ಕೃಷಿ

ರೈತರಿಗೆ ವರದಾನವಾದ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ| ರೈತರ ಖಾತೆಗೆ ಲಕ್ಷಕ್ಕಿಂತಲೂ ಅಧಿಕ ಜಮೆಯಾದ ಮೊತ್ತ | ದೇಶದ ಬೆನ್ನೆಲುಬಾದ ರೈತ ಫುಲ್ ಖುಷ್

ಹೊಸದಿಲ್ಲಿ: ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಮೊತ್ತ ಬಿಡುಗಡೆಗೊಂಡಿದ್ದು, ಲಕ್ಷಕ್ಕಿಂತಲೂ ಅಧಿಕ ಮೊತ್ತ ರೈತರ ಖಾತೆಗೆ ಜಮೆಯಾಗುತ್ತಿದೆ. ಪರಿಣಾಮ ರೈತ ವರ್ಗದಲ್ಲಿ ಸಂತಸ ಉಂಟು ಮಾಡಿದೆ. 2016 ರಲ್ಲಿ ಕೇಂದ್ರ ಸರಕಾರದ ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ  ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ್ಯಾರಿಗೊಳಿಸಿದ್ದು, ರೈತರಿಗೆ ವರದಾನವಾಗಿ ಪರಿಣಮಿಸಿದೆ. ಈ ಯೋಜನೆಯಡಿ ಸರಕಾರದ ರೈತರ ಬೆಳೆಗಳಿಗೆ ವಿಮೆ ಲಾಭವನ್ನು ನೀಡುತ್ತದೆ. ಪ್ರಾಕೃತಿಕ ವಿಕೋಪದಿಂದ ರೈತನ ಬೆಳೆ ನಾಶವಾದರೆ ರೈತನಿಗೆ ಪರಿಹಾರ ನೀಡುವ ಯೋಜನೆಯಾಗಿದೆ. ಸಂಕಷ್ಟ […]

ರೈತರಿಗೆ ವರದಾನವಾದ ಕೇಂದ್ರ ಸರಕಾರದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ| ರೈತರ ಖಾತೆಗೆ ಲಕ್ಷಕ್ಕಿಂತಲೂ ಅಧಿಕ ಜಮೆಯಾದ ಮೊತ್ತ | ದೇಶದ ಬೆನ್ನೆಲುಬಾದ ರೈತ ಫುಲ್ ಖುಷ್ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್‍ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಸಹಕಾರ ಭಾರತಿ ಜಯಗಳಿಸಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ನವೀನ್‍ ಪಡ್ನೂರು ಮತ್ತಿತರರು ಉಪಸ್ಥಿತರಿದ್ದರು.

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ Read More »

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ತೆಕ್ಕೆಗೆ

ಕಾಣಿಯೂರು: ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಎಲ್ಲಾ 12 ಸ್ಥಾನಗಳಲ್ಲಿ ಜಯಭೇರಿ ಗಳಿಸಿದ್ದು, ಈ ಮೂಲಕ ಆಡಳಿತ ಸಹಕಾರಿ ಭಾರತಿ ತೆಕ್ಕೆಗೆ ಬಿದ್ದಿದೆ. ಭಾನುವಾರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯ ಅನಂತ ಕುಮಾರ್, ಗಣೇಶ್ ಉದನಡ್ಕ, ಪರಮೇಶ್ವರ ಅನಿಲ, ಬಾಲಕೃಷ್ಣ ಇಡ್ಯಡ್ಕ, ಸುಂದರ, ವಿಶ್ವನಾಥ ದೇವಿನಗರ, ಲೋಕೇಶ್ ಆತಾಜೆ, ರತ್ನಾವತಿ, ರಮೇಶ್ ಉಪ್ಪಡ್ಕ, ವೀಣಾ ಅಂಬುಲ, ಶೀಲಾವತಿ ಮುಗರಂಜ ಹಾಗೂ ಸಾಲಗಾರರಲ್ಲದ ಕ್ಷೇತ್ರದಿಂದ ದಿವಾಕರ

ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ತೆಕ್ಕೆಗೆ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯಿಂದ ‘ಕಲ್ಪವಿಕಾಸ’ ಯೋಜನೆ ಆರಂಭ

ಪುತ್ತೂರು: ತೆಂಗಿನ ಮರದ ಮೌಲ್ಯವರ್ಧನೆ ಹಾಗೂ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ ‘ಕಲ್ಪವಿಕಾಸ’ ಯೋಜನೆಯನ್ನು ಆರಂಭಿಸಿದೆ ಎಂದು ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆ ಪುತ್ತೂರು ಶಾಖಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ತೆಂಗು ಬೆಳೆ ಪ್ರಮುಖ ಸ್ಥಾನಗಳನ್ನು ಪಡೆದಿದ್ದರೂ ಪ್ರಾಕೃತಿಕ ವಿಕೋಪ, ರೋಗಗಳು ಮುಂತಾದವುಗಳಿಗೆ ತುತ್ತಾಗಿ ಹಾನಿಗೊಳಗಾದ ತೆಂಗಿನ ಮರಗಳಿಗೆ ನ್ಯಾಯಯುತ ಪರಿಹಾರ ಸಿಗದೆ ರೈತ ಕಂಗೆಟ್ಟಿದ್ದಾನೆ.

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯಿಂದ ‘ಕಲ್ಪವಿಕಾಸ’ ಯೋಜನೆ ಆರಂಭ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಒಟ್ಟು 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದಾಗ 9 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 3 ಮಂದಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ

ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ  ಪ್ರೇಮ ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ Read More »

ಅಡಿಕೆ ಎಲೆಚುಕ್ಕಿ ರೋಗದ ಸಂಶೋಧನೆ!

ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳನ್ನು ಕಳುಹಿಸಿ ಸಂಶೋಧನೆ ಮಾಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ತೀರ್ಥಹಳ್ಳಿ ತಾಲೂಕುಗಳ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಪ್ರಸ್ತಾಪಿಸಿದರು. ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಎಲೆಚುಕ್ಕಿ ರೋಗ ಈಗಾಗಲೇ ವ್ಯಾಪಕವಾಗಿ ಹರಡಿದೆ. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಇದರ ಬಗ್ಗೆ ಸಂಶೋಧನೆ ನಡೆಸಿದ ಬಳಿಕವಷ್ಟೇ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ

ಅಡಿಕೆ ಎಲೆಚುಕ್ಕಿ ರೋಗದ ಸಂಶೋಧನೆ! Read More »

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ!

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು. ಮಧ್ಯಾಹ್ನ ಏಕಾಏಕಿ ಸುರಿದ ಗಾಳಿ ಮಳೆಗೆ ಬಯಲ️ಲ್ಲಿ ನಿಂತಿದ್ದ ಜನತೆ ರಕ್ಷಣೆಗೆ ಓಡಿದರು. ಮಳೆ ಬಂದರೂ ಕಂಬಳ ಕೂಟ ಮಾತ್ರ ಸರಾಗವಾಗಿ ನಡೆಯುತ್ತಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು,

ಬೆಂಗಳೂರು ಕಂಬಳಕ್ಕೆ ತಂಪೆರೆದ ವರುಣ! Read More »

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ

ಬೆಂಗಳೂರು: ಶಾಸಕ ಅಶೋಕ್‌ ಕುಮಾರ್‌ ರೈ ಅವರ ನೇತೃತ್ವದಲ್ಲಿ ಕರಾವಳಿಯ ಗ್ರಾಮೀಣ ಸೊಗಡು ಕಂಬಳ ರಾಜಧಾನಿಗೆ ತಲುಪಿದೆ. ಬೆಂಗಳೂರಿನಲ್ಲಿರುವ ಕರಾವಳಿಗರು ಹಾಗೂ ಕಂಬಳವನ್ನು ಮೊದಲ ಬಾರಿಗೆ ನೋಡುತ್ತಿರುವ ಹೊರ ಊರಿಗರಿಗೆ ಬೆಂಗಳೂರು ಕಂಬಳ ಹಬ್ಬವಾಗಿ ಮೂಡಿಬರುತ್ತಿದೆ. ಬೆಳಿಗ್ಗೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು. ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ರಾಜ ಮಹರಾಜ ಹೆಸರಿನ ಕಂಬಳ ಕರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಂಸದ ಸದಾನಂದ

ರಾಜ್ಯದ ಶಕ್ತಿಕೇಂದ್ರದಲ್ಲಿ ಕಂಬಳದ ವೈಭವ Read More »

error: Content is protected !!
Scroll to Top