ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ
ಪುತ್ತೂರು: ಕ್ಷಾತ್ರ ಪರಂಪರೆ, ವೀರತ್ವವನ್ನು ಮರೆತ ದೇಶಕ್ಕೆ ಭವಿಷ್ಯವಿಲ್ಲ. ಯಾವಾಗ ರಾಷ್ಟ್ರದ ಸೈನಿಕ ತನ್ನ ಕೋವಿಯನ್ನು ಕೆಳಗಿಳಿಸುತ್ತಾನೋ ಆಗ ಆ ರಾಷ್ಟ್ರ ಅರಾಜಕತೆಯಿಂದ ನಲುಗಿಹೋಗುತ್ತದೆ. ಹಾಗಾಗಿ ಸೈನಿಕರಿಗೆ ನೈತಿಕ ಶಕ್ತಿ ತುಂಬುವ, ನಿರಂತರವಾಗಿ ಬೆಂಬಲ ತೋರುವ ಸಂಸ್ಕಾರವನ್ನು ನಾಡಿನ ಜನ ಬೆಳೆಸಿಕೊಳ್ಳಬೇಕು ಎಂದು ಉಡುಪಿಯ ವಾಗ್ಮಿ ಶ್ರೀಕಾಂತ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂಪಿಸಲ್ಪಟ್ಟಿರುವ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಬುಧವಾರ ನಡೆದ […]







