ಪಿಎಂಶ್ರೀ ವೀರಮಂಗಲ ಶಾಲೆಗೆ ದ.ಕ ಜಿಲ್ಲಾ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಆನಂದ.ಕೆ ಭೇಟಿ | ಶಾಲಾ ಶೈಕ್ಷಣಿಕ ಚಟುವಟಿಕೆ, ಮಕ್ಕಳ ತರಗತಿ ವೀಕ್ಷಣೆ ಮಾಡಿ ಮೆಚ್ಚುಗೆ ನುಡಿ | ಪ್ರಕೃತಿ ವಿಕೋಪಕ್ಕೆ ಮನೆ ಕಳೆದುಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ, ಮಕ್ಕಳೊಂದಿಗೆ ಬಿಸಿ ಊಟ ಸವಿದ ಅಧಿಕಾರಿ
ಪುತ್ತೂರು: ತಾಲೂಕಿನ ಪುಷ್ಠಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿದ ದ.ಕ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತರಗತಿ ಕೋಣೆಗೆ ಪ್ರವೇಶಿಸಿ ಮಕ್ಕಳನ್ನು ಮಾತನಾಡಿಸಿದರು. ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡ ಮಕ್ಕಳನ್ನು ಹತ್ತಿರ ಕೂರಿಸಿ ಸಾಂತ್ವನ ಹೇಳಿ ಮಕ್ಕಳೊಂದಿಗೆ ಬಿಸಿ ಊಟದ ರುಚಿ ಸವಿದರು. ಪಿಎಂಶ್ರೀ ಚಟುವಟಿಕೆಗಳು, ಶಾಲೆಯ ಸ್ವಚ್ಛತೆ. ಮಿಯಾವಾಕಿ […]










