ಕ್ಯಾಂಪಸ್‌

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

ಪುತ್ತೂರು: ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋ?ಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲ ದಲ್ಲಿ ಕರಾಟೆ ತರಬೇತಿ ಉದ್ಘಾಟಿಸಲಾಯಿತು. ಕರಾಟೆ ತರಬೇತಿಯನ್ನು ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ಮಳಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕ ತಾರಾನಾಥ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿ,  ಹೆಣ್ಣು ಮಕ್ಕಳ ಸ್ವ-ರಕ್ಷಣೆಗಾಗಿ ಕರಾಟೆ ಶಿಕ್ಷಣ ಪಿಎಂಶ್ರೀ ಯೋಜನೆಯ ಮಹತ್ತರ ಕಾರ್ಯಕ್ರಮವಾಗಿದ್ದು, ಕಳೆದ ಎರಡು ವರ್ಷಗಳಿಂದ 6 ಮತ್ತು 7 ನೇ ತರಗತಿಯ ಹೆಣ್ಣುಮಕ್ಕಳಿಗೆ ಮತ್ತು ಗಂಡು‌ ಮಕ್ಕಳಿಗೆ  ತರಬೇತಿ ನೀಡಲಾಗುತ್ತಿದೆ. ಇಲ್ಲಿ ಮಕ್ಕಳು ತಾಳ್ಮೆ, ಸಹನೆಯನ್ನು ಹಾಗೂ ಆತ್ಮರಕ್ಷಣಾ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ Read More »

ಕೊಯಿಲ ಕೆ. ಸಿ ಫಾರಂ ಶಾಲೆಯಲ್ಲಿ ವಿಶ್ವ ಪರಿಸರ ದಿನ

ಕಡಬ :ಕೊಯಿಲ ಕೆ. ಸಿ ಫಾರಂ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ವಿದ್ಯಾರ್ಥಿ ಗಳು ತಂದ ಗಿಡವನ್ನು ನೆಡುವುದರ ಮೂಲಕ, ವಿಶ್ವ ಪರಿಸರ ದಿನದ ಮಹತ್ವ ವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಅರ್ಥರ್ಪೂರ್ಣ ವಾಗಿ ಆಚರಿಸಲಾಯಿತು.. ಜೊತೆಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು..ಪ್ರತಿಯೊಬ್ಬ ವಿದ್ಯಾರ್ಥಿ ಗಳಿಗೆ ತಮ್ಮ ತಾಯಿಯೊಂದಿಗೆ ಗಿಡ ನೆಡುವ ಫೋಟೋ ಅಪ್ಲೋಡ್ ಮಾಡುವ ಬಗ್ಗೆ ಪ್ರಭಾರ ಶಿಕ್ಷಕಿ ಅನುಪಮಾ ಅವರು ಸರಿಯಾದ

ಕೊಯಿಲ ಕೆ. ಸಿ ಫಾರಂ ಶಾಲೆಯಲ್ಲಿ ವಿಶ್ವ ಪರಿಸರ ದಿನ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದೇಶದ್ಯಾಂತ ನಡೆಯುತ್ತಿರುವ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಮಗುವು ಒಂದೊಂದು ಗಿಡವನ್ನು ನೆಟ್ಟು ಏಕ್ ಫೇಡ್ ಮಾ ಕೆ ನಾಮ್ ಎಂಬ ಅಭಿಯಾನದಲ್ಲಿ ಪಾಲ್ಗೊಂಡರು. ಇಕೋ ಕ್ಲಬ್ ವೆಬ್ ಸೈಟ್ ನಲ್ಲಿ ಗಿಡ ನೆಡುವ ಪೋಟೋ ಅಪ್ಲೋಡ್ ಮಾಡಿ ಪ್ರಮಾಣಪತ್ರ ಪಡೆದುಕೊಂಡರು. ಭಾರತದ  ಗೌರವಾನ್ವಿತ ಪ್ರಧಾನಮಂತ್ರಿಗಳು ತಾಯಿಯ ಹೆಸರಿನಲ್ಲಿ ಸಿಂದೂರ ಗಿಡ ನೆಟ್ಟು ಪ್ರತಿ ಶಾಲೆಗಳಲ್ಲೂ ಮಕ್ಕಳು ತಾಯಿಯ ಹೆಸರಿನಲ್ಲಿ ಗಿಡ ನೆಡುವ ಅಭಿಯಾನ ಆರಂಭಿಸಲು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು  ಮಹತ್ವಪೂರ್ಣವಾಗಿ ಆಚರಿಸಲಾಯಿತು. ಸಸ್ಯಾಶಾಸ್ತ್ರ, ಪ್ರಾಣಿಶಾಸ್ತ್ರ, ವಿಭಾಗ ಹಾಗೂ ಇಕೋಕ್ಲಬ್‍ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ತಾಲೂಕು ಪಂಚಾಯಿತಿ ಉಪನಿರ್ದೇಶಕ ವಿಲ್ಫ್ರೆಡ್,  ರೋಡ್ರಿಗಸ್‍ ಮಾತನಾಡಿ,  ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್‍ ತ್ಯಾಜ್ಯ ಹಾಗೂ ಇತರೆ ಅವ್ಯಯ ಉತ್ಪನ್ನಗಳ ಅಕ್ರಮ ನಾಶದ ಪರಿಣಾಮದ ಬಗ್ಗೆ ಮಾಹಿತಿನೀಡಿದರು. ಕಾಲೇಜಿನ ಪ್ರಾಚಾರ್ಯ ವಂ.ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಅಗತ್ಯತೆಯನ್ನು ತಿಳಿಸಿ, ಸಮೃದ್ಧ ಪರಿಸರದತ್ತ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ, ಯೋಧರಿಗೆ ಅಭಿನಂದನೆ

ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲಾ ವಿಜ್ಞಾನ ವಿಭಾಗದ ಶಿಕ್ಷಕಿ ಸಿಂಧು .ವಿ.ಕೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಹಾಗೂ ಜಾಗತಿಕ ತಾಪಮಾನ ಏರುವುದಕ್ಕೆ ಇರುವ ಅನೇಕ ಕಾರಣಗಳನ್ನು ತಿಳಿಸಿ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸುವುದಕ್ಕೆ ನಮ್ಮ ಮನೆ ಹಾಗೂ ಶಾಲೆಯಿಂದ ಆರಂಭಿಸಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.   ಭಾರತೀಯ ಗಡಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ, ಯೋಧರಿಗೆ ಅಭಿನಂದನೆ Read More »

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ

ಪುತ್ತೂರು: ಯಾರು ತನ್ನ ಪರಂಪರೆಯನ್ನು ಸಂಸ್ಕೃತಿಯನ್ನು ಮರೆಯುತ್ತಾನೋ ಅವನು ಔನ್ನತ್ಯವನ್ನು ಹೊಂದುವುದು ಅಸಾಧ್ಯ. ಭಾರತೀಯ ಜೀವನ ಪದ್ಧತಿ ಭಾರತೀಯ ತತ್ವಶಾಸ್ತ್ರದ ಮೇಲೆ ನಿಂತಿದೆ ಮಾತ್ರವಲ್ಲದೆ ಯೋಗವು ಆಧಾರ ಸ್ತಂಭದಂತೆ ತನ್ನ ಸ್ಥಾನವನ್ನು ಹೊಂದಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಆರ್ಟ್ ಆಫ್ ಲಿವಿಂಗ್‌ ನ

ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಶಿಕ್ಷಣದ ಉದ್ಘಾಟನೆ Read More »

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್

ಪುತ್ತೂರು : ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್ ರೈ ಮತ್ತು ಪೂರ್ಣಿಮಾ ಎ. ದಂಪತಿ ಪುತ್ರ ಭುವನ್ ರೈ ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514 ನೇ ರ‍್ಯಾಂಕ್ (EWS) ಪಡೆದಿದ್ದಾರೆ. ಅಲ್ಲದೆ 11835 ನೇ ರ‍್ಯಾಂಕ್  (CRL) ಪಡೆದುಕೊಂಡಿದ್ದಾರೆ. ಅವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಭುವನ್ ರೈಗೆ 1514 ನೇ ರ‍್ಯಾಂಕ್ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ | ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು : ನಿವೇದಿತಾ ಕಾಮತ್‍

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಗುರಿ ಇರುತ್ತದೆ, ಅದನ್ನು ತಲುಪುವಲ್ಲಿ ಅಪಾರವಾದ ಶ್ರದ್ಧೆ ಮತ್ತು ಅವಿರತವಾದ ಶ್ರಮದ ಆವಶ್ಯಕತೆ ಇದೆ ಎಂದು ಎಸ್‌ ಎಪಿ ಲ್ಯಾಬ್ ಇಂಡಿಯಾದ ಡೆವೆಲಪ್‌ಮೆಂಟ್ ಎಕ್ಸ್ ಪರ್ಟ್ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ನಿವೇದಿತಾ ಕಾಮತ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಸಮಾಜ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ | ಗಳಿಕೆಯ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು : ನಿವೇದಿತಾ ಕಾಮತ್‍ Read More »

ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ

ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಮಕ್ಕಳ ಕಲರವ. ಅಕ್ಷರ ದೇಗುಲಕ್ಕೆ ನೂತನವಾಗಿ ಕಾಲಿಡುವ ಭಾರತದ ಭವಿತವ್ಯದ ಕನಸುಗಳಿಗೆ ಅಕ್ಕರೆಯ ಆರತಿ . ತಲೆಗೊಂದು ಅಕ್ಷರ ಕಿರೀಟ, ಕೈಲೊಂದು ಬಲೂನ್, ಬ್ಯಾಂಡ್ ವಾಲಗದ ನಾದಕ್ಕೆ ಹೆಜ್ಜೆ ಇಡುತ್ತಾ ಬಂದ ಮಕ್ಕಳ ಮೊಗದಲ್ಲಿ  ಸಂಭ್ರಮದ ಕಲೆ.  ಹಸಿರು ಅಂಗಿ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಸಾಗಿ ಬಂದ ದೃಶ್ಯವನ್ನು ಸಂಭ್ರಮಿಸುವ ಕ್ಷಣಕ್ಕೆ ಪೋಷಕರು,ಶಿಕ್ಷಕರು ಸಾಕ್ಷಿಯಾದರು.  ಇಂದು ಪ್ರಧಾನಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಶಾಲೆ

ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ Read More »

error: Content is protected !!
Scroll to Top