ಕ್ಯಾಂಪಸ್‌

SSLC ಫಲಿತಾಂಶ ಪ್ರಕಟ | ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ ಯಾದಗಿರಿ ಕೊನೆಯ ಸ್ಥಾನ | ಮೇ 21ರ ಮೊದಲು ಮರುಮೌಲ್ಯಪನಕ್ಕೆ ಅರ್ಜಿ ಸಲ್ಲಿಸಬಹುದು

ಪುತ್ತೂರು: SSLC ಫಲಿತಾಂಶ ಸೋಮವಾರ ಬೆಳಿಗ್ಗೆ ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿದೆ. ಒಟ್ಟು ನಾಲ್ಕು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದುಕೊಂಡಿದ್ದಾರೆ. ಬೆಂಗಳೂರು ಯು ಮೆಕಾಲೆ ವಿದ್ಯಾಸಂಸ್ಥೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಬಜಿಎಸ್ ವಿದ್ಯಾಸಂಸ್ಥೆ ಯಶಸ್ ಗೌಡ, ಸವದತ್ತಿಯ ಶ್ರೀ ಕುಮಾರೇಶ್ವರ್ ಪ್ರೌಢಶಾಲೆಯ ಅನುಪಮಾ ಶ್ರೀಶೈಲ್ ಹಿರೇಹೋಳಿ, ನಾಗರಬೆಟ್ಟದ ಭೀಮನಗೌಡ ಹನುಮಂತಗೌಡ ಬಿರಾದಾರ್ ಪಾಟೀಲ್ ಶೇ. 100 ಅಂಕ ಪಡೆದುಕೊಂಡಿದ್ದಾರೆ. ಫಲಿತಾಂಶದಲ್ಲಿ […]

SSLC ಫಲಿತಾಂಶ ಪ್ರಕಟ | ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ ಯಾದಗಿರಿ ಕೊನೆಯ ಸ್ಥಾನ | ಮೇ 21ರ ಮೊದಲು ಮರುಮೌಲ್ಯಪನಕ್ಕೆ ಅರ್ಜಿ ಸಲ್ಲಿಸಬಹುದು Read More »

ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ಕ್ಕೆ ಚಾಲನೆ

ಪುತ್ತೂರು: ಪಠ್ಯದ ಜತೆಗೆ ಪ್ರಾಯೋಗಿಕ ವಿಚಾರಗಳಿಗೆ ಸಮಾನ ಅವಕಾಶವನ್ನು ನೀಡಿದಾಗ ಮಾತ್ರ ಕಲಿಕೆ ಪೂರ್ಣವಾಗುತ್ತದೆ, ಸವಾಲನ್ನು ಸಮರ್ಥವಾಗಿ ಎದುರಿಸುವುದಕ್ಕೆ ಸಹಕಾರಿಯಾಗುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್.ಪಿ ಹೇಳಿದರು. ಅವರು ಶುಕ್ರವಾರ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ

ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ಕ್ಕೆ ಚಾಲನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರ್ಯಾಂಕ್ ವಿಜೇತರಿಗೆ ಸನ್ಮಾನ

ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ಬುಧವಾರ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ಆಯುಕ್ತಡಾ| ಗಿರಿಧರ ರಾವ್ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳ ಮೇಲೆಬಹಳ ದೊಡ್ಡ ಸಾಮಾಜಿಕ ಜವಾಬ್ದಾರಿ ಇದೆ. ಮುಂದೆ ಉದ್ಯೋಗ ದೊರಕಿದ ಮೇಲೆ ವಿದ್ಯಾಭ್ಯಾಸ ಮಾಡಿದ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಸಮಾಜಕ್ಕೆ ಒಳಿತಾಗುವಂತಹ ಕಾರ್ಯಗಳನ್ನೇ ಮಾಡಬೇಕು ಎಂದರು.

ಸಂತ ಫಿಲೋಮಿನಾ ಕಾಲೇಜಿನಲ್ಲಿ ರ್ಯಾಂಕ್ ವಿಜೇತರಿಗೆ ಸನ್ಮಾನ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಎನ್‌ಡಿಎ ತೇರ್ಗಡೆ

ಪುತ್ತೂರು: ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಮೂರು ಮಂದಿ ವಿದ್ಯಾರ್ಥಿಗಳು 2023 ಎನ್‌ಡಿಎ -1 (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ- 1) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಖುಷಿಕರ ಬಿ.ಎಸ್ ಹಾಗೂ ಉದಯಕಲಾ ಎನ್.ಎಲ್ ದಂಪತಿ ಪುತ್ರ ಪ್ರಜ್ವಲ್ ಬಿ.ಕೆ, ಕಡಬದ ಕೃಷ್ಣ ಮೂರ್ತಿ ಕೆ ಹಾಗೂ ಅನುಪಮ ದಂಪತಿ ಪುತ್ರ ಶ್ರೀಶ ಶರ್ಮ ಕೆ ಹಾಗೂ ಪುರುಷರಕಟ್ಟೆಯ ಚರಣ್ ಕುಮಾರ್ ಹಾಗೂ ಮಾಲತಿ ದಂಪತಿ ಪುತ್ರ ಶ್ಯಮಂತ್ ಕುಮಾರ್ ಸಿ.ಕೆ ಎನ್‌ಡಿಎ ಮೊದಲ ಹಂತದ

ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಎನ್‌ಡಿಎ ತೇರ್ಗಡೆ Read More »

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ವೃತ್ತಿ, ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು. ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಆದರೆ ಶಿಕ್ಷಣಾವಕಾಶಗಳ ಮಾಹಿತಿ ಕೊರತೆಯಾಗಬಾರದು.ಸರಿಯಾದ ಸಮಯದಲ್ಲಿ ಸರಿಯಾದ ಶಿಕ್ಷಣ ದೊರಕಿದಾಗ ಒಬ್ಬ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ.ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ,ಅವಶ್ಯಕತೆಗೆ ಅನುಕೂಲವಾಗುವಂತಹ ಶಿಕ್ಷಣದ ಅವಕಾಶಗಳನ್ನು ಆಯ್ಕೆಮಾಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್,ಸೈನ್ಸ್ ಮತ್ತು ಕಾಮರ್ಸ್ ಇದರ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ Read More »

ಮೇ 5 : ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ನವದೆಹಲಿ ಭಾರತೀಯ ತಾಂತ್ರಿಕ ಶಿಕ್ಷಣ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023”ನ್ನು ಮೇ 5 ಶುಕ್ರವಾರ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಆಯೋಜಿಸಲಾಗಿದೆ. ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್‌ಗೆ ಸಂಬಂದಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ

ಮೇ 5 : ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ “ಜ್ಞಾನ ಸಂಗಮ-2023” Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ಟಾರ್ಟಪ್ ಬಗ್ಗೆ ಉಪನ್ಯಾಸ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ಇನ್ಸ್ಟಿಟ್ಯೂಷನ್ಸ್ ಇನೊವೇಶನ್ ಕೌನ್ಸಿಲ್ ಗಳ ಸಹಯೋಗದಲ್ಲಿ“ಹೌಟು ಪ್ಲಾನ್ ಫಾರ್ ಸ್ಟಾರ್ಟಪ್ – ಲೀಗಲ್ ಆಂಡ್ ಎಧಿಕಲ್ ಸ್ಟೆಪ್ಸ್? ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಬೆಂಗಳೂರಿನ ಸ್ಲ್ಯಾಂಗ್ ಲ್ಯಾಬ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಮಧುರಾನಾಥ್‌ ಆರ್. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ,  ಇಂದಿನ ಯುವ ಜನತೆ ಒಂದು ಉದ್ಯಮವನ್ನು ಸ್ಥಾಪಿಸಿ ಹತ್ತಾರು ಜನರಿಗೆ ಉದ್ಯೋಗ ನೀಡುವ ಕನಸು ಕಾಣುತ್ತಿರುವುದು ಸಂತಸದ ವಿಚಾರ..ವಿದ್ಯಾರ್ಥಿಗಳಲ್ಲಿ ಸ್ಟಾರ್ಟಪ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ಟಾರ್ಟಪ್ ಬಗ್ಗೆ ಉಪನ್ಯಾಸ Read More »

ವ್ಯಕ್ತಿತ್ವ ವಿಕಸನ ಶಿಬಿರ ತರಂಗ-2023 ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿಗಳು ಜ್ಞಾನದ ನಿಧಿಯಾಗಬೇಕು. ಪ್ರತಿಯೊಬ್ಬರ ಅಂತರಂಗದಲ್ಲಿ ಅಗಾಧ ಶಕ್ತಿಯಿದೆ. ಅದರ ಬಗ್ಗೆ ಯಾರಿಗೂ ಅರಿವಿಲ್ಲ.ಅಂತರಂಗದ ಶಕ್ತಿಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವವರು ಜೀವನದಲ್ಲಿ ಯಶಸ್ಸು ಪಡೆಯುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹೈಸ್ಕೂಲು ಮತ್ತು 10ನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿಯುಸಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೂರು ದಿನಗಳ ಶಿಬಿರ ತರಂಗ- 2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ, ಕ್ರೀಡೆ, ಚಿತ್ರಕಲೆ, ಸಂಗೀತ

ವ್ಯಕ್ತಿತ್ವ ವಿಕಸನ ಶಿಬಿರ ತರಂಗ-2023 ಉದ್ಘಾಟನೆ Read More »

ಇಂಗ್ಲೀಷ್ ಭಾಷಾ ಕಾರ್ಯಗಾರದ ಸಮಾರೋಪ ಸಮಾರಂಭ

ಪುತ್ತೂರು:  ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿ ಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರವನ್ನು ಆಯೋಜಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿಪ್ರಕಾಶ್ ಮೊಂತೆರೋರವರು ಮಾತನಾಡಿ, ವಯೋ ಸಹಜ ಸಮಸ್ಯಗಳನ್ನು ಬದಿಗಿರಿಸಿ ಅಧ್ಯಾಪಕ ವೃತ್ತಿಯಲ್ಲಿ ನಿರತರಾದವರು ದಿನನಿತ್ಯ ಹೊಸ ವಿಷಯಗಳನ್ನು ಕಲಿತುಕೊಳ್ಳಬೇಕು. ತನ್ನ ದಿನದ ಒಂದೆರಡು ಗಂಟೆಗಳನ್ನು ಓದಿಗಾಗಿ ಮೀಸಲಾಗಿಡಬೇಕು. ಇದರಿಂದ ಖಂಡಿತವಾಗಿಯೂ ಪರಿಣಾಮಕಾರಿಯಾಗಿ ಪಾಠ

ಇಂಗ್ಲೀಷ್ ಭಾಷಾ ಕಾರ್ಯಗಾರದ ಸಮಾರೋಪ ಸಮಾರಂಭ Read More »

ಮತದಾನ ಜಾಗೃತಿಗೆ ಬೀದಿ ನಾಟಕ

ಪುತ್ತೂರು : ತಾಲೂಕು ಸ್ವೀಪ್ಸ ಮಿತಿಯ ಸಹಕಾರದೊಂದಿಗೆ ರೋಟರಿ ಪುತ್ತೂರು ಎಲೈಟ್ ರೋಟರ್ಯಾಕ್ಟ್ ಕ್ಟ್ಕ್ಲಬ್, ಬೆಟ್ಟಂಪಾಡಿ ಪ್ರಥಮದರ್ಜೆ ಕಾಲೇಜು ಸಹಯೋಗದಲ್ಲಿ ಮತದಾನ ಜಾಗೃತಿಗೆ ಬೀದಿನಾಟಕ” ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮತದಾನ ಮಾಡುವ ಬಗೆಗಿನ ಹೆಚ್ಚಿನ ಅರಿವು ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಅಗತ್ಯ, ಮತದಾನ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ”ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು

ಮತದಾನ ಜಾಗೃತಿಗೆ ಬೀದಿ ನಾಟಕ Read More »

error: Content is protected !!
Scroll to Top