ಕ್ಯಾಂಪಸ್‌

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌?

ಮಕ್ಕಳನ್ನು ಸೋಷಿಯಲ್‌ ಮೀಡಿಯಾ, ಡ್ರಗ್ಸ್‌ನಿಂದ ದೂರವಿಡಲು ಮೊಬೈಲ್‌ ನಿಷೇಧಕ್ಕೆ ಚಿಂತನೆ ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ರಾಜ್ಯಪಾಲರೂ ಒಪ್ಪಿಗೆ ಸೂಚಿಸಿದ್ದಾರೆ. ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ […]

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌? Read More »

ಬಿಸಿಯೂಟ, ಹಾಲು, ಮೊಟ್ಟೆ ಪಿಯುಸಿ ತನಕ ವಿಸ್ತರಣೆ : ಮಧು ಬಂಗಾರಪ್ಪ

ಪಠ್ಯಪುಸ್ತಕ, ಶೂ, ಸಾಕ್ಸ್‌ ಸಹಿತ ಎಲ್ಲ ಸೌಲಭ್ಯ ಕೊಡಲು ನಿರ್ಧಾರ ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿ ವರೆಗಿನ ಸರಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದಲ್ಲದೆ ಪಠ್ಯಪುಸ್ತಕ, ಶೂ, ಸಾಕ್ಸ್‌, ಹಾಲು, ಮೊಟ್ಟೆ ಸೇರಿ ಎಲ್ಲ ಸೌಲಭ್ಯವನ್ನು ಪಿಯುಸಿ ತನಕ ವಿಸ್ತರಿಸುತ್ತೇವೆ ಎಂದಿದ್ದಾರೆ. ಪ್ರಸ್ತುತ ನೀಡುತ್ತಿರುವ ಬಿಸಿಯೂಟದಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಇದರಿಂದ ಹೆಚ್ಚುವರಿಯಾಗಿ 200 ಕೋಟಿ ರೂ. ವೆಚ್ಚವಾಗಲಿದೆ. ಇದು

ಬಿಸಿಯೂಟ, ಹಾಲು, ಮೊಟ್ಟೆ ಪಿಯುಸಿ ತನಕ ವಿಸ್ತರಣೆ : ಮಧು ಬಂಗಾರಪ್ಪ Read More »

ಅಕ್ಷಯ ಪದವಿ ಕಾಲೇಜು: “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ:

ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದಅಟರ್ನೆಸ್ 2K25 ಪಿಯು ಫೆಸ್ಟ್ ಅತ್ಯುತ್ತಮವಾಗಿ ಸಂಪನ್ನಗೊಂಡಿತು. 18 ಕಾಲೇಜುಗಳಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸಿದ್ದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಕಬಡ್ಡಿ ತರಬೇತುದಾರ ಪ್ರಶಾಂತ್ ರೈ ಕೈಕಾರ (ಮ್ಯಾನೇಜರ್, ಬ್ಯಾಂಕ್ ಆಫ್ ಬರೋಡ ಪುತ್ತೂರು) ಆಗಮಿಸಿದ್ದು, ಅವರನ್ನು ಕ್ರೀಡಾ ಸಾಧನೆಗಾಗಿ ಸನ್ಮಾನಿಸಲಾಯಿತು.

ಅಕ್ಷಯ ಪದವಿ ಕಾಲೇಜು: “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ: Read More »

ಎವಿಜಿ ಸ್ಕೂಲ್’ನಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಜನ್ಮ ದಿನಾಚರಣೆ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ರಾಷ್ಟ್ರಪಿತ ಗಾಂಧೀಜಿಯವರ 156ನೇ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ 121ನೇ ಜನ್ಮದಿನಾಚರಣೆಗಳ ಪ್ರಯುಕ್ತ ಸರಳ ಮತ್ತು ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾಡಳಿತ ಮಂಡಳಿಯ ನಿರ್ದೇಶಕ ಸೀತಾರಾಮ ಕೇವಳ ದೀಪ ಪ್ರಜ್ವಲಿಸಿ, ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ ರಾಷ್ಟ್ರಪಿತ ಗಾಂಧೀಜಿ ಮತ್ತು ಪೂರ್ವ ಪ್ರಧಾನಿ ಶಾಸ್ತ್ರೀಜಿಯವರ ಬದುಕಿನ ಆದರ್ಶಗಳನ್ನು ಅನುಸರಿಸುವ ಮೂಲಕ ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿ ಈ ನಮ್ಮ ಎವಿಜಿ

ಎವಿಜಿ ಸ್ಕೂಲ್’ನಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಜನ್ಮ ದಿನಾಚರಣೆ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ದಿನಾಚರಣೆ

ಅಕ್ಷಯ ಕಾಲೇಜ್ ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಯಂತ ನಡುಬೈಲು, ಅಧ್ಯಕ್ಷರು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ, ಪುತ್ತೂರು ವಹಿಸಿದ್ದರು. ಇವರು “NSS ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಹಕಾರ ಮತ್ತು ಸಮಾಜಮುಖಿ ದೃಷ್ಟಿಕೋನವನ್ನು ಬೆಳೆಸುತ್ತವೆ. ಇವರ ಸೇವಾ ಚಟುವಟಿಕೆಗಳು ಸಮಾಜದ ಬೆಳವಣಿಗೆಗೆ ಅಗತ್ಯ. ವಿದ್ಯಾರ್ಥಿಗಳು ತಂಡಬದ್ಧತೆಯೊಂದಿಗೆ ಕಾರ್ಯನಿರ್ವಹಿಸಬೇಕು. NSS ಚಟುವಟಿಕೆಗಳು ಅವರನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುತ್ತವೆ” ಎಂದರು. ಕಾರ್ಯಕ್ರಮಕ್ಕೆ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ದಿನಾಚರಣೆ Read More »

ಅತೀ ಹೆಚ್ಚು ಅಡಿಕೆ ಖರೀದಿ ಮಾಡಿರುವ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರುಗೆ ಗೌರವಾರ್ಪಣೆ

ಪುತ್ತೂರು: ಅತೀ ಹೆಚ್ಚು ಅಡಿಕೆ ಖರೀದಿ ಮಾಡಿರುವ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಗೆ ಮಂಗಳೂರಿನ ಬೈಕಂಪಾಡಿಯಲ್ಲಿ ಸೀತಾರಾಮ ರೈ ಸವಣೂರು ರವರ ಅಧ್ಯಕ್ಷತೆಯಲ್ಲಿ ಬರುಗಿದ ಮಾನ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಗೌರವಾರ್ಪಣೆ ಮಾಡಲಾಯಿತು. ಸವಣೂರು ಮಾನ್ ಅಡಿಕೆ ಖರೀದಿ ಕೇಂದ್ರಕ್ಕೆ ಅಡಿಕೆ ಮಾರಾಟ ಮಾಡಿ ಈ ಸಾಧನೆಗೆ ಕಾರಣಕರ್ತರಾಗಿರುವ ಅಡಿಕೆ ಬೆಳೆಗಾರರ ಪರವಾಗಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ರವರಿಗೆ ಸನ್ಮಾನಿಸಲಾಯಿತು. ಸವಣೂರು ಪ್ರಾಥಮಿಕ ಕೃಷಿ

ಅತೀ ಹೆಚ್ಚು ಅಡಿಕೆ ಖರೀದಿ ಮಾಡಿರುವ ಸಾಧನೆಗಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರುಗೆ ಗೌರವಾರ್ಪಣೆ Read More »

ಅಕ್ಷಯ  ಕಾಲೇಜಿನಲ್ಲಿ  ” ಗ್ಲಿಟ್ಟರ್ಸ್ ” ಫ್ರೆಶರ್ಸ್   ಡೇ        

ಪುತ್ತೂರು:  ಅಕ್ಷಯ ಎಜುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ   2025- 2026 ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ   “ಗ್ಲಿಟ್ಟರ್ಸ್ ”  ನ್ನು  ಸಂಸ್ಥೆಯ   ದ್ವಿತೀಯ ಮತ್ತು  ತೃತೀಯ    ವರ್ಷದ  ವಿದ್ಯಾರ್ಥಿಗಳು  ಕಾಲೇಜಿನ  ವಿದ್ಯಾರ್ಥಿ ಒಕ್ಕೂಟದ  ಮೂಲಕ  ಮತ್ತು   ಐ.ಕ್ಯೂ.ಎ.ಸಿ  ಸಹಭಾಗಿತ್ವದಲ್ಲಿ  ಆಯೋಜಿಸಿದರು. ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೊಡಿ  ದೀಪ ಬೆಳಗಿಸುವುದರ  ಮೂಲಕ ಉದ್ಘಾಟಿಸಿ, ನಗರ ಪ್ರದೇಶದಲ್ಲಿ  ಪ್ರಚಲಿತವಿರುವ

ಅಕ್ಷಯ  ಕಾಲೇಜಿನಲ್ಲಿ  ” ಗ್ಲಿಟ್ಟರ್ಸ್ ” ಫ್ರೆಶರ್ಸ್   ಡೇ         Read More »

ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಅವರಿಗೆ ಗುರುವಂದನೆ

ಪುತ್ತೂರು: ತಾಲೂಕು ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಪಿ. ಅವರಿಗೆ ಗುರುವಂದನೆ ಕಾರ್ಯಕ್ರಮ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೋಡಿಂಬಾಡಿ ವಹಿಸಿದ್ದರು. ಉಪ್ಪಿನಂಗಡಿ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಹನುಮಂತಯ್ಯ ಗೌರವ ಸನ್ಮಾನ ನೆರವೇರಿಸಿದರು. ಸನ್ಮಾನಿತರ ಕುರಿತು ಹಾರಾಡಿ ಮಾದರಿ ಶಾಲೆಯ

ಪುತ್ತೂರು ತಾಲೂಕು ಮುಖ್ಯಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕಿ ಜುಲಿಯಾನ ವಾಸ್ ಉಪ್ಪಿನಂಗಡಿ ಮಠ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ವೀರಮಂಗಲ ಪಿ ಪಿಎಂಶ್ರೀ ಶಾಲಾ ಮುಖ್ಯಶಿಕ್ಷಕ ತಾರಾನಾಥ ಅವರಿಗೆ ಗುರುವಂದನೆ Read More »

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)

ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ಗಣಿತ ಮಾದರಿ ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ೯ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಮುಂದೆ

ಗಣಿತ ಮಾದರಿ ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ Read More »

error: Content is protected !!
Scroll to Top