ಕ್ಯಾಂಪಸ್‌

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ

ಪುತ್ತೂರು: ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ದಿ. ಬಾಲಕೃಷ್ಣ ಮಧುವನ ಅವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ, ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ಶಾಲೆಯ ವಿದ್ಯಾರ್ಥಿನಿಯರಾದ ಹರಿಣಿ, ಸುಷ್ಮಾ ಮತ್ತು ಮಂಗಳಾದುರ್ಗಾ ಸ್ಪರ್ಧೆಯನ್ನು ಪ್ರತಿನಿಧಿಸಿದ್ದರು.

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ Read More »

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಇನ್ನುಳಿದ ಕಡೆಗಳಲ್ಲಿ ಅಲ್ಲಿ ಪ್ರಸ್ತುತ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸುವ ಅಧಿಕಾರವನ್ನು ಆಯಾ ತಹಶೀಲ್ದಾರ್​​ಗಳಿಗೆ ನೀಡಲಾಗಿದೆ. ಶಾಲೆಯ ಮುಖ್ಯೋಪಾಧ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಕ್ಷೇತ್ರ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸರ್ವೆ ಕಲ್ಪನೆ ಶಾಲಾ ಮಂತ್ರಿಮಂಡಲ ರಚನೆ

ಪುತ್ತೂರು : ಮುಂಡೂರು ಗ್ರಾಮದ ಸರ್ವೆ ಕಲ್ಪನೆ  ಶಾಲಾ ಮಂತ್ರಿಮಂಡಲ ರಚನೆ ಸೋಮವಾರ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಮೋಕ್ಷಿತ್ ನೆಕ್ಕಿಲು, ಉಪಮುಖ್ಯಮಂತ್ರಿಯಾಗಿ ಆತ್ಮೀ ಆಯ್ಕೆಗೊಂಡರು. ಶಾಲಾ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ ಪ್ರಮಾಣವಚನ ಬೋಧಿಸಿ ಮಾರ್ಗದರ್ಶನ ಮಾಡಿದರು. ಶಾಲಾ ಸಂಸತ್ತನ್ನು ಸಮಾಜ ವಿಜ್ಞಾನ ಶಿಕ್ಷಕ ಉಮಾಶಂಕರ್ ನಿರ್ವಹಿಸಿದರು. ಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.

ಸರ್ವೆ ಕಲ್ಪನೆ ಶಾಲಾ ಮಂತ್ರಿಮಂಡಲ ರಚನೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು : ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ. ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಅಂದರೆ, ಗುರುವಿಲ್ಲದೆ ಏನೂ ಸಾಧ್ಯವಿಲ್ಲ.ಎಂದು ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಹೇಳಿದರು. ಅವರು ಸೋಮವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಗುರು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ Read More »

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ’ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಇವರ ’ತಿರಿ’ ಎಂಬ ಕೃತಿ ಲೋಕಾರ್ಪಣೆ ಕಾರ್‍ಯಕ್ರಮವು ಜು.5 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಲಿದ್ದು ಮುಖ್ಯ

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ Read More »

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ

ಪುತ್ತೂರು : ಶಿಕ್ಷಕನಾದವನು ಗುರು ಸ್ಥಾನಕ್ಕೆ ಏರಬಹುದಾದ ಅವಕಾಶಗಳಿರುವುದು ಸತ್ಯ. ಬದುಕಿಗೆ ದಾರಿದೀಪವಾಗುವವರು ಗುರುಗಳೆನಿಸುತ್ತಾರೆ. ಹೆತ್ತವರ ನಂತರ ಮಕ್ಕಳ ಜವಾಬ್ದಾರಿಯನ್ನು ಹೊತ್ತು ಅವರ ಅಧ್ಯಯನದ ಕಾಲದಲ್ಲಿ ನಿರಂತರವಾಗಿ ಕಾಪಾಡುತ್ತಾ, ಬದುಕನ್ನು ರೂಪಿಸುತ್ತಾ ಸಾಗುವ ಮಹಾನ್ ವ್ಯಕ್ತಿತ್ವವೇ ಗುರು ಎಂದೆನಿಸಿಕೊಳ್ಳಲು ಸಾಧ್ಯ ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸೋಮವಾರ

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಗಾರ*

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಲೆಕ್ಕಶಾಸ್ತ್ರ ವಿಷಯದ ಪರೀಕ್ಷಾ ಮಾದರಿ ಬಗ್ಗೆ ಕಾರ್ಯಗಾರ ನಡೆಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಧರ್ ಶೆಟ್ಟಿಗಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾದರಿ, ಅಂಕಗಳು, ಉತ್ತರ ಬರೆಯುವ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಉಷಾ ಪಿ ಎಂ, ಭಾಗ್ಯಶ್ರೀ, ಗ್ರೀಷ್ಮ ಹಾಗೂ ದೇವಿಪ್ರಸಾದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಗಾರ* Read More »

ಕೊಂಬೆಟ್ಟು ಪ ಪೂ ಕಾಲೇಜು ಅಭಿವೃದ್ದಿ ಸಮಿತಿ ಸಭೆ | ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್: ಶಾಸಕ ರೈ

ಪುತ್ತೂರು: ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಅಭಿವೃದ್ದಿ ಸಮಿತಿ ಸಭೆಯು ಜೂ. 28 ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಅಭಿವೃದ್ದಿ ಮತ್ತು ಪಲಿತಾಂಶದ ಬಗ್ಗೆ ಶಾಸಕರು ಪ್ರಾಂಶುಪಾಲಲರಿಂದ ಮಾಹಿತಿ ಪಡೆದುಕೊಂಡರು. ಇದೇ ಕಾಲೇಜಿನ ಹೇಳ ವಿದ್ಯಾರ್ಥಿಯಾಗಿರುವ ಶಾಸಕರು ಕಾಲೇಜಿನ ಅಭಿವೃದ್ದಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ನಾನು ಇಲ್ಲಿ ಕಲಿಯುವಾಗ ಹೇಗಿತ್ತೋ ಅದೇ ಮಾದರಿಯಲ್ಲಿ ಈಗಲೂ ಇದೆ. ಇಲ್ಲಿ ವಿಶೇಷ ಅಭಿವೃದ್ದಿ ಕೆಲಸಗಳೇನು ನಡೆದಿಲ್ಲ. ಇಲಾಖೆಯಿಂದ ಬರುವ ಅನುದಾನದವನ್ನು ಬಳಸಿ ಅಲ್ಪಸ್ವಲ್ಪ

ಕೊಂಬೆಟ್ಟು ಪ ಪೂ ಕಾಲೇಜು ಅಭಿವೃದ್ದಿ ಸಮಿತಿ ಸಭೆ | ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್: ಶಾಸಕ ರೈ Read More »

ವಿದ್ಯಾರ್ಥಿಗಳಿಗೆ  ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಪುತ್ತೂರು :  ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಸಂಘದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಆಯೋಜಿಸಿಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ  ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕ ಡಾ. ಶ್ರೀಶ ಭಟ್ ಮತ್ತು ತಂಡದ ಸದಸ್ಯರಾದ ಜೀವಿತ, ರಾಕೇಶ್, ಶ್ರೇಯಾಭಟ್, ಅನುಷಾ, ಸರ್ವೇಶ್, ನವ್ಯಶ್ರೀ, ಬಾಲಕೃಷ್ಣ ಅವರಿಂದ ಸ್ವೋಟ್ ವಿಶ್ಲೇಷಣೆ, ಹ್ಯಾಕಥಾನ್ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಮ್ಮಲ್ಲಿ ಅಡಕವಾಗಿರುವ ಸಾಮರ್ಥ್ಯ, ದೌರ್ಬಲ್ಯಗಳನ್ನು ಗುರುತಿಸಲು ಸಹಾಯ

ವಿದ್ಯಾರ್ಥಿಗಳಿಗೆ  ವ್ಯಕ್ತಿತ್ವ ವಿಕಸನ ಕಾರ್ಯಕ್ರಮ Read More »

ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟುಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಬೇಡಿಕೆಗಳುಳ್ಳ ಮನವಿಯನ್ನು ಶಾಸಕರಿಗೆ ನೀಡಲಾಯ್ತು. ಹಂತ ಹಂತವಾಗಿ ಶಾಲಾ ಅಗತ್ಯತೆಗಳನ್ನು ಪೂರೈಸುವುದಾಗಿ ಶಾಸಕರು ಭರವಸೆ ನೀಡಿದರು. ಶಾಸಕರಿಗೆ ಶಾಲೆಯ ಪರವಾಗಿ ಶಾಲು ಹೊದಿಸಿ, ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯ್ತು. ಮಾಜಿ

ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »

error: Content is protected !!
Scroll to Top