ಕಗ್ಗದ ಸಂದೇಶ-
ಮಾನವ ಶಾಶ್ವತವಲ್ಲ ಮಾನವೀಯತೆ ಶಾಶ್ವತ… ದೇವರ್ಕಳುದಿಸಿ ಮರೆಯಹರು; ದೇವತ್ವ ಚಿರ|ಜಾವ ದಿನ ಬಂದು ಪೋಗುವುವು; ಕಾಲ ಚಿರ||ಜೀವದ ವ್ಯಕ್ತಿ ಸಾಯ್ವುದು; ಜೀವಸತ್ತ್ವ ಚಿರ|ಭಾವಿಸಾ ಕೇವಲವ – ಮಂಕುತಿಮ್ಮ||ಒಂದೊಂದು ಕಾಲದಲ್ಲಿ ನಾವು ಒಂದೊಂದು ದೇವರಿಗೆ ಪೂಜೆ ಸಲ್ಲಿಸುತ್ತಿರುವುದು ಚರಿತ್ರೆಯಿಂದ ನಮಗೆ ತಿಳಿಯುತ್ತದೆ. ಒಂದು ಕಾಲದಲ್ಲಿದ್ದ ದೇವರು ಇನ್ನೊಂದು ಕಾಲದಲ್ಲಿ ಮರೆಯಾಗಿ ಹೋಗಿರುವುದನ್ನು ನಾವು ಕಾಣಬಹುದು. ದೇವರುಗಳು ಕಾಲಕಾಲಕ್ಕೆ ಬದಲಾಗಬಹುದು ಆದರೆ ಮನುಷ್ಯ ಶಕ್ತಿಗಿಂತ ಮಿಗಿಲಾದ ನಾವು ಹಿಂದಿನಿಂದ ನಂಬಿಕೊಂಡು ಬಂದ ಒಂದು ದೈವಿಕ ಶಕ್ತಿ ಅಥವಾ ದೇವತ್ವ ಎನ್ನುವುದು […]









