ಕ್ಯಾಂಪಸ್‌

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆ ಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದ ಮುಂದಿನ ಭವಿಷ್ಯದ ರೂವಾರಿಗಳು ಆದ್ದರಿಂದ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನು ಬೆಳೆಸಿಕೊಳ್ಳೋಣ, ಎಲ್ಲರಲ್ಲೂ ಸಮಾನತೆ ಕಾಣುವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ ಧರ್ಮ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆದ ಸಪ್ತಪರ್ಣೊತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. […]

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ Read More »

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ

ಪುತ್ತೂರು: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಘವೇಂದ್ರ ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಹತ್ತನೆಯ ತರಗತಿ ಮುಕ್ತಾಯವಾಗುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳು ಸಿಎ ಆಗಬೇಕೆಂಬ ಯೋಚನೆ – ಯೋಜನೆಯೊಂದಿಗೆ ವಾಣಿಜ್ಯ ವಿಭಾಗಕ್ಕೆ ಅಡಿ ಇಡುವುದಿದೆ. ವಿದ್ಯಾರ್ಥಿಗಳ ಈ ಕನಸನ್ನು ನನಸು ಮಾಡುವುದಕ್ಕಾಗಿ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯ ಮಹತ್ವದ ಹೆಜ್ಜೆಯನ್ನಿಟ್ಟು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ನಡುವೆ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಕೋಚಿಂಗ್ ನಡೆಸುತ್ತಿರುವುದರಿಂದ ಹತ್ತನೆಯ ನಂತರ ಅನೇಕ ವಿದ್ಯಾರ್ಥಿಗಳು ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ. ಒಟ್ಟು 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದಾರೆ, ಮೂವರು

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ನೀಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ವಿ. ಬಿ. ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಮೇ.9 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ನಿರಂಜನ ಸಾಹಿತ್ಯ ಪ್ರಶಸ್ತಿ: ಪ್ರೊ. ವಿ. ಬಿ.

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ Read More »

ಜೀವನ ಕೌಶಲ್ಯ ಕರಗತ ಮಾಡಿಕೊಳ್ಳುವುದು ಅಗತ್ಯ | ಅಂಬಿಕಾ ಮಹಾವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಐತ್ತಪ್ಪ ನಾಯ್ಕ್

ಪುತ್ತೂರು: ಪಠ್ಯದ ಸಂಗತಿಗಳಷ್ಟೇ ಜೀವನ ರೂಪಿಸುವುದಿಲ್ಲ. ಪಠ್ಯದ ಜತೆಗೆ ಯಾವ ಬಗೆಯ ಕೌಶಲ್ಯಗಳನ್ನು ನಮ್ಮದಾಗಿಸಿಕೊಳ್ಳುತ್ತೇವೆ ಎಂಬುದು ನಮ್ಮ ಭವಿಷ್ಯಕ್ಕೆ ಪೂರಕವೆನಿಸುತ್ತದೆ. ಅನೇಕ ವಿದ್ಯಾರ್ಥಿಗಳು ಅಂಕ ಗಳಿಸುವಲ್ಲಿ ಸೋತರೂ ತಮ್ಮಲ್ಲಿರುವ ಕೌಶಲ್ಯಗಳಿಂದಾಗಿ ಬದುಕಿನಲ್ಲಿ ಯಶಸ್ಸನ್ನು ಕಂಡ ನೂರಾರು ಉದಾಹರಣೆಗಳಿವೆ. ಹಾಗಾಗಿ ಜೀವನ ಕೌಶಲಗಳ ಬಗೆಗೆ ವಿದ್ಯಾರ್ಥಿಗಳು ಗಂಭೀರವಾಗಿ ಆಲೋಚಿಸಬೇಕು ಎಂದು ವಿಶ್ರಾಂತ ಮುಖ್ಯ ಶಿಕ್ಷಕ ಬಿ.ಐತ್ತಪ್ಪ ನಾಯ್ಕ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಪರ್ಸನಲ್ ಡೆವಲಪ್‌ಮೆಂಟ್ ಅಂಡ್ ಲೈಫ್ ಸ್ಕಿಲ್ಸ್ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗಾಗಿ ಆರಂಭಿಸಲಾದ

ಜೀವನ ಕೌಶಲ್ಯ ಕರಗತ ಮಾಡಿಕೊಳ್ಳುವುದು ಅಗತ್ಯ | ಅಂಬಿಕಾ ಮಹಾವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಐತ್ತಪ್ಪ ನಾಯ್ಕ್ Read More »

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್| ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಪುತ್ತೂರು: ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ. ಕ್ರೀಡೆಗಳಲ್ಲಿ ತೊಡಗುವುದರಿಂದ ನಾವು ದೈಹಿಕವಾಗಿಯೂ ಸಮರ್ಥರೆನಿಸಿಕೊಳ್ಳಬಹುದು. ಶಾಲಾ ಕಾಲೇಜುಗಳಲ್ಲಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಅವಕಾಶಗಳನ್ನು ಸೃಜಿಸಿಕೊಂಡು ದೇಹಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ 2024 ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಅಂಬಿಕಾ ಸಮೂಹ

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್| ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಕಲಿತು ಹೊರಬಂದ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಯೂ ಆ ವಿದ್ಯಾ ಸಂಸ್ಥೆಯ ರಾಯಭಾರಿಯಾಗುವುದರ ಜತೆಯಲ್ಲಿ ಅಲ್ಲಿನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಸಂಸ್ಥೆಯ ಬೆಳವಣಿಗೆಗೆ ಸಹಾಯಕರಾಗಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತಾಡಿದರು. ಸಂಸ್ಥೆಯಲ್ಲಿ ಕಲಿಯುವ ಕಿರಿಯ ವಿದ್ಯಾರ್ಥಿಗಳ ಹಿತಕ್ಕಾಗಿ ಕ್ಯಾಂಪಸ್

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ನೆಹರುನಗರ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಇದೀಗ ಪಾದಚಾರಿಗಳ, ವಾಹನ ಸಂಚಾರಕ್ಕೆ ತೆರದುಕೊಂಡಿದೆ. ಕಳೆದ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಈ ಸೇತುವೆ ಅಗಲ ಕಿರಿದಾಗಿತ್ತು. ಒಂದು ಬಾರಿಗೆ ಒಂದೇ ನಾಲ್ಕು ಚಕ್ರದ ವಾಹನ ಚಲಿಸುವಂತಿತ್ತು. ಇದೀಗ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಆದರೆ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಯಾವುದೇ ಕಾರ್ಯಕ್ರಮದ ಮೂಲಕ ಉದ್ಘಾಟನೆ ಮಾಡುವ ಹಾಗಿಲ್ಲ. ಅಂತೂ ವಾಹನಗಳು, ಪಾದಚಾರಿಗಳು ಇದೀಗ ಸಂಚರಿಸುವಂತಾಗಿದೆ.

ನೆಹರುನಗರ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ Read More »

ಗುರು ಪರಂಪರೆ ಅತ್ಯಂತ ಶ್ರೇಷ್ಠ ಪರಂಪರೆ : ಡಾ. ಶ್ರೀಧರ ಹೆಚ್.ಜಿ | ವಿವೇಕಾನಂದ ಕಾಲೇಜಿನಲ್ಲಿ ಭವಿಷ್ ಶಿಬಿರ ಉದ್ಘಾಟನೆ

ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಗುರು ಪರಂಪರೆ ಎನ್ನುವುದು ಅತ್ಯಂತ ಶ್ರೇಷ್ಠವಾದ ಪರಂಪರೆ. ರಾಮಾಯಣ, ಮಹಾಭಾರತ, ವೈದಿಕ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಜ್ಞಾನದ ದಾರಿಯಲ್ಲಿ ಪ್ರವೇಶ ಮಾಡಲು ಮೊದಲು ಮನಸ್ಸನ್ನು ನಿಗ್ರಹಿಸಬೇಕು. ನಮ್ಮ ಜ್ಞಾನದ ಹಾದಿಯನ್ನು ನಾವೇ ಹುಡುಕಿ ಅದರಲ್ಲಿ ಮುನ್ನುಗ್ಗಬೇಕು. ಜೀವನದಲ್ಲಿ ಅಧ್ಯಯನವಿಲ್ಲದೆ ಯಾವುದು ಪರಿಪೂರ್ಣವಾಗುವುದಿಲ್ಲ. ಅಧ್ಯಯನ ಮಾಡಲು ಆಸಕ್ತಿ ಮುಖ್ಯ ಎಂದು ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ.ಶ್ರೀಧರ್ ಹೆಚ್.ಜಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)

ಗುರು ಪರಂಪರೆ ಅತ್ಯಂತ ಶ್ರೇಷ್ಠ ಪರಂಪರೆ : ಡಾ. ಶ್ರೀಧರ ಹೆಚ್.ಜಿ | ವಿವೇಕಾನಂದ ಕಾಲೇಜಿನಲ್ಲಿ ಭವಿಷ್ ಶಿಬಿರ ಉದ್ಘಾಟನೆ Read More »

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ.28 ರಿಂದ ಮೇ4 ರ ತನಕ ನಡೆಯಲಿದ್ದು, ಬಿಳಿಯೂರು ಹಿ. ಪ್ರಾ ಶಾಲೆಯಲ್ಲಿ ಭಾನುವಾರ ಚಾಲನೆ ನೀಡಲಾಯಿತು. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ಸಶಕ್ತ ಭಾರತಕ್ಕಾಗಿ ಯುವಜನತೆ ಎಂಬ ಘೋಷಣೆಯೊಂದಿಗೆ ಏಳು ದಿನಗಳ ಕಾಲ ನಡೆಯಲಿರುವ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಬಿಳಿಯೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಳಿನಿ ಉದ್ಘಾಟಿಸಿ, ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ Read More »

error: Content is protected !!
Scroll to Top