ಕ್ಯಾಂಪಸ್‌

ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ

ಪುತ್ತೂರು: ಕ್ಷಾತ್ರ ಪರಂಪರೆ, ವೀರತ್ವವನ್ನು ಮರೆತ ದೇಶಕ್ಕೆ ಭವಿಷ್ಯವಿಲ್ಲ. ಯಾವಾಗ ರಾಷ್ಟ್ರದ ಸೈನಿಕ ತನ್ನ ಕೋವಿಯನ್ನು ಕೆಳಗಿಳಿಸುತ್ತಾನೋ ಆಗ ಆ ರಾಷ್ಟ್ರ ಅರಾಜಕತೆಯಿಂದ ನಲುಗಿಹೋಗುತ್ತದೆ. ಹಾಗಾಗಿ ಸೈನಿಕರಿಗೆ ನೈತಿಕ ಶಕ್ತಿ ತುಂಬುವ, ನಿರಂತರವಾಗಿ ಬೆಂಬಲ ತೋರುವ ಸಂಸ್ಕಾರವನ್ನು ನಾಡಿನ ಜನ ಬೆಳೆಸಿಕೊಳ್ಳಬೇಕು ಎಂದು ಉಡುಪಿಯ ವಾಗ್ಮಿ ಶ್ರೀಕಾಂತ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂಪಿಸಲ್ಪಟ್ಟಿರುವ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಬುಧವಾರ ನಡೆದ […]

ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ Read More »

ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) : ಶೇ.94 ಉತ್ತೀರ್ಣತೆ ದಾಖಲು

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಯ (ಸ್ವಾಯತ್ತ) ಇದರ ದ್ವಿತೀಯ ಸೆಮಿಸ್ಟರ್ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎ, ಬಿಸಿಎ ಪದವಿ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ.94 ಉತ್ತೀರ್ಣತೆ ದಾಖಲಾಗಿದೆ. ದ್ವಿತೀಯ ಬಿ.ಎ. ಶೇ.95, ಬಿ.ಎಸ್ಸಿ. ಶೇ.90, ಬಿ.ಕಾಂ. ಶೇ.92, ಬಿ.ಬಿ.ಎ. ಶೇ.99, ಬಿ.ಸಿ.ಎ. ಶೇ.95 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಉತ್ತಮ ಫಲಿತಾಂಶ ಬಂದಿದೆ ಎಂದು ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್. ಜಿ. ಮತ್ತು ಪ್ರಾಂಶುಪಾಲ ವಿ. ಜಿ. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) : ಶೇ.94 ಉತ್ತೀರ್ಣತೆ ದಾಖಲು Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-೨೦೨೩ ಜು.26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ. ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023” Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು, ಸುಳ್ಯ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂ. 08257-231231 ನಂಬರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ | ಕಡಬ ತಾಲೂಕಿನಲ್ಲಿ ನಾಳೆಯೂ (ಜು.25) ಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು : ಭಾರೀ ಮಳೆ ಹಿನ್ನಲೆಯಲ್ಲಿ ಜು.25 ರಂದೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಜು.24 ರಂದು ರಜೆ ಘೋಷಿಸಲಾಗಿತ್ತು. ಇದೀಗ ಜು.25 ರಂದು ರಜೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನಲೆ | ಕಡಬ ತಾಲೂಕಿನಲ್ಲಿ ನಾಳೆಯೂ (ಜು.25) ಶಾಲೆಗಳಿಗೆ ರಜೆ ಘೋಷಣೆ Read More »

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏನೇ ತರಗತಿ ತನಕ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ 2, 3 ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕುಬಿಟ್ಟಿರುವ ಕಾರಣ ಕಟ್ಟಡದ ಮಾಡು, ಪಕ್ಕಾಸುಗಳು ಕುಸಿತಗೊಂಡಿದ್ದು ಮುರಿದು ಬೀಳುವ ಹಂತದಲ್ಲಿದೆ. ಭಾನುವಾರ ಈ ಘಟನೆ ನಡೆದಿದ್ದು ಇಂದು ತರಗತಿಗೆ

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ Read More »

ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ಹೆದ್ದಾರಿ ಜಲಾವೃತಗೊಂಡಿದ್ದು, ಪರೀಕ್ಷೆಗೆ ಹಾಜರಾದ ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಹಾಜರಾಗಬೇಕಾಗಿ ಬಂತು. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಭಾರೀ ಮಳೆ ಇದ್ದರೂ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್‍ ಎಸ್‍ ಕಾಲೇಜಿಗೆ ಪರೀಕ್ಷೆ ಕೇಂದ್ರಗಳತ್ತ ಬಂದಿದ್ದಾರೆ. ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿತ್ತು.

ವಿವಿ ಸೆಮಿಸ್ಟರ್ ಪರೀಕ್ಷೆ ಮುಂದೂಡದ ಜಿಲ್ಲಾಡಳಿತ | ಅಪಾಯಕಾರಿ ಸ್ಥಿತಿಯಲ್ಲಿ ತೆರಳಬೇಕಾದ ವಿದ್ಯಾರ್ಥಿಗಳು Read More »

ಕಡಬ ಐಐಸಿಟಿ ವಿದ್ಯಾಸಂಸ್ಥೆಯಿಂದ ನರ್ಸರಿ ಶಿಕ್ಷಕಿ ತರಬೇತಿ ಕೋರ್ಸ್‍ಗೆ ಚಾಲನೆ

ಕಡಬ: ಕಳೆದ 9 ವರ್ಷಗಳಿಂದ ಕಡಬದಲ್ಲಿ ಕಡಬದಲ್ಲಿ ವೃತ್ತಿಪರ ಕೋರ್ಸ್ ಗಳನ್ನು ಅಭ್ಯರ್ಥಿಗಳಿಗೆ ನೀಡಿ ಉದ್ಯೋಗದ ದಾರಿಯನ್ನು ಕಲ್ಪಿಸುತ್ತಿರುವ ಐಐಸಿಟಿ (IICT) ವಿದ್ಯಾ ಸಂಸ್ಥೆ ಇದೀಗ ಮತ್ತೊಂದು ತರಬೇತಿ ಕೋರ್ಸ್ ಆರಂಭಿಸಿದೆ. ಕಂಪ್ಯೂಟರ್ ತರಗತಿ, ಟುಟೋರಿಯಲ್, ಟ್ಯೂಷನ್ ಕ್ಲಾಸ್, ನವೋದಯ ತರಬೇತಿ, ಅಬಾಕಸ್  ಶಿಕ್ಷಣ ನೀಡುತ್ತಿದ್ದ ಸಂಸ್ಥೆ ಈಗ ಬಹಳಷ್ಟು ಬೇಡಿಕೆಯನ್ನು ಹೊಂದಿರುವ ನರ್ಸರಿ( ಮೊಂಟೆಸ್ಸರಿ) ಶಿಕ್ಷಕಿ ಕೋರ್ಸ್‌ಅನ್ನು ಆರಂಭಿಸುತ್ತಿದೆ. ಈ ಮೂಲಕ ಕಡಬ ಸೇರಿದಂತೆ ವಿವಿಧ ತಾಲೂಕಿನ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಹೊಸ ಕೋರ್ಸ್

ಕಡಬ ಐಐಸಿಟಿ ವಿದ್ಯಾಸಂಸ್ಥೆಯಿಂದ ನರ್ಸರಿ ಶಿಕ್ಷಕಿ ತರಬೇತಿ ಕೋರ್ಸ್‍ಗೆ ಚಾಲನೆ Read More »

ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌ಗಳಿಗೆ ಡಿಸಿ ಆದೇಶ

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾ‌ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ. ಕಡಬ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ

ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌ಗಳಿಗೆ ಡಿಸಿ ಆದೇಶ Read More »

error: Content is protected !!
Scroll to Top