ಕೃಷಿ

ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಂದ ಕೃಷಿ ಅಧ್ಯಯನ ಪ್ರವಾಸ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಕೃಷಿ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ಪ್ರವಾಸದಲ್ಲಿ ಸ್ವಸಹಾಯ ಸಂಘದ ಸದಸ್ಯರು ನಡೆಸುತ್ತಿರುವ ಸ್ವ-ಉದ್ಯೋಗ ಘಟಕಗಳಿಗೆ ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಮಲ್ಲಿಗೆ ಕೃಷಿ, ಹಾಳೆ ತಟ್ಟೆ ಘಟಕ, ಹೈನುಗಾರಿಕೆ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಸದಸ್ಯರಿಗೆ ಈ ಕುರಿತು ಮಾಹಿತಿ ನೀಡಲಾಯಿತು. ಪ್ರವಾಸದಲ್ಲಿ ಕೃಷಿ ಯೋಜನಾಧಿಕಾರಿಗಳು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಂದ ಕೃಷಿ ಅಧ್ಯಯನ ಪ್ರವಾಸ Read More »

ರಸ್ತೆ ಡಿವೈಡರ್‌ನಲ್ಲಿ ಕ್ರಾಟನ್ ಗಿಡ ನಾಟಿ: ಶಾಸಕರಿಂದ ಉದ್ಘಾಟನೆ

ಪುತ್ತೂರು: ಲೋಕೋಪಯೋಗಿ ಇಲಾಖೆ ವತಿಯಿಂದ ಪುತ್ತೂರು ಉಪ್ಪಿನಂಗಡಿ-ರಸ್ತೆ ಮಧ್ಯೆ ಡಿವೈಡರ್‌ಗಳಲ್ಲಿ ಕ್ರಾಟನ್ ಗಿಡಗಳನ್ನು ನೆಡುವ ಕಾರ್ಯಕ್ಕೆ ಶಾಸಕ ಅಶೋಕ್ ರೈ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಪುತ್ತೂರಿನಿಂದ ಉಪ್ಪಿನಂಗಡಿ ತನಕ ರಸ್ತೆ ಮಧ್ಯೆ ಡಿವೈಡರ್ ಇರುವಲ್ಲಿ ಉಜ್ಜೈನಿ ಕ್ರಾಟನ್ ಗಿಡಗಳನ್ನು ನೆಡಲಾಗುವುದು. ರಸ್ತೆ ಮಧ್ಯೆ ಈ ಗಿಡಗಳು ಸೊಂಪಾಗಿ ಬೆಳೆದಲ್ಲಿ ರಸ್ತೆ ಸೌಂದರ್ಯ ವೃದ್ದಿಯಗುತ್ತದೆ ಮತ್ತು ಸ್ವಚ್ಚತೆಗೆ ಕಾರಣವಾಗುತ್ತದೆ ಎಂದು ಹೇಳಿದರು. ರಸ್ತೆಗೆ ಹೊಸ ಮೆರುಗು : ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡಗಳನ್ನು

ರಸ್ತೆ ಡಿವೈಡರ್‌ನಲ್ಲಿ ಕ್ರಾಟನ್ ಗಿಡ ನಾಟಿ: ಶಾಸಕರಿಂದ ಉದ್ಘಾಟನೆ Read More »

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರಮುಖರ ಜೊತೆ ಶಾಸಕ ಅಶೋಕ್ ರೈ ಅವರು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಇದಕ್ಕೆ ಮೊದಲು ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಏರ್ಪಡಿಸಲಾಗಿದೆ. ಕಂಬಳ ವೀಕ್ಷಣೆಗೆ ರಾಜ್ಯದ ನಾನಾ ಕಡೆಗಳಿಂದ ಕಂಬಳಾಭಿಮಾನಿಗಳು ಆಗಮಿಸುವ ನಿರೀಕ್ಷೆ

ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಜಧಾನಿಯ ಕಂಬಳದ ಕರೆ ವೀಕ್ಷಣೆ | ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆ ಪ್ರಮುಖರ ಸಭೆ Read More »

ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 53.28 ಲಕ್ಷ ರೂ. ನಿವ್ವಳ ಲಾಭ | ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 22ರ ಶುಕ್ರವಾರ ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೆ.ಎಸ್. ವೆಂಕಟ್ರಮಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 53.28 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭಾಂಶವನ್ನು ಬೈಲಾ ರೀತಿಯಲ್ಲಿ ವಿಲೇವಾರಿ ಮಾಡಲು ಮಹಾಸಭೆಗೆ ಶಿಫಾರಸ್ಸು ಮಾಡಲಾಗಿದೆ. ಸಂಘದಲ್ಲಿ 3282 ಎ ತರಗತಿ ಸದಸ್ಯರಿದ್ದಾರೆ ಎಂದರು. ವರದಿ ವರ್ಷದ ಅಂತ್ಯಕ್ಕೆ 2.1 ಕೋಟಿ ರೂ. ಪಾಲು

ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 53.28 ಲಕ್ಷ ರೂ. ನಿವ್ವಳ ಲಾಭ | ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ Read More »

ಪುತ್ತೂರು ಮಾರುಕಟ್ಟೆ ಇಂದಿನ ಧಾರಣೆ

ಹೊಸ ಅಡಿಕೆ 390 – 447 ರೂ. ಹಳೆ ಅಡಿಕೆ 380-480 ರೂ. ಕಾಳು ಮೆಣಸು 315-595 ರೂ. ಒಣ ಕೊಕ್ಕೊ 215-235 ರೂ. ಹಸಿ ಕೊಕ್ಕೊ 53-58 ರೂ. ಕೊಬ್ಬರಿ 70-73 ರೂ. ರಬ್ಬರ್ ಆರ್.ಎಸ್.ಎಸ್ 5 134.50 ರೂ. ಆರ್.ಎಸ್.ಎಸ್ 4 143.00 ರೂ. ಲಾಟ್ 125.00 ರೂ. ಸ್ಕ್ರಾಪ್ 73.50 ರಿಂದ 83.50 ರೂ.

ಪುತ್ತೂರು ಮಾರುಕಟ್ಟೆ ಇಂದಿನ ಧಾರಣೆ Read More »

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ | ಪುತ್ತೂರು, ಉಪ್ಪಿನಂಗಡಿ ಕಂಬಳದ ದಿನಾಂಕ ಹೀಗಿದೆ…

ಪುತ್ತೂರು : 2023-24ನೇ ಸಾಲಿನ ಕಂಬಳ ವೇಳಾಪಟ್ಟಿಯಂತೆ ಇದೇ ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ. 22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಕೋಟಿ ಚೆನ್ನಯ ಜೋಡುಕರೆ ಕಂಬಳ 2024ರ ಜ .27ರಂದು ನಡೆಯಲಿದೆ. ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಮಾ.23ರಂದು ನಡೆಯಲಿದೆ.

2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ | ಪುತ್ತೂರು, ಉಪ್ಪಿನಂಗಡಿ ಕಂಬಳದ ದಿನಾಂಕ ಹೀಗಿದೆ… Read More »

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್…

ಪುತ್ತೂರು: ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಸಂಚಾಲಕತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ. 1ರಂದು ತಾಲೂಕು ಮಟ್ಟದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಎರಡೂ ಸ್ಪರ್ಧೆ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಬಹುಮಾನ ನೀಡಿ ಗೌರವಿಸಲಾಗುವುದು. ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್… Read More »

ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ

ಬೆಳ್ತಂಗಡಿ: ಚಾರ್ಮಾಡಿಯ ಮುಗುಳಿದಡ್ಕ ಸೇಸಪ್ಪ ಗೌಡ ಎಂಬವರ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಕ್ಕೆ ಹಾನಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೋಟಕ್ಕೆ ದಾಳಿ ಮಾಡಿದೆ. ಕಾಡಾನೆಗಳು ಪರಿಸರದ ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿoದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಕಾಡಾನೆಗಳ ದಾಳಿಗೆ ಅಪಾರ ಕೃಷಿ ನಾಶ Read More »

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಐದು ವರ್ಷಗಳ ಹಿಂದೆ ಆರಂಭ ಮಾಡಿದ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಗೆ ಸರಕಾರ ನ. 15 ಕೊನೆಯ ದಿನಾಂಕ ನಿಗದಿ ಮಾಡಿದೆ. ಈ ಬಾರಿ ಮುಂಗಾರು ತಡವಾಗಿದ್ದು ಹಾಗೂ ಮಳೆ ಕೊರತೆಯಾಗಿದ್ದು ರೈತರು ಕೃಷಿ ಕಾರ್ಯವನ್ನು ತಡವಾಗಿ ಆರಂಭ ಮಾಡುವಂತೆ ಆಗಿದೆ. ರೈತರಿಗೆ ಹವಾಮಾನ ವೈಪರೀತ್ಯದಿಂದ ಅನಾನುಕೂಲ ಆಗಿದೆ. ಕಳೆದ ಮೂರು

ರೈತರ ಅನುಕೂಲಕ್ಕಾಗಿ ಬೆಳೆ ಸಮೀಕ್ಷೆ ಅವಧಿ ವಿಸ್ತರಿಸಿ | ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಕಾಡಿಗಟ್ಟಿದ್ದ ಕಾಡಾನೆಗಳ ಮುಗಿಯದ ಕಾಟ! | ಬುಧವಾರ ರಾತ್ರಿ ಅರಣ್ಯ ಇಲಾಖೆ ಕಾರ್ಯಾಚರಣೆ, ಗುರುವಾರ ಬೆಳಿಗ್ಗೆ ನಾಡಿನಲ್ಲಿ ಆನೆಗಳ ಕಾರ್ಯಾಚರಣೆ!!

ಬೆಳ್ತಂಗಡಿ: ಕಾಡಿಗಟ್ಟಿದ್ದಷ್ಟು ನಾಡಿಗೆ ದಾಳಿ ಇಡುವ ಆನೆಗಳ ಪರಾಕ್ರಮ ಮತ್ತೆ ಮುಂದುವರಿದಿದೆ. ಧರ್ಮಸ್ಥಳದ ಕಾಡಂಚಿನ ನಾಡಿಗೆ ಆನೆಗಳ ದಾಳಿ ಹೆಚ್ಚಾದಾಗ, ಅರಣ್ಯ ಇಲಾಖೆ ಆನೆಗಳನ್ನು ಕಾಡಿಗಟ್ಟುವ ಕೆಲಸ ನಿರ್ವಹಿಸಿದ್ದವು. ಆದರೆ ಹೀಗೆ ಅಟ್ಟಿದ ಕಾಡಾನೆಗಳು ಗುರುವಾರ ಬೆಳಿಗ್ಗೆ ಧರ್ಮಸ್ಥಳ ಆಸುಪಾಸಿನಲ್ಲಿ ಪ್ರತ್ಯಕ್ಷವಾಗಿವೆ. ಮಂಗಳವಾರ ರಾತ್ರಿ ಕಾಡಾನೆಗಳ ಹಿಂಡು ಧರ್ಮಸ್ಥಳದ ಕೆಲ ತೋಟಗಳಿಗೆ ನುಗ್ಗಿ, ಹಾಳು ಗೆಡವಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ, ಅರಣ್ಯ ಇಲಾಖೆ ಡಿಆರ್ ಎಫ್ಒ ಹರಿಪ್ರಸಾದ್, ರಾಜೇಶ್, ಗಸ್ತು ಪಾಲಕರಾದ ಸಂತೋಷ,

ಕಾಡಿಗಟ್ಟಿದ್ದ ಕಾಡಾನೆಗಳ ಮುಗಿಯದ ಕಾಟ! | ಬುಧವಾರ ರಾತ್ರಿ ಅರಣ್ಯ ಇಲಾಖೆ ಕಾರ್ಯಾಚರಣೆ, ಗುರುವಾರ ಬೆಳಿಗ್ಗೆ ನಾಡಿನಲ್ಲಿ ಆನೆಗಳ ಕಾರ್ಯಾಚರಣೆ!! Read More »

error: Content is protected !!
Scroll to Top