಶ್ ಉಬರಡ್ಕ, ಪಾಲ್ಗೊಂಡು, ರೈತರು ತಮ್ಮ ಸುಸ್ಥಿರ ಅಭಿವೃದ್ದಿಗಾಗಿ ಜೇನು ಕೃಷಿಯಂತಹ ಉಪ ಕಸುಬುಗಳನ್ನು ಕೈಗೊಳ್ಳಬೇಕು

ಪರಿಶಿಷ್ಟ ಜಾತಿ ರೈತರಿಗೆ ವೈಜ್ಞಾನಿಕ ಜೇನು ಸಾಕಾಣಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಕ್ಷೇತ್ರ ಭೇಟಿ ಕಾರ್ಯಕ್ರಮ Read More »

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ

ಬೆಳಂದೂರು: ಬೆಳಂದೂರು ಗ್ರಾಮ ಪಂಚಾಯಿತಿ ಹಾಗೂ ಪುತ್ತೂರು ಯೂನಿಯನ್ ಬ್ಯಾಂಕ್‍ ಇಂಡಿಯಾ ವತಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜ.17 ಬುಧವಾರ ಮಧ್ಯಾಹ್ನ 2 ಗಂಟೆಗೆ ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೃಷಿಕರಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ವೀಡಿಯೋ ಪ್ರಸಾರಗೊಳ್ಳಲಿದೆ. ಅಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್‍, ಆಯುಷ್ಮಾನ್ ಕಾರ್ಡ್‍, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ‘ಕಲ್ಪ ವಿಕಾಸ’ ಯೋಜನೆಯ ರೂಪುರೇಷೆಗಳ ಕುರಿತು ಚರ್ಚೆ | ಸಲಹಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಮುಂಬರುವ ಯೋಜನೆಗಳ ಕುರಿತ ಸಲಹಾ ಸಮಿತಿಯ ಪೂರ್ವಭಾವಿ ಸಭೆ ಪುತ್ತೂರು ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಂಸ್ಥೆಯ ಮುಂದಿನ ಮಹತ್ವಪೂರ್ಣ ಯೋಜನೆಗಳ ಸಹಿತ “ಕಲ್ಪ ವಿಕಾಸ ” ಮಹತ್ವಾಕಾಂಕ್ಷಿ ಯೋಜನೆಯ ರೂಪು-ರೇಷೆಗಳ ಬಗ್ಗೆ, ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳ ಕುರಿತು  ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಸಾವಯವ ತೆಂಗು ಕೃಷಿಗೆ ಉತ್ತೇಜನವನ್ನು ನೀಡುವುದರ ಜೊತೆಗೆ ವೈಜ್ಞಾನಿಕ ಕೃಷಿ ಬೆಳವಣಿಗೆಗೆ ಪ್ರೋತ್ಸಾಹವನ್ನು ನೀಡಲು ಹಾಗೂ ತೆಂಗು ಸಂಸ್ಥೆಯ ಪತ್ರಿಕೆ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ‘ಕಲ್ಪ ವಿಕಾಸ’ ಯೋಜನೆಯ ರೂಪುರೇಷೆಗಳ ಕುರಿತು ಚರ್ಚೆ | ಸಲಹಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು | ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅರ್ಹ ಎಲ್ಲಾ ಕೃಷಿಕರಿಗೂ ಸವಲತ್ತುಗಳು ಸಿಗಬೇಕು. ಆ ಸವಲತ್ತನ್ನು ಅವರಿಗೆ ತಲುಪಿಸುವ ಕೆಲಸ ಆಗಬೇಕು. ಯಾವುದೇ ಇಲಾಖೆಯಿಂದ ಸವಲತ್ತಿಗಾಗಿ ಲಂಚ ಕೇಳಿದ್ರೆ ನನಗೆ ತಿಳಿಸಿ. ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ತಾಲೂಕು ಕೃಷಿಕ ಸಮಾಜ ಹಾಗೂ ಪುತ್ತೂರು ಕೃಷಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ನಡೆದ ಕೃಷಿ ಮಾಹಿತಿ, ಸಂವಾದ, ಸನ್ಮಾನ ಹಾಗೂ ಸವಲತ್ತು

ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕು | ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top